ಪುತ್ತೂರು

ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ‌ನೀಡಿದ ಎರಡನೇ ಪತ್ನಿಯ ತಾಯಿ

ಪುತ್ತೂರು: ಮೊದಲು ಮದುವೆಯಾಗಿರುವ ‌ಸಂಗತಿಯನ್ನು ರಹಸ್ಯವಾಗಿಟ್ಟು, ಎರಡನೇ ಮದುವೆ ಮಾಡಿಕೊಂಡ ವ್ಯಕ್ತಿಗೆ ಆತನ ಎರಡನೇ ಪತ್ನಿಯ ಕಡೆಯವರು ಮನೆಯೊಂದರಲ್ಲಿ ಕೂಡಿ ಹಾಕಿ, ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕೆಮ್ಮಿಂಜೆಯ ಬೆಳ್ಳಗುಡ್ಡೆ ನಿವಾಸಿ ಮಹಮ್ಮದ್ ಅಶ್ರಫ್ (35) ಎಂದು ಗುರುತಿಸಲಾಗಿದೆ. ಆರೋಪಿ ಅಶ್ರಫ್‌ಗೆ ಖತೀಜಮ್ಮ ಜೊತೆಗೆ ಮೊದಲೇ ಮದುವೆ ನಡೆದಿದ್ದರೂ, ಅದನ್ನು ರಹಸ್ಯವಾಗಿಟ್ಟು ಮೂಡಬಿದ್ರೆಯ ಐಸಮ್ಮ ಎಂಬವರ ಪುತ್ರಿ ರುಬಿಯಾ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದ. ಈ ವಿಚಾರ ತಿಳಿದ ಖತೀಜಮ್ಮ ಅಶ್ರಫ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸರಿಗೆ ದೂರು […]

ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ‌ನೀಡಿದ ಎರಡನೇ ಪತ್ನಿಯ ತಾಯಿ Read More »

ನ್ಯಾಯವಾದಿ ನಿಶಾಂತ್ ಮುಂದಾಳತ್ವದಲ್ಲಿ ನೂತನ ಸಂಸ್ಥೆ ಉದ್ಘಾಟನೆ

ಪುತ್ತೂರು: ನ್ಯಾಯವಾದಿ ನಿಶಾಂತ್ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭವು ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ಹಾಗೂ ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷ ಗಿರೀಶ ಮಳಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಸೊರಕೆ, ಪುತ್ತೂರು ವಕೀಲರ ಸಂಘದ

ನ್ಯಾಯವಾದಿ ನಿಶಾಂತ್ ಮುಂದಾಳತ್ವದಲ್ಲಿ ನೂತನ ಸಂಸ್ಥೆ ಉದ್ಘಾಟನೆ Read More »

ಅಶಕ್ತ ವೃದ್ಧೆಗೆ ಸೂಕ್ತ ಚಿಕಿತ್ಸೆ ನೀಡಿ, ಪುನರ್ವಸತಿ ಕಲ್ಪಿಸಿದ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯರು

ಪುತ್ತೂರು: ಒಳ ರೋಗಿಯಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊಡಿಂಬಾಡಿಯ ದಾರಂದಕುಕ್ಕು ನಿವಾಸಿ ಲಕ್ಷ್ಮೀ (80) ಎಂಬ ವೃದ್ಧೆಗೆ ಪುನರ್ವಸತಿ ಕಲ್ಪಿಸಿ‌ ಮಾನವೀಯತೆ ಮೆರೆದ ಹೃದಯಸ್ಪರ್ಶಿ ಘಟನೆ ನಡೆದಿದೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಸಾಯುವ ಸ್ಥಿತಿಗೆ ತಲುಪಿದ್ದ ಲಕ್ಷ್ಮೀ ಅಮ್ಮನಿಗೆ ಸರ್ಕಾರಿ ಆಸ್ಪತ್ರೆಯ ಡಾ. ಯದುರಾಜ್ ‌ಡಿ. ಕೆ. ಅವರ ತಂಡ ಸೂಕ್ತ ಚಿಕಿತ್ಸೆ ನೀಡಿದ್ದು, ಇದರಿಂದ ಆ ತಾಯಿ ಚೇತರಿಸಿಕೊಂಡು ನಡೆದಾಡುವ ಸ್ಥಿತಿಗೆ ಬಂದಿದ್ದಾರೆ. ಆ ಬಳಿಕ ಲಕ್ಷ್ಮೀ ಅಮ್ಮನನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳ ಮನವಿಯ ಮೇರೆಗೆ ಮಹಿಳಾ

