ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ಕೆದಂಬಾಡಿ ಎನ್‌ ಎಸ್‌ ಕಿಲ್ಲೆ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಯಕ್ಷ ಸಂವಾದ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕೆದಂಬಾಡಿ ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಷ್‌ ರೈ ಕಾರ್ಯಕ್ರಮ ಉದ್ಘಾಟಿಸಿ, ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರವು ಭಾರತೀಯ ಮಹಾ ಕಾವ್ಯ ಹಾಗೂ  ಕಲಾ ಶ್ರೀಮಂತಿಕೆಯನ್ನು ಯಕ್ಷಪ್ರೇಮಿಗಳಿಗೆ ಯಕ್ಷಸಂವಾದ ಸರಣಿ ಕಾರ್ಯಕ್ರಮಗಳ ಮೂಲಕ ಉಣಬಡಿಸುತ್ತಿದೆ.  ಯಕ್ಷ ಕಲಾ ಕೇಂದ್ರದ ವತಿಯಿಂದ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳು ಮೂಡಿಬರಲಿ. ಕೇಂದ್ರವು ಆಯೋಜಿಸುವ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ Read More »

ನದಿ ನೀರಿನಲ್ಲಿ ಮುಳುಗಿ ಮೃತ್ಯು !

ಉಪ್ಪಿನಂಗಡಿ: ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಸವಣೂರು ಅಂಕತ್ತಡ್ಕ ನಿವಾಸ ಮಂಜುನಾಥ್‍ (35) ಮೃತಪಟ್ಟವರು. ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ನೀರು ತುಂಬಿಕೊಂಡಿದ್ದು, ಆಳ ತಿಳಿಯದೇ ನೀರಿಗೆ ಇಳಿದಿದ್ದು ಮುಳುಗಿದರು. ಬೊಬ್ಬೆ ಹಾಕಿದಾಗ ಅಕ್ಕಪಕ್ಕದಲ್ಲಿದ್ದವರು ಓಡಿ ಬಂದು ಅವರನ್ನು ನೀರಿನಿಂದ ಮೇಲಕ್ಕೆತ್ತಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ನದಿ ನೀರಿನಲ್ಲಿ ಮುಳುಗಿ ಮೃತ್ಯು ! Read More »

ಧರ್ಮದ ಅರಿವು ಮನೆಯಿಂದಲೇ ಆಗಬೇಕು : ಡಾ.ಈಶ್ವರಚಂದ್ರ ಜೋಯಿಸ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ

ಪುತ್ತೂರು : ಧಾರ್ಮಿಕ ಉಪನ್ಯಾಸ ನೀಡಿ, ಹಿರಿಯರ ತ್ಯಾಗದ ಫಲವಾಗಿ ದೇಶ ಇಂದು ಪ್ರಜ್ವಲಿಸುತ್ತಿದೆ. ಧರ್ಮದ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಧರ್ಮದ ಅರಿವು ಮನೆಯಿಂದಲೇ ಆಗಬೇಕು ಎಂದು ಡಾ.ಈಶ್ವರಚಂದ್ರ ಜೋಯಿಸ ಹೇಳಿದರು. ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಲಿಯುಗದಲ್ಲಿ ಭಜನೆಗೆ ಅಪಾರ ಶಕ್ತಿಯಿದೆ. ಭಜನೆಯಿಂದ ಭಗವಂತನ ಅನುಸಂಧಾನದ ಜತೆಗೆ ಸಮಾಜದ ಜಾಗೃತಿ

ಧರ್ಮದ ಅರಿವು ಮನೆಯಿಂದಲೇ ಆಗಬೇಕು : ಡಾ.ಈಶ್ವರಚಂದ್ರ ಜೋಯಿಸ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ Read More »

