ಪುತ್ತೂರು

ಲೋಕಸಭೆ ಚುನಾವಣೆ : 164 ಬೂತ್‍ ಗಳಿಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ವಿಧಾನಸಭಾ ಕ್ಷೇತದ 164 ಬೂತ್‍ ಗಳಿಗೆ ಭೇಟಿ ನೀಡಿದರು. ಭೇಟಿ ನೀಡಿದ ಎಲ್ಲಾ ಬೂತ್ ಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅಭೂತಪೂರ್ವ ಶ್ಲಾಘನೆ ವ್ಯಕ್ತವಾಯಿತು. ಈ ಮೂಲಕ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಎಲ್ಲರ ಪ್ರಶಂಸೆಗೆ ಪಾತ್ರರಾದರು.

ಲೋಕಸಭೆ ಚುನಾವಣೆ : 164 ಬೂತ್‍ ಗಳಿಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಹಸೆಮಣೆ ಏರುವ ಮೊದಲು ಮತದಾನ ಮಾಡಿದ ಮದುಮಗಳು

ಪುತ್ತೂರು : ಹಸೆಮಣೆ ಏರುವ ಮೊದಲು ಮದುಮಗಳು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು. ರಿಪೋರ್ಟ‌ರ್ ಅಂಕಿತಾ ರೈ ಸಣಂಗಳರವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಹಸೆಮಣೆ ಏರುವ ಮೊದಲು ಮತದಾನ ಮಾಡಿದರು. ಕೆಯ್ಯೂರು ಬೂತ್ ಸಂಖ್ಯೆ 196ರಲ್ಲಿ ಮತ ಚಲಾಯಿಸಿದರು.

ಹಸೆಮಣೆ ಏರುವ ಮೊದಲು ಮತದಾನ ಮಾಡಿದ ಮದುಮಗಳು Read More »

ಧಾರ್ಮಿಕ ಕೇಂದ್ರ ಧರ್ಮ ಶಿಕ್ಷಣ ನೀಡುವ ಕೇಂದ್ರವಾಗಬೇಕು : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ದೇವಸ್ಥಾನ ಆಡಂಬರ ಭಕ್ತಿ ಪ್ರದರ್ಶನ ಕೇಂದ್ರವಾಗಬಾರದು : ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ |ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

ಪುತ್ತೂರು: ದೇವಸ್ಥಾನದ ಜೀರ್ಣೋದ್ಧಾರದ ಮೂಲಕ ನಮ್ಮ ಆತ್ಮೋದ್ದಾರದ ಕಾರ್ಯವಾಗುತ್ತಿದೆ. ಧಾರ್ಮಿಕ ಕೇಂದ್ರಗಳು ಶಿಕ್ಷಣ ನೀಡುವ ಕೇಂದ್ರವಾಗಬೇಕು. ಜನರಿಗೆ ಧಾರ್ಮಿಕ ಕೇಂದ್ರಗಳಲ್ಲಿ ಧರ್ಮ ಶಿಕ್ಷಣ ನೀಡಬೇಕಾದ ಅವಶ್ಯಕತೆಯಿದೆ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಜಿಯವರು ಹೇಳಿದರು. ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಏ.25 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ವಿಜ್ಞಾನದಲ್ಲಿ ಆವಿಷ್ಕಾರವಿದೆ. ಪರಿವರ್ತನೆಯೇ ವಿಜ್ಞಾನ. ಆದರೆ ಆಧ್ಯಾತ್ಮಿಕ ಅವಿಷ್ಕಾರ ಇಲ್ಲ. ಯುವಕರ ಶಕ್ತಿಯಿಂದ ಜಗತ್ತು ಬದಲಾಯಿಸಲು ಸಾಧ್ಯ.

