ಪುತ್ತೂರು

ವೈವಾಹಿಕ ಜೀವನ ಪ್ರವೇಶಿಸಿದ ನ್ಯೂಸ್ ಪುತ್ತೂರು ಸಿಬ್ಬಂದಿ ವಿನೋದ್

ಪುತ್ತೂರು: ತಾಲೂಕಿನ ಶಾಂತಿಗೋಡು ಗ್ರಾಮದ ಕರ್ಪುತಮೂಲೆಯ, ನ್ಯೂಸ್ ಪುತ್ತೂರು ಸಿಬ್ಬಂದಿ ವಿನೋದ್ ಅವರು ಇಂದು ವೈವಾಹಿಕ ಜೀವನ ಪ್ರವೇಶಿಸಿದರು. ಬನ್ನೂರು ಗ್ರಾಮದ ಕುಂಟ್ಯಾನ ದಿ.ಆನಂದ ಪೂಜಾರಿಯವರ ಪುತ್ರಿ ದೀಕ್ಷಿತಾ ಅವರನ್ನು ಎಪಿಎಂಸಿ ಪ್ರಾಂಗಣದಲ್ಲಿರುವ ರೈತ ಭವನ ಸಭಾಂಗಣದಲ್ಲಿ ವಿವಾಹವಾಗುವ ಮೂಲಕ ವೈವಾಹಿಕ ಜೀವನ ಪ್ರವೇಶಿಸಿದರು. ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ವೈವಾಹಿಕ ಜೀವನ ಪ್ರವೇಶಿಸಿದ ನ್ಯೂಸ್ ಪುತ್ತೂರು ಸಿಬ್ಬಂದಿ ವಿನೋದ್ Read More »

ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಕಾರ್ತಿಕ ತಂತ್ರಿ

ಪುತ್ತೂರು: ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ. ದೇವರ ಆರಾದನೆ ದೇವಸ್ಥಾನದಲ್ಲಿ ಮಾತ್ರವಲ್ಲ. ಪ್ರತಿ ಮನೆಯಲ್ಲಿ ನಡೆಯಬೇಕು. ಧರ್ಮ ರಕ್ಷಣೆಯೇ ಉಪಾಸನೆಯ ಅಂಗ. ಯಾವುದೇ ಕ್ಷೇತ್ರದಲ್ಲಿ ನಷ್ಟವಾದ ಚೈತನ್ಯ ತುಂಬಿಸುವುದೇ ಬ್ರಹ್ಮಕಲಶ. ಬ್ರಹ್ಮಕಲಶದ ಬಳಿಕ ಚೈತನ್ಯ ಬೆಳಗಲಿದೆ. ಧರ್ಮದ ಆಚರಣೆ ಮಾಡಿದಾಗ ಮನುಷ್ಯ ಜನ್ಮ ಸಾಥಕ. ಉತ್ತಮ ಕಾರ್ಯಗಳು, ಉತ್ತಮ ಸ್ಥಾನ ಲಭಿಸಲಿದೆ ಎಂದು ಕೆಮ್ಮಿಂಜೆ ಕಾರ್ತಿಕ  ತಂತ್ರಿಯವರು ಹೇಳಿದರು. ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ

ಧರ್ಮ ರಕ್ಷಣೆಯ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಕಾರ್ತಿಕ ತಂತ್ರಿ Read More »

ಧರೆಗುರುಳಿದ ಬೃಹದಾಕಾರದ ಮರ; ಎರಡು ವಾಹನಗಳು ಜಖಂ

ಪುತ್ತೂರು: ಪುತ್ತೂರಿನ ಬೊಳ್ವಾರ್ ಹರಿಪ್ರಸಾದ್ ಹೊಟೇಲ್ ಬಳಿ ಬೃಹತ್ ಮಾವಿನ ಮರವೊಂದು ಉರುಳಿಬಿದ್ದ ಪರಿಣಾಮ ವಾಹನಗಳು ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮಾವಿನಮರ ಬಿದ್ದ ಕ್ಷಣದಲ್ಲೇ ಮಾವಿನ ಮಿಡಿಗಾಗಿ ಮುಗಿಬಿದ್ದಿದ್ದಾರೆ. ಬೃಹತ್ ಮರಬಿದ್ದ ಪರಿಣಾಮ ತಮ್ಮ ವಾಹನವನ್ನ ಹೊರತರಲು ಪರದಾಡಿದ ವಾಹನ ಮಾಲೀಕರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸುತ್ತಿದ್ದಾರೆ. ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ತಪ್ಪಿದ ಭಾರೀ ಅವಘಡ ತಪ್ಪಿದಂತಾಗಿದೆ.

