ಪುತ್ತೂರು

ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು : ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ | ನೀರಿಗೆ ಸಂಬಂಧಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಪುತ್ತೂರು: ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಜನರ ದೂರುಗಳಿಗೆ ಸರಿಯಾದ ಸ್ಪಂದನೆಯನ್ನು ನೀಡಬೇಕು. ವಸತಿ ನಿಲಯಗಳಲ್ಲಿ ನಿರ್ವಹಣೆಯ ಶಿಕ್ಷಣ ನೀಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ ಹೇಳಿದರು. ಅವರು ಮಂಗಳವಾರ ತಾಲೂಕು ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಭೂಕುಸಿತ, ಚರಂಡಿ ನಿರ್ವಹಣೆ ಸೇರಿ ಮಳೆಗಾಲದ ಬಗ್ಗೆ ಮುನ್ನೆಚ್ಚರಿಕೆಯನ್ನು ವಹಿಸಬೇಕು. ಅಗತ್ಯ ಯಂತ್ರೋಪಕರಣಗಳನ್ನು ಸನ್ನದ್ದ ಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪ್ರತಿಯೊಂದು […]

ಶಾಲೆಗಳ ಕಟ್ಟಡಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು : ನಗರಾಭಿವೃದ್ಧಿ ಜಂಟಿ ಕಾರ್ಯದರ್ಶಿ ಎಚ್. ಕೆ. ಕೃಷ್ಣಮೂರ್ತಿ | ನೀರಿಗೆ ಸಂಬಂಧಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ

ಪುತ್ತೂರು:  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದಲ್ಲಿ ಸುಮಾರು 16 ಲಕ್ಷ ವೆಚ್ಚದಲ್ಲಿ ಅಳವಡಿಸಲಾದ ಸ್ಟೀಮ್ ಬಾಯ್ಲರ್ ಸಿಸ್ಟಮ್ ನ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಕೆನರಾ ಬ್ಯಾಂಕ್ ನ 10 ಲಕ್ಷ ರೂ.,  ಕರ್ಣಾಟಕ ಬ್ಯಾಂಕ್ ನ 5 ಲಕ್ಷ ರೂ. ಹಾಗೂ ದಾನಿಗಳ ದೇಣಿಗೆಯಲ್ಲಿ ಸ್ಟೀಮ್ ಬಾಯ್ಲರ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು. ಬೆಳಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕುಮಾರ್ ಕೆದಿಲಾಯರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಬಳಿಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ Read More »

ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯ

ಪುತ್ತೂರು: ಕಾರು – ಆಟೋ ರಿಕ್ಷಾ ನಡುವೆ ಅಪಘಾತವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಆಟೋ ರಿಕ್ಷಾದಲ್ಲಿದ್ದ ವೃದ್ಧೆಗೆ ಗಾಯಗಳಾಗಿದ್ದು, ಅವರನ್ನು  ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.

ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯ Read More »

ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ನಿಧನ

ಪುತ್ತೂರು: ಉದ್ಯಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್‍ ಕುಮಾರ್‍ ಪುತ್ತಿಲ ಅವರ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿಯಾದ ರಾಜಾರಾಮ ಭಟ್ ರು ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯನ್ನು ಹೊಂದಿದ್ದರಲ್ಲದೆ, ದುಬೈ ಮಸ್ಮತ್ ಗಳಲ್ಲಿ ಖರ್ಜೂರದ ವ್ಯಾಪಾರ ಕೂಡ ಹೊಂದಿದ್ದರು. ವ್ಯವಹಾರದ ನಿಮಿತ್ತ ಕೆಲದಿನಗಳ ಹಿಂದೆ ದುಬೈಗೆ ಹೋಗಿದ್ದ ಅವರು ಅಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಕಳೆದ

ಉದ್ಯಮಿ ಎಡಕ್ಕಾನ ರಾಜಾರಾಮ ಭಟ್‍ ದುಬೈಯಲ್ಲಿ ಹೃದಯಾಘಾತದಿಂದ ನಿಧನ Read More »

ಪುತ್ತೂರಿನ ಧರ್ಮಶಿಕ್ಷಣ ತರಗತಿಗಳಿಗೆ ಶೃಂಗೇರಿ ಜಗದ್ಗುರುಗಳಿಂದ ಚಾಲನೆ | ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಎರಡು ಸಾವಿರಕ್ಕೂ ಅಧಿಕ ಮಂದಿ ಧಾರ್ಮಿಕ ಕಾರ್ಯಕರ್ತರು

