ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಿಂದ ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣೆ ‘ವಿವೇಕ ಚೇತನ-2024’

ಪುತ್ತೂರು: ಇಂದು ಇಡೀ ವಿಶ್ವದಲ್ಲಿಯೇ  ಭಾರತ ಅದ್ಭುತ ಸ್ಥಾನಕ್ಕೆ ಏರುತಿದೆ. ಹೀಗಿರುವಾಗ ಮಾಧ್ಯಮಗಳಿಗೆ ದೇಶದಲ್ಲಿ ಕಂಡುಬರುವ ಎಲ್ಲಾ ಒಳ್ಳೆಯ ವಿಚಾರಗಳನ್ನು ಜಗತ್ತಿಗೆ ಪರಿಚಯಿಸಿ ರಾಷ್ಟ್ರವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಜವಾಬ್ದಾರಿ ಇದೆ. ಪತ್ರಕರ್ತರು ಯಾರ ಪರವಾಗಿಯೂ ನಿಲ್ಲದೆ, ಸತ್ಯದ ಪರ, ರಾಷ್ಟ್ರದ ಪರ ನಿಲ್ಲಬೇಕು. ಸಮಾಜದಲ್ಲಿ ಕಂಡುಬರುವ ಒಳ್ಳೆತನವನ್ನು ಗಮನಿಸಿ ಅವುಗಳನ್ನು ಗುರುತಿಸುವ ಜವಾಬ್ದಾರಿ ಪತ್ರಕರ್ತರಿಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ […]

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಿಂದ ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣೆ ‘ವಿವೇಕ ಚೇತನ-2024’ Read More »

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರ, ಮಹಿಳೆಯರ ಕಗ್ಗೊಲೆ, ಹಿಂದೂಗಳ ದಮನ ನೀತಿ ರಾಜ್ಯ ಸರಕಾರದ ಒಂದು ವರ್ಷದ ಸಾಧನೆಯಾಗಿದ್ದು, ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಒಂದು ವರ್ಷದಲ್ಲಿ ಒಂದೇ ಒಂದು ಶೌಚಾಲಯ ಕಟ್ಟಲು, ಅಂಗಡಿವಾಡಿಗಳಿಗೆ ಅನುದಾನ ಬಿಡಿ ದುರಸ್ತಿ ಕಾರ್ಯವನ್ನೂ ಮಾಡಲು ಆಗದ ಸರಕಾರಕ್ಕೆ ಇಚ್ಛಾಶಕ್ತಿಯ ಕೊರೆತ ಎದ್ದು ಕಾಣುತ್ತಿದೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು Read More »

ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುತ್ತಿದ್ದೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲೂಕಿನ 6 ಮಂದಿ ವಿದ್ಯಾರ್ಥಿಗಳನ್ನು ಪುತ್ತೂರು ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಅವರು ಸನ್ಮಾನಿಸಿ ಗೌರವಿಸಿದರು. ಪುತ್ತೂರಿನ ಕೀರ್ತಿಗೆ ಭಾಜನರಾದ ವಿದ್ಯಾರ್ಥಿಗಳನ್ನು ಗೌರವಿಸುವುದು, ಅವರಿಗೆ ಅವರ ಮುಂದಿನ ಶೈಕ್ಷಣಿಕ

ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಸನ್ಮಾನ Read More »

ಕೆ.ರಾಜೇಂದ್ರ ಆರಿಗ ನಿಧನ

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ರಾಜೇಂದ್ರ ಆರಿಗ (61) ಗುರುವಾರ ನಿಧನರಾದರು. ಕೆಲ ದಿನಗಳ ಹಿಂದೆ ಅಸ್ವಸ್ಥರಾದ ಅವರು ಗುರುವಾರ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿಯರನ್ನು ಅಗಲಿದ್ದಾರೆ.

