ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸಂಪೂರ್ಣ | ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ
ಪುತ್ತೂರು: ನೆಹರೂನಗರದಿಂದ ವಿವೇಕಾನಂದ ಕಾಲೇಜು ಕ್ಯಾಂಪಸ್ ಮೂಲಕ ಹಾರಾಡಿಗೆ ಸಂಪರ್ಕಿಸುವ ರಸ್ತೆಯ ರೈಲ್ವೇ ಮೇಲ್ಸೇತುವೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ಸಂಪೂರ್ಣಗೊಂಡಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಬುಧವಾರ ಸಂಜೆ ಭೇಟಿ ನೀಡಿದರು. ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಸುಮಾರು 5.35 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ನಳಿನ್ ಕುಮಾರ್ ಮಾಧ್ಯಮಗಳ ಜತೆ ಮಾತನಾಡಿ, ಮೇಲ್ಸೇತುವೆ ಅಗಲಗೊಳಿಸಬೇಕೆಂಬುದು ಬಹು ಸಮಯಗಳ ಬೇಡಿಕೆಯಾಗಿತ್ತು. ದಿನಂಪ್ರತಿ ಸಾವಿರಾರು ವಿದ್ಯಾರ್ಥಿಗಳು ಸಂಚರಿಸುವ ಸೇತುವೆಯನ್ನು ಅಭಿವೃದ್ಧಿಪಡಿಸಬೇಕೆಂದು ವಿವೇಕಾನಂದ […]










