ಪುತ್ತೂರು

ನಾಳೆ ವಿದ್ಯುತ್‍ ನಿಲುಗಡೆ | ಎಲ್ಲೆಲ್ಲಿ ? : ಇಲ್ಲಿದೆ ಡಿಟೈಲ್ಸ್

ಪುತ್ತೂರು: ನಿರ್ವಹಣೆ ಹಾಗೂ ತುರ್ತು ಕಾಮಗಾರಿ ನಿಮಿತ್ತ ಮೇ 9 ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಕೋ ಫ್ಯಾಕ್ಟರಿ, ಮುಕ್ವೆ, ಕೆಮ್ಮಿಂಜೆ ಹಾಗೂ ಮುಕ್ರಂಪಾಡಿ ಫೀಡರ್‍ ನಲ್ಲಿ ಮೇ 9 ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ಮುಕ್ವೆ, ಮುಂಡೂರು, ಕೆಮ್ಮಿಂಜೆ, ದರ್ಬೆ, […]

ನಾಳೆ ವಿದ್ಯುತ್‍ ನಿಲುಗಡೆ | ಎಲ್ಲೆಲ್ಲಿ ? : ಇಲ್ಲಿದೆ ಡಿಟೈಲ್ಸ್ Read More »

ಮೇ 10 : ಎಂ.ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ನೂತನ ಮಳಿಗೆ ಶುಭಾರಂಭ

ಪುತ್ತೂರು: ಖ್ಯಾತ ವಸ್ತ್ರ ಮಳಿಗೆ ಎಂ. ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ನೂತನ ಮಳಿಗೆ ದರ್ಬೆ ವೃತ್ತದ ಬಳಿ ಮೇ 10 ಶುಕ್ರವಾರ ಅಕ್ಷಯ ತೃತೀಯದಂದು ಶುಭಾರಂಭಗೊಳ್ಳಲಿದೆ. ಕಳೆದ 80 ವರ್ಷಗಳಿಂದ ವಸ್ತ್ರ ವ್ಯಾಪಾರದಲ್ಲಿ ತನ್ನ ಛಾಪನ್ನು ಜನಮಾನಸದಲ್ಲಿ ಮೂಡಿಸಿರುವ ಸಂಸ್ಥೆ ಪುತ್ತೂರಲ್ಲದೆ ಹತ್ತೂರಿನಲ್ಲಿ ಪ್ರಸಿದ್ಧಿ ಪಡೆದಿದೆ. ದರ್ಬೆ ವೃತ್ತದ ಬಳಿ ಶುಭಾರಂಭಗೊಳ್ಳಲಿರುವ ಮಳಿಗೆಯಲ್ಲಿ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ಒದಗಿಸುವ ನಿಟ್ಟಿನಲ್ಲಿ ಶುಭಾರಂಭಗೊಳ್ಳುತ್ತಿದೆ.

ಮೇ 10 : ಎಂ.ಸಂಜೀವ ಶೆಟ್ಟಿ ಸಾರೀಸ್ & ರೆಡಿಮೇಡ್ಸ್ ನೂತನ ಮಳಿಗೆ ಶುಭಾರಂಭ Read More »

ಕೆದಂಬಾಡಿ ಗ್ರಾ.ಪಂ. ಸದಸ್ಯ ಭಾಸ್ಕರ ರೈ ಮಿತ್ರಂಪಾಡಿ ನಿಧನ

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರು ನಿಧನರಾದರು. ಬಂಟ್ವಾಳ ಅರ್ಕುಳದಲ್ಲಿರುವ ತನ್ನ ಅತ್ತೆ ಮನೆಯಲ್ಲಿ ಮೇ.7 ರಂದು ರಾತ್ರಿ ನಿಧನರಾದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕೆದಂಬಾಡಿ ಗ್ರಾ.ಪಂ. ಸದಸ್ಯ ಭಾಸ್ಕರ ರೈ ಮಿತ್ರಂಪಾಡಿ ನಿಧನ Read More »

ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಖ್ಯಾತ ಜನರಲ್ ಫಿಸಿಷಿಯನ್ ಡಾ.ಸ್ವಾತಿ ಆರ್ ಭಟ್ ಸೇವೆಗೆ ಲಭ್ಯ