ಧರೆಗುರುಳಿದ ಬೃಹದಾಕಾರದ ಮರ; ಎರಡು ವಾಹನಗಳು ಜಖಂ Read More »

ಎ.ವಿ.ಜಿ. ಬೇಸಿಗೆ ಶಿಬಿರ -2024 ಸಮಾರೋಪದೊಂದಿಗೆ ಸಂಪನ್ನ | ಶಿಬಿರದಲ್ಲಿ “ಮಕ್ಕಳ ರಾಜ್ಯ” ನಾಟಕ ಪ್ರದರ್ಶನ

ಪುತ್ತೂರು: ಏ.22 ರಿಂದ 27ರ ತನಕ ನಡೆದ ಎವಿಜಿ ಬೇಸಿಗೆ ಶಿಬಿರ -2024 ಸಮಾರೋಪ ಸಮಾರಂಭದೊಂದಿಗೆ ಇಂದು ಸಂಪನ್ನಗೊಂಡಿತು. ಶಾಲಾ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಸಮಾರೋಪ ಭಾಷಣ ಮಾಡಿ ಶಿಬಿರದ ವೈಶಿಷ್ಟ್ಯತೆಗಳನ್ನು ಕೊಂಡಾಡಿದರು. ಮುಖ್ಯ ಅತಿಥಿಯಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು. ಮತ್ತೋರ್ವ ಮುಖ್ಯ ಅತಿಥಿ, ಐ.ಆರ್ ಸಿ.ಎಂ.ಡಿ. ಸಂಸ್ಥೆಯ ನಿರ್ದೇಶಕಿ ಪ್ರಫುಲ್ಲಾ

ಎ.ವಿ.ಜಿ. ಬೇಸಿಗೆ ಶಿಬಿರ -2024 ಸಮಾರೋಪದೊಂದಿಗೆ ಸಂಪನ್ನ | ಶಿಬಿರದಲ್ಲಿ “ಮಕ್ಕಳ ರಾಜ್ಯ” ನಾಟಕ ಪ್ರದರ್ಶನ Read More »

ವೈಭವದಿಂದ ನಡೆಯಿತು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ

ಪುತ್ತೂರು: ಕಳೆದ ಏಳು ದಿನಗಳಿಂದ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ ಏ.27 ಶನಿವಾರ ವೈಭವದಿಂದ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಇಂದು ಮುಂಜಾನೆ 5 ರಿಂದ ಮಹಾಗಣಪತಿ ಹೋಮ, ಪಂಚಾಮೃತಾಭಿಷೇಕ, ಇಂದ್ರಾದಿ ದಿಕ್ಪಾಲ ದೇವತೆಗಳ ಪ್ರತಿಷ್ಠೆ, ಮಹಾಬಲಿ ಪೀಠ ಪ್ರತಿಷ್ಠೆ ನಡೆದು ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಿತು. ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ

ವೈಭವದಿಂದ ನಡೆಯಿತು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬ್ರಹ್ಮಕಲಶಾಭಿಷೇಕ Read More »

ಜೆ.ಇ.ಇ. ಮೈನ್ಸ್ -2024 : ರಾಷ್ಟ್ರಮಟ್ಟದಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯಕ್ಕೆ 343 ನೇ ರ್ಯಾಂಕ್‍

ಪುತ್ತೂರು: ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸಿದ ರಾಷ್ಟ್ರಮಟ್ಟದ ಜೆಇಇ ಮೈನ್ ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯದ್ಭುತ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 87 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಗಳಿಸಿ ಗಮನ ಸೆಳೆದಿದ್ದಾರೆ. 14 ವಿದ್ಯಾರ್ಥಿಗಳು 95 ಕ್ಕಿಂತಲೂ ಅಧಿಕ ಪರ್ಸೆಂಟೈಲ್ ಫಲಿತಾಂಶ ಪಡೆದಿದ್ದು, 28 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸೆಂಟೈಲ್ ಗಳಿಸಿ ಉತ್ಕೃಷ್ಟ ಫಲಿತಾಂಶ ನೀಡಿದ್ದಾರೆ. ಕೆ ಪ್ರಮಿತ್ ರೈ 99.84 ಪರ್ಸೆಂಟೈಲ್ ಅಂಕಗಳೊಂದಿಗೆ ಇಡಬ್ಲ್ಯುಎಸ್ ವಿಭಾಗದಲ್ಲಿ

ಜೆ.ಇ.ಇ. ಮೈನ್ಸ್ -2024 : ರಾಷ್ಟ್ರಮಟ್ಟದಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯಕ್ಕೆ 343 ನೇ ರ್ಯಾಂಕ್‍ Read More »