ಅಶಕ್ತ ವೃದ್ಧೆಗೆ ಸೂಕ್ತ ಚಿಕಿತ್ಸೆ ನೀಡಿ, ಪುನರ್ವಸತಿ ಕಲ್ಪಿಸಿದ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯರು Read More »

ಆರೋಗ್ಯ ಕೆಟ್ಟು ಮಹಿಳೆ ಸಾವು

ಪುತ್ತೂರು: ಹಠಾತ್ ಆರೋಗ್ಯ ಕೆಟ್ಟು ಮಹಿಳೆಯೊಬ್ಬರು ‌ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ. ಮೃತರನ್ನು ‌ಮುಕ್ರಂಪಾಡಿ ನಿವಾಸಿ ಚೈತ್ರ ಪೂಜಾರಿ (31) ಎಂದು ಗುರುತಿಸಲಾಗಿದೆ. ಚೈತ್ರಾ ಅವರ ಆರೋಗ್ಯ ಹಠಾತ್ತಾಗಿ ಹದೆಗೆಟ್ಟಿದೆ. ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿರುವುದಾಗಿದೆ. ಮೃತ ಚೈತ್ರಾ ಅವರು ಪತಿ, ಪುತ್ರಿಯನ್ನು ಅಗಲಿದ್ದಾರೆ.

ಆರೋಗ್ಯ ಕೆಟ್ಟು ಮಹಿಳೆ ಸಾವು Read More »

ಹಲವರಿಂದ ಹಲ್ಲೆ: ದೂರು ದಾಖಲು

ಪುತ್ತೂರು: ತನ್ನ ಮನೆಯ ಸಿಟೌಟ್‌ನಲ್ಲಿ ಕುಳಿತಿದ್ದಾಗ ಕೆಲವು ಜನರು ಬಂದು ಹಲ್ಲೆ ನಡೆಸಿದ್ದಾಗಿ ಈಶ್ವರಮಂಗಲದ ಪಡುವನ್ನೂರು ನಿವಾಸಿ ಮಹಮ್ಮದ್ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳಾದ ಅಬ್ದುಲ್ ರಹಮಾನ್, ಸಾಹುಲ್ ಹಮೀದ್, ಮಿಕ್ತಾದ್, ರಶೀದ್, ಮೊಯಿದು ಎಂಬವರು ಬಂದು ಅವಾಚ್ಯವಾಗಿ ನಿಂದಿಸುತ್ತಾ, ನಮ್ಮ ಹಣ ತಿಂದಿದ್ದೀಯಾ ಎಂದು ಗದರಿಸುತ್ತಾ, ನಮ್ಮ ಜಾಗ ಇದು, ಇಲ್ಲಿ ಕಾಂಪೌಂಡ್ ಕಟ್ಟುತ್ತೀಯಾ ಎಂದು ಬೈದು ಹಲ್ಲೆ ನಡೆಸಿದ್ದಾರೆ. ಈ ವೇಳೆ ನನ್ನ ಪತ್ನಿ ಸೆಫಿಯಾ ಬರುವುದನ್ನು ಕಂಡು

ಹಲವರಿಂದ ಹಲ್ಲೆ: ದೂರು ದಾಖಲು Read More »

