ಪುತ್ತೂರು

ಕಾವು ಪಂಚವಟಿ ನಗರದಲ್ಲಿ ಅಪಾಯಕಾರಿ ಮರ | ತುರ್ತು ಕ್ರಮಕ್ಕೆ ಸಾರ್ವಜನಿಕರಿಂದ ಆಗ್ರಹ

ಪುತ್ತೂರು: ಕಾವು ಮೇಲಿನಪೇಟೆಯ ಮಧ್ಯಭಾಗದಲ್ಲಿ ದೇವದಾರು ಜಾತಿಯ ಎರಡು ಮರಗಳಿದ್ದು ಬುಡಸಮೇತ ಬೀಳುವ ಹಂತದಲ್ಲಿದ್ದು, ಅಪಾಯಕ್ಕೆ ಆಹ್ವಾನದಂತಿದೆ. ಮರದ ಕೆಳಗೆ ಹಲವು ಅಂಗಡಿಗಳಿದ್ದು,ರಿಕ್ಷಾ ನಿಲ್ದಾಣವೂ ಇದೆ. ಮೆಸ್ಕಾಂ ಟಿ.ಸಿ.,ತಂತಿಗಳು, ಪಂಚಾಯಿತಿ ಕಟ್ಟಡಗಳೂ ಇದ್ದು, ನೂರಾರು ಸಾರ್ವಜನಿಕರು ಓಡಾಡುತ್ತಿರುವುದರಿಂದ ಅಪಾಯ ಕಟ್ಟಿಟ್ಟಬುತ್ತಿ. ಅನಾಹುತಗಳಾಗುವ ಮೊದಲೇ ಸಂಬಂಧಪಟ್ಟ ಇಲಾಖೆಗಳು ತುರ್ತುಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹಿಸಿದ್ದಾರೆ.

ಕಾವು ಪಂಚವಟಿ ನಗರದಲ್ಲಿ ಅಪಾಯಕಾರಿ ಮರ | ತುರ್ತು ಕ್ರಮಕ್ಕೆ ಸಾರ್ವಜನಿಕರಿಂದ ಆಗ್ರಹ Read More »

ಎಸ್.ಆರ್.ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಅವರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಬೆಳ್ಳಿಯ ಏಣಿ ಅರ್ಪಿಸಿ ಗೌರವ ವಂದನೆ

ಕಡಬ: ಎಸ್‍.ಆರ್.ಕೆ. ಲ್ಯಾಡರ್ಸ್‍ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ಸಿಬ್ಬಂದಿಗಳಿಂದ ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರನ್ನು ಸನ್ಮಾನಿಸಿ, ಗೌರವ ವಂದನೆ ಸಲ್ಲಿಸಿದರು. ಸಿಬ್ಬಂದಿಗಳು ಬೆಳ್ಳಿಯ ಏಣಿ ನೀಡಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಸ್.ಆರ್.ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಅವರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಬೆಳ್ಳಿಯ ಏಣಿ ಅರ್ಪಿಸಿ ಗೌರವ ವಂದನೆ Read More »

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ- ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

ಪುತ್ತೂರು:  ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಪಾಂಗ್ಲಾಯ್ ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಾಗಾರ ಶುಕ್ರವಾರ ಬೆಥನಿ ಶಾಲೆಯ ಸಭಾಂಗಣದಲ್ಲಿ, ನಡೆಯಿತು. ಬೆಥನಿ ಶಾಲಾ ಸಂಚಾಲಕಿ ವಂ. ಭಗಿನಿ ಪ್ರಶಾಂತಿ ಬಿ.ಎಸ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರವನ್ನು ಕುಲಶೇಖರ ಜೀವಂಧಾರ ಸಮಾಜ ಸೇವಾ ಸಂಘದ ಕಾರ್ಯದರ್ಶಿ ವಂ. ಭಗಿನಿ ಅನ್ನಾ ಮರಿಯ, ಕುಲಶೇಖರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಲಿಟ್ಲ್ ಫ್ಲವರ್

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ- ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ Read More »

