ಪುತ್ತೂರು

ಮಹಿಳೆಗೆ ಅಗೌರವ, ಜೀವ ಬೆದರಿಕೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದೂರವಾಣಿ ಮೂಲಕ ಮಹಿಳೆಗೆ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿ ಬಂಟ್ವಾಳದ ಲೀಲಾವತಿ (71) ಅವರು ದೂರು ನೀಡಿದ್ದಾರೆ. ತಿಮರೋಡಿ ಫೋನ್ ಮೂಲಕ ಅತ್ಯಂತ ಕೀಳು ಮಟ್ಟದಲ್ಲಿ ಮಾತನಾಡಿ ಮಹಿಳೆಯ ತೇಜೋವಧೆ ಮಾಡಿದ್ದಾರೆ. ಮಹಿಳೆಯ ಗೌರವಕ್ಕೆ ಧಕ್ಕೆ ತರುವ ರೀತಿ ಮಾತನಾಡಿದ್ದು ಮಾತ್ರವಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ಈ […]

ಮಹಿಳೆಗೆ ಅಗೌರವ, ಜೀವ ಬೆದರಿಕೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು Read More »

ಪತಂಜಲಿ ಯೋಗ ಶಾಖೆಯಲ್ಲಿ ಸೌರ ಯುಗಾದಿ ಆಚರಣೆ

ಪುತ್ತೂರು: ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ ಪಂಚಾಂಗ ಪಠಣ, ಭಜನಾ ಸಂಕೀರ್ತನೆ, ಧ್ಯಾನ, ಸೂರ್ಯ ನಮಸ್ಕಾರ ಅಮೃತ ಫಲಹಾರದೊಂದಿಗೆ ಸೌರ ಯುಗಾದಿಯನ್ನು ಆಚರಿಸಲಾಯಿತು. ಹಿರಿಯ ಯೋಗ ಬಂದು ಭಾರತಿ ಸೌರ ಯುಗಾದಿಯ ಬಗ್ಗೆ ಬೌದ್ಧಿಕ ನೀಡಿದರು. ಕೇಂದ್ರದ ಸಂಚಾಲಕ ವಿಜಯ, ಅಶೋಕ, ದಿವಾಕರ ಆಚಾರ್ಯ, ಸತೀಶ, ಶಿವಣ್ಣ, ಪದ್ಮಲತಾ, ಹರ್ಷಿತಾ ಮೊದಲಾದವರು ಭಾಗವಹಿಸಿದ್ದರು.

ಪತಂಜಲಿ ಯೋಗ ಶಾಖೆಯಲ್ಲಿ ಸೌರ ಯುಗಾದಿ ಆಚರಣೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಪುತ್ತೂರು : ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು . ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಉಮೇಶ್ ಮಲುವೇಲು ಅವರು ಅಧ್ಯಕ್ಷತೆ ವಹಿಸಿ, ದೀಪ ಬೆಳಗಿಸಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು‌. ಬಳಿಕ ಮಾತನಾಡಿದ ಅವರು, ದೇಶವು ಸುಗಮವಾಗಿ ಮುನ್ನಡೆಯಬೇಕಾದರೆ ಪೂರಕವಾದ ಕಾನೂನು ಚೌಕಟ್ಟು ಅಗತ್ಯ. ಸುಗಮ ಆಡಳಿತಕ್ಕೆ ಕಾನೂನು ವ್ಯವಸ್ಥಿತ ಸಂವಿಧಾನವನ್ನು ರಚಿಸುವಲ್ಲಿ ಡಾ. ಬಿಆರ್ ಅಂಬೇಡ್ಕರ್ ರವರು ಪ್ರಧಾನ ಪಾತ್ರ ವಹಿಸಿದ್ದರು ಎಂದರು. ಶಾಲಾ ಸಂಚಾಲಕ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »

ವಿ .ಎಸ್. ಭಟ್ಟರಿಗೆ ‘ಬಾರ್ಯ ಪ್ರಶಸ್ತಿ’ ಪ್ರದಾನ

ಪುತ್ತೂರು: ಮಾತಾಪಿತರನ್ನು ಗೌರವದಿಂದ ಕಾಣುವುದು ಮತ್ತು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ತಪಸ್ಸಿಗೆ ಸಮಾನ. ಅವರ ಸ್ಮರಣೆಯಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವುದು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವುದೆಂದು ಕುಂಟಾರು ಶ್ರೀಧರ ತಂತ್ರಿಗಳು ತಿಳಿಸಿದರು. ಪರ್ಲಡ್ಕದ ಅಗಸ್ತ್ಯ ನಿವಾಸದ ಶಾರದಮ್ಮ ವೇದಿಕೆಯಲ್ಲಿ ಜರಗಿದ ಸಮಾರಂಭದಲ್ಲಿ 26ನೇ ವರ್ಷದ ಬಾರ್ಯ ಪ್ರಶಸ್ತಿಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೆಂಕಟೇಶ ಸುಬ್ರಹ್ಮಣ್ಯ ಭಟ್ ಅವರಿಗೆ ಪ್ರದಾನ ಮಾಡಿ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ವಿ. ಎಸ್‌. ಭಟ್ ಮಾತನಾಡಿ, ಕಳೆದ

ವಿ .ಎಸ್. ಭಟ್ಟರಿಗೆ ‘ಬಾರ್ಯ ಪ್ರಶಸ್ತಿ’ ಪ್ರದಾನ Read More »

ಪಾಳು ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣೆ

ಸುಳ್ಯ: ತಾಲೂಕಿನ ಪೆರಾಜೆ ‌ಗ್ರಾಮದಲ್ಲಿ ಆಕಸ್ಮಿಕವಾಗಿ ಪಾಳು ಬಾವಿಗೆ ಬಿದ್ದ ಒಂಟಿ ಸಲಗವೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸತತ ಎಂಟು ಗಂಟೆಗಳ ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಿದ ಘಟನೆ ನಡೆದಿದೆ. ಕಲ್ಲಚರ್ಪ ರಾಮ ನಾಯ್ಕ ಎಂಬವರ ತೋಟದಲ್ಲಿ ಎ. 12 ರ ರಾತ್ರಿ ಸಮಯದಲ್ಲಿ ಆನೆಯೊಂದು ನಿರಂತರವಾಗಿ ಘೀಳಿಡುವ ಸದ್ದು ಕೇಳಿ ಬಂದಿತ್ತು. ಸ್ಥಳೀಯರು ತೋಟದಲ್ಲಿ ಹುಡುಕಾಡಿದಾಗ ಸುಮಾರು 30 ಅಡಿ ಆಳದ ಪಾಳು ಬಾವಿಯಲ್ಲಿ ಕಾಡಾನೆಯೊಂದು ಬಿದ್ದಿರುವುದು ಗೊತ್ತಾಗಿದೆ. ಈ ಮಾಹಿತಿಯನ್ನು ಸ್ಥಳೀಯರು ತಕ್ಷಣವೇ ಅರಣ್ಯ

ಪಾಳು ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣೆ Read More »

ಕಲಾವಿದರಿಗೆ ನುಡಿ ನಮನ, ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ರಿ. ಉಪ್ಪಿನಂಗಡಿ ಸುವರ್ಣ ಮಾಹೋತ್ಸವದ ಶ್ರೀ ಮಹಾಭಾರತ ಸರಣಿಯಲ್ಲಿ 111ನೇ ತಾಳಮದ್ದಳೆಯಾಗಿ ಘಟೋತ್ಕಚ ವಿವಾಹಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಕವಿ ಗುಂಡು ಸೀತಾರಾಮ್ ರಾವ್ ತಲವಾಟ ರಚಿತ ಚಕ್ರ ಚಂಡಿಕೆ ಪ್ರಸಂಗದಿಂದ ಆಯ್ದ ಆಖ್ಯಾನದಲ್ಲಿ ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾಭ ಕುಲಾಲ್ ಇಳoತಿಲ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ. ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ನೇರೆಂಕಿ(ಮೌರ್ವಿ) ಶ್ರೀಧರ ಎಸ್.

ಕಲಾವಿದರಿಗೆ ನುಡಿ ನಮನ, ತಾಳಮದ್ದಳೆ Read More »

