ಪುತ್ತೂರು

ಮಾಯ್‍ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ (ಗುಡ್ ಫ್ರೈಡೇ) ದಿನವನ್ನು ಆಚರಿಸಲಾಯಿತು. ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕಷ್ಟ ಮರಣದ ಕಥಾಪ್ರಸಂಗವನ್ನು ವಂದನೀಯ ಲೋಹಿತ್ ಅಜಯ್ ಮಸ್ಕರೇನಸ್ , ವಂದನೀಯ ಸ್ಟ್ಯಾನಿ ಪಿಂಟೋ, ವಂದನೀಯ ಅಶೋಕ್ ರಾಯನ್ ಕ್ರಾಸ್ತಾ ರವರು ರಾಗಭರಿತವಾಗಿ ಓದಿದರು. ವಂದನೀಯ ರೂಪೇಶ್ ತೌರೋ ರವರು ತಮ್ಮ ಪ್ರವಚನದಲ್ಲಿ ಶಿಲುಬೆಯ ಮಹತ್ವವನ್ನು ತಿಳಿಸುತ್ತಾ ಯೇಸುವಿನ ಶಿಲುಬೆಯೆ ನಮ್ಮ ಹಾದಿ ಮತ್ತು ನಮ್ಮ ಜೀವನ. ದೇವರು […]

ಮಾಯ್‍ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ Read More »

ಏ.8 ರಿಂದ ದಿ ಪುತ್ತೂರು ಕ್ಲಬ್ ಈಜು ತರಬೇತಿ ಶಿಬಿರ

ಪುತ್ತೂರು: ಬೇಸಿಗೆ ಶಿಬಿರದ ಅಂಗವಾಗಿ ಮರೀಲ್  ದಿ ಪುತ್ತೂರು  ಕ್ಲಬ್ ನಲ್ಲಿ ಮಕ್ಕಳಿಗೆ ಮತ್ತು ಸ್ತ್ರೀಯರಿಗೆ ನುರಿತ ತರಬೇತುದಾರರಿಂದ ಈಜು ಶಿಬಿರ  ಏ.8 ರಿಂದ 24 ರ ತನಕ ನಡೆಯಲಿದೆ.  ಸ್ತ್ರೀಯರಿಗೆ ಸ್ತ್ರೀಯರೇ ಈಜು ತರಬೇತಿ ನೀಡಲಿದ್ದು, ಬೆಳಿಗ್ಗೆ 10 ರಿಂದ 10.45, ಸಂಜೆ 6 ರಿಂದ 6.45 ,7 ರಿಂದ 7.45  ಮತ್ತು 8 ರಿಂದ 8.45 ರ ಬ್ಯಾಚ್ ಗಳಲ್ಲಿ ಈಜು ತರಬೇತಿ ನೀಡಲಾಗುತ್ತದೆ. ಇತರ ಸಮಯದಲ್ಲೂ 8 ಮಂದಿಯ ಪ್ರತ್ಯೇಕ ಬ್ಯಾಚ್ ಮಾಡಿ

ಏ.8 ರಿಂದ ದಿ ಪುತ್ತೂರು ಕ್ಲಬ್ ಈಜು ತರಬೇತಿ ಶಿಬಿರ Read More »

ಏ.2 : ಬಿಜೆಪಿ ಕಾರ್ಯಕರ್ತರ ಸಮಾವೇಶ | ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕಾರ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿದೆ : ಪತ್ರಿಕಾಗೋಷ್ಠಿಯಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ

ಪುತ್ತೂರು: ಲೋಕಸಭಾ ಚುನಾವಣೆ ಅಂಗವಾಗಿ ಪುತ್ತೂರು ಬಿಜೆಪಿ ವತಿಯಿಂದ ಕಾರ್ಯಕರ್ತರ ಸಮಾವೇಶ ಏ.2ರಂದು ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ ಮೈಸೂರು ಸಂಸದ ಪ್ರತಾಪ್

ಏ.2 : ಬಿಜೆಪಿ ಕಾರ್ಯಕರ್ತರ ಸಮಾವೇಶ | ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕಾರ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿದೆ : ಪತ್ರಿಕಾಗೋಷ್ಠಿಯಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ Read More »

