ಪುತ್ತೂರು

ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು  ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಜಿಲ್ಲೆ ಮಂಗಳೂರು ಆಶ್ರಯದಲ್ಲಿ ಸೆ.10 ರಂದು ಮಂಗಳೂರಿನ ಸಂತ ಅಲೋಶಿಯಸ್ ಪ. ಪೂ ಕಾಲೇಜಿನಲ್ಲಿ ನಡೆದ ‘ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಐದು ವಿದ್ಯಾರ್ಥಿಗಳು ಪಾಲ್ಗೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.  ದ್ವಿತೀಯ ವಿಜ್ಞಾನ ವಿಭಾಗದ ಪ್ರಾಧಿ ಕ್ಲಾರೆ ಪಿಂಟೋ 3 ಚಿನ್ನ, ದಿಗಂತ್ ವಿ […]

ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು  ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಇಂದು : ರೋಟರಿ ಕ್ಲಬ್‍, ಇನ್ನರ್ ವ್ಹೀಲ್‍ ಕ್ಲಬ್‍ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

ಪುತ್ತೂರು: ರೋಟರಿ ಕ್ಲಬ್‍ ಪುತ್ತೂರು ಹಾಗೂ ಇನ್ನರ್‍ ವ್ಹೀಲ್‍ ಕ್ಲಬ್‍ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಇಂದು (ಶುಕ್ರವಾರ) ಸಂಜೆ 5.30 ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3181 ನಿಯೋಜಿತ ಜಿಲ್ಲಾ ಗವರ್ನರ್‍ ಯಶಸ್ವಿ ಸೋಮಶೇಖರ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರೋಟರಿ ಅಧ್ಯಕ್ಷ ಡಾ.ಶ್ರೀಪ್ರಕಾಶ್‍ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು : ರೋಟರಿ ಕ್ಲಬ್‍, ಇನ್ನರ್ ವ್ಹೀಲ್‍ ಕ್ಲಬ್‍ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ Read More »

ಸಾಂಪ್ರದಾಯಿಕ ವೈದ್ಯ ನಾರಣಪ್ಪ ಸಾಲಿಯಾನ್‍ ಮನೆಗೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಭೇಟಿ

ಪುತ್ತೂರು: ಸಂತ  ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಬೋಟನಿ ವಿಭಾಗದ ವಿದ್ಯಾರ್ಥಿಗಳಾದ ದಿಶಾ, ದೀಕ್ಷಿತಾ, ಗ್ರೀಷ್ಮಾ, ಸಂಬ್ರಮ್ ಹಾಗೂ ತೇಜಸ್ ರೈ ಅವರು ಪ್ರಸಿದ್ಧ ನಾಟಿ ವೈದ್ಯರಾದ ನಾರಣಪ್ಪ ಸಾಲಿಯನ್ ಅವರ ಮನೆಗೆ ಶೈಕ್ಷಣಿಕ ಭೇಟಿ ನೀಡಿದರು. ವಿದ್ಯಾರ್ಥಿಗಳು ಔಷಧಿ ಸಸ್ಯಶಾಸ್ತ್ರ (Medicinal Botany) ಎಂಬ ಮುಕ್ತ ಆಯ್ಕೆ ವಿಷಯವನ್ನು ಆರಿಸಿಕೊಂಡಿದ್ದು, ಔಷಧಿ ಸಸ್ಯಗಳ ಬಗ್ಗೆ ತಿಳಿಯುವ ಆಸಕ್ತಿಯಿಂದ ಈ ಭೇಟಿಯಲ್ಲಿ ಭಾಗವಹಿಸಿದರು. ಭೇಟಿಯ ಸಂದರ್ಭದಲ್ಲಿ ನಾರಣಪ್ಪ ಸಾಲಿಯನ್ ಅವರು ಔಷಧಿ ಸಸ್ಯಗಳ ಕುರಿತು ತಮ್ಮ ಅಪಾರ ಜ್ಞಾನವನ್ನು

ಸಾಂಪ್ರದಾಯಿಕ ವೈದ್ಯ ನಾರಣಪ್ಪ ಸಾಲಿಯಾನ್‍ ಮನೆಗೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳ ಭೇಟಿ Read More »

