ಪುತ್ತೂರು

ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ

ಪುತ್ತೂರು: ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಿಲ್ಲದೆ ಭವಿಷ್ಯದ ದಿನಗಳಿಲ್ಲ ಎನ್ನುವವರೆಗೆ ಸರ್ವವ್ಯಾಪಿಯಾಗಿದೆ. ಯಾವುದೇ ತಂತ್ರಜ್ಞಾನವಾದರೂ ಅದರ ಬಳಕೆಯ ವಿಧಾನದ ಮೇಲೆ ಒಳಿತು ಕೆಡುಕುಗಳು ನಿರ್ಧರಿತವಾಗುತ್ತವೆ ಎಂದು ಎಂಐಟಿ ಮಣಿಪಾಲದ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ರಾಘವೇಂದ್ರ ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ […]

ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ Read More »

ಯುವಕ ಪುಷ್ಪರಾಜ್ ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಪ್ಪಾಡಿಯಲ್ಲಿ ನಡೆದಿದೆ. ಕೊಡಿಪ್ಪಾಡಿ ಪಲ್ಲತ್ತಾರು ದಿ.ಚಂದ್ರಶೇಖರ್ ಆಚಾರ್ಯ ಅವರ ಮಗ ಪುಷ್ಪರಾಜ್ ಆತ್ಮಹತ್ಯೆ ಮಾಡಿಕೊಂಡವರು. ಪುಷ್ಪರಾಜ್ ಕಬಕ ಗ್ರಾಮದ ಪೋಳ್ಯದಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಏ.29ರಂದು ತಾಯಿಗೆ ದೂರವಾಣಿ ಕರೆ ಮಾಡಿ, ನಾನು ಮುಂಬೈಗೆ ಹೋಗುತ್ತೇನೆ ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದ. ಮೇ 1ರಂದು ಮಧ್ಯಾಹ್ನ ನಾನು ಮನೆಗೆ ವಾವಸ್ಸು ಬಂದು ನೋಡಿದಾಗ ಮಗ ಪುಷ್ಪರಾಜ್ ಮನೆಯ ದೇವರ ಕೋಣೆಯಲ್ಲಿ ಮಾಡಿನ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು

ಯುವಕ ಪುಷ್ಪರಾಜ್ ನೇಣು ಬಿಗಿದು ಆತ್ಮಹತ್ಯೆ ! Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಿಎ, ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ | 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಹತ್ತನೆಯ ತರಗತಿ ಮುಕ್ತಾಯವಾಗುತ್ತಿದ್ದಂತೆ ಅನೇಕ ವಿದ್ಯಾರ್ಥಿಗಳು ಸಿಎ ಆಗಬೇಕೆಂಬ ಯೋಚನೆ – ಯೋಜನೆಯೊಂದಿಗೆ ವಾಣಿಜ್ಯ ವಿಭಾಗಕ್ಕೆ ಅಡಿ ಇಡುವುದಿದೆ. ವಿದ್ಯಾರ್ಥಿಗಳ ಈ ಕನಸನ್ನು ನನಸು ಮಾಡುವುದಕ್ಕಾಗಿ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯ ಮಹತ್ವದ ಹೆಜ್ಜೆಯನ್ನಿಟ್ಟು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿದೆ. ಈ ನಡುವೆ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲೂ ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ ಕೋಚಿಂಗ್ ನಡೆಸುತ್ತಿರುವುದರಿಂದ ಹತ್ತನೆಯ ನಂತರ ಅನೇಕ ವಿದ್ಯಾರ್ಥಿಗಳು ದಾಖಲಾತಿ ಮಾಡಿಸಿಕೊಳ್ಳುತ್ತಿದ್ದಾರೆ. ಒಟ್ಟು 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆ ಹೊಂದಿದ್ದಾರೆ, ಮೂವರು

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಿಎ, ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ | 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ Read More »

ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ | ವೈಭವದಿಂದ ನಡೆಯಿತು ಹೊರೆ ಕಾಣಿಕೆ ಸಮರ್ಪಣೆ, ವಿವಿಧ ವೈದಿಕ ಕಾರ್ಯಕ್ರಮಗಳು | 300 ವರ್ಷಗಳ ಬಳಿಕ ಧರ್ಮಚಾವಡಿಯಲ್ಲಿ ನಡೆಯಿತು ನೇಮೋತ್ಸವ

ಪುತ್ತೂರು: ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ ಹಾಗೂ ಶ್ರೀ ಮದ್ಭಾಗವತ ಸಪ್ತಾಹದ ಅಂಗವಾಗಿ ಬುಧವಾರ ಸಂಜೆ ಗ್ರಾಮಸ್ಥರಿಂದ ವೈಭವದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಸಂಜೆ 4 ಗಂಟೆಗೆ ಶಾಂತಿಮೊಗರು ದೇವಸ್ಥಾನದ ದ್ವಾರದ ಬಳಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ಶ್ರೀ ದೈವಸ್ಥಾನಕ್ಕೆ ಬಂದು ಸಮರ್ಪಣೆಯಾಯಿತು. ಸಂಜೆ 6.30 ರಿಂದ ದೇವತಾ ಪ್ರಾರ್ಥನೆ, ಆಚಾರ್ಯ ವರಣೆ, ಸ್ವಸ್ತಿ ಪುಣ್ಯಾಹ ವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಪೂಜಾ

ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ | ವೈಭವದಿಂದ ನಡೆಯಿತು ಹೊರೆ ಕಾಣಿಕೆ ಸಮರ್ಪಣೆ, ವಿವಿಧ ವೈದಿಕ ಕಾರ್ಯಕ್ರಮಗಳು | 300 ವರ್ಷಗಳ ಬಳಿಕ ಧರ್ಮಚಾವಡಿಯಲ್ಲಿ ನಡೆಯಿತು ನೇಮೋತ್ಸವ Read More »

ಮನೆಗೆ ಕಲ್ಲು ತೂರಾಟ : ಗ್ರಾಮಾಂತರ ಪೊಲೀಸರಿಂದ ತನಿಖೆ

ಪುತ್ತೂರು : ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ಕಿಡಿಗೇಡಿಗಳು ಮನೆಯೊಂದಕ್ಕೆ ಕಲ್ಲು ತೂರಾಟ ನಡೆಸಿ ಪರಾರಿಯಾದ ಘಟನೆ ನಡೆದಿದೆ. ಗುಮ್ಮಟಗದ್ದೆ ಸೂರಪ್ಪ ಗೌಡ ಎಂಬವರ ಮನೆಗೆ ಕಲ್ಲು ತೂರಾಟ ನಡೆದಿದೆ. ಮೇ.1 ರಂದು ರಾತ್ರಿ 8.30ರ ವೇಳೆಗೆ ಮನೆ ಮಂದಿ ಮನೆಯೊಳಗಡೆ ಇರುವ ಸಂದರ್ಭದಲ್ಲಿ ಕಲ್ಲು ಬಿಸಾಡಿದ್ದಾರೆ. ಕಲ್ಲು ಮನೆ ಸಿಮೆಂಟ್ ಶೀಟ್ ಛಾವಣಿ ಮೇಲೆ ಬಿದ್ದ ಶಬ್ದ ಕೇಳಿ ಹೊರಗಡೆ ಬಂದಾಗ ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಸಂಪ್ಯ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮನೆಗೆ ಕಲ್ಲು ತೂರಾಟ : ಗ್ರಾಮಾಂತರ ಪೊಲೀಸರಿಂದ ತನಿಖೆ Read More »

ಮೇ 25 : ಎಸ್ ಆರ್ ಕೆ ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮ | ಮೇ 1 ಕಾರ್ಮಿಕ ದಿನದಂದು ಸಂಸ್ಥೆಯ ಸಿಬ್ಬಂದಿಗಳಿಗೆ ನಡೆಯಿತು ಕ್ರೀಡಾ ಸಂಭ್ರಮ

