ಪುತ್ತೂರು

ದಕ್ಷಿಣ ಕನ್ನಡ ಸಹಕಾರಿ ಕೃಷಿ ಅಭಿವೃದ್ಧಿ ಸಂಘದ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ನೇಮಕ

ಪುತ್ತೂರು: ದಕ್ಷಿಣ ಕನ್ನಡ ಸಹಕಾರಿ ಕೃಷಿ ಅಭಿವೃದ್ಧಿ ಸಂಘ (scads)ದ ಆಡಳಿತ ಮಂಡಳಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾಮನಿರ್ದೇಶಿತ ಸದಸ್ಯರಾಗಿ ಬ್ಯಾಂಕ್ ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಆಡಳಿತ ಮಂಡಳಿ ನೇಮಕ ಮಾಡಿದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಆಡಳಿತ ಮಂಡಳಿ ಮಾ.25ರಂದು ಕೈಗೊಂಡ ನಿರ್ಣಯದಂತೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಸ್ಕ್ಯಾಡ್ಸ್ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಲಾಗಿದೆ. 2019 ಮೇ. 20 ರಂದು ನೇಮಕವಾಗಿದ್ದ ದ.ಕ.ಜಿಲ್ಲಾ […]

ದಕ್ಷಿಣ ಕನ್ನಡ ಸಹಕಾರಿ ಕೃಷಿ ಅಭಿವೃದ್ಧಿ ಸಂಘದ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ನೇಮಕ Read More »

ಎಸ್‍.ಎಸ್.ಎಲ್‍.ಸಿ. ಫಲಿತಾಂಶ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ | ಶ್ರೀಯಾ-621, ಬಾಲಾಜಿ-620 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ, ದ್ವಿತೀಯ

ಪುತ್ತೂರು: ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಇಲ್ಲಿನ ತೆಂಕಿಲ‌ವಿವೇಕನಗರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 244 ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ಶೇಕಡಾ 100 ಫಲಿತಾಂಶ ದಾಖಲಿಸಿದೆ. 27 ವಿದ್ಯಾರ್ಥಿಗಳು 600 ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. 110 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 115 ವಿದ್ಯಾರ್ಥಿಗಳು ಪ್ರಥಮ ಹಾಗೂ 19 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 600 ಕ್ಕಿಂತ ಮೇಲ್ಪಟ್ಟು ಅಂಕ ಪಡೆದವರು : ಶ್ರೀಯಾ (621), ಬಾಲಾಜಿ (620), ವಿಶಾಲ್‌ಪಿ. (618), ಶ್ರೀನಿಧಿ (618), ಶ್ರೇಯಸ್‌ಎಂ. (616),

ಎಸ್‍.ಎಸ್.ಎಲ್‍.ಸಿ. ಫಲಿತಾಂಶ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ | ಶ್ರೀಯಾ-621, ಬಾಲಾಜಿ-620 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ, ದ್ವಿತೀಯ Read More »

ಪ್ರೊ.ಕೃಷ್ಣ ಕಾರಂತ್ ಅವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ್ ಅವರು ಆಂದ್ರಪ್ರದೇಶದ ಕುಪ್ಪಂ ನ  ದ್ರಾವಿಡಿಯನ್ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಸಿಂಥೆಸಿಸ್ “Synthesis and Characterizations of some bioactive molecules: Triazolopyrimidine, Quinoline,Benzisoxalzole and Benzimidazole Derivatives ” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ. ಅವರು ಉಜಿರೆ ಎಸ್.ಡಿ.ಎಂ. ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಸ್ನಾತಕೋತ್ತರ ವಿಭಾಗದ ಡೀನ್ ಡಾ.ಪಿ.ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ  ಮಹಾಪ್ರಬಂಧವನ್ನು ಮಂಡಿಸಿದ್ದಾರೆ. ಪ್ರೊ.ಕೃಷ್ಣ ಕಾರಂತ್

ಪ್ರೊ.ಕೃಷ್ಣ ಕಾರಂತ್ ಅವರಿಗೆ ಡಾಕ್ಟರೇಟ್ ಪದವಿ Read More »

