ಪುತ್ತೂರು

ಏ.17 ಮುಂಜಾನೆಯಿಂದ ಪುತ್ತೂರಿನಲ್ಲಿ ಮದ್ಯದಂಗಡಿ ಬಂದ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏ.17 ಬೆಳಿಗ್ಗೆ 6 ರಿಂದ ಏ.18 ರ ಮಧ್ಯರಾತ್ರಿ ವರೆಗೆ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್ ಗಳನ್ನು ಬಂದ್ ಮಾಡುವಂತೆ ತಿಳಿಸಿದ್ದಾರೆ. ಪುತ್ತೂರು ಜಾತ್ರೋತ್ಸವ ಹಿನ್ನೆಲೆ ಸಾವಿರಾರು ಜನರು ಸೇರುವ ನಿರೀಕ್ಷೆ ಇದ್ದು, ಈ ಸಮಯದಲ್ಲಿ ಕಿಡಿಗೇಡಿಗಳಿಗೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ, ಸಾರ್ವಜನಿಕ […]

ಏ.17 ಮುಂಜಾನೆಯಿಂದ ಪುತ್ತೂರಿನಲ್ಲಿ ಮದ್ಯದಂಗಡಿ ಬಂದ್ Read More »

ಪತ್ರಕರ್ತ, ಹಿರಿಯ ಸಾಹಿತಿ ಪ್ರೊ.ಬಿ.ವಿ.ಅರ್ತಿಕಜೆಯವರು ನಿರಂಜನ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ಅಂಕಣಕಾರ, ಲೇಖಕ, ಪ್ರೊ. ವಿ.ಬಿ. ಅರ್ತಿಕಜೆಯವರನ್ನು 2024ನೇ ಸಾಲಿನ ‘ನಿರಂಜನ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಕೊಡಮಾಡುವ ಈ ಪ್ರಶಸ್ತಿಯನ್ನು ಸಾಹಿತ್ಯ ಲೋಕಕ್ಕೆ ಉತ್ತಮ ಸೇವೆ ಸಲ್ಲಿಸಿದವರಿಗೆ ಇದನ್ನು ನೀಡಲಾಗುತ್ತಿದೆ. ಪತ್ರಕರ್ತರೂ, ಸಾಹಿತಿಯೂ ಆಗಿರುವ ಅರ್ತಿಕಜೆ ಅವರು ಈಗಾಗಲೇ ಸಾಹಿತ್ಯ ರತ್ನ, ಬಾಳಿಲ ಪ್ರಶಸ್ತಿ, ಬೋಳಂತಕೋಡಿ ಪ್ರಶಸ್ತಿ, ಒಡಿಯೂರು ಶ್ರೀ ಪ್ರಶಸ್ತಿ, ಸತ್ಯಶಾಂತಾ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ ಮುಂತಾದ ಗೌರವಗಳಿಗೆ

ಪತ್ರಕರ್ತ, ಹಿರಿಯ ಸಾಹಿತಿ ಪ್ರೊ.ಬಿ.ವಿ.ಅರ್ತಿಕಜೆಯವರು ನಿರಂಜನ ಪ್ರಶಸ್ತಿಗೆ ಆಯ್ಕೆ Read More »

ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳೆಗೆ ಮನೆ ಭೇಟಿ ಸಂದರ್ಭ ಹಲ್ಲೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ರೋಟರಿ ಪುರದಲ್ಲಿ ಚುನಾವಣೆ ಕರ್ತವ್ಯ ನಿರತ ಮನೆ ಮನೆಗೆ ಮತ ಚೀಟಿ ವಿತರಣೆಗೆ ತೆರಳಿದ ಅಂಗನವಾಡಿ ಕಾರ್ಯಕರ್ತೆ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಲೋಕಸಭಾ ಚುನಾವಣೆಯ ಸಂಬಂಧ ಮನೆಮನೆಗೆ ಮತ ಚೀಟಿ ವಿತರಣೆಗೆ ಚುನಾವಣಾಧಿಕಾರಿಯವರ ಸೂಚನೆಯಂತೆ ಅಂಗನವಾಡಿ ಕಾರ್ಯಕರ್ತೆಯರು ತೆರಳುವ ಕಾರ್ಯ ಇಂದಿನಿಂದ ಆರಂಭಗೊಂಡಿದ್ದು, ಈ ಸಂದರ್ಭ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮತ ಚೀಟಿ ವಿತರಣೆ ಮತದಾರರ ಮನೆಯೊಂದಕ್ಕೆ ಹೋಗುತ್ತಿದ್ದ ವೇಳೆ ಇನ್ನೊಂದು ಮನೆಯಿಂದ ಹೊರ ಬಂದ ಮಹಿಳೆ ಅಂಗನವಾಡಿ

ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳೆಗೆ ಮನೆ ಭೇಟಿ ಸಂದರ್ಭ ಹಲ್ಲೆ Read More »

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಇಂದು ಮತ್ತು ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ | ಪಾರ್ಕಿಂಗ್‍ ಗೆ ಸ್ಥಳ ನಿಗದಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವುದು ಹಾಗೂ ನಾಳೆ ನಡೆಯುವ ರಥೋತ್ಸವದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ವಾಹನ ಸಂಚಾರ ಬದಲಾವಣೆ ಸಹಿತ ಪಾರ್ಕಿಂಗ್ ವ್ಯವಸ್ಥೆಗೂ ಸೂಕ್ತ ಸ್ಥಳ ಗುರುತಿಸುವ ಕುರಿತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಪೊಲೀಸ್ ಇಲಾಖೆ ವರದಿ ನೀಡಿದೆ. ಸಹಾಯಕ ಆಯುಕ್ತರ

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಇಂದು ಮತ್ತು ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ | ಪಾರ್ಕಿಂಗ್‍ ಗೆ ಸ್ಥಳ ನಿಗದಿ Read More »

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್ ಎಸ್ ಎಸ್, ರಾಜ್ಯಶಾಸ್ತ್ರ ವಿಭಾಗ ಹಾಗೂ ಇತಿಹಾಸ ವಿಭಾಗಗಳ ನೇತೃತ್ವದಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಪ್ರಾಧ್ಯಾಪಕ ಪ್ರೊ.ಐವನ್ ಫ್ರಾನ್ಸಿಸ್ ಲೋಬೋ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ರವರ ಹೋರಾಟವನ್ನು ಸತ್ಯ ಮತ್ತು ವಿಧಾನದ ನಿದರ್ಶನವಾಗಿ

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ Read More »

ಡಾ.ಕೃತಿಕಾ ಆರ್. ಐತಾಳ್ ಗೆ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

ಪುತ್ತೂರು : ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾರೆ. ಹೈದರಾಬಾದ್ ನಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ ಸ್ವಾಸ್ಥ್ಯ ಆಯುಷ್ ಎಕ್ಸ್ ಪೋನಲ್ಲಿ ಬೆಸ್ಟ್ ಓರಲ್ ಪೇಪರ್ ಪ್ರೆಸೆಂಟೇಟರ್ ಆಗಿ ತೆಲಂಗಾಣದ ಮಾಜಿ ರಾಜ್ಯಪಾಲರಾದ ಡಾ. ತಮಿಳಾಸೈ ಸೌಂದರಾಜನ್ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿರುವ ಕೃತಿಕಾ ಆರ್. ಐತಾಳ್

ಡಾ.ಕೃತಿಕಾ ಆರ್. ಐತಾಳ್ ಗೆ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ Read More »

ಇಂದು ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ?

ಪುತ್ತೂರು: ಉಪ್ಪಿನಂಗಡಿ ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ ಇಂದು ಬೆಳಿಗ್ಗೆ 10 ರಿಂದ ಸಂಜೆ 5.30 ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11ಕೆಎ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್ ಪ್ರೆಸ್ ಉಪ್ಪಿನಂಗಡಿ ಓಲ್ಡ್, ಕಾಂಚನ & ವಾಟರ್ ಸಪ್ಲೈ ಫೀಡರ್ನಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ನೆಕ್ಕಿಲಾಡಿ & ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಬೇಕಾಗಿ

ಇಂದು ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ? Read More »