ಪುತ್ತೂರು: ಪುತ್ತೂರು: ಎಸ್ ಆರ್ ಕೆ ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಅಂಗವಾಗಿ ಮೆ 1 ರಂದು ಸಂಸ್ಥೆಯ ಸಿಬ್ಬಂದಿಗಳಿಗೆ ಕ್ರೀಡಾ ಸಂಭ್ರಮ ಮತ್ತು ಕಾರ್ಮಿಕ ದಿನಾಚರಣೆಯು ಕಡಬ ತಾಲೂಕಿನ ಕೊಯಿಲ ಕಲಾಯಿಗುತ್ತುವಿನಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಕಡಬ ಉಪತಹಸೀಲ್ದಾರ್ ಗೋಪಾಲ್ ಮಾತನಾಡಿ, ಕಾಯಕದಿಂದಲೇ ಯಾರನ್ನೂ ಗುರುತಿಸಲು ಸಾಧ್ಯವಿಲ್ಲ. ಕಾಯಕದ ಮೇಲೆ ಪ್ರೀತಿಯಿದ್ದಾಗ ಉತ್ತಮ ಬಾಂಧವ್ಯ ಬೆಳೆಯುತ್ತದೆ. ಸಜ್ಜನಿಕೆ, ಸರಳತೆ ಜೀವನದಲ್ಲಿ ಸ್ಥಾನಮಾನ ಸಿಗುತ್ತದೆ. ಇಂತಹ ಸ್ಥಾನಮಾನ ಎಸ್.ಆರ್.ಕೆ ಲ್ಯಾಡರ್ಸ್ ನ ಮಾಲಕ ಕೇಶವ ಅಮೈ ಅವರಿಗೆ ಸಿಗಬೇಕು.

ಮೇ 25 : ಎಸ್ ಆರ್ ಕೆ ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮ | ಮೇ 1 ಕಾರ್ಮಿಕ ದಿನದಂದು ಸಂಸ್ಥೆಯ ಸಿಬ್ಬಂದಿಗಳಿಗೆ ನಡೆಯಿತು ಕ್ರೀಡಾ ಸಂಭ್ರಮ Read More »

ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ | ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ |ಮೇ 9 ರಂದು ಪ್ರಶಸ್ತಿ ಪ್ರದಾನ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಶಿವರಾಮ ಕಾರಂತ ಅಧ್ಯಯನ ಕೇಂದ್ರದಿಂದ ನೀಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಪ್ರೊ. ವಿ. ಬಿ. ಅರ್ತಿಕಜೆ ಅವರಿಗೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ಮೇ.9 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ನಿರಂಜನ ಸಾಹಿತ್ಯ ಪ್ರಶಸ್ತಿ: ಪ್ರೊ. ವಿ. ಬಿ.

ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ | ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ |ಮೇ 9 ರಂದು ಪ್ರಶಸ್ತಿ ಪ್ರದಾನ Read More »

ನರಿಮೊಗರು ಗ್ರಾಮ ಪಂಚಾಯಿತಿಯಿಂದ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಚಾಲನೆ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ – 2024 ಕ್ಕೆ ಇಂದು ಚಾಲನೆ ನೀಡಲಾಯಿತು. ನರಿಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ದೀಪ ಬೆಳಗಿಸಿ ಉದ್ಘಾಟಿಸಿದರು. ಶಿಬಿರದಲ್ಲಿ ಪಂಚಾಯಿತಿ ಉಪಾಧ್ಯಕ್ಷ ಉಮೇಶ್, ಮಾಜಿ ಉಪಾಧ್ಯಕ್ಷ ಸುಧಾಕರ ಕುಲಾಲ್, ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು. ಪಾಲ್ಗೊಂಡು ಶುಭ ಹಾರೈಸಿದರು. ಗ್ರಂಥಾಲಯ ಮೇಲ್ವಿಚಾರಕ ವರುಣ್ ಕುಮಾರ್ ಎಸ್. ಕಾರ್ಯಕ್ರಮ ನಿರ್ವಹಿಸಿದರು. ಶಿಬಿರದಲ್ಲಿ ಇಂದು ಮಕ್ಕಳಿಗೆ ಹಲವು ಚಟುವಟಿಕೆಗಳನ್ನು