ಮೇ 27 : ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ, ಕವಿಗೋಷ್ಠಿ

ಪುತ್ತೂರು: ಜನಾರ್ದನದುರ್ಗ ಅವರ ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ ಹಾಗೂ ಕವಿಗೋಷ್ಠಿ ಮೇ 27 ಸೋಮವಾರ ಮಧ್ಯಾಹ್ನ 2.30 ಕ್ಕೆ ಪುತ್ತೂರು ಅನುರಾಗ ವಠಾರದಲ್ಲಿ ನಡೆಯಲಿದೆ. ವಿಶ್ರಾಂತ ಪ್ರಾಂಶುಪಾಲ ಪ್ರೊ.ಝೇವಿಯರ್ ಡಿ’ಸೋಜ ದೀಪ ಪ್ರಜ್ವಲನೆ ಮಾಡಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್‍. ಕೃತಿ ಬಿಡುಗಡೆ ಮಾಡುವರು. ಹಿರಿಯ ಸಾಹಿತಿ ಡಾ.ವರದರಾಜ ಚಂದ್ರಗಿರಿ ಕೃತಿ ಪರಿಚಯ ಮಾಡಲಿದ್ದು, ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಮ ಕೆ. ಕೃತಿಕಾರರ ಪರಿಚಯ ಮಾಡುವರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ

ಮೇ 27 : ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ, ಕವಿಗೋಷ್ಠಿ Read More »

ಎಸ್‍.ಆರ್.ಕೆ.ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ | ಸ್ವಯಂ ಸೇವಕರಿಗೆ ಟಿ ಶರ್ಟ್ ವಿತರಣೆ

ಕಡಬ: ಕೊಯಿಲ ಗ್ರಾಮದ ಕಲಾಯಿಗುತ್ತಿನಲ್ಲಿ ನಡೆಯಲಿರುವ ಖ್ಯಾತ ಕೃಷಿ ಯಂತ್ರೋಪಕರಣಗಳ ಸಂಸ್ಥೆ ಎಸ್‍ ಆರ್ ಕೆ ಲ್ಯಾಡರ್ಸ್ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮದಲ್ಲಿ ಎಲ್ಲಾ ಸ್ವಯಂ ಸೇವಕರಿಗೆ ಟಿ ಶರ್ಟ್ ವಿತರಿಸಲಾಯಿತು. ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರು ಸ್ವಯಂ ಸೇವಕರಿಗೆ ಟಿ ಶರ್ಟ್ ವಿತರಿಸಿದರು. ಕಾರ್ಯಕ್ರಮಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗುತ್ತಿದ್ದು. ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿದೆ.

ಎಸ್‍.ಆರ್.ಕೆ.ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ | ಸ್ವಯಂ ಸೇವಕರಿಗೆ ಟಿ ಶರ್ಟ್ ವಿತರಣೆ Read More »

ಇಂದು ಎಸ್‍. ಆರ್.ಕೆ.ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ | ಊರವರು, ವಿವಿಧ ಸಮಿತಿ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳ ಪೂರ್ವಸಿದ್ಧತಾ ಸಭೆ

ಪುತ್ತೂರು: ಕೊಯಿಲ ಗ್ರಾಮದ ಕಲಾಯಿಗುತ್ತಿನಲ್ಲಿ ನಡೆಯಲಿರುವ ಖ್ಯಾತ ಕೃಷಿ ಯಂತ್ರೋಪಕರಣಗಳ ಸಂಸ್ಥೆ ಎಸ್‍  ಆರ್ ಕೆ ಲ್ಯಾಡರ್ಸ್ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮದ ಕುರಿತು ಊರವರು, ವಿವಿಧ ಸಮಿತಿ ಪದಧಿಕಾರಿಗಳು ಹಾಗೂ ಸಂಸ್ಥೆಯ ಸಿಬ್ಬಂದಿಗಳ ಪೂರ್ವಸಿದ್ಧತಾ ಸಭೆ ಇಂದು ಬೆಳಿಗ್ಗೆ ನಡೆಯಿತು. ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಧ್ಯಾಹ್ನ ನಂತರ ನಡೆಯುವ ಒಟ್ಟು ಕಾರ್ಯಕ್ರಮದ ಯಾವ ರೀತಿ ಇರಬೇಕು ಎಂಬ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಕಾರ್ಯಕ್ರಮದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇಂದು ಎಸ್‍. ಆರ್.ಕೆ.ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ | ಊರವರು, ವಿವಿಧ ಸಮಿತಿ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳ ಪೂರ್ವಸಿದ್ಧತಾ ಸಭೆ Read More »

ಕಾರು-ಆಕ್ಟಿವಾ ಡಿಕ್ಕಿ | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸವಾರೆ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ. ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ವೇಳೆ

ಕಾರು-ಆಕ್ಟಿವಾ ಡಿಕ್ಕಿ | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸವಾರೆ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು Read More »

ಪುತ್ತೂರಿನ ಜೈನಭವನದಲ್ಲಿ ಮೇಳೈಸಿದ ಹಲಸು ಮತ್ತು ಹಣ್ಣುಗಳ ಮೇಳ | ಗಮನ ಸೆಳೆದ ಹಲಸಿನ ಹಣ್ಣಿನ ವಿವಿಧ ಉತ್ಪನ್ನಗಳು

