ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯದಲ್ಲಿ ಡೆಂಗ್ಯೂ ಪ್ರಕರಣ ಪತ್ತೆ | ಮುಂಜಾಗ್ರತಾ ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಂದ ಸೂಚನೆ
ಪುತ್ತೂರು: ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯ ಬಳಿ 3 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಈಹಿನ್ನಲೆಯಲ್ಲಿ ನಗರಸಭೆ ಅಧಿಕಾರಿಗಳು ಬುಧವಾರ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ನೆಲ್ಲಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಿಕ ಯಚ್ಚರೇಶ್ ಅವರೊಂದಿಗೆ ನಗರಸಭಾ ಪೌರಾಯುಕ್ತ ಬದ್ರುದ್ದಿನ್ ಸೌದಗರ್, ನಗರಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್, ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಕೆ ಭೇಟಿ ನೀಡಿ ರೋಗ ಹರಡದಂತೆ ಮುನ್ನೇಚ್ಚರಿಕೆ ವಹಿಸಲು ತಿಳಿಸಿದರು. ಬಳಿಕ ವಠಾರದಲ್ಲಿ ನಗರಸಭಾ ವತಿಯಿಂದ […]










