ಪುತ್ತೂರು

ಎಸ್‍ ಎಸ್‍ ಎಲ್‍ ಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ

ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ  46 ವಿದ್ಯಾರ್ಥಿಗಳ ಪೈಕಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100ಫಲಿತಾಂಶ ದಾಖಲಿಸಿದೆ. 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 10 ವಿದ್ಯಾರ್ಥಿಗಳು ಪ್ರಥಮ, 13 ವಿದ್ಯಾರ್ಥಿಗಳು ದ್ವಿತೀಯ ಹಾಗೂ 5 ವಿದ್ಯಾರ್ಥಿಗಳು  ತೃತೀಯ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದಾರೆ. ಫಾತಿಮತ್ ಅಫ್ರೀನ  519 ಅಂಕಗಳೊಂದಿಗೆ ಪ್ರಥಮ, ಪ್ರಾರ್ಥನ್ ಕೆ.  514 ಅಂಕಗಳೊಂದಿಗೆ ದ್ವಿತೀಯ ಹಾಗೂ ಫಾತಿಮತ್ ಶರೀಫ 513 ಅಂಕಗಳೊಂದಿಗೆ ತೃತೀಯ ಸ್ಥಾನ […]

ಎಸ್‍ ಎಸ್‍ ಎಲ್‍ ಸಿ ಪರೀಕ್ಷೆಯಲ್ಲಿ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ Read More »

ಆಟೋ ರಿಕ್ಷಾ ಡಿಕ್ಕಿ : ಪಾದಚಾರಿ ಸೂರ್ಯನಾರಾಯಣ ಕಾರಂತ್ ಮೃತ್ಯು

ಪುತ್ತೂರು : ಪುತ್ತೂರು ಸಂಪ್ಯದಲ್ಲಿ  ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ. ನಿವೃತ್ತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಭಟ್ (80 ವ)  ಅವರು ಪುತ್ತೂರು ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಗರ್ಬಿಣಿಯೊಬ್ವರನ್ನು ತಿಂಗಳ ಪರೀಕ್ಷೆಗೆಂದು ಕರೆದು ಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸೂರ್ಯನಾರಾಯಣ ಅವರು ರಸ್ತೆಗೆ

ಆಟೋ ರಿಕ್ಷಾ ಡಿಕ್ಕಿ : ಪಾದಚಾರಿ ಸೂರ್ಯನಾರಾಯಣ ಕಾರಂತ್ ಮೃತ್ಯು Read More »

ಪ್ರಗತಿ ಸ್ಟಡಿ ಸೆಂಟರ್‌ಗೆ ಎಸ್.ಎಸ್.ಎಲ್. ಸಿ ಯಲ್ಲಿ ಶೇ. 98 ಫಲಿತಾಂಶ

ಪುತ್ತೂರು: ಇಲ್ಲಿಯ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ  ಪ್ರಗತಿ ಸ್ಟಡಿ ಸೆಂಟರ್ ಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.98 ಫಲಿತಾಂಶ ಲಭಿಸಿದೆ. ಪರೀಕ್ಷೆ ಬರೆದ ಒಟ್ಟು 150 ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 44 ವಿದ್ಯಾರ್ಥಿಗಳು ಪ್ರಥಮ, 50 ವಿದ್ಯಾರ್ಥಿಗಳು  ದ್ವಿತೀಯ ಶ್ರೇಣಿ ಹಾಗೂ 46  ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು: ಕೆ. ಟಿ ಪ್ರಣಮ್-590, ಫಾತಿಮತ್ ಫರ್ ಹನ -572, ಐರಾ ಖಾನಮ್-560, ಸಾನಿಕಾ ರೈ-553, ಪ್ರಣಮ್

ಪ್ರಗತಿ ಸ್ಟಡಿ ಸೆಂಟರ್‌ಗೆ ಎಸ್.ಎಸ್.ಎಲ್. ಸಿ ಯಲ್ಲಿ ಶೇ. 98 ಫಲಿತಾಂಶ Read More »

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ಫಲಿತಾಂಶ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು 81 ವಿದ್ಯಾರ್ಥಿಗಳ ಪೈಕಿ 18 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 52 ವಿದ್ಯಾರ್ಥಿಗಳು ಪ್ರಥಮ ಹಾಗೂ 11 ವಿದ್ಯಾರ್ಥಿಗಳು  ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪಿ.ಕೆ.ರಕ್ಷಿತ್-597(95.52ಶೇ.), ತೃಷಾ.ಕೆ.ಆರ್-578 (92.48), ದೃತಿ.ಬಿ.ಎಸ್-575 (92ಶೇ.), ಚಿನ್ಮಯಿ ಪುತ್ತಿಲ-574( 91.84ಶೇ.), ತ್ವಿಷಾ. ಎಸ್-573 (91.68ಶೇ.), ಕೌಶಿಕ್.ಕೆ-573 (91.68 ಶೇ.), ಶ್ರವಣ ಶ್ಯಾಮ.ಕೆ.ಎನ್-568 (90.88ಶೇ.),  ತನ್ವಿ. ಎಸ್.ಡಿ-558 (89.28 ಶೇ.), ಪ್ರಥಮ್.ಕೆ.ಜೆ-542

ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಗೆ ಎಸ್.ಎಸ್.ಎಲ್.ಸಿ. ಯಲ್ಲಿ ಶೇ.100 ಫಲಿತಾಂಶ Read More »

ನೆಕ್ಕಿಲಾಡಿ ಆದರ್ಶನಗರ ತಿರುವು ರಸ್ತೆ ಸುಗಮ ಸಂಚಾರಕ್ಕೆ ಸಂಜೀವ ಮಠಂದೂರುರವರಿಂದ ಸೂಚನೆ

ಪುತ್ತೂರು: ಪುತ್ತೂರು-ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ನೆಕ್ಕಿಲಾಡಿ ಆದರ್ಶ ನಗರ ತಿರುವು ರಸ್ತೆಯನ್ನು ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಗುತ್ತಿಗೆದಾರ ದಯಾನಂದ ಅವರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದ್ದಾರೆ. ಈ ಕುರಿತು ಸ್ಥಳೀಯರು ಕಳೆದ ಕೆಲವು ದಿನಗಳ ಹಿಂದೆ ಬೇಡಿಕೆಯಿಟ್ಟಿದ್ದರು. ಈ ನಿಟ್ಟಿನಲ್ಲಿ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಶೆಟ್ಟಿ, ಮಾಜಿ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಎನ್., ಸೇವಾ ಸಹಕಾರಿ ನಿರ್ದೇಶಕ

ನೆಕ್ಕಿಲಾಡಿ ಆದರ್ಶನಗರ ತಿರುವು ರಸ್ತೆ ಸುಗಮ ಸಂಚಾರಕ್ಕೆ ಸಂಜೀವ ಮಠಂದೂರುರವರಿಂದ ಸೂಚನೆ Read More »

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 93.5 % ಫಲಿತಾಂಶ

ಸವಣೂರು: ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ.93.5 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳ ಪೈಕಿ 29 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ , 19  ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು : ಸುಪ್ರೀತಾ ಆರ್.- 607 (ರಮೇಶ್ ಮತ್ತು ಶ್ರಿದೇವಿ, ಬೀದರ್ ದಂಪತಿ ಪುತ್ರಿ), ಕನ್ನಡ-125/125, ಇಂಗ್ಲೀಷ್-97/100, ಹಿಂದಿ-97/100, ಗಣಿತ-98/100, ವಿಜ್ಞಾನ-98/100 ಮತ್ತು ಸಮಾಜ ವಿಜ್ಞಾನ-94/100,

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 93.5 % ಫಲಿತಾಂಶ Read More »

ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಶಾಲೆಗೆ ದ್ವಿತೀಯ ಬಾರಿಗೆ ಶೇಕಡಾ 100 ಫಲಿತಾಂಶ.

ನರಿಮೊಗರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಸರಸ್ವತಿ ವಿದ್ಯಾ ಮಂದಿರ ನರಿಮೊಗರು ಶಾಲೆಗೆ ಸತತ ದ್ವಿತೀಯ ಬಾರಿಗೆ 100 ಶೇಕಡಾ ಫಲಿತಾಂಶ ಬಂದಿರುತ್ತದೆ. ಪರೀಕ್ಷೆಗೆ ಹಾಜರಾದ 18 ವಿದ್ಯಾರ್ಥಿಗಳಲ್ಲಿ  9 ಡಿಸ್ಟಿಂಕ್ಷನ್, 9 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಾದ ಮೋಕ್ಷಿತ್ ಪಿ ಎಸ್ 614, ಆರಾಧ್ಯ 598, ರಾಶಿ ರೈ 590, ಜಿಶ್ಮಿತಾ ಕೆ 587, ಇಂಚರಾ 568, ಸ್ವರೂಪ್ 564, ಕೆ ಎಸ್ ಸುಧನ್ವ 554,

ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಶಾಲೆಗೆ ದ್ವಿತೀಯ ಬಾರಿಗೆ ಶೇಕಡಾ 100 ಫಲಿತಾಂಶ. Read More »