ಶ್ರೀ ಮಹಾಭಾರತ ಸರಣಿಯಲ್ಲಿ ಮಹಿಳಾ ಯಕ್ಷಕೂಟ ಕದ್ರಿ ಇವರಿಂದ ಗದಾಯುದ್ಧ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಕಲಾ ಸೇವಾ ಟ್ರಸ್ಟಿನ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 95ನೇ ಕಾರ್ಯಕ್ರಮವಾಗಿ ಮಹಿಳಾ ಯಕ್ಷಕೂಟ ಕದ್ರಿಮಂಗಳೂರು ಬಳಗದಿಂದ ಎಲ್ಲೂರು ರಾಮಚಂದ್ರರಾವ್ ನಿರ್ದೇಶನದಲ್ಲಿ ಗದಾಯುದ್ಧ ತಾಳಮದ್ದಳೆ ಉಪ್ಪಿನಂಗಡಿ ರಾಮನಗರದ ಶಾರದಾ ಕಲಾಮಂಟಪದಲ್ಲಿ ಜರಗಿತು. ಭಾಗವತರಾಗಿ ಲಕ್ಷ್ಮೀನಾರಾಯಣ ಹೊಳ್ಳ, ಸ್ಕಂದ ಕೊನ್ನರ್,ಕೃಷ್ಣರಾವ್, ಚಕ್ರತಾಳದಲ್ಲಿ ರಾಮಚಂದ್ರ ಎಲ್ಲೂರು ಅರ್ಥಧಾರಿಗಳಾಗಿವನಿತಾ ಎಲ್ಲೂರು (ಕೌರವ 1) ರಂಜಿತಾ ಎಲ್ಲೂರು( ಕೌರವ 2) ವಿಶಾಲ ಕೇಶವ ಭಟ್ (ಭೀಮ) ಶೀಲಾ ಜಯಪ್ರಕಾಶ್ (ಅಶ್ವತ್ಥಾಮ) ರಮಾಮಣಿ ಭಟ್ (ಸಂಜಯ) ಸಂಧ್ಯಾ

ಶ್ರೀ ಮಹಾಭಾರತ ಸರಣಿಯಲ್ಲಿ ಮಹಿಳಾ ಯಕ್ಷಕೂಟ ಕದ್ರಿ ಇವರಿಂದ ಗದಾಯುದ್ಧ ತಾಳಮದ್ದಳೆ Read More »

24ನೇ ವರ್ಷದ ಹೇಮಂತ ಕುಮಾರ್ ಸಂಸ್ಮರಣಾ ಕಾರ್ಯಕ್ರಮ

ಪುತ್ತೂರು: 2001 ಸೆ.11 ರಂದು ನಡೆದ ನ್ಯೂಯಾರ್ಕ್ ಜಾಗತಿಕ ಕಟ್ಟಡ ದುರಂತದಲ್ಲಿ ಹುತಾತ್ಮರಾದ ದಿ| ಹೇಮಂತ ಕುಮಾರ್ ಅವರ 24ನೇ ಸಂಸ್ಮರಣಾ ಕಾರ್ಯಕ್ರಮ ಗುರುವಾರ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಫ ಮತ್ತು ದಿ| ಹೇಮಂತ ಕುಮಾರ್ ಸ್ಮಾರಕ ಸಮಿತಿ, ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಸಂಘದ ಹೇಮಂತ ಕುಮಾರ್ ಸಭಾಭವನದಲ್ಲಿ ಜರಗಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಪೂಜೆ ನೇರವೇರಿಸಿ, ದೀಪ ಬೆಳಗಿಸಿ ಹೇಮಂತ ಕುಮಾರ್ ತೈಲಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೇಮಂತ

24ನೇ ವರ್ಷದ ಹೇಮಂತ ಕುಮಾರ್ ಸಂಸ್ಮರಣಾ ಕಾರ್ಯಕ್ರಮ Read More »

ಶತಮಾನ ಪೂರೈಸಿದ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಂಪೂರ್ಣ ಡಿಜೆಟಲೀಕರಣದತ್ತ : ಕಿಶೋರ್ ಕುಮಾರ್ ಕೊಳತ್ತಾಯ

