ಪುತ್ತೂರು

ಪುತ್ತೂರಿನಲ್ಲಿ ನಿರ್ಗತಿಕರ ಪುನರ್ವಸತಿ ಕಾರ್ಯಾಚರಣೆ | ರೋಟರಿ ಯುವದಲ್ಲಿ ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ 12 ನಿರ್ಗತಿಕರ ರಕ್ಷಣೆ

ಪುತ್ತೂರು: ಪುತ್ತೂರು ನಗರದ  ಹಲವು ಭಾಗಗಳಲ್ಲಿ ನಿರ್ಗತಿಕರು, ಅನಾಥ ವೃದ್ಧರು ವಾಸವಾಗಿದ್ದು ಇವರಿಗೆ ಒಂದು ಶಾಶ್ವತವಾದ ಸೂರನ್ನು ಕಲ್ಪಿಸುವ ನಿಟ್ಟಿನಲ್ಲಿ ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ  ರೋಟರಿ ಕ್ಲಬ್ ಪುತ್ತೂರು ಯುವ ಸಹಭಾಗಿತ್ವದಲ್ಲಿ ನಿರ್ಗತಿಕರ ನಿರ್ಮೂಲನ  ಕಾರ್ಯಾಚರಣೆ ನಡೆಯಿತು. ರಾತ್ರಿ 8 ಗಂಟೆಗೆ ಪ್ರಾರಂಭವಾದ ಕಾರ್ಯಚರಣೆಯು ತಡರಾತ್ರಿ 2 ಗಂಟೆ ತನಕ ನಡೆಯಿತು.  ಒಟ್ಟು 12 ಮಂದಿ  ನಿರ್ಗತಿಕ ಅನಾಥ ವೃದ್ಧರನ್ನು ರಕ್ಷಣೆ ಮಾಡಲಾಯಿತು.ಅವರನ್ನು  ಜಿಡೆಕಲ್ಲು ಸಮೀಪ ಇರುವ […]

ಪುತ್ತೂರಿನಲ್ಲಿ ನಿರ್ಗತಿಕರ ಪುನರ್ವಸತಿ ಕಾರ್ಯಾಚರಣೆ | ರೋಟರಿ ಯುವದಲ್ಲಿ ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ 12 ನಿರ್ಗತಿಕರ ರಕ್ಷಣೆ Read More »

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಮಿತಿ ರಚನೆ | ಗೌರವಾಧ್ಯಕ್ಷರಾಗಿ ಎ.ವಿ. ನಾರಾಯಣ, ಅಧ್ಯಕ್ಷರಾಗಿ ಗೋಪಾಲಕೃಷ್ಣ ಪಟೇಲ್‍ ಚಾರ್ವಾಕ, ಪ್ರಧಾನ ಕಾರ್ಯದರ್ಶಿಯಾಗಿ ಹೂವಪ್ಪ ಗೌಡ ಪರ್ಪುಂಜ, ಜತೆ ಕಾರ್ಯದರ್ಶಿಗಳಾಗಿ ಪೂವಪ್ಪ ಗೌಡ ಸೂರ್ಯ, ವೇದಾವತಿ ಕೊಯಿಲ, ಕೋಶಾಧಿಕಾರಿಯಾಗಿ ಕಲಾವತಿ ಎಸ್‍. ಗೌಡ ಪಟ್ಲಡ್ಕ

ಕಾಣಿಯೂರು: ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ 10 ವರ್ಷಗಳನ್ನು ಪೂರೈಸಿದ್ದು, ಟ್ರಸ್ಟ್ ನ ದಶಮಾನೋತ್ಸವ ಕಾರ್ಯಕ್ರಮ ಆಯೋಜಿಸುವ ಕುರಿತು ದಶಮಾನೋತ್ಸವ ಸಮಿತಿಯನ್ನು ಟ್ರಸ್ಟ್ ನ ಸ್ವಂತ ಕಟ್ಟಡದಲ್ಲಿ ರಚಿಸಲಾಯಿತು. ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ. ವಿ. ಮನೋಹರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು. ದಶಮಾನೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಎ. ವಿ. ನಾರಾಯಣ, ಅಧ್ಯಕ್ಷರಾಗಿ ಗೋಪಾಲಕೃಷ್ಣ ಪಟೇಲ್ ಚಾರ್ವಾಕ, ಪ್ರಧಾನ ಕಾರ್ಯದರ್ಶಿಯಾಗಿ ಹೂವಪ್ಪ ಗೌಡ ಪರ್ಪುಂಜ, ಜತೆ ಕಾರ್ಯದರ್ಶಿಗಳಾಗಿ ಪೂವಪ್ಪ ಗೌಡ ಸೂರ್ಯ,