ಆನ್ಲೈನ್ ಮೂಲಕ ವೈದ್ಯರಿಗೆ ಲಕ್ಷಾಂತರ ರೂ. ವಂಚನೆ | ದೂರು ದಾಖಲು

ಪುತ್ತೂರು: ಆನ್ಲೈನ್ ಮೂಲಕ ವೈದ್ಯರೊಬ್ಬರಿಗೆ ಕರೆ ಮಾಡಿ ಲಕ್ಷಾಂತರ ರೂ. ದೋಚಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೊಳ್ವಾರು ನಿವಾಸಿ ಡಾ.ಚಿದಂಬರ ಅಡಿಗ ವಂಚನೆಗೊಳಗಾದವರು. ಈ ಕುರಿತು ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಮಾ.28 ರಂದು ಅಡಿಗ ಅವರಿಗೆ ದೂರವಾಣಿ ಮೂಲಕ ಫೋನ್ ಕರೆ ಬಂದಿದ್ದು, ಫೋನ್ ಸ್ವೀಕರಿಸಿ ಮಾತನಾಡಿದಾಗ, ನಾನು ದೆಹಲಿಯಿಂದ ಪೊಲೀಸ್ ಮಾತನಾಡುತ್ತಿರುವುದು. ನಿಮ್ಮ ಮೇಲೆ ಅಕ್ರಮ ಮಾದಕ ವಸ್ತು ಸಹಿತ ಹಣ ಹೊಂದಿರುವ ಕುರಿತು ಪ್ರಕರಣ ದಾಖಲಾಗಿದೆ. ಅರೆಸ್ಟ್ ಮಾಡಲು ಕೋರ್ಟ್‍

ಆನ್ಲೈನ್ ಮೂಲಕ ವೈದ್ಯರಿಗೆ ಲಕ್ಷಾಂತರ ರೂ. ವಂಚನೆ | ದೂರು ದಾಖಲು Read More »

ಏ.2 : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ಏ.2 ಮಂಗಳವಾರ ಬೈಪಾಸ್ ರಸ್ತೆಯ ಸ್ವಾಮಿ ಕಲಾ ಮಂದಿರದಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಸಂಸದ ನಳೀನ್‍ ಕುಮಾರ್ ಕಟೀಲ್‍ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆ ತಿಳಿಸಿದೆ.

ಏ.2 : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ Read More »

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ

ಪುತ್ತೂರು: ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಮಾ.24 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ  ಪ್ರಾರಂಭವಾಗುತ್ತದೆ. ಮಾ.29 ರಂದು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು ಬರುವ ಪವಿತ್ರ ಗುರುವಾರವನ್ನು ಆಚರಿಸುತ್ತಾರೆ. ಯೇಸು ಕ್ರಿಸ್ತನು ತನ್ನ ಶಿಷ್ಯರೊಂದಿಗೆ ಕೊನೆಯ ಭೋಜನವನ್ನು ಮಾಡಿದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಯೇಸು ತನ್ನ ಶಿಷ್ಯರೊಂದಿಗೆ ಊಟ ಮಾಡಿದ ಕೊನೆಯ ಭೋಜನವನ್ನು ಈ ದಿನವು ಗುರುತಿಸುತ್ತದೆ. ನಾವೆಲ್ಲರೂ ಸಮಾನರು ಎಂಬುದರ ಸಂಕೇತವಾಗಿ ನಾವು ವಿನಮ್ರರಾಗಿರಬೇಕು ಮತ್ತು ಪರಸ್ಪರರ

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ Read More »

ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಜಾಹೀರಾತಿನಲ್ಲಿ ಪ್ರಾಧ್ಯಾಪಕ ದೀಕ್ಷಿತ್ ಕುಮಾರ್