ಪುತ್ತೂರು: ಶತಮಾನ ಪೂರೈಸಿದ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಗ್ರಾಹಕರಿಗೆ ಪ್ರಯೋಜನ ಆಗುವ ರೀತಿಯಲ್ಲಿ ಹಲವು ಹೊಸತನಗಳೊಂದಿಗೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು, ಇದರ ಪ್ರಮುಖ ಯೋಜನೆಗಳನ್ನು ಸೆ.14ರಂದು ನಡೆಯುವ 116ನೇ ವರ್ಷದ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು ಎಂದು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಕಿಶೋ‌ರ್ ಕೊಳತ್ತಾಯ ಎನ್. ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, 2024-25ನೇ ಸಾಲಿನಲ್ಲಿ ನಮ್ಮ ಬ್ಯಾಂಕ್ ಇತಿಹಾಸದಲ್ಲಿ ಒಂದು ಹೊಸ ಮೈಲುಗಲ್ಲನ್ನು ಸಾಧಿಸಿದೆ. ವ್ಯವಹಾರದಲ್ಲಿ ಗಣನೀಯ ಹೆಚ್ಚಳ ಸಾಧಿಸಿದ್ದು, ಒಟ್ಟು

ಶತಮಾನ ಪೂರೈಸಿದ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಂಪೂರ್ಣ ಡಿಜೆಟಲೀಕರಣದತ್ತ : ಕಿಶೋರ್ ಕುಮಾರ್ ಕೊಳತ್ತಾಯ Read More »

ಪೆರುವಾಯಿ ಗ್ರಾ.ಪಂ ಅಧ್ಯಕ್ಷರ ಲಂಚ ಪ್ರಕರಣ ಹಿನ್ನೆಲೆ – ಕಾಂಗ್ರೆಸ್ ಪಕ್ಷದಿಂದ ವಜಾಮಾಡಿ | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹ.

ಪುತ್ತೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ನಫೀಸಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಮಾಡಬೇಕು. ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಬೇಕು ಎಂದು ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹಿಸಿದೆ. ಪೆರುವಾಯಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಂಚಾಯತ್‌ ಅಧ್ಯಕ್ಷೆ ನಫೀಸಾ ಅವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ 2024-25ನೇ ಸಾಲಿನ ವಿಶೇಷ ಘಟಕ

ಪೆರುವಾಯಿ ಗ್ರಾ.ಪಂ ಅಧ್ಯಕ್ಷರ ಲಂಚ ಪ್ರಕರಣ ಹಿನ್ನೆಲೆ – ಕಾಂಗ್ರೆಸ್ ಪಕ್ಷದಿಂದ ವಜಾಮಾಡಿ | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹ. Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಪದಾಧಿಕಾರಿಗಳ ತುರ್ತು ಸಭೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ  ಬಿಜೆಪಿ ಪದಾಧಿಕಾರಿಗಳಾಗಿ ಪಕ್ಷದಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರಮುಖರ ಸಭೆ ಪರಿವಾರ ಸೇವಾ ಟ್ರಸ್ಟ್ ನ ಕಛೇರಿಯಲ್ಲಿ ನಡೆಯಿತು. ಪುತ್ತಿಲ ಪರಿವಾರ ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾದ ಸಂಧರ್ಭದಲ್ಲಿ ಪಕ್ಷದ ಮತ್ತು ಸಂಘದ ಪ್ರಮುಖ ನಾಯಕರು ಅರುಣ್ ಪುತ್ತಿಲರಿಗೆ ನೀಡಿದ ಭರವಸೆಯನ್ನು ಈಡೇರಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪಕ್ಷದ ಪದಾಧಿಕಾರಿಗಳು ತಮ್ಮ ಮುಂದಿನ ನಡೆಯ ಬಗ್ಗೆ ಅಭಿಪ್ರಾಯ ಮಂಡಿಸಿದರು. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸಂಸದರು, ರಾಜ್ಯಧ್ಯಕ್ಷರು, ಜಿಲ್ಲಾಧ್ಯಕ್ಷರು, ನೀಡಿದ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಮಂಡಲ ಪದಾಧಿಕಾರಿಗಳ ತುರ್ತು ಸಭೆ Read More »