ಶಿವಾಮೃತ ಸಂಚಿಕೆ ಸಾಂಸ್ಕೃತಿಕ ಲೋಕವನ್ನು ಕಟ್ಟಿಕೊಡುತ್ತಿದೆ | ನ್ಯೂಸ್ ಪುತ್ತೂರಿನ “ಶಿವಾಮೃತ” ಸಂಚಿಕೆ ಬಿಡುಗಡೆಗೊಳಿಸಿ ಡಾ.ಕೆ.ಚಿನ್ನಪ್ಪ ಗೌಡ

ಪುತ್ತೂರು: ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಡಿ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರಿನ ‘ಶಿವಾಮೃತ’ ವಿಶೇಷ ಸಂಚಿಕೆ ಏ.15 ರಂದು ಸಂಜೆ ಲೋಕಾರ್ಪಣೆಗೊಂಡಿತು. ಬನ್ನೂರು ಜೋಡುಕಟ್ಟೆ ಮೈದಾನದಲ್ಲಿ ನಡೆದ “ಪುತ್ತೂರ ಹಬ್ಬ” ಕಾರ್ಯಕ್ರಮದಲ್ಲಿ ಹಾವೇರಿ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ ಚಿನ್ನಪ್ಪ ಗೌಡ “ಶಿವಾಮೃತ” ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿ. ಪ್ರಸ್ತುತ ಮಕ್ಕಳು ಸಾಂಸ್ಕೃತಿಕ ಬೇರುಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಮನಸ್ಥಿತಿಯಿಂದ ಹೊರಗೆ ಬರಬೇಕು. ಮಕ್ಕಳನ್ನು ಬುದ್ಧಿವಂತರನ್ನಾಗಿಸುವ ಜತೆಗೆ ಸಾಂಸ್ಕೃತಿಕ ಕಲಾಪಗಳಲ್ಲಿ ಪಾಲ್ದೊಳ್ಳುವ ಮೂಲಕ ಸಾಂಸ್ಕೃತಿಕ, ಸಂಸ್ಕಾರವನ್ನು ಜೀವಂತ

ಶಿವಾಮೃತ ಸಂಚಿಕೆ ಸಾಂಸ್ಕೃತಿಕ ಲೋಕವನ್ನು ಕಟ್ಟಿಕೊಡುತ್ತಿದೆ | ನ್ಯೂಸ್ ಪುತ್ತೂರಿನ “ಶಿವಾಮೃತ” ಸಂಚಿಕೆ ಬಿಡುಗಡೆಗೊಳಿಸಿ ಡಾ.ಕೆ.ಚಿನ್ನಪ್ಪ ಗೌಡ Read More »

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಶನಿವಾರ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ಶ್ರೀ ದೇವರಿಗೆ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ

ಬಪ್ಪಳಿಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಟ್ಟೆಯಲ್ಲಿ ಪೂಜೆಗೊಂಡ ಶ್ರೀ ಮಹಾಲಿಂಗೇಶ್ವರ Read More »

ಇಂದು ನ್ಯೂಸ್ ಪುತ್ತೂರಿನ ‘ಶಿವಾಮೃತ’ ವಿಶೇಷ ಸಂಚಿಕೆ ಲೋಕಾರ್ಪಣ ಸಮಾರಂಭ

ಪುತ್ತೂರು: ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಡಿ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರಿನ ‘ಶಿವಾಮೃತ’ ವಿಶೇಷ ಸಂಚಿಕೆ ಲೋಕಾರ್ಪಣಾ ಸಮಾರಂಭ ಇಂದು ಸಂಜೆ 6.30 ಕ್ಕೆ ಬನ್ನೂರು ಜೋಡುಕಟ್ಟೆ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ನೆರವೇರಿಸಲಿದ್ದಾರೆ. ಮಂಗಳೂರು ಎಸ್ ಸಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಾವೇರಿ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಕೆ ಚಿನ್ನಪ್ಪ ಗೌಡ “ಶಿವಾಮೃತ” ಸಂಚಿಕೆ

ಇಂದು ನ್ಯೂಸ್ ಪುತ್ತೂರಿನ ‘ಶಿವಾಮೃತ’ ವಿಶೇಷ ಸಂಚಿಕೆ ಲೋಕಾರ್ಪಣ ಸಮಾರಂಭ Read More »

error: Content is protected !!
Scroll to Top