ಪುತ್ತೂರು: ಒಂದು ಕಾಲದಲ್ಲಿ ಕಾಡಿನಲ್ಲಿ ಬೆಳೆದು, ಹೊಟ್ಟೆಗಿಲ್ಲದ ಬಡವರು ಉಪಯೋಗಿಸುತ್ತಿದ್ದ ಹಲಸಿನ ಹಣ್ಣುಗಳಲ್ಲಿ ವಿವಿಧ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಹಾಗೂ ಪ್ರದರ್ಶನ ಮಾಡುತ್ತಿರುವ ನಿಟ್ಟಿನಲ್ಲಿ ಹಲಸು ಮೇಳ ಆಯೋಜಿಸುತ್ತಿರುವುದು ಅಭಿನಂದನೀಯ ಎಂದು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ನವತೇಜ ಪುತ್ತೂರು, ಜೆಸಿಐ, ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ಹಾಗೂ ಅಡಿಕೆ ಪತ್ರಿಕೆ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ಆಯೋಜನೆಗೊಂಡ ಹಲಸು ಹಾಗೂ ಹಣ್ಣುಗಳ ಮೇಳದಲ್ಲಿ ಮಳಿಗೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಲಸಿನ ಹಣ್ಣಿನ ವಿವಿಧ ಖಾದ್ಯ

ಪುತ್ತೂರಿನ ಜೈನಭವನದಲ್ಲಿ ಮೇಳೈಸಿದ ಹಲಸು ಮತ್ತು ಹಣ್ಣುಗಳ ಮೇಳ | ಗಮನ ಸೆಳೆದ ಹಲಸಿನ ಹಣ್ಣಿನ ವಿವಿಧ ಉತ್ಪನ್ನಗಳು Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ

ಪುತ್ತೂರು: ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿವಿಧ ತಾಂತ್ರಿಕ ಮತ್ತು ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಮೂಡಿಸಿ ಅವರನ್ನು ಶೈಕ್ಷಣಿಕವಾಗಿ ಮತ್ತು ವೈಯಕ್ತಿಕವಾಗಿ ಆ ಕ್ಷೇತ್ರಗಳಿಗೆ ಆಕರ್ಷಿಸುವಂತೆ ಮಾಡುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಮೈಕ್ರೋಸಾಫ್ಟ್ ಆಫೀಸ್‌ನ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಾವೀಣ್ಯತೆಯನ್ನು ಹೆಚ್ಚಿಸುವುದು, ಎಚ್‌ಟಿಎಂಎಲ್ ಬಳಸಿಕೊಂಡು ವೆಬ್ ಪೇಜ್‌ಗಳ ವಿನ್ಯಾಸ, ಗೂಗಲ್ ಸೈಟ್‌ಗಳಲ್ಲಿ ವಿವಿಧ ವೆಬ್‌ಸೈಟ್‌ಗಳನ್ನು ನಿರ್ಮಿಸುವ ಬಗ್ಗೆ ಮಾರ್ಗದರ್ಶನ, ವಿಜ್ಞಾನ, ತಂತಜ್ಞಾನ. ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳಲ್ಲಿನ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ Read More »

ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಕಾಣಿಯೂರು: ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ದೋಳ್ಪಾಡಿ ಗ್ರಾಮದ ಅಜ್ಜಿನಡ್ಕ ನಿವಾಸಿ ಬಾಬು ಎಂಬವರ ಪುತ್ರ ವಸಂತ (40) ಮೃತಪಟ್ಟವರು. ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಕೊಜಂಬೇಡಿ ಎಂಬಲ್ಲಿ ಮೇ 13 ರಂದು ಬೆಳಗ್ಗೆ ಕೂಲಿ ಕೆಲಸಕ್ಕೆಂದು ತನ್ನ ಮೋಟಾರ್ ಬೈಕ್ ನಲ್ಲಿ ಎಡಮಂಗಲಕ್ಕೆ ಹೋಗಿದ್ದ ವಸಂತರವರು ಅದೇ ಬೈಕಿನಲ್ಲಿ ವಾಪಾಸು ಮನೆಗೆ ಬರುತ್ತಿರುವಾಗ ಕೊಜಂಬೇಡಿ ಎಂಬಲ್ಲಿರುವ ಸೇತುವೆ ಬಳಿ ನಿಯಂತ್ರಣ ತಪ್ಪಿ ಬೈಕ್ ಸಮೇತ ಸೇತುವೆಯಿಂದ

ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

error: Content is protected !!
Scroll to Top