ಧಾರ್ಮಿಕ ಕೇಂದ್ರ ಧರ್ಮ ಶಿಕ್ಷಣ ನೀಡುವ ಕೇಂದ್ರವಾಗಬೇಕು : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ದೇವಸ್ಥಾನ ಆಡಂಬರ ಭಕ್ತಿ ಪ್ರದರ್ಶನ ಕೇಂದ್ರವಾಗಬಾರದು : ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ |ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ಸುಬ್ರಹ್ಮಣ್ಯ, ಗಣಪತಿ, ದುರ್ಗಾದೇವಿ ಪ್ರತಿಷ್ಠೆ

ಪುತ್ತೂರು : ಕಳೆದ ಆರು ದಿನಗಳಿಂದ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ದೇವರ ಪ್ರತಿಷ್ಠಾಪನೆ ವೈಭವದಿಂದ ಇಂದು ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 9.24 ರಿಂದ 10.15 ರ ಮಿಥುನ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಪುನಃ ಪ್ರತಿಷ್ಠೆ, ಶ್ರೀ ಗಣಪತಿ ಹಾಗೂ ದುರ್ಗಾದೇವಿ ಪ್ರತಿಷ್ಠೆ ನಡೆಯಿತು. ಮಧ್ಯಾಹ್ನ 12 ರಿಂದ ಪ್ರತಿಷ್ಠಾ ಬಲಿ, ಬ್ರಾಹ್ಮಣ ಹಸ್ತೋದಕ,  ಮಹಾಪೂಜೆ, ಪ್ರಸಾದ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ಸುಬ್ರಹ್ಮಣ್ಯ, ಗಣಪತಿ, ದುರ್ಗಾದೇವಿ ಪ್ರತಿಷ್ಠೆ Read More »

ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಮಾಜಿ ಶಾಸಕ ಸಂಜೀವ ಮಠಂದೂರು

ಉಪ್ಪಿನಂಗಡಿ : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ಹಿರೇಬಂಡಾಡಿ ಬೂತ್ 49 ರಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರವರು ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತರು.

ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಮಾಜಿ ಶಾಸಕ ಸಂಜೀವ ಮಠಂದೂರು Read More »

ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು | ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ

ಪುತ್ತೂರು: ದೇಶ ಮತ್ತು ಧರ್ಮಕ್ಕಾಗಿ ನಾವು ನಮ್ಮ ಜೀವನ ನಡೆಸಬೇಕು. ದೇಶವನ್ನು ಬಿಟ್ಟು ಧರ್ಮವಾಗಲೀ, ಧರ್ಮವನ್ನು ಬಿಟ್ಟು ದೇಶವಾಗಲೀ ಇರುವುದಕ್ಕೆ ಸಾಧ್ಯವಿಲ್ಲ. ಅತ್ಯಂತ ಉತ್ಕೃಷ್ಟ ದೇಶ ಹಾಗೂ ಧರ್ಮದಲ್ಲಿ ನಾವು ಜನಿಸಿದ್ದೇವೆ ಎಂಬುದೇ ಹೆಮ್ಮೆ. ಹಾಗಾಗಿ ದೇಶ ಹಾಗೂ ಧರ್ಮ ಎರಡನ್ನೂ ಚೆನ್ನಾಗಿ ಇಟ್ಟುಕೊಂಡಾಗ ಮಾತ್ರ ನಮ್ಮ ಜನ್ಮ ಸಾರ್ಥಕಗೊಳ್ಳುತ್ತದೆ. ಮನುಷ್ಯ ಜನ್ಮ ಎನ್ನುವುದು ನಮಗೆ ದೊರಕುವ ಸುವರ್ಣಾವಕಾಶ. ಇದನ್ನು ವ್ಯರ್ಥ ಮಾಡಬಾರದು ಎಂದು ಶೃಂಗೇರಿಯ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರು ಹೇಳಿದರು.

ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು | ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ Read More »

ಏ.29 : ಪಡ್ಡಾಯೂರಿನಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ

ಪುತ್ತೂರು: ವರುಣ್ಸ್  ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ಪಡ್ಡಾಯೂರಿನಲ್ಲಿ ನಿರ್ಮಿಸಲಾದ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಏ.29 ರಂದು ಬೆಳಿಗ್ಗೆ ನಡೆಯಲಿದೆ. ಒಳಾಂಗಣ ಕ್ರೀಡಾಂಗಣವನ್ನು ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಪಿಂಯನ್ ಶಿಪ್ ಕಂಚಿನ ಪದಕ ವಿಜೇತ ಆಯುಷ್ ಶೆಟ್ಟಿ ಉದ್ಘಾಟಿಸಲಿದ್ದು, ಪಡ್ಡಾಯೂರು ರುದ್ರಾಂಡಿ ನೇತ್ರಾಂಡಿ ದೈವಸ್ಥಾನದ ಅಧ್ಯಕ್ಷ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ. ಶೆಟ್ಟಿ, ಸುದಾನ ಶಾಲಾ

ಏ.29 : ಪಡ್ಡಾಯೂರಿನಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ Read More »

ಧರ್ಮ ಎಂಬುದು ಸೂಕ್ಷ್ಮವಾದುದು | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ

ಪುತ್ತೂರು: ಧರ್ಮ ಎಂಬುದು ಸೂಕ್ಷ್ಮವಾದುದು. ಅದಕ್ಕೆ ಸರಿಯಾದ ಅರ್ಥ ಕಂಡು ಹಿಡಿಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಧರ್ಮದ ಅರಿವು ಪಡೆದು ಹಿರಿಯರು ಹಾಕಿಕೊಟ್ಟ ಧರ್ಮ ಮಾರ್ಗದಲ್ಲಿ ಜೀವನ ಸಾಗಿಸಬೇಕಾದ ಅಗತ್ಯತೆಯಿದ್ದು, ಆಗ ನಿಜವಾದ ಧರ್ಮಕ್ಕೆ ಅರ್ಥ ಬರುತ್ತದೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾಬಲ್ಲಭ ತೀರ್ಥ ಸ್ವಾಮಿಜಿ ನುಡಿದರು. ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಏ.24ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಬ್ರಹ್ಮಕಲಶ ಎಂದರೆ ಬಿಂಬದಲ್ಲಿ ಸಾನಿಧ್ಯ ಸ್ಥಾಪನೆ ಮಾಡುವುದು.

ಧರ್ಮ ಎಂಬುದು ಸೂಕ್ಷ್ಮವಾದುದು | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ Read More »

ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆ

ಕಡಬ : ತಾಲೂಕಿನ ಕುದ್ಮಾರು ಗ್ರಾಮದ ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ ಹಾಗೂ ಶ್ರೀ ಮದ್ಭಾಗವತ ಸಪ್ತಾಹಕ್ಕೆ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ  ಏ.24 ರಂದು ಬೆಳಿಗ್ಗೆ 6ಕ್ಕೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಆರಂಭ , 6. 30ಕ್ಕೆ ಶ್ರೀ ಮದ್ಭಾಗವತ  ಪಾರಾಯಣ ಆರಂಭ ವೇಧ ಸಂಸ್ಕೃತ ವಿದ್ವಾಂಸ, ಪುರೋಹಿತ, ಪ್ರವಚನಕಾರ ವೇ.ಮೂ.ವಿದ್ವಾನ್ ಕೇಶವ ಭಟ್ ಕೇಕಣಾಜೆ ಅವರಿಂದ ಶ್ರೀಮದ್ಭಾಗವತ

ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆ Read More »

ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಶೃಂಗೇರಿ : ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ನಿಕಟಪೂರ್ವ ಸದಸ್ಯರಾದ  ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ನ್ಯಾಯವಾದಿ ಮಹೇಶ್ ಕಜೆ, ದಿನೇಶ್ ಜೈನ್

ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

error: Content is protected !!
Scroll to Top