ಪುತ್ತೂರು: ಇಡಿಯ ದೇಶದಲ್ಲೇ ಪ್ರಪ್ರಥಮವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲು ಯೋಜಿಸಿರುವ ಹಿಂದೂ ಧರ್ಮ ಶಿಕ್ಷಣ ತರಗತಿಗಳಿಗೆ ಶ್ರೀ ಕ್ಷೇತ್ರ ಶೃಂಗೇರಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಧಾರ್ಮಿಕ ಶಿಕ್ಷಣದ ಮಾರ್ಗದರ್ಶಕರೂ, ಪ್ರೇರಕರೂ ಆದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಅಮೃತ ಹಸ್ತದಿಂದ ಧರ್ಮ ಶಿಕ್ಷಣ ತರಗತಿ – ಧರ್ಮಾಭ್ಯುದಯವನ್ನು  ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ಸ್ವಾಮೀಜಿಗಳು, ಹಿಂದೂ ಧರ್ಮವೆಂಬುದು ಅನಾದಿ ಕಾಲದಿಂದಲೂ ಬಂದ ಸನಾತನ ಧರ್ಮ. ಎಷ್ಟೇ ಜನ ಈ ಧರ್ಮವನ್ನು ನಾಶಗೊಳಿಸುತ್ತೇವೆಂದು ಅಂದುಕೊಂಡರೂ ಅದು

ಪುತ್ತೂರಿನ ಧರ್ಮಶಿಕ್ಷಣ ತರಗತಿಗಳಿಗೆ ಶೃಂಗೇರಿ ಜಗದ್ಗುರುಗಳಿಂದ ಚಾಲನೆ | ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಎರಡು ಸಾವಿರಕ್ಕೂ ಅಧಿಕ ಮಂದಿ ಧಾರ್ಮಿಕ ಕಾರ್ಯಕರ್ತರು Read More »

ದ.ಕ.ಜಿಲ್ಲೆಯಲ್ಲಿ ನೀರ ಸೆಲೆಗಳ ರಕ್ಷಣೆಗಾಗಿ ಪರಿಸರ ಪ್ರೇಮಿಗಳಿಂದ ಮಾಹಿತಿ, ಜಾಗೃತಿ, ಅನುಷ್ಠಾನದ ಯೋಜನೆಗೆ ಚಾಲನೆ

ಪುತ್ತೂರು: ನಮ್ಮ ನೀರ ಸೆಲೆ ರಕ್ಷಿಸೋಣ ಮತ್ತು ಮಣ್ಣು ನಮ್ಮ ಆತ್ಮ ಎಂಬ ಪರಿಕಲ್ಪನೆಯಲ್ಲಿ ಪುತ್ತೂರಿನ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯ ನೇತೃತ್ವದಲ್ಲಿ ಪರಿಸರ ಪ್ರೇಮಿಗಳಿಂದ ಮಾಹಿತಿ, ಜಾಗೃತಿ ಅನುಷ್ಠಾನದ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಯೋಜನೆಯ ರೂವಾರಿ ಮತ್ತು ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯ ಅಧ್ಯಕ್ಷ ಡಾ. ರಾಜೇಶ್ ಬೆಜ್ಜಂಗಳ ಮತ್ತುಯೋಜನೆಯ ಸಲಹೆಗಾರ ನಿವೃತ್ತ ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ನೀರ ಸೆಲೆಗಳ ಅಧ್ಯಯ, ತ್ಯಾಜ್ಯ ವಿಲೇವಾರಿ ಜಾಗೃತಿ,

ದ.ಕ.ಜಿಲ್ಲೆಯಲ್ಲಿ ನೀರ ಸೆಲೆಗಳ ರಕ್ಷಣೆಗಾಗಿ ಪರಿಸರ ಪ್ರೇಮಿಗಳಿಂದ ಮಾಹಿತಿ, ಜಾಗೃತಿ, ಅನುಷ್ಠಾನದ ಯೋಜನೆಗೆ ಚಾಲನೆ Read More »