ಪುತ್ತೂರು: ಪುರುಷರಕಟ್ಟೆಯಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಪುತ್ತೂರಿನ ಖ್ಯಾತ ಜನರಲ್ ಫಿಸಿಷಿಯನ್, ಮಧುಮೇಹ ಹಾಗೂ ಹೃದ್ರೋಗ ತಜ್ಞೆ ಡಾ.ಸ್ವಾತಿ. ಆರ್ ಭಟ್ ಸೇವೆಗೆ ಲಭ್ಯರಿದ್ದಾರೆ. ಸೋಮವಾರದಿಂದ ಶನಿವಾರದ ತನಕ ಬೆಳಿಗ್ಗೆ 9 ಗಂಟೆಯಿಂದ 10ರ ತನಕ ಸೇವೆಗೆ ಲಭ್ಯರಿರುತ್ತಾರೆ. ಪುತ್ತೂರಿನ ಮುಕ್ವೆ ನಿವಾಸಿ ನಿವೃತ್ತ ಮಣೆಗಾರರಾದ ರಾಮಚಂದ್ರ ಭಟ್ ಮತ್ತು ಲಕ್ಷ್ಮೀ.ಆರ್.ಭಟ್ ದಂಪತಿ ಸುಪುತ್ರಿಯಾದ ಸ್ವಾತಿ ಎ.ಜೆ. ಇನ್ಸ್ಟಿಟ್ಯೂಟ್ ಒಫ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಮಂಗಳೂರಿನಲ್ಲಿ ತಮ್ಮ ಎಂ.ಬಿ.ಬಿ.ಎಸ್ ಪದವಿ ಮುಗಿಸಿ ವೈದ್ಯಕೀಯ

ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಖ್ಯಾತ ಜನರಲ್ ಫಿಸಿಷಿಯನ್ ಡಾ.ಸ್ವಾತಿ ಆರ್ ಭಟ್ ಸೇವೆಗೆ ಲಭ್ಯ Read More »

ವಿದ್ಯಾಸಂಸ್ಥೆಗಳು ವಿದ್ಯಾರ್ಥಿ ಸುಪ್ತ ಪ್ರತಿಭೆ ಹೊರ ತರುವ ಕೆಲಸ ಮಾಡುತ್ತದೆ | ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಸವಣೂರು ಕೆ. ಸೀತಾರಾಮ ರೈ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ ಮಂಗಳವಾರ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾಸಂಸ್ಥೆಗಳು ಪ್ರತಿಯೊಬ್ಬ ವಿದ್ಯಾರ್ಥಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಹೊರತರುವಂತಹ ಕೆಲಸವನ್ನು ಮಾಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಒಬ್ಬ ವ್ಯಕ್ತಿಯನ್ನು ಆದರ್ಶವಾಗಿ ಇಟ್ಟುಕೊಂಡು ತಮ್ಮ ಸಾಧನೆಯನ್ನು ಮಾಡಬೇಕು. ಹಾಗೆಯೇ ಮತ್ತೊಬ್ಬರಲ್ಲಿರುವ ಒಳ್ಳೆಯತನವನ್ನು ಅನುಸರಿಸಿ ಕಲಿಯಬೇಕು ಎಂದರು. ಮುಖ್ಯ ಅತಿಥಿಯಾಗಿ ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವ, ನಿವೃತ್ತ ಉಪನ್ಯಾಸಕ ಡಾ.

ವಿದ್ಯಾಸಂಸ್ಥೆಗಳು ವಿದ್ಯಾರ್ಥಿ ಸುಪ್ತ ಪ್ರತಿಭೆ ಹೊರ ತರುವ ಕೆಲಸ ಮಾಡುತ್ತದೆ | ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಸವಣೂರು ಕೆ. ಸೀತಾರಾಮ ರೈ Read More »

ಹಿರಿಯ ವಿದ್ವಾಂಸ, ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

ಪುತ್ತೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ, ಹಿರಿಯ ಜಾನಪದ ವಿದ್ವಾಂಸ, ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಇಂದು ನಿಧನರಾದರು. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಸಂಜೆ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು. ಮೃತರು ಪತ್ನಿ ಸುಮಾ ಆರ್.ಆಚಾರ್, ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಸಹಾಯಕ ಪ್ರೊಫೆಸ್ಟರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆರ್., ಬೆಳ್ಳಾರೆ ಡಾ|ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ

ಹಿರಿಯ ವಿದ್ವಾಂಸ, ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ Read More »

ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಶಾಸಕರಿಗೆ ಮನವಿ

ಪುತ್ತೂರು: ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ, ಸುಳ್ಯ ತಾಲೂಕಿನ ವಾಹನ ಚಾಲನಾ ತರಬೇತಿ ಶಾಲೆಯ ಮುಖ್ಯಸ್ಥರು ಪುತ್ತೂರಿನ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇರುವ ಹಿನ್ನಲೆಯಲ್ಲಿ ಮನವಿ ನೀಡಲಾಯಿತು. ಇದುವರೆಗೆ ಪುತ್ತೂರಿನ ಸಾರಿಗೆ ಇಲಾಖೆಯಲ್ಲಿಯೇ ಚಾಲನಾ ಪರೀಕ್ಷೆ ನಡೆಸಲಾಗುತ್ತಿತ್ತು. ಇದನ್ನು ಮಂಗಳೂರಿಗೆ ಬದಲಾಯಿಸಿದಲ್ಲಿ ಈ ಭಾಗದ ಜನರಿಗೆ ಮಂಗಳೂರಿಗೆ ಹೋಗಿ

ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಶಾಸಕರಿಗೆ ಮನವಿ Read More »

ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ

ಪುತ್ತೂರು: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್‍ ತಡೆ ನೀಡಿದೆ. ವಿಟ್ಲ ಪೋಲಿಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ನಡುರಾತ್ರಿ ಮನೆಗೆ ನುಗ್ಗಿ ರಜಪೂತ್‍ ರನ್ನು ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಹಿರಿಯ ವಕೀಲ ಅರುಣ್ ಶ್ಯಾಮ್ ಗಡಿಪಾರಿಗೆ ಹೈಕೋರ್ಟಿನಲ್ಲಿ ತಡೆ ತಂದಿದ್ದಾರೆ. ವಕೀಲರಾದ ಪ್ರಾಂತ ನ್ಯಾಯ ಜಾಗರಣ ಕಿಶೋರ್ ಕುಮಾರ್, ಜಿಲ್ಲಾ ನ್ಯಾಯಾ ಜಾಗರಣದ ರಾಜೇಶ್ ಬೊಲ್ಲುಕಲ್ಲು ಸಹಕರಿಸಿದ್ದರು.

ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ Read More »

ಪುತ್ತೂರು ಜೆಸಿಐಯಿಂದ ಉಚಿತ ಇಲಾಖಾ ತರಬೇತಿ ಉದ್ಘಾಟನೆ

ಪುತ್ತೂರು: ಪುತ್ತೂರು ಜೆಸಿಐ ವತಿಯಿಂದ 2024ನೇ ಸಾಲಿನ ಉಚಿತ ಇಲಾಖಾ ತರಬೇತಿ ಉದ್ಘಾಟನೆಗೊಂಡಿತು. ಜೆಸಿಐ ಭಾರತದ ರಾಷ್ಟ್ರೀಯ ಸಂಯೋಜಕಿ, ನ್ಯಾಯವಾದಿ ಸ್ವಾತಿ ಜೆ.ರೈ ತರಬೇತಿ ಉದ್ಘಾಟಿಸಿ ಮಾತನಾಡಿ, ಸಮಾಜ ಸೇವೆ ಮಾಡುವುದು ತಂದೆ ತಾಯಿಯ ಋಣವನ್ನು ಸಂದಾಯ ಮಾಡಿದಂತೆ. ಉಚಿತ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಅದರ ಪ್ರಯೋಜನ ಪಡೆದುಕೊಳ್ಳುವ ಮೂಲಕ ಸರಕಾರದ ಕೆಲಸ ದೇವರ ಕೆಲಸವೆಂದು ತಿಳಿದು ಭ್ರಷ್ಟಾಚಾರ ರಹಿತ ಸೇವೆ ಮಾಡಿ ಎಂದ ಅವರು, ಉಚಿತ ತರಬೇತಿ ವ್ಯವಸ್ಥೆ ಮಾಡಿದ ಜೆಸಿಐ ಸಂಸ್ಥೆಯ ಕಾರ್ಯ ಶ್ಲಾಘನೀಯ

ಪುತ್ತೂರು ಜೆಸಿಐಯಿಂದ ಉಚಿತ ಇಲಾಖಾ ತರಬೇತಿ ಉದ್ಘಾಟನೆ Read More »

ಮೇ 9-12 : ಎಸ್‍ ಪಿ ವೈ ಎಸ್ ಎಸ್‍ನಿಂದ ಜಿಲ್ಲಾ ಮಟ್ಟದ ‘ಯೋಗ ಪ್ರಶಿಕ್ಷಣ ಶಿಬಿರ’

ಪುತ್ತೂರು:  ಎಸ್ ಪಿ ವೈ ಎಸ್ ಎಸ್ ವತಿಯಿಂದ ಯೋಗಜೀವನ ದರ್ಶನ – 2024 ಜಿಲ್ಲಾ ಮಟ್ಟದ ಯೋಗ ಪ್ರಶಿಕ್ಷಣ ಶಿಬಿರ ಮೇ. 9 ರಿಂದ 12 ರವರೆಗೆ ನಡೆಯಲಿದ್ದು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಮೇ.9 ರಂದು ಉದ್ಘಾಟನೆಗೊಳ್ಳಲಿದೆ. ನಾಲ್ಕು ದಿನಗಳ ಕಾಲ ನಡೆಯುವ ಯೊಗ ಪ್ರಶಿಕ್ಷಣ ಶಿಬಿರ 10 ರಿಂದ 16 ವರ್ಷದ ಮಕ್ಕಳ ವಿಭಾಗ ಹಾಗೂ 17 ರಿಂದ 55 ವರ್ಷದ ಸಾಮಾನ್ಯ ವಿಭಾಗ ಎಂಬ ಎರಡು ವಿಭಾಗಗಳಲ್ಲಿ ನಡೆಯಲಿದೆ. ಮಕ್ಕಳ ವಿಭಾಗ

ಮೇ 9-12 : ಎಸ್‍ ಪಿ ವೈ ಎಸ್ ಎಸ್‍ನಿಂದ ಜಿಲ್ಲಾ ಮಟ್ಟದ ‘ಯೋಗ ಪ್ರಶಿಕ್ಷಣ ಶಿಬಿರ’ Read More »

error: Content is protected !!
Scroll to Top