ಶ್ರೀರಾಮ ಪ್ರೌಢಶಾಲೆಯಲ್ಲಿ ಮಹಾಭಾರತ ರಸಪ್ರಶ್ನೆ ಸ್ಪರ್ಧೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್(ರಿ) ಉಪ್ಪಿನಂಗಡಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಉಪ್ಪಿನಂಗಡಿ ವೇದಶಂಕರ ನಗರದ ಶ್ರೀ ರಾಮ ಶಾಲೆಯಲ್ಲಿ ಶ್ರೀ ಮಹಾಭಾರತ ರಸ ಪ್ರಶ್ನೆ ಸ್ಪರ್ಧೆ ನಡೆಸಲಾಯಿತು. 6 ,7 ,8 ಮತ್ತು 9ನೇ ತರಗತಿಯ 75 ವಿದ್ಯಾರ್ಥಿಗಳು ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಟ್ರಸ್ಟಿನ ಸದಸ್ಯ ಕೆ.ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ಮಾತನಾಡಿ, ಮಹಾಭಾರತವು ಧರ್ಮಕ್ಕೆ ಜಯವೆಂಬ ಸಂದೇಶವನ್ನು ನೀಡುತ್ತದೆ. ಬಾಲ್ಯದಲ್ಲಿ ಓದುವ ಹವ್ಯಾಸ , ಕಲಾಸಕ್ತಿಯು ಜೀವನದಲ್ಲಿ ಸತ್ಪರಿಣಾಮವನ್ನು ಬೀರುತ್ತದೆ ಎಂದು

ಶ್ರೀರಾಮ ಪ್ರೌಢಶಾಲೆಯಲ್ಲಿ ಮಹಾಭಾರತ ರಸಪ್ರಶ್ನೆ ಸ್ಪರ್ಧೆ Read More »

ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಪದವಿ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26 ಸಂಪನ್ನಗೊಂಡಿತು. ಅಕ್ಷಯ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತಿಭೆಗಳ ಅನಾವರಣಕ್ಕಾಗಿ ಕಾಲೇಜು ವಿದ್ಯಾರ್ಥಿಗಳೇ ಆಯೋಜಿಸಿದ ಸ್ಪರ್ಧೆಯ ಸದುಪಯೋಗ ಪಡೆದುಕೊಂಡು ಯಶಸ್ಸನ್ನು ಕಾಣುವಂತಾಗಲಿ ಎಂದು ಶುಭಹಾರೈಸಿದರು. ಕೃತ್ವ 2K26 ಇದರ ಸಂಯೋಜಕ ಗಂಧರ್ವ ಅವರು ಪ್ರಸ್ತಾವನೆಗೈದು ಕಾರ್ಯಕ್ರಮ ಕುರಿತಾಗಿ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ಸಮರ್ಪಿಸುತ್ತಾ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಜಯಂತ್ ನಡುಬೈಲು

ಅಕ್ಷಯ ಪದವಿ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಕೃತ್ವ ಫೆಸ್ಟ್ 2K26 Read More »

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‍ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ

ಪುತ್ತೂರು: ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ಪುತ್ತೂರು, ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500/-ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000/-ರವರೆಗೆ ರಿಯಾಯಿತಿ ಹಾಗೂ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‍ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಸನ್ಮಾನ ಮತ್ತು ಬೇಸಿಗೆ ಶಿಬಿರಕ್ಕೆ ಚಾಲನೆ

ಅಲುಂಬುಂಡ: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ನಡೆಯಲಿರುವ ಸಾಪ್ತಾಹಿಕ ಬೇಸಿಗೆ ಶಿಬಿರವನ್ನು ಖ್ಯಾತ ಚಿತ್ರಕಲಾ ಶಿಕ್ಷಕ, ಸಾಹಿತಿ ಮತ್ತು ಕವಿಯೂ ಆಗಿರುವ ಭಾಸ್ಕರ್ ನೆಲ್ಯಾಡಿಯವರು ದೀಪ ಪ್ರಜ್ವಲಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈದು ಉದ್ಘಾಟಿಸಿದರು. ಬೇಸಿಗೆ ಶಿಬಿರವು ಬೀಜವನ್ನು ಮೊಳಕೆಯೊಡೆಯಲು ಸಹಕರಿಸುವ ಸಸಿ ಮಾಡಿಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಅವರು ಪ್ರತಿಪಾದಿಸಿದರು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಮೈಗೂಡಿಸಿಕೊಂಡಾಗ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ ಎಂದು ಅವರು ವಿಶ್ಲೇಷಿಸಿದರು. ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಶೈಕ್ಷಣಿಕ ಸೇವೆಯ ಜೊತೆಗೆ ವ್ಯಕ್ತಿತ್ವ ವಿಕಸನದ ಪುಣ್ಯಕಾರ್ಯವೂ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಸನ್ಮಾನ ಮತ್ತು ಬೇಸಿಗೆ ಶಿಬಿರಕ್ಕೆ ಚಾಲನೆ Read More »

error: Content is protected !!
Scroll to Top