ಪುತ್ತೂರು

ಏ.15 : ಪುತ್ತೂರಿನಲ್ಲಿ ಮೇಳೈಸಲಿದೆ “ಪುತ್ತೂರ ಹಬ್ಬ” | ಟೈಮ್ & ಟೈಡ್  ಆಯೋಜನೆ, ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನ ರ್ ನೊಂದಿಗೆ ಶ್ರೀ ಮಂಜುನಾಥ ಇಲೆಕ್ಟ್ರೋನಿಕ್ಸ್ & ಫರ್ನಿಚರ್ಸ್ ಪ್ರಸ್ತುತಪಡಿಸಲಿದೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೇಟೆ ಸವಾರಿ ಹಾಗೂ ಕಟ್ಟೆ ಪೂಜೆ ಪ್ರಯುಕ್ತ ದರ್ಬೆ ಶ್ರೀ ಮಂಜುನಾಥೇಶ್ವರ ಇಲೆಕ್ಟ್ರೋನಿಕ್ಸ್‌ & ಫರ್ನೀಚರ್ಸ್ ಪ್ರಸ್ತುತಪಡಿಸುವ “ಪುತ್ತೂರ ಹಬ್ಬ” ಎಂಬ ಬೃಹತ್ ಮನರಂಜನಾ ಕಾರ್ಯಕ್ರಮವನ್ನು ಏ.15 ಸೋಮವಾರ ಸಂಜೆ 6.30ರಿಂದ ಟೈಮ್ & ಟೈಡ್ ಇವೆಂಟ್‌ ಮ್ಯಾನೇಜ್‌ ಮೆಂಟ್‌ ಸಂಸ್ಥೆಆಯೋಜಿಸಲಿದೆ. ಪುತ್ತೂರು ನಗರದ ಇತಿಹಾಸದಲ್ಲಿಯೇ ಬೃಹತ್ ಮಟ್ಟದ ಪ್ರಥಮ ಕಾರ್ಯಕ್ರಮ  ಇದಾಗಿದ್ದು, ಪುತ್ತೂರಿನ ಬನ್ನೂರು ಜೋಡುಕಟ್ಟೆ ಮೈದಾನದಲ್ಲಿ ಜರಗಲಿದೆ. […]

ಏ.15 : ಪುತ್ತೂರಿನಲ್ಲಿ ಮೇಳೈಸಲಿದೆ “ಪುತ್ತೂರ ಹಬ್ಬ” | ಟೈಮ್ & ಟೈಡ್  ಆಯೋಜನೆ, ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನ ರ್ ನೊಂದಿಗೆ ಶ್ರೀ ಮಂಜುನಾಥ ಇಲೆಕ್ಟ್ರೋನಿಕ್ಸ್ & ಫರ್ನಿಚರ್ಸ್ ಪ್ರಸ್ತುತಪಡಿಸಲಿದೆ Read More »

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‍ ಶೋ | ಪುತ್ತೂರಿನ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸ್ವ ಇಚ್ಚೆಯಿಂದ ಭಾಗಿ : ಸಂಜೀವ ಮಠಂದೂರು

ಪುತ್ತೂರು: ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಪುತ್ತೂರಿನಿಂದ 5 ಸಾವಿರಕ್ಕೂ ಮಿಕ್ಕಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಪುತ್ತೂರು ವಿಧಾನಸಭೆಯ ಎಲ್ಲಾ ಬೂತ್ ಗಳಿಂದ ಕಾರ್ಯಕರ್ತರು ಸ್ವ ಇಚ್ಛೆಯಿಂದ ತಮ್ಮ ತಮ್ಮ ವಾಹನದಲ್ಲಿ ಮಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು. ಮಂಗಳೂರಿನಲ್ಲಿ ನಡೆಯುವ ಮೋದಿ ರೋಡ್ ಶೋ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4 ಲಕ್ಷಕ್ಕೂ ಮಿಕ್ಕಿದ ಮತಗಳಲ್ಲಿ ಗೆಲ್ಲಿಸುವ ಕಾರ್ಯಕ್ರಮದ

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‍ ಶೋ | ಪುತ್ತೂರಿನ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸ್ವ ಇಚ್ಚೆಯಿಂದ ಭಾಗಿ : ಸಂಜೀವ ಮಠಂದೂರು Read More »

ಸಿಎಂ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಮುಂದೂಡಿಕೆ

ಪುತ್ತೂರು :ಪುತ್ತೂರಿನಲ್ಲಿ ನಡೆಯಬೇಕಿದ್ದ ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಚುನಾವಣೆ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಏ.16 ಮಂಗಳವಾರ ಚುನಾವಣಾ ಪ್ರಚಾರ ಸಭೆ ನಿಗದಿಪಡಿಸಲಾಗಿತ್ತು. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಶಾಸಕ ಅಶೋಕ ರೈ ತಿಳಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಮುಂದೂಡಿಕೆ Read More »