30 ವರ್ಷಗಳ ರಾಜಕೀಯ ಜೀವನದಲ್ಲಿ ಹಲವು ಜವಾಬ್ದಾರಿಗಳ ಯೋಗ ಸಿಕ್ಕಿದೆ  | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಭಾನುವಾರ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಅವರು ಮಾಧ್ಯಮದವರ ಜೊತೆ ಮಾತನಾಡಿ, ಚುನಾವಣಾ ರಾಜಕೀಯ ಜೀವನದಿಂದ ದೂರ ಸರಿಸಯುವೆ. ಆದರೆ ರಾಜಕೀಯದಿಂದಲ್ಲ ಎಂದ ಅವರು, 30 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಜವಬ್ದಾರಿಗಳನ್ನು ನಿರ್ವಹಿಸುವ ಯೋಗ ಸಿಕ್ಕಿದೆ. ಮೊದಲಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವುದಷ್ಟೇ ನಮ್ಮ ಗುರಿ. ಪರಿವಾರ

30 ವರ್ಷಗಳ ರಾಜಕೀಯ ಜೀವನದಲ್ಲಿ ಹಲವು ಜವಾಬ್ದಾರಿಗಳ ಯೋಗ ಸಿಕ್ಕಿದೆ  | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ Read More »

ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

ಪುತ್ತೂರು: ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯೊಬ್ಬಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಈಸ್ವರಿ (45) ಬಂಧಿತ ಆರೋಪಿಯಾಗಿದ್ದು, ಈಕೆಯಿಂದ ಸುಮಾರು ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಫೆ.12 ರಂದು ಪುತ್ತೂರು ನಗರದ ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್. (41) ಎಂಬವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳರು ಕಳವುಗೈದಿದ್ದರು. ಈ ಕುರಿತು ರೇಷ್ಮಾ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ

ತಮಿಳುನಾಡು ಮೂಲದ ನಟೋರಿಯಸ್ ಕಳ್ಳಿಯ ಬಂಧನ | ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಮತದಾರರ ಜಾಗೃತಿಗಾಗಿ ಪೊಲೀಸ್ ಇಲಾಖೆಯಿಂದ ಪಥಸಂಚಲನ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಪಥಸಂಚಲನ ಶನಿವಾರ ಸಂಜೆ ನಡೆಸಲಾಯಿತು. ಮತದಾರರ ಜಾಗೃತಿಗಾಘಿ ನಡೆದ ಪಥಸಂಚಲನ ಯಾವುದೇ ಭಯಬೇಡ ನಿಮ್ಮ ಜತೆ ನಾವಿದ್ದೇವೆ, ಮುಕ್ತವಾಗಿ ಪ್ರಜಾಪ್ರಭುತ್ವದ ತಮ್ಮ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಿ ಎನ್ನುವ ಘೋಷವಾಕ್ಯದೊಂದಿಗೆ ನಗರದಾದ್ಯಂತ ನಡೆಯಿತು. ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾ ಪಡೆ ಜತೆ ಪೊಲೀಸ್ ಸಿಬ್ಬಂದಿಗಳು ನಗರ ಸೇರಿದಂತೆ ತಾಲೂಕಿನ ನಗರದ

ಮತದಾರರ ಜಾಗೃತಿಗಾಗಿ ಪೊಲೀಸ್ ಇಲಾಖೆಯಿಂದ ಪಥಸಂಚಲನ Read More »

ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ | ಓರ್ವ ಆರೋಪಿ ಬಂಧನ

ಪುತ್ತೂರು: ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿದ ಪೊಲೀಸರು ಓರ್ವವನ್ನು ಬಂಧಿಸಿದ ಘಟನೆ ತಾಲೂಕಿನ ಇರ್ದೆ ಗ್ರಾಮದ ಮೇರ್ವೆಯಲ್ಲಿ ಶನಿವಾರ ನಡೆದಿದೆ. ಹುಕ್ರಪ್ಪ ಪೂಜಾರಿ ಬಂಧಿತ ಆರೋಪಿ. ಹುಕ್ರಪ್ಪ ಪೂಜಾರಿ ತನ್ನ ಮನೆಯ ಖಾಲಿ ಜಾಗದಲ್ಲಿ ಅಕ್ರಮವಾಗಿ ಮಧ್ಯ ದಾಸ್ತಾನಿರಿಸಿ ಮಾರಾಟ ಮಾಡುತ್ತಿದ್ದದ್ದನ್ನು ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಸ್ಥಳದಲ್ಲಿದ್ದ ತಲಾ 90 ಎಂಎಲ್‍ ಮದ್ಯ ತುಂಬಿದ 49 ಸ್ಯಾಚೆಟ್‍ ಗಳು, 100 ರೂ. ನಗದು ವಶಪಡಿಸಿಕೊಂಡು ಆರೋಪಿಯನ್ನು

