ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ರಾಕೇಶ್ ಎಂ.ರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಬಿಎ ವಿಭಾಗದ ಪ್ರೊ.ರಾಕೇಶ್.ಎಂ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಕ್ಯಾಪಿಟಲ್ ಸ್ಟ್ರಕ್ಚರ್ ಡಿಸಿಷನ್ಸ್ ಎ ಸ್ಟಡಿ ಆಫ್ ಇಂಡಿಯನ್ ಕಂಪೆನೀಸ್ ಎನ್ನುವ ವಿಷಯದ ಬಗ್ಗೆ ಬಳ್ಳಾರಿಯ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ  ಡಾ.ಜಾನೆಟ್ ಜ್ಯೋತಿ ಡಿ’ಸೋಜ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿದ್ದಾರೆ. ಅವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ […]

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ರಾಕೇಶ್ ಎಂ.ರಿಗೆ ಡಾಕ್ಟರೇಟ್ ಪದವಿ Read More »

ಏ.14 : ಚಿಗುರೆಲೆ ಸಾಹಿತ್ಯ ಬಳಗದ ದ್ವಿತೀಯ ವರ್ಷದ ಸಂಭ್ರಮ, ಕೃತಿ ಲೋಕಾರ್ಪಣೆ ಹಾಗೂ ದಿವ್ಯಾಂಗ ಚೇತನ ಕವಿಗೋಷ್ಠಿ

ಪುತ್ತೂರು: ಚಿಗುರೆಲೆ ಸಾಹಿತ್ಯ ಬಳಗದ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಸಹಯೋಗದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ದ್ವಿತೀಯ ವರ್ಷದ ಸಂಭ್ರಮ, ಕೃತಿ ಲೋಕಾರ್ಪಣೆ ಹಾಗೂ ದಿವ್ಯಾಂಗ ಚೇತನ ಕವಿಗೋಷ್ಠಿ ಏ.14 ರಂದು ಬೆಳಿಗ್ಗೆ 10 ಗಂಟೆಗೆ ಅನುರಾಗ ವಠಾರದಲ್ಲಿ ನಡೆಯಲಿದೆ. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್‍ ನಾಯಕ್ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ಆಶಯ

ಏ.14 : ಚಿಗುರೆಲೆ ಸಾಹಿತ್ಯ ಬಳಗದ ದ್ವಿತೀಯ ವರ್ಷದ ಸಂಭ್ರಮ, ಕೃತಿ ಲೋಕಾರ್ಪಣೆ ಹಾಗೂ ದಿವ್ಯಾಂಗ ಚೇತನ ಕವಿಗೋಷ್ಠಿ Read More »

ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಸವಣೂರು : ಪಾಲ್ತಾಡಿ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಪಾಲ್ತಾಡಿ ಬೂತ್ ಸಂಖ್ಯೆ 70ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಅವರ ಮನೆಯಲ್ಲಿ ನಡೆಯಿತು. ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ. ಅವರು ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಾರಿ ಶಕ್ತಿ ಸಂಗಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗಣೇಶ್ ಶೆಟ್ಟಿ ಕುಂಜಾಡಿ, ಬಾಳಪ್ಪ ಪೂಜಾರಿ ಬಂಬಿಲದೋಳ, ವಿಠಲ ಶೆಟ್ಟಿ ಬಂಬಿಲ, ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.ಬಂಬಿಲ,

ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಮತದಾನ ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ಕಾರ್ಯ ಭರ್ಜರಿಯಿಂದ ನಡೆಯುತ್ತಿದ್ದು,ಈ ನಡುವೆ ತಾಲೂಕಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಸಿದ್ದಾರೆ. ಚಿಕ್ಕಮುಡ್ನೂರು ಗ್ರಾಮದ ಏಣಿಮುಗೇರು ಬಡಕಾಯದೇ ಎಂಬಲ್ಲಿ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ಗ್ರಾಮಸ್ಥರು ಬ್ಯಾನರ್ ಅಳವಡಿಸಿ ಚುನಾವಣಾ ಬಹಿಷ್ಕಾರ ಮಾಡಿದ್ದಾರೆ. 135 ಮತಗಟ್ಟೆಯಲ್ಲಿಈ ಬ್ಯಾನರ್ ಅಳವಡಿಸಲಾಗಿದೆ.

ಮತದಾನ ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ Read More »

ಏ.9 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಹಿಳಾ ಸಮಾವೇಶ : ಸುಲೋಚನಾ ಜಿ.ಕೆ.ಭಟ್

ಪುತ್ತೂರು: ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್‍ ತಿಳಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪ್ರಧಾನಿಯವರ ಯೋಜನೆ ಕುರಿತು ತಿಳಿಸಲು ಮನೆ ಮನೆ ಭೇಟಿ, ಪ್ರತೀ ಬೂತ್‍ಗಳಲ್ಲಿ ಮಹಿಳಾ ಸಭೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತ್ರಿವಳಿ ತಲಾಖ್,

ಏ.9 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಹಿಳಾ ಸಮಾವೇಶ : ಸುಲೋಚನಾ ಜಿ.ಕೆ.ಭಟ್ Read More »