ಜೀಪೊಂದು ಬೈಕ್‍ ಹಾಗೂ ಸ್ಕೂಟರ್ ಗೆ ಡಿಕ್ಕಿ | ಓರ್ವ ವ್ಯಕ್ತಿಗೆ ಗಾಯ

ಪುತ್ತೂರು : ಜೀಪೊಂದು ಬೈಕ್‍ ಹಾಗೂ ಸ್ಕೂಟರ್‍ ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಎದುರು ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.  ಜೀಪು ಡಿಕ್ಕಿ ಹೊಡೆದುದರಿಂದ ಸ್ಕೂಟರ್ ಹಾಗೂ ಬೈಕನ್ನು 15 ಮೀಟರ್ ನಷ್ಟು ದೂರ ಎಳೆದೊಯ್ದಿದೆ. ಬೈಕ್ ನಲ್ಲಿದ್ದ ಬಾಲಕನ ಕೈಗೆ ಗಂಭೀರ ಗಾಯವಾಗಿದ್ದು, ಬೈಕ್ ಸವಾರ ಬೈಕ್ ನಿಂದ ಹಾರಿದ ಕಾರಣ ಪ್ರಾಣಾಪಾಯದಿಂದ ಪಾರಗಿದ್ದಾರೆ. ಸ್ಕೂಟರ್ ನಲ್ಲಿದ್ದ ಮಹಿಳೆಗೂ ಗಾಯವಾಗಿದೆ.

ಜೀಪೊಂದು ಬೈಕ್‍ ಹಾಗೂ ಸ್ಕೂಟರ್ ಗೆ ಡಿಕ್ಕಿ | ಓರ್ವ ವ್ಯಕ್ತಿಗೆ ಗಾಯ Read More »

ಮೇ. 6 : ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದ  ಪ್ರತಿಷ್ಠಾ ವಾರ್ಷಿಕೋತ್ಸವ ಮೇ. 6 ರಂದು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.5ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 11.30ಕ್ಕೆ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಮೈದಾನದಿಂದ ಮೆರವಣಿಗೆಯಲ್ಲಿ ಸಾಗಿ ಶ್ರೀ ದೇವಳಕ್ಕೆ ಹೊರೆಕಾಣಿಕೆ ಸಮರ್ಪಣೆ,  ಮಧ್ಯಾಹ್ನ 12.15 ರಿಂದ ತುಲಾಭಾರ ಸೇವೆ, ಮಧ್ಯಾಹ್ನ 1ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಲಿದೆ. ಮೇ.6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, ಬೆಳಿಗ್ಗೆ

ಮೇ. 6 : ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಅಕ್ರಮ ಕೂಟ ಸೇರಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ನಿಷೇಧಾಜ್ಞೆ ಉಲ್ಲಂಘನೆ |  30 ಮಂದಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಿಷೇದಾಜ್ಞೆ ಜಾರಿಯಲ್ಲಿದ್ದರೂ ಮೇ 2ರಂದು ಪುತ್ತೂರು ಗಾಂಧಿಕಟ್ಟೆಯ ಬಳಿ ಸುಮಾರು 20 ರಿಂದ 30 ಜನ ಅಕ್ರಮ ಕೂಟ ಸೇರಿಕೊಂಡು ಬಸ್ ನಿಲ್ದಾಣದ ಬಳಿಯಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ ಮತ್ತು ಸಮಾನ ಉದ್ದೇಶದಿಂದ ದೊಂಬಿ ಎಬ್ಬಿಸಿ ನಿಷೇದಾಜ್ಞೆ ಉಲ್ಲಂಘನೆ ಮಾಡಿರುವ ನಿಟ್ಟಿನಲ್ಲಿ ಸುಮಾರು 30 ಮಂದಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಎಂಬುವರ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ

ಅಕ್ರಮ ಕೂಟ ಸೇರಿ ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿ ನಿಷೇಧಾಜ್ಞೆ ಉಲ್ಲಂಘನೆ |  30 ಮಂದಿ ವಿರುದ್ಧ ಪ್ರಕರಣ ದಾಖಲು Read More »

ಸುಹಾಸ್ ಹತ್ಯೆ ಬೆನ್ನಲ್ಲೇ ಕರಾವಳಿಯ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍

ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೆ ಮತ್ತೊಬ್ಬ ಹಿಂದೂ ಮುಖಂಡನಿಗೆ ಬೆದರಿಕೆ ಹಾಕಲಾದ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿದೆ. ಹಿಂದೂ ಕಾರ್ಯಕರ್ತ ಭರತ್ ಕುಮ್ಮೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದೆ ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲಿ ಬಂದು ಕೊಲೆ ಮಾಡುತ್ತೇವೆ’ ಎಂದು ಜೀವ ಬೆದರಿಕೆವುಳ್ಳ ಬರಹವನ್ನು ಹಾಕಿ ಪೋಸ್ಟ್ ಮಾಡಲಾಗಿದೆ. ಹನ ಶೆಟ್ಟಿ ಫೋಟೋಗೆ ರೈಟ್ ಮಾರ್ಕ್ ಹಾಕಿ ಪೊನ್ನು

ಸುಹಾಸ್ ಹತ್ಯೆ ಬೆನ್ನಲ್ಲೇ ಕರಾವಳಿಯ ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ Read More »

error: Content is protected !!
Scroll to Top