ನಳ್ಳಿ ನೀರಿನ ವಿಚಾರಕ್ಕೆ ನಿಂದನೆ, ಹಲ್ಲೆ: ದೂರು ದಾಖಲು

ಪುತ್ತೂರು: ನಳ್ಳಿ ‌ನೀರಿನ ಸರಬರಾಜು ವಿಷಯಕ್ಕೆ ಸಂಬಂಧಿಸಿದ ಹಾಗೆ ಹಲ್ಲೆ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಶಾಂತಿಗೋಡು ಗ್ರಾಮದ ಉಮೇಶ್ ಖಂಡಿಗ ಅವರು ದೂರು ನೀಡಿರುವುದಾಗಿದೆ. ಉಮೇಶ್ ಅವರು ನರಿಮೊಗರು ಪಂಚಾಯತ್‌ನಿಂದ ನಳ್ಳಿ ‌ನೀರಿನ ಸೌಲಭ್ಯ ಪಡೆದಿದ್ದು, ಅವರ ಮನೆಗೆ ನೀರು ಸರಬರಾಜು ಸ್ಥಗಿತವಾಗಿತ್ತು‌. ಈ ಬಗ್ಗೆ ನೀರು ಬಿಡುವ ಕೆಲಸ ಮಾಡುತ್ತಿದ್ದ ಶೇಖರ್ ಎಂಬವರಿಗೆ ಕರೆ ಮಾಡಿ ನೀರು ಬಿಡುವಂತೆ ಹೇಳಿದ್ದರು. ಆದರೆ ಶೇಖರ್ ಮತ್ತು

ನಳ್ಳಿ ನೀರಿನ ವಿಚಾರಕ್ಕೆ ನಿಂದನೆ, ಹಲ್ಲೆ: ದೂರು ದಾಖಲು Read More »

ನಕಲಿ ನಂಬರ್ ಬಳಸಿ ಕಾರು ಚಲಾಯಿಸಿದ ಹಬೀಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಕಲಿ ನಂಬರ್ ಪ್ಲೇಟ್ ಬಳಸಿ ಕಾರು ಚಲಾಯಿಸಿದ ವ್ಯಕ್ತಿಯೊಬ್ಬರ ‌ವಿರುದ್ದ ಪುತ್ತೂರು ನಗರ ಠಾಣಾ ಪೊಲೀಸರು ಕೇಸು ದಾಖಲಿಸಿದ್ದಾರೆ. ಕೆಮ್ಮಿಂಜೆಯ ಕೂರ್ನಡ್ಕದ ಸಮೀಪ ಹಬೀಬ್ ಎಂಬವರು ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿ ಚಲಾಯಿಸಿದ ಆರೋಪಿ. ಮಾರುತಿ ಸ್ವಿಫ್ಟ್ ಕಾರಿನ ನಂಬರ್ ಪ್ಲೇಟ್ ನಕಲಿ ಬಳಸಿ ಹಬೀಬ್ ಚಲಾಯಿಸುತ್ತಿದ್ದು, ರೌಂಡ್ಸ್‌ನಲ್ಲಿದ್ದ ಪೊಲೀಸರು ಕಾರನ್ನು ತಪಾಸಣೆಗೆ ಒಳಪಡಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಪರಿಶೀಲನೆಯ ಸಮಯದಲ್ಲಿ ಕಾರಿನ ನೋಂದಣಿ ಸಂಖ್ಯೆ, ಎಂಜಿನ್ ನಂಬರ್ ಮತ್ತು ಚೇಸೀಸ್ ನಂಬರ್‌ಗಳಲ್ಲಿ

ನಕಲಿ ನಂಬರ್ ಬಳಸಿ ಕಾರು ಚಲಾಯಿಸಿದ ಹಬೀಬ್ ವಿರುದ್ಧ ಪ್ರಕರಣ ದಾಖಲು Read More »

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಮೈ ಮಾಡದಾರು ದೈವಸ್ಥಾನ ಕಡೇಶಿವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಅಮೈ ಮಾಡದಾರು ಕಡೇಶಿವಾಲಯದ ವಾರ್ಷಿಕ ಜಾತ್ರೋತ್ಸವದ ಗೊನೆ ಮುಹೂರ್ತದ ದಿನದಂದು ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ದೈವಸ್ಥಾನದ ಆಡಳಿತ ಸಮಿತಿಯವರು ಶ್ರಮದಾನ ಸೇವೆಯಲ್ಲಿ ಭಾಗವಹಿಸಿದ್ದರು.