ಪುತ್ತೂರು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಮಿತಿ ರಚನೆ | ಗೌರವಾಧ್ಯಕ್ಷರಾಗಿ ಎ.ವಿ. ನಾರಾಯಣ, ಅಧ್ಯಕ್ಷರಾಗಿ ಗೋಪಾಲಕೃಷ್ಣ ಪಟೇಲ್‍ ಚಾರ್ವಾಕ, ಪ್ರಧಾನ ಕಾರ್ಯದರ್ಶಿಯಾಗಿ ಹೂವಪ್ಪ ಗೌಡ ಪರ್ಪುಂಜ, ಜತೆ ಕಾರ್ಯದರ್ಶಿಗಳಾಗಿ ಪೂವಪ್ಪ ಗೌಡ ಸೂರ್ಯ, ವೇದಾವತಿ ಕೊಯಿಲ, ಕೋಶಾಧಿಕಾರಿಯಾಗಿ ಕಲಾವತಿ ಎಸ್‍. ಗೌಡ ಪಟ್ಲಡ್ಕ Read More »

ಪ್ರೊ.ಶ್ರೀಕಾಂತ್ ರಾವ್ ಎಸ್‍.ಕೆ. ಅವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್.ಎಸ್.ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಕಂಪ್ಯೂಟರ್ ಎಯ್ಡೆಡ್ ಡಯಾಗ್ನೋಸಿಸ್ ಆಫ್ ಏಟ್ರಿಯಲ್ ಫೈಬ್ರಿಲ್ಲೇಶನ್ ಯೂಸಿಂಗ್ ಮೆಷಿನ್ ಲರ್ನಿಂಗ್ ಎಪ್ರೋಚ್ ಎಂಬ ವಿಷಯದ ಬಗ್ಗೆ ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಅಸೋಸಿಯೇಟ್ ಪ್ರೊಫೆಸರ್ ಡಾ.ರೋಶನ್ ಜಾಯ್ ಮಾರ್ಟಿಸ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿದ್ದಾರೆ. ಅವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್

ಪ್ರೊ.ಶ್ರೀಕಾಂತ್ ರಾವ್ ಎಸ್‍.ಕೆ. ಅವರಿಗೆ ಡಾಕ್ಟರೇಟ್ ಪದವಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರ, ಲಲಿತ ಕಲಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸ್ಪಂದನ ಸಭಾಭವನದಲ್ಲಿ  ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು ರಂಗಗೀತೆ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲ  ಡಾ.ವಿಜಯಕುಮಾರ್ ಎಂ. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ರಂಗಭೂಮಿ  ವಿಕಾಸ,ರಂಗ ಭೂಮಿಯ  ಪ್ರಕಾರಗಳು ಮತ್ತು ರೂಪಗಳು, ರಂಗ ಭೂಮಿಯ ಯಶಸ್ಸಿನಲ್ಲಿ ನಾಟಕಕಾರರು, ನಿರ್ದೇಶಕರು, ನಟರು ಮತ್ತು ವಿನ್ಯಾಸಕರ ಪಾತ್ರ,  ರಂಗಭೂಮಿ ಸಂಸ್ಕೃತಿಯು ತೋರಿಸುವ ಜೀವನ ಮೌಲ್ಯಗಳು, ಸಾಮಾಜಿಕ ಸಮಸ್ಯೆಗಳು,

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ Read More »

ನವೋದಯ ಪ್ರವೇಶ ಪರೀಕ್ಷೆ: ವಿದ್ಯಾಮಾತಾ ಅಕಾಡೆಮಿಯ ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ ಸ್ಥಾನ

ಪುತ್ತೂರು : ದಕ್ಷಿಣ ಕನ್ನಡದ ಪ್ರತಿಷ್ಟಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಜವಾಹರ್ ನವೋದಯ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದ ಸುಳ್ಯ ವಲಯ ಅರಣ್ಯಾಧಿಕಾರಿ ಎನ್ ಮಂಜುನಾಥ್ ರವರ ಪುತ್ರ ತನ್ಮಯ್ ಪಿ.ಎಂ. ಅವರು ಅತ್ಯುನ್ನತ ಶ್ರೇಣಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ. ತನ್ಮಯ್ ಕಳೆದ ವಾರವಾಷ್ಟೇ ಪ್ರಕಟವಾಗಿದ್ದ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲೇ ತರಬೇತಿ ಪಡೆದು ಉತ್ತೀರ್ಣರಾಗಿದ್ದು ಗಮನಾರ್ಹ ಅಂಶವಾಗಿದೆ. ಅತೀ ಕಡಿಮೆ

ನವೋದಯ ಪ್ರವೇಶ ಪರೀಕ್ಷೆ: ವಿದ್ಯಾಮಾತಾ ಅಕಾಡೆಮಿಯ ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ ಸ್ಥಾನ Read More »

ಹಿಂದೂ ಕಾರ್ಯಕರ್ತರ ಮೇಲಿನ ಗೂಂಡಾ ಕಾಯ್ದೆ ಪ್ರಕರಣ, ಗಡಿಪಾರು ಆದೇಶ | ಪ್ರಕ್ರಿಯೆ ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ : ಮುರಳೀಕೃಷ್ಣ ಹಸಂತಡ್ಕ

ಪುತ್ತೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭ ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು, ಕಳೆದ 2-3 ತಿಂಗಳಿನಿಂದ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ಸಹಿತ ಗಡಿಪಾರು ಮಾಡುವ ಕಾರ್ಯಕ್ಕೆ ಕೈ ಹಾಕುತ್ತಿದ್ದು, ಈ ಪ್ರಕ್ರಿಯೆಯನ್ನು ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ ಎಂದು ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ

ಹಿಂದೂ ಕಾರ್ಯಕರ್ತರ ಮೇಲಿನ ಗೂಂಡಾ ಕಾಯ್ದೆ ಪ್ರಕರಣ, ಗಡಿಪಾರು ಆದೇಶ | ಪ್ರಕ್ರಿಯೆ ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ : ಮುರಳೀಕೃಷ್ಣ ಹಸಂತಡ್ಕ Read More »

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೆದಿಲದ ಜಾನಕಿಯವರಿಗೆ ಮಾಸಾಸನದ ಮಂಜೂರಾತಿ ಪತ್ರ ಹಸ್ತಾಂತರ

ಕೆದಿಲ: ಬಡತನದಲ್ಲಿರುವ ಕೆದಿಲ ಗ್ರಾಮದ ವಳಂಗಜೆ ಜಾನಕಿಯವರಿಗೆ ಮಾಸಾಸನದ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಮಾಸಾಸನದ ಕುರಿತು ಪೆರ್ನೆ ಕೆದಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಜಗದೀಶ, ಗಿರೀಶ, ಶೀನಪ್ಪ ಅವರು ಪೆರ್ನೆ ವಲಯ ಮೇಲ್ವಿಚಾರಕಿ ಶಾರದ ಅವರ ಗಮನಕ್ಕೆ ತಂದಿದ್ದರು. ಇದೀಗ ಮಂಜೂರಾತಿ ಪತ್ರ ನೀಡಲಾಗಿದೆ. 75 ವರ್ಷದ ಪ್ರಾಯದ ಜಾನಕಿ ಅವರು ಒಂದು ಹೊತ್ತಿನ ಅನ್ನಕ್ಕೂ ಕಷ್ಟ ಪಡುತ್ತಿದ್ದು, ಗಂಡ ಹಾಗೂ ಐದು ಗಂಡು ಮಕ್ಕಳನ್ನು ಕಳಕೊಂಡಿದ್ದಾರೆ. ವಲಯ ಮೇಲ್ವಿಚಾರಕಿ ಶಾರದಾ ಮತ್ತು ಜ್ಞಾನವಿಕಾಸ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೆದಿಲದ ಜಾನಕಿಯವರಿಗೆ ಮಾಸಾಸನದ ಮಂಜೂರಾತಿ ಪತ್ರ ಹಸ್ತಾಂತರ Read More »

ಕಂಟೈನರ್-ಖಾಸಗಿ ಬಸ್ ಡಿಕ್ಕಿ | 20 ಮಂದಿಗೆ ಗಾಯ

ನೆಲ್ಯಾಡಿ: ಕಂಟೈನರ್ ಹಾಗೂ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪ ಇಂದು ನಡೆದಿದೆ. ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಫತ್ರೆಗೆ ದಾಖಲಿಸಲಾಗಿದೆ ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿ ಗಾಯಗೊಂಡು ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಕಂಟೈನರ್-ಖಾಸಗಿ ಬಸ್ ಡಿಕ್ಕಿ | 20 ಮಂದಿಗೆ ಗಾಯ Read More »

ಬಜರಂಗದಳ ಮುಖಂಡ ಭರತ್ ಕುಮಾರ್ ಕುಮ್ಡೇಲು ಗಡಿಪಾರಿಗೆ ನೋಟೀಸ್ | ವಿಹಿಂಪ ಖಂಡನೆ

ಪುತ್ತೂರು: ಜಿಲ್ಲಾ ಬಜರಂಗದಳ ಸಂಚಾಲಕ ಭರತ್ ಕುಮ್ಡೇಲು ಅವರನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿರುವುದನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೂ ಕಾರ್ಯಕರ್ತರನ್ನು ಗುರಿಮಾಡಿ ಗಡಿಪಾರು ಮಾಡುತ್ತಿದೆ. ಗಡಿಪಾರು ಆದೇಶದ ಕುರಿತು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಜರಂಗದಳ ಮುಖಂಡ ಭರತ್ ಕುಮಾರ್ ಕುಮ್ಡೇಲು ಗಡಿಪಾರಿಗೆ ನೋಟೀಸ್ | ವಿಹಿಂಪ ಖಂಡನೆ Read More »

ಏ.9 ರಂದು ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ

ಪುತ್ತೂರು: ಮಹಿಳಾ ಮೋರ್ಚದ ವತಿಯಿಂದ ಏ.9 ರಂದು ಪುತ್ತೂರಿನಲ್ಲಿ ನಡೆಯುವ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆ ಬಿಜೆಪಿ ಕಛೇರಿಯಲ್ಲಿ ಇಂದು ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನಾ ಜಿ.ಕೆ. ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲಾ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಕೊಡುವ ಜತೆಗೆ ಮಹಿಳಾ ಸಮಾವೇಶ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ,

ಏ.9 ರಂದು ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ Read More »

error: Content is protected !!
Scroll to Top