ಪುತ್ತೂರು

ತೆಂಗಿನಕಾಯಿ ಗೆರಟೆಯಲ್ಲಿ ನೀರು ತುಂಬಿಸಿ ಮರದ ಕೊಂಬೆಗಳಿಗೆ ಕಟ್ಟಿ ಹಕ್ಕಿಗಳ ದಾಹ ತೀರಿಸುವ ವಿನೂತನ ಕಾರ್ಯ  | ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಿಂದ ಈ ವಿನೂತನ ಅಭಿಯಾನ

ಪುತ್ತೂರು: ಬೇಸಿಗೆಯ ಬೇಗೆಗೆ ದಣಿದ ಪಕ್ಷಿಗಳ ನೀರಡಿಕೆ ನೀಗಿಸುವ  ವಿನೂತನ ಕಾರ್ಯಕ್ಕೆ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಕೈ ಹಾಕಿದ್ದು, ತೆಂಗಿನಕಾಯಿಯ ಗೆರಟೆಯಲ್ಲಿ ನೀರು ತುಂಬಿಸಿ ಅದನ್ನು ಮರದ ಕೊಂಬೆಗಳಿಗೆ ಕಟ್ಟುವ ಮೂಲಕ ಹಕ್ಕಿಗಳ ದಾಹವನ್ನು ನೀಗಿಸುವ ವಿಶೇಷ ಅಭಿಯಾನ ಇದಾಗಿದೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿ ಮಾತನಾಡಿ, ಬಿಸಿಲ ಝಳ ಇಡೀ ಜೀವಸಂಕುಲವನ್ನೇ ಕಾಡುತ್ತಿದೆ. ಇಂತಹ ಅಭಿಯಾನವನ್ನು ಮಾಡುವ ಅವಶ್ಯಕತೆಯಿದ್ದು, ಇದು ಒಂದು ದಿನಕ್ಕೆ ಸೀಮಿತವಾಗಿರದೆ ಪ್ರತೀ […]

ತೆಂಗಿನಕಾಯಿ ಗೆರಟೆಯಲ್ಲಿ ನೀರು ತುಂಬಿಸಿ ಮರದ ಕೊಂಬೆಗಳಿಗೆ ಕಟ್ಟಿ ಹಕ್ಕಿಗಳ ದಾಹ ತೀರಿಸುವ ವಿನೂತನ ಕಾರ್ಯ  | ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಿಂದ ಈ ವಿನೂತನ ಅಭಿಯಾನ Read More »

ಏ.23-24 : ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ವತಿಯಿಂದ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿರುವ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ ಏ.23 ಹಾಗೂ 24 ರಂದು ನಡೆಯಲಿದ್ದು, ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಮೊದಲಿಗೆ ದೇವಸ್ಥಾನ ಗರ್ಭಗುಡಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು. ಬಳಿಕ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಏ.23-24 : ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಪುತ್ತೂರು: ಬಿಜೆಪಿ ಸ್ಥಾಪನಾ ದಿನವನ್ನು ಬಿಜೆಪಿ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ದ. ಕನ್ನಡ ಬಿಜೆಪಿ ಉಪಾಧ್ಯಕ್ಷ, ಪುತ್ತೂರು ಬಿಜೆಪಿ ಪ್ರಭಾರಿ ಸುನೀಲ್ ಆಳ್ವಾ ಈ ಸಂದರ್ಭದಲ್ಲಿ ಮಾತಾನಾಡಿ, ಜನಸಂಘದ ಹಿರಿಯರ ತ್ಯಾಗ ಬಲಿದಾನ ಮತ್ತು 1980ರ ನಂತರ ಬಿಜೆಪಿಯ ಏಳುಬೀಳುಗಳ ಬಗ್ಗೆ ಮಾಹಿತಿ ನೀಡಿದರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ಪ್ರಭಾರಿ ಸುಲೋಚನಾ ಜಿ. ಕೆ ಭಟ್, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನೀವಾಸ್ ರಾವ್, ಬಿಜೆಪಿ ಪ್ರಮುಖ್

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ Read More »

ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ  ಪತಿ ರಘು ಡಿ. ಹೃದಯಾಘಾತದಿಂದ ನಿಧನ