ಕೆ.ರಾಜೇಂದ್ರ ಆರಿಗ ನಿಧನ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಗೋಕಳ್ಳತನ | ತನಿಖೆ ನಡೆಸಿ ಗೋ ಕಳ್ಳರನ್ನು ಬಂಧಿಸುವಂತೆ ನಗರ ಠಾಣೆಗೆ ದೂರು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮೇ ಒಂದರಂದು ರಾತ್ರಿ  ನಡೆದ ಗೋ ಕಳ್ಳತನವಾದ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು. ದೇವಸ್ಥಾನದ ವಠಾರದಿಂದ ಎರಡು ಗೋ ಕಳ್ಳತನವಾಗಿದ್ದು ಈ ಕುರಿತು ತನಿಖೆ ನಡೆಸಿ ಗೋಕಳ್ಳರನ್ನು ಬಂಧಿಸುವಂತೆ ದೂರು ನೀಡಲಾಯಿತು. ಈ ಸಂದರ್ಭ ಬಜರಂಗದಳ ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ , ಸಹ ಸಂಯೋಜಕ ಪ್ರವೀಣ್ ಕಲ್ಲೇಗ, ಗ್ರಾಮಾಂತರ ಸಂಯೋಜಕ ವಿಶಾಖ್ ಸಸಿಹಿತ್ಲು, ಹರ್ಷಿತ್ ಬಲ್ನಾಡ್,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಗೋಕಳ್ಳತನ | ತನಿಖೆ ನಡೆಸಿ ಗೋ ಕಳ್ಳರನ್ನು ಬಂಧಿಸುವಂತೆ ನಗರ ಠಾಣೆಗೆ ದೂರು Read More »

ಶಿಕ್ಷಕ ಕುಶಾಲಪ್ಪ ಗೌಡ ನಿಧನ

ಕುದ್ಮಾರು: ಬೆಳಂದೂರು ಗ್ರಾಮದ ಪಳ್ಳತ್ತಾರು ಶಾಲಾ ಶಿಕ್ಷಕ ಕುಶಾಲಪ್ಪ ಗೌಡ (58) ಇಂದು ನಿಧನರಾದರು. ಅವರು ಬೆಳಂದೂರು ಗ್ರಾಮದ ತುಂಬ್ಯ ನಿವಾಸಿಯಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಶಿಕ್ಷಕ ಕುಶಾಲಪ್ಪ ಗೌಡ ನಿಧನ Read More »

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದ್ವಿಚಕ್ರ ವಾಹನ ಕಳವು ಪ್ರಕರಣ | ಸಾರ್ವಜನಿಕರಿಗೆ ಭಯದ ವಾತಾವರಣದಲ್ಲಿ ನಿಲುಗಡೆ ಮಾಡುವ ಪರಿಸ್ಥಿತಿ

ಪುತ್ತೂರು: ಪುತ್ತೂರು ನಗರದಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದರಲ್ಲೂ ದ್ವಿಚಕ್ರ ವಾಹನ ಕಳ್ಳರ ಹಾವಳಿ ಜಾಸ್ತಿಯಾಗಿದೆ. ಪರಿಣಾಮ ನಗರದಲ್ಲಿ ಪಾರ್ಕ್ ಮಾಡಲು ವಾಹನ ಸವಾರರು ಹಿಂದೆ-ಮುಂದೆ ನೋಡುವಂತಾಗಿದೆ. ನಗರದಲ್ಲಿ ಅಂಗಡಿ ಮುಂಗಟ್ಟು, ರೈಲ್ವೇ ನಿಲ್ದಾಣ ಹೀಗೆ ಪ್ರಮುಖ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಕಾರ್ಯಾಚರಿಸುತ್ತಿದ್ದರೂ ಕ್ಯಾಮರಾ ಕಣ್ತಪ್ಪಿಸಿ ಕಳವು ಮಾಡುವ ಚಾಣಕ್ಯವನ್ನು ಕಳ್ಳರು ಹೊಂದಿದ್ದು, ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮತ್ತಷ್ಟು ಸಿಸಿ ಕ್ಯಾಮರಾ ಅಳವಡಿಸುವಂತೆ ಸಾರ್ವಜನಿಕರು ಮಾಹಿತಿ ಮನವಿ ಮಾಡಿದರೂ ಸಿಸಿ ಟಿವಿ ಅಳವಡಿಸದೇ

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದ್ವಿಚಕ್ರ ವಾಹನ ಕಳವು ಪ್ರಕರಣ | ಸಾರ್ವಜನಿಕರಿಗೆ ಭಯದ ವಾತಾವರಣದಲ್ಲಿ ನಿಲುಗಡೆ ಮಾಡುವ ಪರಿಸ್ಥಿತಿ Read More »

ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ

ಪುತ್ತೂರು: ಪುತ್ತೂರಿನ ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ 5ನೆ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು ಕಾಲೇಜಿಗೆ ಬಿ.ಕಾಂ. ಮತ್ತು ಬಿ.ಎ. ವಿಭಾಗಗಳ ಪ್ರಕಟಿತ 26 ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿ ಆರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ (Distinction ) ಪಡೆಯುವುದರೊಂದಿಗೆ ಉತ್ತಮ ಫಲಿತಾಂಶ ಲಭಿಸಿದೆ. ಅಂತಿಮ ಬಿ.ಕಾಂ.ನ 5ನೆ ಸೆಮಿಸ್ಟರ್ ಪರೀಕ್ಷೆಗಳಲ್ಲಿ  ಸಂದೇಶ್ ಮಾರುತಿ ಕದಂ ಇವರು ಫೈನಾನ್ಸಿಯಲ್ ಮ್ಯಾನೇಜ್ಮೆಂಟ್, ಇನ್ಕಮ್ ಟ್ಯಾಕ್ಸ್ ಮತ್ತು ಜಿ. ಎಸ್.

ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ Read More »

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಪ್ರಯಾಣಿಕರಿಗೆ ಗಾಯ

ಪುತ್ತೂರು: ತಾಲೂಕು ಸರ್ವೆ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಅಪರಾಹ್ನ ಸುಮಾರು 12.30 ಕ್ಕೆ ಸಂಭವಿಸಿದೆ. ಎರಡೂ ಕಾರುಗಳಲ್ಲಿ ಇದ್ದ ಪ್ರಯಾಣಿಕರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಕಡೆಗೆ ವಸಂತ ಎಂಬವರು ಚಲಾಯಿಸುತ್ತಿದ್ದ ಟಾಟಾ ಪಂಚ್ ಕಾರು ಹಾಗೂ ಸವಣೂರು ಕಡೆಗೆ ಚಲಾಯಿಸುತ್ತಿದ್ದ ಚಿದಾನಂದ ಎಂಬವರ ಮಾರುತಿ ಸಿಲಿರಿಯೊ ಕಾರುಗಳು ಡಿಕ್ಕಿಯಾಗಿವೆ. ಸರ್ವೆ ಬಳಿಯ ಅಪಾಯಕಾರಿ ತಿರುವಿನಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸಿತ್ತಿರುವುದು ವಿಷಾದನೀಯವಾಗಿದೆ. ಈ ಕುರಿತು ಸಂಬಂಧಿಸಿದ ಇಲಾಖೆಯವರು ಸೂಕ್ತ ಎಚ್ಚರಿಕೆಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಪ್ರಯಾಣಿಕರಿಗೆ ಗಾಯ Read More »

ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಆರಿಗ ಆತ್ಮಹತ್ಯೆ

ಪುತ್ತೂರು: ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಆರಿಗ (78) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲ್ಯಾಡಿ ಸಮೀಪದ ಇಚ್ಲಂಪಾಡಿ ಗ್ರಾಮದ ಬೀಡುಬೈಲು ನಿವಾಸಿಯಾಗಿರುವ ನಾಗರಾಜ ಆರಿಗ ಬೀಡುಬೈಲು ಮನೆಯಲ್ಲಿ ಕಳೆದ ಎರಡು ವರ್ಷಗಳಿಂದ ಒಬ್ಬಂಟಿಯಾಗಿ ವಾಸವಾಗಿದ್ದರು. ಅವರ ಮನೆ ಕೆಲಸದವರಾದ ಸುಧಾಕರ ಅವರು ಮಂಗಳವಾರ ಹಗಲು ಕೆಲಸಕ್ಕೆ ಬಂದಿರಲಿಲ್ಲ. ಅದೇ ದಿನ ರಾತ್ರಿ 8.45 ಗಂಟೆಗೆ ಮನೆಗೆ ಮಲಗಲೆಂದು ಬಂದಾಗ ಮನೆಯಲ್ಲಿ ಲೈಟ್ ಉರಿಯದಿರುವುದನ್ನು ಕಂಡು ಮನೆಯ ಬಳಿ ಹೋಗಿ ನಾಗರಾಜ

ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಆರಿಗ ಆತ್ಮಹತ್ಯೆ Read More »

error: Content is protected !!
Scroll to Top