ಪುತ್ತೂರು

ದ್ವಿತೀಯ ಪಿಯುಸಿ ಫಲಿತಾಂಶ : ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ

ಸವಣೂರು: ಮಾರ್ಚ್ 2024 ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸವಣೂರು ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಕಾಲೇಜಿನಿಂದ ಪರೀಕ್ಷೆಗೆ 51 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 6 ಮಂದಿ ವಿಶಿಷ್ಟ ಶ್ರೇಣಿ, 33 ಮಂದಿ ಪ್ರಥಮ ದರ್ಜೆ ಮತ್ತು 6 ಮಂದಿ ದ್ವಿತೀಯ ದರ್ಜೆಯಲ್ಲಿ  ತೇರ್ಗಡೆಯಾಗಿದ್ದಾರೆ. ಫಾತಿಮಾ ಶೈಮಾ ಆಯ್‌ಷತ್ ವಫಾ 573 (ಶೇ.95.5)  (ಕೆ.ಪಿ.ಮಹಮ್ಮದ್ ಷರೀಫ್ ಮತ್ತು ಸಾಜಿದಾ ಪೆರಾಬೆ, ಕಡಬ ದಂಪತಿ ಪುತ್ರಿ), ಇಂಚರ ಕೆ.ಎಚ್. 558 (ಶೇ.93), […]

ದ್ವಿತೀಯ ಪಿಯುಸಿ ಫಲಿತಾಂಶ : ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ Read More »

ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಧ್ವಜಾರೋಹಣ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಬುಧವಾರ ಬೆಳಿಗ್ಗೆ ಧ್ವಜಾರೋಹಣದ ಮೂಲಕ ವೈಭವದ ಚಾಲನೆ ನೀಡಲಾಯಿತು. ಬೆಳಿಗ್ಗೆ 9.25 ನಂತರದ ವೃಷಭ ಲಗ್ನದಲ್ಲಿ ಭಕ್ತಾದಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್‍.ಭಟ್ ಹಾಗೂ ವಸಂತ ಕೆದಿಲಾಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರು, ಸದಸ್ಯರು, ಅರ್ಚಕರು, ಸಿಬ್ಬಂದಿಗಳು, ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಏ.1 ರಂದು ಗೊನೆ ಮುಹೂರ್ತ ನಡೆದಿತ್ತು. ಗೊನೆ ಮುಹೂರ್ತ

ಪುತ್ತೂರು ಒಡೆಯ ಶ್ರೀ ಮಹಾಲಿಂಗೇಶ್ವರನ ಜಾತ್ರೋತ್ಸವಕ್ಕೆ ಧ್ವಜಾರೋಹಣ Read More »

ನಾಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ | ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ

ಪುತ್ತೂರು: ಕುಡಿಯ ಮಾಡಾವು ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ನಾಳೆ ನಡೆಯುವ ಧ್ವಜಾರೋಹಣದ ಅಂಗವಾಗಿ ಶ್ರೀ ದೇವಸ್ಥಾನದಲ್ಲಿ ಮಹಾಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ. ಧ್ವಜಾರೋಹಣ ದಿನದಂದು ಪೂರ್ವಶಿಷ್ಠ ಪದ್ಧತಿಯಂತೆ ಕುರಿಯ ಮಾಡಾವು ಏಳ್ನಾಡುಗುತ್ತು ಮನೆತನದ ಶ್ರೇಯಸ್ಸು ಹಾಗೂ ಗೌರವಾರ್ಥವಾಗಿ ನಡೆಯುವ ಕಾರ್ಯಕ್ರಮದ ಅಂಗವಾಗಿ ಈ ವಿಶೇಷ ಪೂಜೆ ನಡೆಯಲಿದೆ. ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಭಗವಂತನ ಅನುಗ್ರಹಕ್ಕೆ

ನಾಳೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ | ಕುರಿಯ ಏಳ್ನಾಡುಗುತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿಯಿಂದ ವಿಶೇಷ ಪೂಜೆ, ಸಮಾರಾಧನೆ, ಸಾರ್ವಜನಿಕ ಅನ್ನಸಂತರ್ಪಣೆ Read More »