ಅನಾರೋಗ್ಯದಿಂದ ವಿದ್ಯಾರ್ಥಿ ಆಕಾಶ್ ನಿಧನ

ಪುತ್ತೂರು: ಶಾಲಾ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ಕಡಬ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಮೃತಪಟ್ಟ ಬಾಲಕ ಆಕಾಶ್‍ ತಂದೆ ರಿಕ್ಷಾ ಚಾಲಕ ಅನಿಲ್ ಎಂಬವರು ಕೆಲಸ ಸಮಯಗಳ ಹಿಂದೆ ನಿಧನರಾಗಿದ್ದರು. ಬಳಿಕ ಆಕಾಶ್‍ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅನಾರೋಗ್ಯದಿಂದ ವಿದ್ಯಾರ್ಥಿ ಆಕಾಶ್ ನಿಧನ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಹಾಗೂ ಮೇದಿನಿ ಟೆಕ್ನಾಲಜೀಸ್ ನಡುವೆ ಒಡಂಬಡಿಕೆಗೆ ಸಹಿ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಬೆಂಗಳೂರು ಮೇದಿನೀ ಟೆಕ್ನಾಲಜೀಸ್ ಸಹಯೋಗದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನೈಪುಣ್ಯತೆಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಂಶೋಧನಾ ನಿರತರಿಗೆ ಹಾಗೂ ವೃತ್ತಿಪರರಿಗೆ ಅನುಕೂಲವಾಗುವ ರೀತಿಯಲ್ಲಿ ತಂತ್ರಜ್ಞಾನಗಳ ಬದಲಾವಣೆ, ನೂತನ ಸಾಫ್ಟ್‌ವೇರ್‌ಗಳ ಬಳಕೆಯ ಬಗ್ಗೆ ಮಾಹಿತಿ, ವೃತ್ತಿಪರರಿಗೆ ಹೊಸ ಸಾಫ್ಟ್‌ವೇರ್‌ಗಳ ಮೂಲಕ ಮಾಡೆಲ್‌ಗಳ ರಚನೆ, ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್‌ಗಳನ್ನು ಮಾಡುವುದಕ್ಕೆ ಸೂಕ್ತ ಮಾರ್ಗದರ್ಶನ ಇವೇ ಮುಂತಾದ ವಿಷಯಗಳ ಬಗ್ಗೆ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಹಾಗೂ ಮೇದಿನಿ ಟೆಕ್ನಾಲಜೀಸ್ ನಡುವೆ ಒಡಂಬಡಿಕೆಗೆ ಸಹಿ Read More »

ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ, ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ

ಪುತ್ತೂರು: ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಆಯ್ಕೆಯಾಗಿದ್ದಾರೆ. ಶನಿವಾರ ವಕೀಲರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ (ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಹಾಗೂ ಕೋಶಾಧಿಕಾರಿಯಾಗಿ ಮಹೇಶ್ ಕೆ. ಸವಣೂರು ಚುನಾಯಿತರಾಗಿದ್ದಾರೆ. ಚುನಾವಣೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆದು ಬಳಿಕ ಮತ ಎಣಿಕೆ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಜಗನ್ನಾಥ ರೈ ವಿಜೇತರಾಗಿದ್ದು, ಇನ್ನಿಬ್ಬರು ಸ್ಪರ್ಧಿಗಳು ಪರಾಭವಗೊಂಡಿದ್ದಾರೆ.

ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ, ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ Read More »

ಎ.ಆರ್.ವಾರಿಯರ್ಸ್‍ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆಗೆ ಗಡಿಪಾರು ಆದೇಶ

ಪುತ್ತೂರು: ಎ. ಆರ್ ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರಿಗೆ ಗಡಿಪಾರು ಆದೇಶ ಹೊರಡಿಸಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಆದೇಶಕ್ಕೆ ಶಿಪಾರಸ್ಸು ಮಾಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 55ರಂತೆ ಬಳ್ಳಾರಿಯ ಬ್ರೂಸ್ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಅವರನ್ನು ಗಡಿಪಾರು ಮಾಡಲು ಶಿಪಾರಸ್ಸು ಮಾಡಲಾಗಿದೆ. ರಾಜಕೀಯ ಪಕ್ಷವೊಂದರಲ್ಲಿ ಗುರುತಿಸಿಕೊಂಡಿರುವ ಪ್ರಜ್ವಲ್ ರೈ ವಿರುದ್ದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಾನೂನು ಉಲ್ಲಂಘನೆ ಮಾಡಿರುವ

ಎ.ಆರ್.ವಾರಿಯರ್ಸ್‍ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆಗೆ ಗಡಿಪಾರು ಆದೇಶ Read More »

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು – ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆಗೆ ಚಾಲನೆ

ಪುತ್ತೂರು: ಪ್ರಾಚೀನ ಕಾಲದ ಶಾಸನಗಳನ್ನು ಸಂರಕ್ಷಿಸುವ  ಹಾಗೂ ಅದನ್ನು ಬೆಳಕಿಗೆ ತರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ  ಹಮ್ಮಿಕೊಳ್ಳಲಾದ  ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆಗೆ ಶನಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯ ದೇವಸ್ಥಾನದ ಒಳಾಂಗಣದಲ್ಲಿ ಇರುವ 14ನೇ ಶತಮಾನದಲ್ಲಿ ವಿಜಯನಗರ ಅರಸರಿಂದ ಸ್ಥಾಪಿತ ಶಾಸನದ ಮುಂಭಾಗದಲ್ಲಿ ಮಾಹಿತಿ ಪತ್ರವನ್ನು ಅನಾವರಣಗೊಳಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು – ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆಗೆ ಚಾಲನೆ Read More »

error: Content is protected !!
Scroll to Top