ಸುಡುಮದ್ದು, ರಥೋತ್ಸವ : ನಿಶ್ಚಿತ ಸಮಯದಲ್ಲಿ ನಡೆಸುವಂತೆ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಧರ್ಭದಲ್ಲಿ ಸಂತೆ ಇತ್ಯಾದಿಗಳನ್ನು ವ್ಯವಸ್ಥಿತವಾಗಿ ಆಯೋಜಿಸುವುದು, ಸುಡುಮದ್ದು ಪ್ರದರ್ಶನ ಮತ್ತು ರಥೋತ್ಸವವನ್ನು ನಿಶ್ಚಿತ ಸಮಯದಲ್ಲಿ ನಡೆಸುವಂತೆ ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಾದಿಗಳು ಏ.೧೨ರಂದು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ರಥೋತ್ಸವದ ದಿನ ಶ್ರೀ ದೇವರು ರಥಾರೋಹಣದ ವೀಕ್ಷಣೆಗೆ ಭಕ್ತಾದಿಗಳಿಗೆ  ಸಹಕಾರಿವಾಗುವಂತೆ ರಥಬೀದಿಯಿಂದ ಕನಿಷ್ಠ ೭೫-೮೦ಮೀಟರ್ ದೂರದಲ್ಲಿ ವ್ಯಾಪಾರ ಮಳಿಗೆಗಳನ್ನು ಅಳವಡಿಸುವುದು. ಸುಡುಮದ್ದು ಪ್ರದರ್ಶನವನ್ನು ಸಾಕಷ್ಟು ದೂರದ ಸುರಕ್ಷಿತ ಪ್ರದೇಶದಲ್ಲಿ ವ್ಯವಸ್ಥೆಗೊಳಿಸುವುದು, ರಥೋತ್ಸವವನ್ನು ಮುಹೂರ್ತ ಸಮಯ ಮೀರದಂತೆ  ನಿಗಧಿ ಸಮಯ

ಸುಡುಮದ್ದು, ರಥೋತ್ಸವ : ನಿಶ್ಚಿತ ಸಮಯದಲ್ಲಿ ನಡೆಸುವಂತೆ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ Read More »

ಏ. 16: ಪುತ್ತೂರಿಗೆ ಸಿಎಂ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿ.

ಪುತ್ತೂರು : ಚುನಾವಣಾ ಪ್ರಚಾರ ಸಭೆಗೆ ಭಾಗವಹಿಸಲು ಸಿಎಂ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಏ. 16 ರಂದು ಪುತ್ತೂರಿಗೆ ಆಗಮಿಸಲಿದ್ದು, ಕಿಲ್ಲೆ ಮೈದಾನದಲ್ಲಿ ಬೃಹತ್‌ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದು, ಆ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 5 ಗಂಟೆಗೆ ನಿರ್ಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ

ಏ. 16: ಪುತ್ತೂರಿಗೆ ಸಿಎಂ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿ. Read More »

ಗ್ರಾಮ ಪಂಚಾಯತ್ ಸಿಬ್ಬಂದಿ ವಿರುದ್ಧ ಕೊಲೆಯತ್ನ

 ಪುತ್ತೂರು: ಸವಣೂರಿನಲ್ಲಿ ಸಂಬಂಧಿಕರ ಮಧ್ಯೆ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಸಿಬ್ಬಂದಿ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಪಂಚಾಯತ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪ್ರತಿದೂರು ದಾಖಲಾಗಿದೆ. ಸವಣೂರು ಗ್ರಾಮದ ಪ್ರಕಾಶ ಎಂ ಎಂಬವರು ದೂರು ನೀಡಿ, ತನ್ನ ತಂದೆ ಕೃಷ್ಣಪ್ಪ ಗೌಡರಿಗೆ ಹಾಗೂ ಪ್ರಕರಣದ ಆರೋಪಿ ದಯಾನಂದರವರಿಗೆ ರಸ್ತೆಯ ವಿಚಾರದಲ್ಲಿ ತಕರಾರಿದ್ದು,ಎ. 10 ರಂದು ರಾತ್ರಿ ತನ್ನ ತೋಟದಲ್ಲಿ ಹಳೇಯ ಬೋರ್‌ವೆಲ್ ಕೆಲಸ ಮಾಡುತ್ತಿದ್ದಾಗ, ಆರೋಪಿ ದಯಾನಂದ ಮತ್ತು ಆತನ ಪತ್ನಿ, ನನ್ನ