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಮೈ ಮಾಡದಾರು ದೈವಸ್ಥಾನ ಕಡೇಶಿವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ Read More »

ಅಕ್ರಮ ಕಾಂಪೌಂಡ್ ನಿರ್ಮಾಣ ಪ್ರಶ್ನೆ ಮಾಡಿದ್ದಕ್ಕೆ ಆರೋಪಿಯಿಂದ ಹಲ್ಲೆ: ದೂರು ದಾಖಲು

ಪುತ್ತೂರು: ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿದ್ದನ್ನು ಪ್ರಶ್ನೆ ಮಾಡಲು ಹೋಗಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಮಂಗಲದ ಸರೋಳಿಮೂಲೆಯ ಅಬ್ದುಲ್ ರಹಿಮಾನ್ ಕೆ. ಎಂ. ಎನ್ನುವವರು ದೂರು ನೀಡಿರುವುದಾಗಿದೆ. ಪಡುವನ್ನೂರಿನ ಸಸಿಹಿತ್ತಿಲು ಎಂಬಲ್ಲಿ ತಾನು ಖರೀದಿ ಮಾಡಿದ ಜಾಗದಲ್ಲಿನ ತಡೆ ಗೋಡೆಯ ಮೇಲೆ ಪಿ. ಮಹಮ್ಮದ್ ಎನ್ನುವವರು ಅಕ್ರಮವಾಗಿ ತನ್ನ ಕೆಲಸದಾಳುಗಳಿಂದ ಕಾಂಪೌಂಡ್ ಗೋಡೆ ಕಟ್ಟಿಸುತ್ತಿದ್ದರು. ಇದನ್ನು ಪ್ರಶ್ನೆ ಮಾಡಿದ ರಹಿಮಾನ್ ಮತ್ತು ಅವರ ತಾಯಿಯ ಮೇಲೆ ಮಹಮ್ಮದ್ ಕಲ್ಲುಗಳಿಂದ ದಾಳಿ

ಅಕ್ರಮ ಕಾಂಪೌಂಡ್ ನಿರ್ಮಾಣ ಪ್ರಶ್ನೆ ಮಾಡಿದ್ದಕ್ಕೆ ಆರೋಪಿಯಿಂದ ಹಲ್ಲೆ: ದೂರು ದಾಖಲು Read More »

ಅನುಮತಿ ಇಲ್ಲದೆ ವಿಡಿಯೋ ಚಿತ್ರೀಕರಿಸಿ ಹಂಚಿದ ಆರೋಪಿಗ‌ಳ ವಿರುದ್ಧ ದೂರು ದಾಖಲು

ಕಡಬ: ಅನುಮತಿ ಪಡೆಯದೆ ವ್ಯಕ್ತಿಯೊಬ್ಬರ ಖಾಸಗಿ ವಿಚಾರಗಳನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿ ಅವಮಾನಿಸಿದ ಇಬ್ಬರು ಆರೋಪಿಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೂರು ಗ್ರಾಮದ ನೆಲ್ಲಿಕಟ್ಟೆ ನಿವಾಸಿ ಪೂರ್ಣಜ್ಯೋತಿ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪೂರ್ಣಜ್ಯೋತಿ ಅವರ ಮಗ ಪ್ರಭಾಕರ್ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎ. 3 ರಂದು ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಗಂಗಾಪ್ರಸನ್ನ ಎಂಬವರು ಪೂರ್ಣಜ್ಯೋತಿ ಅವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಜಗಳ

ಅನುಮತಿ ಇಲ್ಲದೆ ವಿಡಿಯೋ ಚಿತ್ರೀಕರಿಸಿ ಹಂಚಿದ ಆರೋಪಿಗ‌ಳ ವಿರುದ್ಧ ದೂರು ದಾಖಲು Read More »

error: Content is protected !!
Scroll to Top