ಪುತ್ತೂರು: ಪ್ರತಿಷ್ಠಿತ ಇನ್ಫೋಸಿಸ್ ಸಂಸ್ಥೆಯು ಪ್ರಾಯೋಜಿಸಿರುವ ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ವಿಭಾಗ ಇತ್ತೀಚಿಗೆ ತಮ್ಮ ಸಾಮಾಜಿಕ ಜಾಲತಾಣಗಳ ಮುಖಾಂತರ ಬಿಡುಗಡೆಗೊಳಿಸಿರುವ ಜಾಹೀರಾತಿನಲ್ಲಿ ಪುತ್ತೂರಿನ ಬನ್ನೂರು ನಿವಾಸಿಯಾಗಿರುವ ಪ್ರಸ್ತುತ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ದೀಕ್ಷಿತ್ ಕುಮಾರ್ ರವರು ಕಾಣಿಸಿಕೊಂಡಿದ್ದಾರೆ. ಇನ್ಫೋಸಿಸ್ ಸಂಸ್ಥೆಯಿಂದ ಕೊಡ ಮಾಡುವ ಉಚಿತ ಕಲಿಕಾ ವೇದಿಕೆಯಾದ ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ದೇಶಾದ್ಯಂತ ಈ ವೇದಿಕೆಗೆ ಕೊಡುಗೆ ನೀಡಿದ ನಾಲ್ಕು ಜನರನ್ನು ಆಯ್ಕೆ ಮಾಡಿ ತನ್ನ

ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಜಾಹೀರಾತಿನಲ್ಲಿ ಪ್ರಾಧ್ಯಾಪಕ ದೀಕ್ಷಿತ್ ಕುಮಾರ್ Read More »

ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಪುತ್ತೂರು: ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ ಕೆಲಸಗಳ ಪ್ರಗತಿಯ ವಿವರಣೆಯನ್ನು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಅವಲೋಕಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಚುನಾವಣೆಯ ಪ್ರಭಾರಿ ಸುಲೋಚನ

ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆ Read More »

ಪುತ್ತೂರಿನಲ್ಲಿ ಶ್ರೀ ಭಗವತೀ ಸಹಕಾರ ಬ್ಯಾಂಕ್ ನ 8ನೇ ಶಾಖೆ ಶುಭಾರಂಭ

ಪುತ್ತೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ 45 ವರ್ಷಗಳ ಇತಿಹಾಸವಿರುವ, ಮಂಗಳೂರಿನ ಮೊರ್ಗನ್ಸ್ ಗೇಟ್ ಜಪ್ಪುನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್ 8ನೇ ಶಾಖೆ ಮಾ.28 ಗುರುವಾರ ಏಳ್ಮುಡಿ ಮಹಾದೇವಿ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು. ಮುಖ್ಯ ಅತಿಥಿಯಾಗಿದ್ದ ನ್ಯಾಯವಾದಿ ಪಿ .ಕೆ ಸತೀಶನ್ ಮಾತನಾಡಿ, ಸಹಕಾರ ಸಂಘಗಳಿಗೂ ಸಹಕಾರ ಬ್ಯಾಂಕ್ ಗಳಿಗೂ ವ್ಯತ್ಯಾಸಗಳಿವೆ. ನಗರ ಸಹಕಾರಿ ಬ್ಯಾಂಕ್ ಗಳು ಆರ್ ಬಿ ಐ ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಜನರಿಗೆ ಬ್ಯಾಂಕ್ನಿಂದ ಯಾವುದೇ ಸಮಸ್ಯೆ ಉಂಟಾಗಲು

ಪುತ್ತೂರಿನಲ್ಲಿ ಶ್ರೀ ಭಗವತೀ ಸಹಕಾರ ಬ್ಯಾಂಕ್ ನ 8ನೇ ಶಾಖೆ ಶುಭಾರಂಭ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಳ ಗ್ರಾಮದ ಕರ್ಗಲ್ಲು ಎಂಬಲ್ಲಿ ಇಂದು ನಡೆದಿದೆ. ವಿಟ್ಲ ಕರ್ಗಲ್ಲು ನಿವಾಸಿ ವೆಂಕಪ್ಪ ಎಂಬವರ ಪುತ್ರ ಮಿಥುನ್ (34) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ,.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top