ಗ್ರಾಮ ಪಂಚಾಯತ್ ಸಿಬ್ಬಂದಿ ವಿರುದ್ಧ ಕೊಲೆಯತ್ನ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ದಶ ದಿಕ್ಕುಗಳಿಗೆ ಪೇಟೆ ಸವಾರಿ | ಭಕ್ತ ಸಮೂಹದಲ್ಲಿ ಸಂಭ್ರಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಜಾತ್ರೋತ್ಸವಕ್ಕೆ ಕಳೆದ ಮೂರು ದಿನಗಳ ಹಿಂದೆ ಚಾಲನೆ ನೀಡಲಾಗಿದ್ದು, ಪ್ರತಿದಿನ ರಾತ್ರಿ ಶ್ರೀ ದೇವರು ಒಂದೊಂದು ಕಡೆ ಪೇಟೆ ಸವಾರಿಗೆ ತೆರಳುವ ಮೂಲಕ ಆ ಪ್ರದೇಶದ ಭಕ್ತ ಸಮೂಹದಲ್ಲಿ ಸಂಭ್ರಮ ಮನೆ ಮಾಡಿದೆ. ಮನೆ ಬಾಗಿಲಿಗೆ ತೆರಳು ದೇವರು ಎಂದು ಪ್ರಸಿದ್ಧಿ ಪಡೆದ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಪ್ರತಿನಿತ್ಯ ಸಂಜೆ ಶ್ರೀ ದೇವರ ಬಲಿ ಉತ್ಸವ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣದಲ್ಲಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ | ದಶ ದಿಕ್ಕುಗಳಿಗೆ ಪೇಟೆ ಸವಾರಿ | ಭಕ್ತ ಸಮೂಹದಲ್ಲಿ ಸಂಭ್ರಮ Read More »

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ | “ವಿವೇಕ ಸ್ಮೃತಿ” ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಇಂದು ಭಾರತ ಬದಲಾವಣೆಯತ್ತ ಗಮನ ಹರಿಸುತ್ತಿದೆಯಾದರೂ ನಾವು ಆಧ್ಯಾತ್ಮಿಕವಾಗಿ ಬದಲಾಗುತ್ತಿದ್ದೇವೆಯೇ ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾದ ಪರಿಸ್ಥತಿ ಇದೆ. ಭಾರತೀಯರು ಸನಾತನ ಧರ್ಮಿಗಳು. ನಮಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಪ್ರತಿಯೊಂದು ಮಾನವನ ಜನ್ಮ ಭಗವಂತನ ಸಾಕ್ಷಾತ್ಕಾರವಾಗಿದೆ. ನಾವು ಯಾವುದೇ ಜಾತಿ-ಮತದ ಹಂಗಿಲ್ಲದೆ ಸತ್ಯ- ಧರ್ಮದಿಂದ ಬದುಕಿ ಇತರರಿಗೆ ಮಾದರಿಯಾಗಬೇಕು ಎಂದು ಪೊಳಲಿಯ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಹೇಳಿದರು. ಅವರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, (ಸ್ವಾಯತ್ತ)ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ,

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ | “ವಿವೇಕ ಸ್ಮೃತಿ” ಉಪನ್ಯಾಸ ಕಾರ್ಯಕ್ರಮ Read More »

ಅಖಿಲ ಕನಾ೯ಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ಶುಕ್ರವಾರ ಪುತ್ತೂರು ಯೋಜನಾ ಕಛೇರಿ ಸಭಾಂಗಣದಲ್ಲಿ ನಡೆಯಿತು.ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಮಹಾಬಲ ರೈ ಅಧ್ಯಕ್ಷತೆ ವಹಿಸಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಶೆಟ್ಟಿ ಕಾಯ೯ಕ್ರಮಕ್ಕೆ ಚಾಲನೆ ನೀಡಿದರು. ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಕ್ಷೇತ್ರ ಯೋಜನಾಧಿಕಾರಿ ಶಶಿಧರ್ ಎಂ.

ಅಖಿಲ ಕನಾ೯ಟಕ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ Read More »

ದ್ವಿತೀಯ ಪಿಯುಸಿ : ಪ್ರಗತಿ ಸ್ಟಡಿ ಸೆಂಟರ್‌ಗೆ ವಾಣಿಜ್ಯ ವಿಭಾಗದಲ್ಲಿ ಶೇ.99, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

ಪುತ್ತೂರು: ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2023-24ನೇ ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.99 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದ ಟ್ಯೂಷನ್ ತರಗತಿಯಲ್ಲಿ ದಾಖಲಾಗಿರುವ ಒಟ್ಟು 10 ವಿದ್ಯಾರ್ಥಿಗಳಲ್ಲಿ 7 ಮಂದಿ ಪ್ರಥಮ, 2 ಮಂದಿ ದ್ವಿತೀಯ ಹಾಗೂ ಓರ್ವ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ-1, ಪ್ರಥಮ ಶ್ರೇಣಿಯಲ್ಲಿ

ದ್ವಿತೀಯ ಪಿಯುಸಿ : ಪ್ರಗತಿ ಸ್ಟಡಿ ಸೆಂಟರ್‌ಗೆ ವಾಣಿಜ್ಯ ವಿಭಾಗದಲ್ಲಿ ಶೇ.99, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ Read More »

error: Content is protected !!
Scroll to Top