ಹಾಡಹಗಲೇ ಕಾಡು ಹಂದಿ ದಾಳಿ : ಗಾಯಾಳು ಆಸ್ಪತ್ರೆಗೆ ದಾಖಲು

ಸವಣೂರು:ಹಾಡಹಗಲೇ ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ. ಅಗರಿ ನಿವಾಸಿ ರತ್ನಾಕರ ಗಂಭೀರ ಗಾಯಗೊಂಡವರು. ಇಂದು ಮಧ್ಯಾಹ್ನ ಮನೆ ಸಮೀಪ ಹಠತ್ತನೇ ಕಾಡು ಹಂದಿಯೊಂದು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೃಷಿಕರ ಕೋವಿ ಠೇವಣಾತಿಯಿಂದಾಗಿ ಕಾಡು ಪ್ರಾಣಿಗಳಿಂದ ರಕ್ಷಣೆ ಪಡೆಯಲು ಕೃಷಿಕರಿಗೆ ಅಸಾಧ್ಯವಾಗಿದೆ. ಈ ಕುರಿತು

ಹಾಡಹಗಲೇ ಕಾಡು ಹಂದಿ ದಾಳಿ : ಗಾಯಾಳು ಆಸ್ಪತ್ರೆಗೆ ದಾಖಲು Read More »

ಪುತ್ತೂರಿನಲ್ಲಿ ನಾರಿಶಕ್ತಿಗೆ ಚಾಲನೆ l ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ರಿಂದ ಚಾಲನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನಾರಿಶಕ್ತಿ ಸಮಾವೇಶ ಪುತ್ತೂರು ಜೈನ ಭವನದಲ್ಲಿ ಮಂಗಳವಾರ ನಡೆಯಿತು. ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ಹಿಂಗಾರ ಅರಳಿಸುವ ಮೂಲಕ‌ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ‌ ಶಾಸಕ ಸಂಜೀವ ಮಠಂದೂರು, ದ.ಕ.ಜಿಲ್ಲಾ‌ ಲೋಕಸಭೆ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿಲ್ಲಾ‌ ಕಾರ್ಯದರ್ಶಿ

ಪುತ್ತೂರಿನಲ್ಲಿ ನಾರಿಶಕ್ತಿಗೆ ಚಾಲನೆ l ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ರಿಂದ ಚಾಲನೆ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ 2024-25 l ಆಮಂತ್ರಣ‌ ಪತ್ರಿಕೆ ಬಿಡುಗಡೆ

ಪುತ್ತೂರು: ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಮಿತಿ, ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಗೌಡ ಮಹಿಳಾ ಸಂಘ ಹಾಗೂ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಸಹಯೋಗದೊಂದಿಗೆ 2025ನೇ ಜನವರಿ 21 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯುವ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ 2024-25 ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ,

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮ 2024-25 l ಆಮಂತ್ರಣ‌ ಪತ್ರಿಕೆ ಬಿಡುಗಡೆ Read More »

ಹೊಸ ವರುಷದ ಆದಿ ಯುಗಾದಿ

ಚೈತ್ರ ಮಾಸದ ಪ್ರಾರಂಭದ ದಿನ ಭಾರತೀಯರಿಗೆ ಹೊಸ ವರುಷ .ಪ್ರತೀ ಮನೆಯಲ್ಲಿ ಸಿಹಿ ಮತ್ತು ಕಹಿ ಬೇವಿನ ಮಿತ್ರಣದ ಜತೆಗೆ ಪ್ರಾರಂಭವಾಗುವ ಈ ದಿನ ಜೀವನದಲ್ಲಿ ಸಿಹಿ ಕಹಿಯು ಒಂದ ಸಮನಾಗಿ ನಮ್ಮ ಬಾಳಿನಲ್ಲಿ ಇರಲಿ ಎಂಬ ಆಶಾಭಾವನೆಯೊಟ್ಟಿಗೆ ಹೊಸ ವರ್ಷವನ್ನು ಪ್ರಾರಂಭಿಸಲಾಗುತ್ತದೆ. ಭಾರತೀಯ ಸಂಪ್ರದಾಯದಲ್ಲಿ ಮೊದಲ ಹಬ್ಬವೇ ಯುಗಾದಿ.ಯುಗಾದಿ ಎಂಬ ಪದವು ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ಸೃಷ್ಟಿಯಾಗಿದೆ. ‘ಯುಗ’ ಎಂದರೆ ಹೊಸ ಕಾಲ ಎಂದೂ ‘ಆದಿ’ ಎಂದರೆ ಆರಂಭ ಅಂತ .ಹೊಸ