ನರಿಮೊಗರು ಗ್ರಾಮ ಪಂಚಾಯಿತಿಯಿಂದ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಚಾಲನೆ Read More »

ಜೀವನ ಕೌಶಲ್ಯ ಕರಗತ ಮಾಡಿಕೊಳ್ಳುವುದು ಅಗತ್ಯ | ಅಂಬಿಕಾ ಮಹಾವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟಿಸಿ ಐತ್ತಪ್ಪ ನಾಯ್ಕ್

ಪುತ್ತೂರು: ಪಠ್ಯದ ಸಂಗತಿಗಳಷ್ಟೇ ಜೀವನ ರೂಪಿಸುವುದಿಲ್ಲ. ಪಠ್ಯದ ಜತೆಗೆ ಯಾವ ಬಗೆಯ ಕೌಶಲ್ಯಗಳನ್ನು ನಮ್ಮದಾಗಿಸಿಕೊಳ್ಳುತ್ತೇವೆ ಎಂಬುದು ನಮ್ಮ ಭವಿಷ್ಯಕ್ಕೆ ಪೂರಕವೆನಿಸುತ್ತದೆ. ಅನೇಕ ವಿದ್ಯಾರ್ಥಿಗಳು ಅಂಕ ಗಳಿಸುವಲ್ಲಿ ಸೋತರೂ ತಮ್ಮಲ್ಲಿರುವ ಕೌಶಲ್ಯಗಳಿಂದಾಗಿ ಬದುಕಿನಲ್ಲಿ ಯಶಸ್ಸನ್ನು ಕಂಡ ನೂರಾರು ಉದಾಹರಣೆಗಳಿವೆ. ಹಾಗಾಗಿ ಜೀವನ ಕೌಶಲಗಳ ಬಗೆಗೆ ವಿದ್ಯಾರ್ಥಿಗಳು ಗಂಭೀರವಾಗಿ ಆಲೋಚಿಸಬೇಕು ಎಂದು ವಿಶ್ರಾಂತ ಮುಖ್ಯ ಶಿಕ್ಷಕ ಬಿ.ಐತ್ತಪ್ಪ ನಾಯ್ಕ್ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಪರ್ಸನಲ್ ಡೆವಲಪ್‌ಮೆಂಟ್ ಅಂಡ್ ಲೈಫ್ ಸ್ಕಿಲ್ಸ್ ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳಿಗಾಗಿ ಆರಂಭಿಸಲಾದ

ಜೀವನ ಕೌಶಲ್ಯ ಕರಗತ ಮಾಡಿಕೊಳ್ಳುವುದು ಅಗತ್ಯ | ಅಂಬಿಕಾ ಮಹಾವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟಿಸಿ ಐತ್ತಪ್ಪ ನಾಯ್ಕ್ Read More »

ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ | ತನಿಖಾ ತಂಡದಲ್ಲಿ ಪುತ್ತೂರಿನ ಧನ್ಯಾ ನಾಯಕ್

ಪುತ್ತೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕುರಿತು ತನಿಖೆಗೆ ರಚಿಸಲಾಗಿರುವ 18 ಮಂದಿ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರುವ ವಿಶೇಷ ತನಿಖಾ ತಂಡದಲ್ಲಿ ಪುತ್ತೂರಿನ ಧನ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಧನ್ಯಾ ನಾಯಕ್ ಅವರು ಈ ಹಿಂದೆ ಪುತ್ತೂರಿನಲ್ಲಿ ಪ್ರೊಬೆಷನರಿ ಡಿವೈಎಸ್‌ಪಿಯಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಐಪಿಎಸ್ ಅಧಿಕಾರಿ ಬಿ.ಕೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ | ತನಿಖಾ ತಂಡದಲ್ಲಿ ಪುತ್ತೂರಿನ ಧನ್ಯಾ ನಾಯಕ್ Read More »

error: Content is protected !!
Scroll to Top