ಸಂತ ಫಿಲೋಮಿನಾ ಕಾಲೇಜಿನ ಜೀವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಪರಿಸರ ಅಧ್ಯಯನ : ಶೈಕ್ಷಣಿಕ ಪ್ರವಾಸ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ ವಿಭಾಗ, ಪ್ರಾಣಿಶಾಸ್ತ್ರ ವಿಭಾಗ ಹಾಗೂ ಇಕೋ ಕ್ಲಬ್ ಗಳ  ಸಂಯುಕ್ತ ಆಶ್ರಯದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಒಂದು ದಿನದ ಶೈಕ್ಷಣಿಕ ಪ್ರವಾಸವನ್ನು ಕೈಗೊಂಡರು. ಪ್ರಾರಂಭದಲ್ಲಿ ಕೊಯ್ಲದ ಪಶುಸಂಗೋಪನ ಕೇಂದ್ರಕ್ಕೆ ಭೇಟಿ ನೀಡಿ ಪಶು ಸಂರಕ್ಷಣೆ, ಅವುಗಳ ಆಹಾರ ಪದ್ಧತಿ, ಪಶುಗಳ ಆರೈಕೆಯ ವಿಧಾನಗಳು, ಮಾನವ ಕೃಷಿ ಪದ್ಧತಿ ಮತ್ತು ಪಶುಗಳ ನಡುವೆ ಇರುವ ಅವಿನಾಭಾವ ಸಂಬಂಧ ಮುಂತಾದ ವಿಷಯಗಳ ಬಗ್ಗೆ ಅಧ್ಯಯನ ನಡೆಸಿದರು. ನಂತರ ಅವರು ಕೋಳಿಸಾಕಣೆಯ ವಿವಿಧ

ಸಂತ ಫಿಲೋಮಿನಾ ಕಾಲೇಜಿನ ಜೀವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಪರಿಸರ ಅಧ್ಯಯನ : ಶೈಕ್ಷಣಿಕ ಪ್ರವಾಸ Read More »

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ. ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ(60) ಮೃತಪಟ್ಟವರು. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

ಮರಳು ಗಾರಿಕೆ ವಿಚಾರದಲ್ಲಿ ರಾಜಕೀಯ ದುರುದ್ದೇಶ …| ಸರಕಾರಕ್ಕೆ ರಾಜಧನ ಪಾವತಿಸಿಯೇ ಮರಳು ಪೂರೈಕೆ | ದ.ಕ.ಜಿಲ್ಲಾ ಮರಳು ವ್ಯಾಪಾರಸ್ಥರ ಸಂಘ ಸ್ಪಷ್ಟನೆ

ಕಡಬ ತಾಲೂಕಿನ ಕುದ್ಮಾರು ಗ್ರಾಮದ ನೂಜಿಯಲ್ಲಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಮರಳು ವ್ಯಾಪಾರಸ್ಥರ ಸಂಘ ಇದೀಗ ಸ್ಪಷ್ಟನೆ ನೀಡಿದೆ. ನೂಜಿಯಲ್ಲಿ ಸ್ಥಳೀಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಬೇಕಾದ ಮರಳು ಸಂಗ್ರಹಿಸಿದ್ದು, ಗಣಿ ಇಲಾಖೆ ಮೂಲಕ ಸರಕಾರಕ್ಕೆ ರಾಜಧನ ಪಾವತಿಸಿಯೇ ಮರಳು ಸಂಗ್ರಹಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಒಳ ನುಸುಳಿದ್ದು, ವಿವಿಧ ರಾಜಕೀಯ ಮುಖಂಡರುಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೇಳಿ ಬರುತ್ತಿದೆ. ಈ ಪ್ರಕರಣದಲ್ಲಿ ಯಾವುದೋ

ಮರಳು ಗಾರಿಕೆ ವಿಚಾರದಲ್ಲಿ ರಾಜಕೀಯ ದುರುದ್ದೇಶ …| ಸರಕಾರಕ್ಕೆ ರಾಜಧನ ಪಾವತಿಸಿಯೇ ಮರಳು ಪೂರೈಕೆ | ದ.ಕ.ಜಿಲ್ಲಾ ಮರಳು ವ್ಯಾಪಾರಸ್ಥರ ಸಂಘ ಸ್ಪಷ್ಟನೆ Read More »

ಈಶ್ವರಮಂಗಲದ ಪ್ರಶಾಂತ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲದ ಚಿಮಿಣಿಗುಡ್ಡೆಯಲ್ಲಿ ಇಂದು ನಡೆದಿದೆ. ಈಶ್ವರಮಂಗಲ ಮುಂಡ್ಯ ನಿವಾಸಿ ಪ್ರಶಾಂತ್ (38) ಮೃತ ವ್ಯಕ್ತಿ ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಪ್ರಶಾಂತ್ ರವರ ಮನೆ ಗೃಹಪ್ರವೇಶ ಹತ್ತು ದಿನಗಳ ಹಿಂದೆ ನಡೆದಿತ್ತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ಪತ್ನಿ, ಮಗು, ತಂದೆ, ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

ಈಶ್ವರಮಂಗಲದ ಪ್ರಶಾಂತ್ ನೇಣು ಬಿಗಿದು ಆತ್ಮಹತ್ಯೆ Read More »

ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ

ಕಡಬ: ಶೆಡ್ ಗೆ ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಇಂದು ಸಂಜೆ ನಡೆದಿದೆ. ಉತ್ತರಪ್ರದೇಶ ಚೈನ್ ಪುರ್ ಮೂಲದ ಶ್ರೀಕಿಸುನ್ ಮೃತಪಟ್ಟವರು. ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಘಟನೆ ಸಂಭವಿಸಿದ್ದು, ಮರಳು ತೆಗೆಯುವ ಉತ್ತರ ಪ್ರದೇಶದ ಕಾರ್ಮಿಕರು ಎನ್ನಲಾಗಿದೆ. ಗಾಯಗೊಂಡವರು ಕುರಿತು ಮಾಹಿತಿ ತಿಳಿದು ಬಂದಿಲ್ಲ.

ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಪುತ್ತೂರು ತಾಲೂಕಿನ ವಿವಿಧೆಡೆ ಗುಡುಗು ಸಹಿತ ಮಳೆ

ಪುತ್ತೂರು: ಪುತ್ತೂರು ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಗುಡುಗು ಸಹಿತ ಮಳೆ ಸುರಿದಿದೆ. ಮಳೆಯಿಂದಾಗಿ ಬಿಸಿಲಿನ ಬೆಗೆಯಿಂದ ಬೆಂದಿದ್ದ ಭೂಮಿಗೆ ತಂಪೆರಚಿದಂತಾಗಿದೆ. ಶನಿವಾರ ಸಂಜೆ ಸುಮಾರು 5 ಗಂಟೆ ಹೊತ್ತಿಗೆ ಮೋಡ ಕವಿದ ವಾತಾವರಣ ಉಂಟಾಗಿದ್ದು, ಸ್ವಲ್ಪ ಹೊತ್ತಿನಲ್ಲೇ ಗುಡುಗು ಸಹಿತ ಮಳೆಯಾಗಿದೆ. ಈ ಮೂಲಕ ಹಲವು ದಿನಗಳಿಂದ ಮಳೆಗಾಗಿ ಕಾಯುತ್ತಿದ್ದ ಜನರಲ್ಲಿ ಮಳೆಯ ಸಿಂಚನದಿಂದ ಹರ್ಷ ಮೂಡಿದೆ.

ಪುತ್ತೂರು ತಾಲೂಕಿನ ವಿವಿಧೆಡೆ ಗುಡುಗು ಸಹಿತ ಮಳೆ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ಸೇನಾ ನೇಮಕಾತಿಕೆ ಪೂರಕವಾಗಿ ಲಿಖಿತ ಪರೀಕ್ಷೆ ಹಾಗೂ ದೈಹಿಕ ಸದೃಢತೆ ತರಬೇತಿ | ಜೂನ್ 9 ರಿಂದ ಪ್ರತೀ ಭಾನುವಾರ ತರಬೇತಿ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದ್ವಾರಕಾ ಕನ್‍ ಸ್ಟ್ರಕ್ಷನ್ ರವರ ಸಹಭಾಗಿತ್ವದಲ್ಲಿ ಜೂನ್ 9 ರಿಂದ ಪ್ರತಿ ಭಾನುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಸೇನಾ ನೇಮಕಾತಿಗಳಿಗೆ ಅನ್ವಯವಾಗುವಂತೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಸದೃಢತೆಯ ತರಬೇತಿಗಳು ಪ್ರಾರಂಭವಾಗಲಿದೆ. ಭಾರತೀಯ ಸೇನಾ ನೇಮಕಾತಿಗಳು / ರೈಲ್ವೆ ಪೊಲೀಸ್ / ಅರೆ ಸಶಸ್ತ್ರ ಮೀಸಲು ಪಡೆಗಳು ಸೇರಿದಂತೆ ಎಲ್ಲಾ ರೀತಿಯ ಸಶಸ್ತ್ರ ಪಡೆಗಳ (Armed Forces) ನೇಮಕಾತಿಗಳ ಲಿಖಿತ ಪರೀಕ್ಷೆಗಳು, ದೈಹಿಕ

ವಿದ್ಯಾಮಾತಾ ಅಕಾಡೆಮಿಯಲ್ಲಿ ಸೇನಾ ನೇಮಕಾತಿಕೆ ಪೂರಕವಾಗಿ ಲಿಖಿತ ಪರೀಕ್ಷೆ ಹಾಗೂ ದೈಹಿಕ ಸದೃಢತೆ ತರಬೇತಿ | ಜೂನ್ 9 ರಿಂದ ಪ್ರತೀ ಭಾನುವಾರ ತರಬೇತಿ Read More »

error: Content is protected !!
Scroll to Top