ಮಳೆಯಿಂದಾಗಿ ಗುಂಡಿಗಳಿಂದ ಕೆಟ್ಟು ಹೋದ ರಸ್ತೆ | ಪುತ್ತೂರು ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಪರಿಶೀಲಿಸಿ ತಕ್ಷಣ ದುರಸ್ಥಿಗೆ ಸೂಚನೆ

ಪುತ್ತೂರು: ವಾಡಿಕೆಗಿಂತ ಹೆಚ್ಚು ಹಾಗೂ ನಿರಂತರ ಮಳೆ ಸುರಿದ ಪರಿಣಾಮ ನಗರಸಭೆಯ ಬಹುಪಾಲು ರಸ್ತೆಗಳು ಹದಗೆಟ್ಟು ಗುಂಡಿಗಳಾಗಿ ಸಂಚಾರಕ್ಕೆ ಸಂಚಕಾರ ಎದುರಾಗಿರುವ ಹಿನ್ನಲೆಯಲ್ಲಿ ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಅಧಿಕಾರಿಗಳ ಜೊತೆ ನಗರಸಭೆ ಮುಖ್ಯರಸ್ತೆಯಲ್ಲಿ ಪರಿಶೀಲನೆ ನಡೆಸಿ ತಕ್ಷಣದ ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೇ ತಿಂಗಳಿನಿಂದಲೇ ಮಳೆ ಬಿಡುವಿಲ್ಲದೆ ಸುರಿದಿದ್ದರಿಂದ ರಸ್ತೆಗಳು ಹದಗೆಟ್ಟಿದೆ. ಹೀಗಾಗಿ, ಹದಗೆಟ್ಟ ರಸ್ತೆಗಳು ಹಾಳಾಗಿ ಹೊಂಡ ಗುಂಡಿಗಳಾಗಿ ಸಂಚಾರಕ್ಕೆ ಅಡ್ಡಿಯಾಗಿವೆ. ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಿದರೂ ಮತ್ತೆ

ಮಳೆಯಿಂದಾಗಿ ಗುಂಡಿಗಳಿಂದ ಕೆಟ್ಟು ಹೋದ ರಸ್ತೆ | ಪುತ್ತೂರು ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಪರಿಶೀಲಿಸಿ ತಕ್ಷಣ ದುರಸ್ಥಿಗೆ ಸೂಚನೆ Read More »

ಸೆ.12 : ಮಂಗಳೂರಿನಲ್ಲಿ ಯುಇಎ ವತಿಯಿಂದ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ -ಪುತ್ತೂರಿನಿಂದ ಉಚಿತ ಬಸ್ ವ್ಯವಸ್ಥೆ.

ಪುತ್ತೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್‌ ರಾಜ್ಯ ಸಮಿತಿ(ಯುಇಎ) ವತಿಯಿಂದ ಸೆ.12ರಂದು ಮಂಗಳೂರಿನ ಇಂಡಿಯಾನ ಕನ್ವೆನ್ನನ್ ಸೆಂಟರ್‌ನಲ್ಲಿ ನಡೆಯಲಿರುವ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ -2025 ಕಾರ್ಯಕ್ರಮ ನಡೆಯಲಿದ್ದು ಪುತ್ತೂರಿನಿಂದ ತೆರಳುವವರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಪುತ್ತೂರು ಘಟಕದ ಅಧ್ಯಕ್ಷ ಅಬ್ದುಲ್ ರಜಾಕ್ ಬಪ್ಪಳಿಗೆ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಯುವ ನಾಯಕತ್ವ, ವ್ಯಕ್ತಿ ಮಾರ್ಗದರ್ಶನ ಮತ್ತು ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಬಲಪಡಿಸುವ ಉದ್ದೇಶದಿಂದ ಪುತ್ತೂರು ಸಹಿತ 21 ವಲಯದ ಯುವಕರನ್ನು

ಸೆ.12 : ಮಂಗಳೂರಿನಲ್ಲಿ ಯುಇಎ ವತಿಯಿಂದ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ -ಪುತ್ತೂರಿನಿಂದ ಉಚಿತ ಬಸ್ ವ್ಯವಸ್ಥೆ. Read More »

error: Content is protected !!
Scroll to Top