ಹೊಸ ವರುಷದ ಆದಿ ಯುಗಾದಿ Read More »

ಏ.26 ರಂದು ಎಲ್ಲರೂ ಮತಚಲಾಯಿಸಿ | ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಸುಕನ್ಯಾ

ಪುತ್ತೂರು: ಭಾರತ ಚುನಾವಣಾ ಆಯೋಗ ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭ ಎಲ್ಲಾ ಸಂಸ್ಥೆಗಳ ಸಿಬ್ಬಂದಿಗಳಿಗೆ ವೇತನ ಸಹಿತ ರಜೆಯನ್ನು ನೀಡಿದೆ. ಆ ದಿನದಂದು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಸುಕನ್ಯ ಹೇಳಿದರು. ಅವರು ಸೋಮವಾರ ದ.ಕ.ಜಿಲ್ಲಾ ಸ್ವೀಪ್‌ ಸಮಿತಿ, ಪುತ್ತೂರು ತಾಲೂಕು ಸ್ವೀಪ್‌ ಸಮಿತಿ, ಕಾರ್ಮಿಕ ಇಲಾಖೆ ಪುತ್ತೂರು ಹಾಗೂ ಕ್ಯಾಂಪ್ಕೋ ಚಾಕಲೇಟ್‌ ಫ್ಯಾಕ್ಟರಿ ಇದರ ಸಹಯೋಗದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಏ.26 ರಂದು ಎಲ್ಲರೂ ಮತಚಲಾಯಿಸಿ | ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಸುಕನ್ಯಾ Read More »

ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಪುತ್ತೂರು: ರಾಜ್ಯದಲ್ಲಿ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಹೇಳಿದರು. ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಎಂದಿಗೂ ಜನತೆಗೆ ದ್ರೋಹ ಮಾಡಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್ ಎಂದಿಗೂ ಬಡವರ ಹಾಗೂ ನೊಂದವರ ಪರವಾಗಿಯೇ ಕೆಲಸ ಮಾಡಲಿದೆ. ಗ್ಯಾರಂಟಿ ಯೋಜನೆಯನ್ನು ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಜಾರಿ

ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ಏ.19 : ಶ್ರೀ ಮಹಾಲಿಂಗೇಶ್ವರ ದೇವರ ಅವಭ್ರತ ಸ್ನಾನದಂದು ವೀರಮಂಗಳ ಕುಮಾರಧಾರ ನದಿ ಬಳಿಯ ಶ್ರೀದೇವರ ಕಟ್ಟೆ ಸಮರ್ಪಣೆ

ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭ್ರತ ಸ್ನಾನದ ಸ್ಥಳವಾದ ವೀರಮಂಗಲದ ಕುಮಾರಧಾರ ನದಿ ಬಳಿಯ ಕಟ್ಟೆಯನ್ನು ಏ.19 ರಂದು ಅವಭ್ರತ ಸ್ನಾನದ ಸಂದರ್ಭ ಶ್ರೀ ದೇವರಿಗೆ ಸಮರ್ಪಣೆ ಮಾಡುವ ಕಾರ್ಯಕ್ರಮ ನಡೆಯಲಿದೆ ಎಂದು ದಿನೇಶ್ ಕುಮಾರ್ ಜೈನ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಂಟುನೂರು ವರ್ಷಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ಜಾತ್ರಾ ಸಂದರ್ಭದಲ್ಲಿ ಅವಭ್ರತ ಸ್ನಾನಕ್ಕಾಗಿ ವೀರಮಂಗಲದ ಕುಮಾರಧಾರ ನದಿಯ ಬಳಿ ಇದ್ದ ದೇವರ ಕಟ್ಟೆಗೆ ತೆರಳುವುದು ನಡೆದುಕೊಂಡು

ಏ.19 : ಶ್ರೀ ಮಹಾಲಿಂಗೇಶ್ವರ ದೇವರ ಅವಭ್ರತ ಸ್ನಾನದಂದು ವೀರಮಂಗಳ ಕುಮಾರಧಾರ ನದಿ ಬಳಿಯ ಶ್ರೀದೇವರ ಕಟ್ಟೆ ಸಮರ್ಪಣೆ Read More »

error: Content is protected !!
Scroll to Top