ಪುತ್ತೂರು: ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ ಅವರ ಪತಿ ರಘು ಡಿ. (45) ಹೃದಯಾಘಾತದಿಂದ ನಿಧನರಾಗಿದ್ದಾರೆ. ವರಲಕ್ಷ್ಮಿ ಅವರು ಮಂಡ್ಯ ಮೂಲದವರಾಗಿದ್ದು, ಅವರ ಪತಿ ರಘು ಅವರು ಮಂಡ್ಯದಲ್ಲಿ ಫೋಟೋಗ್ರಫಿ ಮಾಡುತ್ತಿದ್ದರು. ಶುಕ್ರವಾರ ಸಂಜೆ ಪುತ್ತೂರಿನ ಬನ್ನೂರಿನಲ್ಲಿರುವ ಮನೆಯಲ್ಲಿ ಎದೆನೋವು ಕಾಣಿಸಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆನ್ನಲಾಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ  ಪತಿ ರಘು ಡಿ. ಹೃದಯಾಘಾತದಿಂದ ನಿಧನ Read More »

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆ

ಪುತ್ತೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸಭೆ ಶುಕ್ರವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  ಪ್ರಾಮಾಣಿಕವಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಅಲ್ಲದೆ ಅಲ್ಪಸಂಖ್ಯಾತ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರರ ಮತವನ್ನು ಪಡೆದು ನಮ್ಮ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ಲಕ್ಷಾಂತರ ಮತಗಳ ಅಂತರದಲ್ಲಿ ಗೆಲ್ಲಿಸಿ ಎಂದು ಕರೆ ನೀಡಿದರು ಸಭೆಯಲ್ಲಿ ಪುತ್ತೂರು ಮಾಜಿ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆ Read More »

ಲೋಕಸಭಾ ಸಾರ್ವತ್ರಿಕ ಚುನಾವಣೆ | ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಜಾಗೃತಿ ಕಾರ್ಯಕ್ರಮ

ಪುತ್ತೂರು: ಹಿರಿಯ ನಾಗರಿಕರಿಗೆ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತಚಲಾಯಿಸುವ ವ್ಯವಸ್ಥೆಯನ್ನು ಈ ಬಾರಿಯೂ ಚುನಾವಣಾ ಆಯೋಗ ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಶೇ.40 ಕ್ಕಿಂತ ಹೆಚ್ಚಿನ ಅಂಗವೈಕಲ್ಯವಿರುವ ವಿಶೇಷ ಚೇತನರ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು ಮನೆಯಿಂದಲೇ ಮತಚಲಾಯಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಪುತ್ತೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಹೇಳಿದರು. ಅವರು ಶುಕ್ರವಾರ ಪುತ್ತೂರು ತಾ.ಪಂ. ಸಭಾಂಗಣದಲ್ಲಿ ದ.ಕ.ಜಿಲ್ಲಾ ಸ್ವೀಪ್‌ ಸಮಿತಿ, ತಾಲೂಕು ಸ್ವೀಪ್  ಸಮಿತಿ , ಪುತ್ತೂರು ತಾಲೂಕು ಪಂಚಾಯಿತಿ ಹಾಗೂ ವಿಕಲಚೇತನರ ಸೇವಾ ಕೇಂದ್ರದ

ಲೋಕಸಭಾ ಸಾರ್ವತ್ರಿಕ ಚುನಾವಣೆ | ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಜಾಗೃತಿ ಕಾರ್ಯಕ್ರಮ Read More »

ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ | ಸುರೇಶ್ ಭಟ್‍ ಕೊಜಂಬೆ

ಪುತ್ತೂರು: ಕೃಷಿಕರಿಗೆ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗುವುದು. ಕೋವಿಯನ್ನು ಮನೆಗೆ ತಂದುಕೊಡಬೇಕೆಂದು ನೋಟೀಸ್ ನೀಡುವ ಜತೆಗೆ ವ್ಯವಸ್ಥೆ ಮಾಡದಿದ್ದರೆ ನ್ಯಾಯಾಂಗ ನಿಧನೆ ಪ್ರಕರಣ ದಾಖಲಿಸಲಾಗುವುದು. ಕೋವಿ ಠೇವಣಿಯ ಸಂದರ್ಭದಲ್ಲಿ ಆಗಿರುವ ನಷ್ಟವನ್ನು ಅಧಿಕಾರಿಗಳ ಕೈಯಿಂದ ವಸೂಲಿಗೂ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ರೈತ ಸಂಘದ ಉಪಾಧ್ಯಕ್ಷ ಸುರೇಶ್ ಭಟ್ ಕೊಜಂಬೆ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಕೋವಿ ಠೇವಣಾತಿಯ ವಿಚಾರದಲ್ಲಿ ಭಾರತೀಯ ಚುನಾವಣಾ ಆಯೋಗ

ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ | ಸುರೇಶ್ ಭಟ್‍ ಕೊಜಂಬೆ Read More »

ಏ.10-17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಹೊರೆಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೊತ್ಸವದ ಅಂಗವಾಗಿ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯನ್ನು ದೇವಸ್ಥಾನದ ಎದುರಿನ ಗದ್ದೆಯಲ್ಲಿ ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ದೀಪ ಬೆಳಗಿಸುವ ಮೂಲಕ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ಸುದೇಶ್ ಶೆಟ್ಟಿ ಶಾಂತಿನಗರ, ಪಂಜಿಗುಡ್ಡೆ ಈಶ್ವರ ಭಟ್, ದಿನೇಶ್ ಪಿ ವಿ, ಸುಭಾಸ್ ರೈ ಬೆಳ್ಳಿಪ್ಪಾಡಿ, ಉಮೇಶ್ ಆಚಾರ್ಯ ಕರ್ಮಲ, ಗಣೇಶ್ ಶೆಟ್ಟಿ

ಏ.10-17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಹೊರೆಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ Read More »

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆ | ನಾಳೆ (ಏ.6) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯೋಜನೆಗೆ ಚಾಲನೆ

ಪುತ್ತೂರು: ಪ್ರಾಚೀನ ಕಾಲದ ಶಾಸನಗಳನ್ನು ಸಂರಕ್ಷಿಸುವ  ಹಾಗೂ ಅದನ್ನು ಬೆಳಕಿಗೆ ತರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ‘ಶಾಸನ ಶೋಧನ-ಅಧ್ಯಯನ ಸಂರಕ್ಷಣಾ ಯೋಜನೆ ಏ.6 ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆಗೊಳ್ಳಲಿದೆ. ಪ್ರಾಚೀನ  ಕಾಲದಲ್ಲಿ ನಡೆದು ಹೋದ ಘಟನೆಗಳನ್ನು ದಾಖಲೀಕರಣ ಮಾಡುವ ನಿಟ್ಟಿನಲ್ಲಿ ವಿವಿಧ ಪರಿಕರಗಳ ಮೇಲೆ ಬರೆಯಲಾದ ಅಮೂಲ್ಯ ಬರಹಗಳ  ಶೋಧನೆ, ಅಧ್ಯಯನ ಮಾಡಿ ಅದನ್ನು ಪ್ರಕಾಶನ ಮಾಡುವ ನಿಟ್ಟಿನಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ  ಹಮ್ಮಿಕೊಳ್ಳಲಾದ  ವಿನೂತನ

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆ | ನಾಳೆ (ಏ.6) ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯೋಜನೆಗೆ ಚಾಲನೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮ

ಪುತ್ತೂರು: ತಂತ್ರಜ್ಞಾನವು ಅಪರಿಮಿತ ವೇಗದಲ್ಲಿ ಬದಲಾವಣೆಯಾಗುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿ ಅಗಾಧವಾದ ಬದಲಾವಣೆಗಳಾಗುತ್ತಿದೆ. ಹೊಸ ಪಠ್ಯಕ್ರಮದ ಮೂಲಕ ನೂತನ ತಂತ್ರಜ್ಞಾನಗಳು ನಮ್ಮನ್ನು ತಲಪುವುದಕ್ಕೆ ಸಮಯಾವಕಾಶ ಬೇಕಾಗುತ್ತದೆ. ಇದನ್ನು ತಪ್ಪಿಸುವುದಕ್ಕಾಗಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮಗಳನ್ನು ಮಾಡುವುದು ಆವಶ್ಯಕ ಎಂದು ಬೆಂಗಳೂರಿನ ಮೇದಿನಿ ಟೆಕ್ನಾಲಜೀಸ್ ಸಂಸ್ಥೆಯ ಡಿಸೈನ್ ಇಂಜಿನಿಯರ್ ಮೋಹನ್ ಪ್ರಭು ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ, ಬೆಂಗಳೂರಿನ ಮೇದಿನೀ ಟೆಕ್ನಾಲಜೀಸ್, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮ Read More »

error: Content is protected !!
Scroll to Top