ಅಕ್ರಮ ಮದ್ಯ ದಾಸ್ತಾನಿರಿಸಿ ಮಾರಾಟ | ಓರ್ವ ಆರೋಪಿ ಬಂಧನ Read More »

ಕ್ಯಾ.ಬ್ರಿಜೇಶ್ ಚೌಟರಿಗೆ ಉಪ್ಪಿನಂಗಡಿ ಸಿ.ಎ.ಬ್ಯಾಂಕ್‍ ನಿಂದ ಗೌರವ

ಉಪ್ಪಿನಂಗಡಿ: ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಭೇಟಿ ನೀಡಿದರು. ಈ ವೇಳೆ ಸಂಘದ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಚುನಾವಣಾ ಉಸ್ತುವಾರಿ ಚನಿಲ ತಿಮ್ಮಪ್ಪ ಶೆಟ್ಟಿ, ಮುಖಂಡ ಚಂದ್ರಶೇಖರ ರಾವ್ ಬಪ್ಪಳಿಗೆ,  ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಪ್ರಮುಖರು, ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್, ಉಪಾಧ್ಯಕ್ಷ ಸುನಿಲ್ ದಡ್ಡು ಹಾಗೂ

ಕ್ಯಾ.ಬ್ರಿಜೇಶ್ ಚೌಟರಿಗೆ ಉಪ್ಪಿನಂಗಡಿ ಸಿ.ಎ.ಬ್ಯಾಂಕ್‍ ನಿಂದ ಗೌರವ Read More »

ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿ ಒಂದು ಮತಕ್ಕಿದೆ | ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಲಕ್ಷ್ಮೀಕಾಂತ ರೈ

ಪುತ್ತೂರು: ಮತದಾನದ ದಿನ ನಾನೊಬ್ಬ ಮತದಾನ ಮಾಡದಿದ್ದರೆ ಏನೂ ಆಗದು ಎಂಬ ಭಾವನೆ ಹಲವರಲ್ಲಿದೆ. ಆದರೆ ನಮ್ಮ ಒಂದು ಮತ ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿಯನ್ನು ಹೊಂದಿದೆ. ಇದು ಪ್ರಜೆಗಳ ಹಕ್ಕಾಗಿದ್ದು, ಕರ್ತವ್ಯವೂ ಆಗಿದೆ. ತಪ್ಪದೇ ಮತದಾನ ಮಾಡುತ್ತೇನೆಂಬ ಪ್ರತಿಜ್ಞೆಯನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಅವರು ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ ಹಾಗೂ ಪುತ್ತೂರು

ಫಲಿತಾಂಶವನ್ನೇ ಬದಲಿಸಬಲ್ಲ ಶಕ್ತಿ ಒಂದು ಮತಕ್ಕಿದೆ | ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಲಕ್ಷ್ಮೀಕಾಂತ ರೈ Read More »

ಮರದಿಂದ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅರಿಯಡ್ಕ ದಲ್ಲಿ ನಡೆದಿದೆ. ಅರಿಯಡ್ಕದ ದಿ.ಅಣ್ಣಯ್ಯ ನಾಯ್ಕರ ಪುತ್ರ ಕೃಷ್ಣಪ್ಪ (55) ಮೃತಪಟ್ಟವರು. ಮನೆಯ ಹತ್ತಿರದ ತೋಟದಲ್ಲಿ ಮರವೊಂದರ ಗೆಲ್ಲು ಕಡಿಯುತ್ತಿರುವ ಸಂದರ್ಭ ಮರದಿಂದ ಬಿದ್ದು ಗಾಯಗೊಂಡಿದ್ದರು. ಬಳಿಕ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ. ಮೃತರು ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮರದಿಂದ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

error: Content is protected !!
Scroll to Top