ಪುತ್ತೂರು

ಏ.20 : ಉಚಿತ ವಾಲಿಬಾಲ್‍ ಬೇಸಿಗೆ ಶಿಬಿರ ಉದ್ಘಾಟನೆ | ಮಿತ್ರವೃಂದ ವಾಲಿಬಾಲ್‍ ಅಕಾಡೆಮಿ, ರೋಟರಿ ಕ್ಲಬ್‍ ಬಿರುಮಲೆ ಹಿಲ್ಸ್, ಲಿಟ್ಲ್ ಫ್ಲವರ್ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ ಶಿಬಿರ

ಪುತ್ತೂರು: ಮಿತ್ರವೃಂದ ವಾಲಿಬಾಲ್‍ ಅಕಾಡೆಮಿ, ಪುತ್ತೂರು ರೋಟರಿ ಕ್ಲಬ್‍ ಬಿರಮಲೆ ಹಿಲ್ಸ್ ಹಾಗೂ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಸಂಯುಕ್ತ ಆಶ್ರಯದಲ್ಲಿ ಒಂದು ತಿಂಗಳ ಕಾಲ ನಡೆಯುವ ಉಚಿತ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರ ಏ.20 ರಂದು ದರ್ಬೆ ಲಿಟ್ಲ್ ಫ್ಲವರ್ ಶಾಲಾ ಮೈದಾನದಲ್ಲಿ ಆರಂಭಗೊಳ್ಳಲಿದೆ ಎಂದು ಮಿತ್ರವೃಂದ ವಾಲಿಬಾಲ್‍ ಅಕಾಡೆಮಿ ಪ್ರಧಾನ ಕಾರ್ಯದರ್ಶಿ  ಬಾಲಚಂದ್ರ ಕೆಮ್ಮಿಂಜೆ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ 40 ವರ್ಷಗಳಿಂದ ಮಿತ್ರವೃಂದ ವಾಲಿಬಾಲ್ ಅಕಾಡೆಮಿ ಗ್ರಾಮೀಣ ಪ್ರದೇಶದ ಆಸಕ್ತರಿಗೆ […]

ಏ.20 : ಉಚಿತ ವಾಲಿಬಾಲ್‍ ಬೇಸಿಗೆ ಶಿಬಿರ ಉದ್ಘಾಟನೆ | ಮಿತ್ರವೃಂದ ವಾಲಿಬಾಲ್‍ ಅಕಾಡೆಮಿ, ರೋಟರಿ ಕ್ಲಬ್‍ ಬಿರುಮಲೆ ಹಿಲ್ಸ್, ಲಿಟ್ಲ್ ಫ್ಲವರ್ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ ಶಿಬಿರ Read More »

ಎರ್ಕ ಬಾಬು ಗುರುಸ್ವಾಮಿ ನಿಧನ

ಪುತ್ತೂರು : ಅರಿಯಡ್ಕ ಗ್ರಾಮದ ಎರ್ಕ ನಿವಾಸಿ ಬಾಬು ಗುರುಸ್ವಾಮಿ ಅವರು ಇಂದು ನಿಧನರಾದರು. ಬಾಬು ಗುರುಸ್ವಾಮಿ ಅವರು 53 ವರ್ಷ ಶಬರಿಮಲೆ ಯಾತ್ರೆ ಮಾಡಿದ್ದು ,ಕುಂಬ್ರ ಹಾಗೂ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿ ಸಾವಿರಾರು ಮಂದಿಗೆ ಮಾಲಾಧಾರಣೆ ಮಾಡಿ ಶಬರಿಮಲೆ ಯಾತ್ರೆ ಮಾಡಿದ್ದರು. ಮೃತರ ಮಕ್ಕಳಾದ ಜಯಂತ್ ,ವೀಣಾ,ವಾಣಿ,ಸಂತೋಷ್ ಅವರನ್ನು ಅಗಲಿದ್ದಾರೆ.

ಎರ್ಕ ಬಾಬು ಗುರುಸ್ವಾಮಿ ನಿಧನ Read More »

ವಿವೇಕಾನಂದ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

ಪುತ್ತೂರು: ಯುವ ಪದವೀಧರರು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಂಡು ವೃತ್ತಿ ಜೀವನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಪದವಿ ಪ್ರದಾನ ಸಮಾರಂಭ ಪ್ರೇರಣೆಯಾಗುತ್ತದೆ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಶ್ರೀರಾಮ ಸಭಾ ಭವನದಲ್ಲಿ ನಡೆದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಸ್ತಿಗೆ ಮಹತ್ವವನ್ನು ನೀಡಬೇಕು

ವಿವೇಕಾನಂದ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ Read More »

ಡಾ.ಬಿ.ಆರ್.ಅಂಬೇಡ್ಕರ್ ದೇಶದ ಪ್ರತಿಯೊಬ್ಬ ಪ್ರಜೆಗೂ ಮಾದರಿ | ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಲೋಕೇಶ್‍ ಎಸ್‍.ಆರ್.