ಪ್ರಜ್ವಲ್ ರೈ ಗಡಿಪಾರು ಆದೇಶಕ್ಕೆ ನ್ಯಾಯಾಲಯ ತಡೆ

ಪುತ್ತೂರು : ಎ.ಆರ್. ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರಿಗೆ ಗಡಿಪಾರು ಆದೇಶ ಹೊರಡಿಸಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗದ ದಂಡಾಧಿಕಾರಿಯವರು ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ತಡೆ ನೀಡಿದೆ. ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 55ರಂತೆ ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಅವರನ್ನು ಗಡಿಪಾರು ಮಾಡಲು ಶಿಫಾರಸ್ಸು ಮಾಡಲಾಗಿತ್ತು. ರಾಜಕೀಯ ಪಕ್ಷವೊಂದರಲ್ಲಿ ಗುರುತಿಕೊಂಡಿರುವ ಪ್ರಜ್ವಲ್ ರೈ ಪಾತಾಜೆಯವರ ವಿರುದ್ದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೇರಿದಂತೆ

ಪ್ರಜ್ವಲ್ ರೈ ಗಡಿಪಾರು ಆದೇಶಕ್ಕೆ ನ್ಯಾಯಾಲಯ ತಡೆ Read More »

ಏ.28: ಬಲ್ನಾಡು ಶ್ರೀ ದಂಡನಾಯಕ-ಉಳ್ಳಾಲ್ತಿ, ದೈವಗಳ ನೇಮ ನಡಾವಳಿ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿ ಏ.28 ಭಾನುವಾರ ರಂದು ನಡೆಯಲಿರುವುದು. ಏ.27 ರಂದು ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಧ್ಯಾಹ್ನ ಗಂಟೆ 12 :15 ರಿಂದ ಸಂಜೆ ಗಂಟೆ 6:30 ರ ವರೆಗೆ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ರಂಗಪೂಜೆ ನಡೆಯಲಿದೆ. ಶ್ರೀ ದಂಡನಾಯಕ ದೈವಸ್ಥಾನದಲ್ಲಿ ಬೆಳಿಗ್ಗೆ ಗಂಟೆ 10.30 ಕ್ಕೆ ಮಕರತೋರಣಾರೋಹಣ ರಾತ್ರಿ ಗಂಟೆ 7 ರಿಂದ ಶ್ರೀ ದೈವಗಳ ಭಂಡಾರ ತೆಗೆಯುವುದು, ತಂಬಿಲಾದಿಗಳು ನಡೆದು ಪ್ರಸಾದ

ಏ.28: ಬಲ್ನಾಡು ಶ್ರೀ ದಂಡನಾಯಕ-ಉಳ್ಳಾಲ್ತಿ, ದೈವಗಳ ನೇಮ ನಡಾವಳಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ʼಫಿಲೋ ಫೋರ್ಟೆ 2024ʼ

ಪುತ್ತೂರು: ಸಂತ ಫಿಲೋಮಿನಾ  ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ  ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ʼಫಿಲೋ ಫೋರ್ಟೆ-2024ʼ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ದೀಪ ಬೆಳಗಿಸಿ ಚಾಲನೆ ನೀಡಿ, ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳ ಅನಾವರಣಕ್ಕಾಗಿ ವಿದ್ಯಾರ್ಥಿ ಸಂಘದ ವತಿಯಿಂದ ಇಂತಹ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇಂತಹ ವೇದಿಕೆ ಉದಯೋನ್ಮುಖ ಕಲಾವಿದರಿಗೆ ಅತಿ ಅಗತ್ಯ. ಹೆಚ್ಚಿನ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು, ನಿಯೋಜಿತ ಕಾರ್ಯಗಳು ಮುಂತಾದ ಒತ್ತಡಗಳಿದ್ದು ಈ ದಿನ ಯಾವುದೇ

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ʼಫಿಲೋ ಫೋರ್ಟೆ 2024ʼ Read More »

ಬಸ್-ಆಟೋರಿಕ್ಷಾ ಡಿಕ್ಕಿ : ಆಟೋ ಚಾಲಕ ಮೃತ್ಯು

ಪುತ್ತೂರು : ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಹೊಡೆದುಕೊಂಡ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಇಂದು ಮುಂಜಾನೆ ಮುಕ್ರಂಪಾಡಿಯಲ್ಲಿ ನಡೆದಿದೆ. ಆಟೋ ರಿಕ್ಷಾ ಚಾಲಕ ಜೈಸನ್ (30) ಮೃತಪಟ್ಟವರು. ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ರಿಕ್ಷಾ ಮಧ್ಯೆ ಡಿಕ್ಕಿ  ಸಂಭವಿಸಿದೆ. ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದು ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ

ಬಸ್-ಆಟೋರಿಕ್ಷಾ ಡಿಕ್ಕಿ : ಆಟೋ ಚಾಲಕ ಮೃತ್ಯು Read More »

error: Content is protected !!
Scroll to Top