ಮೇ 12 : ಆರ್ಯಾಪು ಮರಿಕೆಯ ಸಿಂಗಾರ ಮನೆಯಲ್ಲಿ ಧರ್ಮದೈವಗಳ ನೇಮೋತ್ಸವ

ಪುತ್ತೂರು: ಆರ್ಯಾಪು ಮರಿಕೆಯ ಸಿಂಗಾರ ಮನೆಯಲ್ಲಿ ಧರ್ಮದೈವಗಳ ನೇಮೋತ್ಸವ ನಡೆಯಲಿದೆ. ಪೂರ್ವಿಕರ ಕಾಲದಿಂದ ಆರಾಧಿಸಿಕೊಂಡು ಬಂದ ದೈವಗಳನ್ನು ಮಾಯದಿಂದ ಜೋಗಕ್ಕೆ ಬರಿಸಿ, ಒಂದು ಕುಡ್ತೆ ಹಾಲು, ತುಂಬು ಗೆರಸೆ ಬಾರಣೆ ಕೊಡಿಸುತ್ತೇವೆಂದು ಈ ಹಿಂದೆ ಮರಿಕೆಯ ಸಿಂಗಾರ ಮನೆಯವರು ಪ್ರಾರ್ಥಿಸಿಕೊಂಡ ಹಿನ್ನಲೆಯಲ್ಲಿ ನೇಮೋತ್ಸವ ನಡೆಯಲಿದೆ. ರಾತ್ರಿ ಗಂಟೆ 8 ಕ್ಕೆ ಧರ್ಮದೈವ ನೇಮೋತ್ಸವ ನಡೆಯಲಿದೆ ಎಂದು ಡಾ. ನವೀನ್ ಕುಮಾರ್ ಮರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 12 : ಆರ್ಯಾಪು ಮರಿಕೆಯ ಸಿಂಗಾರ ಮನೆಯಲ್ಲಿ ಧರ್ಮದೈವಗಳ ನೇಮೋತ್ಸವ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಧನ ಸಹಾಯ ಹಸ್ತಾಂತರ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಪುತ್ತೂರು ಹಾಗೂ ಊರವರ ಸಹಾಯ ಹಸ್ತದಿಂದ  ಅನಾರೋಗ್ಯದಲ್ಲಿದ್ದ ಸುಂದರ ನಾಯ್ಕ ಬಿ.ಕೆ.ಯವರಿಗೆ 37,000 ಆರ್ಥಿಕ ಧನ ಸಹಾಯ ಹಸ್ತಾಂತರಿಸಲಾಯಿತು. ಸುಂದರ ನಾಯ್ಕ ಅವರ ಮನೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಧನ ಸಹಾಯ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಂಡೂರು ಹಾಲು ಉತ್ಪದಕ ಸಹಕಾರ ಸಂಘದ ನಿರ್ದೇಶಕ ಅನಿಲ್ ಕುಮಾರ್ ಕಣ್ಣಾರ್ನುಜಿ, ಗ್ರಾಮ ಪಂಚಾಯಿತಿ ಸದಸ್ಯ ಬಾಲಕೃಷ್ಣ ಪೂಜಾರಿ ಕುರೆಮಜಲು, ಶ್ರೀರಾಮ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಧನ ಸಹಾಯ ಹಸ್ತಾಂತರ Read More »

ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ‘ವಿಬ್ ಜಯಾರ್-2024’ ಸಮಾರಂಭದಲ್ಲಿ ಡಾ.ವೆಂಕಟ್ರಾಜ್ ಬಿ.

ಪುತ್ತೂರು: ಹೊಸ ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದರ ಆಶಯಗಳು ಸಾಕಾರವಾಗುತ್ತದೆ. ಅದಕ್ಕಾಗಿ ಯುವ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ರಾಯಭಾರಿಗಳಾಗಬೇಕು ಎಂದು ಮೈಸೂರಿನ ಎಸ್ ಡಿ ಎಂ ರೀಸರ್ಚ್ ಸೆಂಟರ್ ಫಾರ್ ಮೆನೇಜ್ಮೆಂಟ್ ಸ್ಟಡೀಸ್ ಅಧ್ಯಕ್ಷ ಡಾ.ವೆಂಕಟ್ರಾಜ್.ಬಿ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕೋತ್ಸವ ವಿಬ್ ಜಯಾರ್-2024 ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದರು. ಶಿಕ್ಷಣ ನೀಡುವ ಸಂಸ್ಥೆಗಳು ಸಾಕಷ್ಟಿವೆ. ಆದರೆ ಜೀವನಾನುಭವಗಳನ್ನು, ಸಂಸ್ಕೃತಿ, ಉದ್ದೇಶ, ರಾಷ್ಟ್ರ

ಹೊಸ ತಂತ್ರಜ್ಞಾನಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ‘ವಿಬ್ ಜಯಾರ್-2024’ ಸಮಾರಂಭದಲ್ಲಿ ಡಾ.ವೆಂಕಟ್ರಾಜ್ ಬಿ. Read More »

error: Content is protected !!
Scroll to Top