ಪುತ್ತೂರು: ಸಮಾಜದ ಪ್ರಗತಿಗಾಗಿ ಹಾಗೂ ಬದುಕಿನ ಚೌಕಟ್ಟಿನ ಸಂವಿಧಾನವನ್ನು ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ದೇಶದ ಪ್ರತಿಯೊಬ್ಬ ಪ್ರಜೆಗೂ ಮಾದರಿಯಾಗುವ ವ್ಯಕ್ತಿ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್. ಹೇಳಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ದೇಶ ಕಂಡ ಮಹಾನ್ ಚೇತನ ಮತ್ತು ಅತಿ

ಡಾ.ಬಿ.ಆರ್.ಅಂಬೇಡ್ಕರ್ ದೇಶದ ಪ್ರತಿಯೊಬ್ಬ ಪ್ರಜೆಗೂ ಮಾದರಿ | ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಲೋಕೇಶ್‍ ಎಸ್‍.ಆರ್. Read More »

ಚಾಕೊಟೆತ್ತಡಿ ಮಾಡದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಪಾಲ್ತಾಡಿ ಸಮೀಪದ ಶ್ರೀ ಧರ್ಮರಸು ಉಳ್ಳಾಕುಲು ದೇವಸ್ಥಾನ ಚಾಕೊಟೆತ್ತಡಿ ಮಾಡದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಇಂದು ಬೆಳಿಗ್ಗೆ ನಡೆಯಿತು. ಏ.22 ರಿಂದ 24 ರ ತನಕ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.

ಚಾಕೊಟೆತ್ತಡಿ ಮಾಡದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಅಶೋಕ್ ಕುಮಾರ್ | ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ

ಪುತ್ತೂರು: ಪತ್ರಿಕೋದ್ಯಮ ಎನ್ನುವುದು ಬಹಳ ವಿಶಾಲವಾದ ಕ್ಷೇತ್ರ. ಇಲ್ಲಿ ನಾವು ಕಲಿಯಬೇಕಾದ ವಿಷಯಗಳು ಹಲವಾರು ಇವೆ. ಮಾಧ್ಯಮ ಕ್ಷೇತ್ರದಲ್ಲಿ ಯಾವ ರೀತಿಯಾಗಿ ನಾವು ಮುಂದುವರೆಯಬೇಕು ಎಂದು ವಿದ್ಯಾರ್ಥಿ ಜೀವನದಲ್ಲಿಯೇ ನಿರ್ಧರಿಸಿ ಅದಕ್ಕೆ ಪೂರ್ವ ತಯಾರಿಯನ್ನು ಈ ಸಂದರ್ಭದಲ್ಲಿಯೇ ಮಾಡಿಕೊಳ್ಳಬೇಕು. ಇಲ್ಲಿ ಸತ್ಯಾಸತ್ಯತೆಗಳನ್ನು ಸರಿಯಾಗಿ ಪರಿಶೀಲಿಸಿ ಕಾರ್ಯನಿರ್ವಹಿಸುವುದು ಬಹುಮುಖ್ಯ. ಓರ್ವ ಸಮರ್ಥ ಪತ್ರಕರ್ತನಾಗಬೇಕಾದರೆ ಆತ ಒಳ್ಳೆಯ ಮಾತುಗಾರಿಕೆಯ ಕೌಶಲ್ಯವನ್ನು ಹೊಂದಿರಬೇಕು ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ಮಂಗಳೂರಿನ ಟಿವಿ9 ವಾಹಿನಿಯ ವರದಿಗಾರ ಅಶೋಕ್ ಕುಮಾರ್ ಹೇಳಿದರು. ಅವರು ವಿವೇಕಾನಂದ

ಪತ್ರಕರ್ತರಿಗೆ ಪೂರ್ವ ತಯಾರಿ ಬಹು ಮುಖ್ಯ: ಅಶೋಕ್ ಕುಮಾರ್ | ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ Read More »

