ಪೆರುವಾಯಿ ಗ್ರಾ.ಪಂ ಅಧ್ಯಕ್ಷರ ಲಂಚ ಪ್ರಕರಣ ಹಿನ್ನೆಲೆ – ಕಾಂಗ್ರೆಸ್ ಪಕ್ಷದಿಂದ ವಜಾಮಾಡಿ | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹ.
ಪುತ್ತೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ನಫೀಸಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಮಾಡಬೇಕು. ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಬೇಕು ಎಂದು ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹಿಸಿದೆ. ಪೆರುವಾಯಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಂಚಾಯತ್ ಅಧ್ಯಕ್ಷೆ ನಫೀಸಾ ಅವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ 2024-25ನೇ ಸಾಲಿನ ವಿಶೇಷ ಘಟಕ […]










