ಧ್ವಜಾವರೋಹಣದೊಂದಿಗೆ ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವ ಸಂಪನ್ನ | ಭಕ್ತ ಸಮೂಹವನ್ನೇ ಪುಳಕಿತಗೊಳಿಸುವ ವೈಭವದ ಜಾತ್ರೋತ್ಸವ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ ಧ್ಜಜಾವರೋಹಣದೊಂದಿಗೆ ಇಂದು ಸಂಪನ್ನಗೊಂಡಿತು. ಏ.10 ರಿಂದ ಧ್ವಜಾರೋಹಣದೊಂದಿಗೆ ಆರಂಭಗೊಂಡ ಜಾತ್ರೋತ್ಸವ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಏ.10 ರಿಂದ ಪ್ರತಿನಿತ್ಯ ಶ್ರೀ ದೇವರ ಬಲಿ ಉತ್ಸವ ನಡೆದು ಶ್ರೀ ದೇವಸ್ಥಾನದ ವಠಾರದಲ್ಲಿರುವ ಕಟ್ಟೆಯಲ್ಲಿ ಪೂಜೆಗೊಂಡ ಬಳಿಕ ಪ್ರತಿನಿತ್ಯ ನಿಗದಿಯಾದ ಪ್ರದೇಶಗಳಿಗೆ ಸವಾರಿ ಮಾಡಿ ವಿವಿಧ ಕಟ್ಟೆಗಳಲ್ಲಿ ಪೂಜೆಗೊಂಡು ಭಕ್ತಾದಿಗಳನ್ನು ಪುನೀತರಾಗಿಸುವುದು ವಿಶೇಷತೆಯಾಗಿದ್ದು, ಈ ಮೂಲಕ ಮನೆ ಬಾಗಿಲಿಗೆ ಬರುವ ದೇವರು ಎಂದೇ ಖ್ಯಾತಿ […]