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿ ಬಿಜೆಪಿ ಸೇರ್ಪಡೆ

ಪುತ್ತೂರು: ಕಾಂಗ್ರೇಸ್ ನಾಯಕರ ವರ್ತನೆ ಹಾಗೂ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಬಂದು ಹತ್ತು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ಗ್ರಾಮದಲ್ಲಿ  ಆಗದೇ ಇರುವುದರಿಂದ ಬೇಸತ್ತು ಪಡ್ನೂರು ಗ್ರಾಮ ಹಾಗೂ ಬನ್ನೂರು ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿಯವರು ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಶಾಸಕ ಸಂಜೀವ ಮಠಂದೂರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ,

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ವಿಜಯ ಪೂಜಾರಿ ಬಿಜೆಪಿ ಸೇರ್ಪಡೆ Read More »

ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಟು ಗ್ಯಾರಂಟಿಗಳು ಅನುಷ್ಠಾನಗೊಳ್ಳಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಈ ದೇಶವನ್ನು 60 ವರ್ಷಗಳ ಕಾಲ ಆಳಿ ಸಾಕಷ್ಟು ಅಭಿವೃದ್ದಿ ಕೆಲಸವನ್ನು ಮಾಡಿ ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ದಿತ್ತು. ಆದರೆ ಕಳೆದ ಹತ್ತು ವರ್ಷ ಆಡಳಿತ ಮಾಡಿದವರು ಎಲ್ಲವನ್ನೂ ಲಗಾಡಿ ತೆಗೆದಿದ್ದಾರೆ. ಕಾಂಗ್ರೆಸ್ ಸರಕಾರ ಇದ್ದಾಗ ಜನ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು.

ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಹೇಮಂತ್ ರೈ

ಕಡಬ: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಲಂಕಾರಿನ‌ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕು ಆಲಂಕಾರು ಸಮೀಪದ ಮನವಳಿಕೆ ಗುತ್ತುವಿನ ಹೇಮಂತ್ ರವರು ಪ್ರವಾಸೋದ್ಯಮ ಉದ್ಯಮಿಯಾಗಿದ್ದಾರೆ. ಈ ಹಿಂದೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದರು. ಎಂಬಿಎ, ಎಲ್.ಎಲ್.ಬಿ ಪದವೀಧರರಾಗಿರುವ ಅವರು ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ವೃತ್ತಿಪರರ ಪ್ರಕೋಷ್ಠದ ಸಂಚಾಲಕರಾಗಿದ್ದರು. ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದು

ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಹೇಮಂತ್ ರೈ Read More »

‘ಸಾಹಿತ್ಯದ ಬಿಲ್ವಾರ್ಚನೆ’ ಕನ್ನಡ ಭಕ್ತಿಗೀತೆ ಆಲ್ಬಂ ಪೋಸ್ಟರ್ ಬಿಡುಗಡೆ

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗ್ರಾಮ ಸಾಹಿತ್ಯ ಸಂಭ್ರಮ ಸಂಚಾಲಕ ನಾರಾಯಣ ಕುಂಬ್ರ ಅವರ ‘ಸಾಹಿತ್ಯದ ಬಿಲ್ವಾರ್ಚನೆ’ ಕನ್ನಡ ಭಕ್ತಿ ಪ್ರಧಾನ ಆಲ್ಬಮ್ ಹಾಡಿನ ಪೋಸ್ಟರ್ ವಿವೇಕಾನಂದ ಕಾಲೇಜಿನಲ್ಲಿ ಬಿಡುಗಡೆಗೊಂಡಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಕೃಷ್ಣ ಕಾರಂತ್, ಗಣಕ ವಿಜ್ಞಾನ ವಿಭಾಗದ ಪ್ರಕಾಶ್ ಕುಮಾರ್.ಪಿ, ಕಛೇರಿ ಅಧೀಕ್ಷಕ ಗುರುರಾಜ್, ಶಿಕ್ಷಕೇತರ ಸಂಘದ ಅಧ್ಯಕ್ಷೆ ಶುಭ ಎಸ್. ರಾವ್, ಶಿಕ್ಷಕೇತರ ಸಿಬ್ಬಂದಿಗಳು

‘ಸಾಹಿತ್ಯದ ಬಿಲ್ವಾರ್ಚನೆ’ ಕನ್ನಡ ಭಕ್ತಿಗೀತೆ ಆಲ್ಬಂ ಪೋಸ್ಟರ್ ಬಿಡುಗಡೆ Read More »

error: Content is protected !!
Scroll to Top