ಪುತ್ತೂರು

ಆಟೋ ರಿಕ್ಷಾ-ಬೈಕ್ ಡಿಕ್ಕಿ | ಬೈಕ್ ಸವಾರನಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಬೈಕ್‍ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಇಂದು ಮುಂಜಾನೆ  ಜಿ ಎಲ್ ಆಚಾರ್ಯ ಬಳಿ ನಡೆದಿದೆ. ಅಪಘಾತದಿಂದ ಪತ್ರಿಕಾ ವಿತರಕ ಬೈಕ್ ಸವಾರ ರಮೇಶ್ ಅವರ ಕಾಲಿಗೆ ಗಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಆಟೋ ರಿಕ್ಷಾ-ಬೈಕ್ ಡಿಕ್ಕಿ | ಬೈಕ್ ಸವಾರನಿಗೆ ಗಾಯ Read More »

ಅಂಗನವಾಡಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ಕಳ್ಳರು | ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು ಕಾಲ್ಕಿತ್ತ ಕಳ್ಳರು

ಪುತ್ತೂರು: ನಗರದ ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಅಂಗನವಾಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗನವಾಡಿಯ ಬೀಗ ಒಡೆದು ನುಗ್ಗಿದ ಕಳ್ಳರು ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಸುಮಾರು 25 ಕ್ಕೂ ಅಧಿಕ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು, ಪಾತ್ರೆಗಳನ್ನು ಬೆಂಕಿಯಲ್ಲಿ ಕರಟಿದ್ದಾರೆ. ಬಿಸಿಯೂಟದ ಪಾತ್ರೆಗಳನ್ನು ಕಳವು ಮಾಡಿದ್ದಾರೆ. ಅಲ್ಲದೆ ಟಾಯ್ಲೆಟ್ ಬೇಸಿನ್‍ ಗೆ ಮಣ್ಣು ತುಂಬಿಸಿ ಹೋಗಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಬಿಡದ ಕಳ್ಳರು ಪ್ರಾಥಮಿಕ

ಅಂಗನವಾಡಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ಕಳ್ಳರು | ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು ಕಾಲ್ಕಿತ್ತ ಕಳ್ಳರು Read More »

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ | ಒಂಭತ್ತು ಮಂದಿ ಪೊಲೀಸರ ವಶಕ್ಕೆ | ಜಾಮೀನಿನ  ಮೇಲೆ ಬಿಡುಗಡೆ

ಪುತ್ತೂರು: ಸಾಮಾಜಿಕ ಜಾಲತಾಣ ವಿಚಾರಕ್ಕೆ ಸಂಬಂಧಿಸಿ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ಮನೆ ವಠಾರಕ್ಕೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆ ಸಂಬಂಧಿಸಿದಂತೆ ಒಂಭತ್ತು ಮಂದಿಯನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಡಬ ತಾಲೂಕಿನ ಪಾತಾಜೆ ನಿವಾಸಿ ಪ್ರಜ್ವಲ್ ರೈ, ವಿಟ್ಲ ಕಂಬಳಬೆಟ್ಟು ನಿವಾಸಿ ಸುಶಾಂತ್ ಶೆಟ್ಟಿ, ಪುತ್ತೂರಿನ ಆರ್ಯಾಪು ನಿವಾಸಿ ಸನತ್ ರೈ, ಬಲ್ನಾಡು ನಿವಾಸಿ ರೋಹಿತ್ ನಾಯ್ಕ್, ಸಾಮೆತಡ್ಕ ನಿವಾಸಿ ಅಖಿಲ್, ಆರ್ಯಾಪು ನಿವಾಸಿ ಕೀರ್ತನ್ ರೈ,

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ | ಒಂಭತ್ತು ಮಂದಿ ಪೊಲೀಸರ ವಶಕ್ಕೆ | ಜಾಮೀನಿನ  ಮೇಲೆ ಬಿಡುಗಡೆ Read More »

ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣಸಂಸ್ಥೆಗಳಲ್ಲೊಂದಾದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ ದೊರಕಿದೆ. ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆ ಸಂತ ಫಿಲೋಮಿನಾ ಕಾಲೇಜಿಗೆ 9001:2015 ಮಾನ್ಯತೆ ದೊರಕಿದ್ದು ಸಂತಸದ ವಿಚಾರವಾಗಿದೆ. ಅಂತರಾಷ್ರೀಯ ಮನ್ನಣೆಯು ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಶಿಕ್ಷಣ ಹಾಗೂ ಶೈಕ್ಷಣಿಕ ಉತ್ಕೃಷ್ಟತೆಗಾಗಿ ನಮ್ಮ ನಿರಂತರ ಅನ್ವೇಷಣೆಯನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಒಬ್ಬ ವ್ಯಕ್ತಿಯಿಂದ ನಡೆಯುವ ಕಾರ್ಯವಲ್ಲ. ಇದರ ಹಿಂದೆ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆಯ ಗುಣಮಟ್ಟದ ಸೇವೆಗಾಗಿ ಅತ್ಯಂತ ಮುತುವರ್ಜಿಯಿಂದ

ಸಂತ ಫಿಲೋಮಿನಾ ಕಾಲೇಜಿಗೆ ಐಎಸ್‌ಒ 9001:2015 ಮಾನ್ಯತೆ Read More »

ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಬಿ. ಮರಾಠೆ ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್‌ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಾ.21 ರಿಂದ 24 ರ ತನಕ ಚೆನ್ನೈನ ಅಣ್ಣಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಅವರು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಿಎಂಆರ್‌ಐಟಿ ಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉನ್ನತ ಸಾಧನೆಯನ್ನು ಪ್ರದರ್ಶಿಸಿ ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ.

ಅಖಿಲ ಭಾರತ ಅಂತರ್ ವಿವಿ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ | ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಬಿ. ಮರಾಠೆ ಆಯ್ಕೆ Read More »

ದ.ಕ.ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಅವಿರೋಧವಾಗಿ ಆಯ್ಕೆ

ಪುತ್ತೂರು: ದ.ಕ.ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ (ಮಾಸ್) ಅಧ್ಯಕ್ಷರಾಗಿ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಮುಂದಿನ ನಾಲ್ಕು ವರ್ಷಗಳ ಕಾಲ ಅವರು ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಸಂಘದ ಅಧ್ಯಕ್ಷರಾಗಿದ್ದ ಭಾಸ್ಕರ ಕೋಟ್ಯಾನ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಸಂಸ್ಥೆಯ ಎಲ್ಲಾ ನಿರ್ದೇಶಕರ ಉಪಸ್ಥಿತಿಯಲ್ಲಿ, ಚುನಾವಣಾಧಿಕಾರಿ ಮಂಗಳೂರು ಸಹಕಾರಿ ಇಲಾಖೆಯ ಸಹಾಯಕ ನಿಬಂಧಕ ವಿಲಾಸ್ ಉಪಸ್ಥಿತಿಯಲ್ಲಿ ಸವಣೂರು ಸೀತಾರಾಮ ರೈ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಹಾಲಿ ಸಮಿತಿಯಲ್ಲಿ ಉಪಾಧ್ಯಕ್ಷರಾಗಿದ್ದ

ದ.ಕ.ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಅವಿರೋಧವಾಗಿ ಆಯ್ಕೆ Read More »

ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆಯಿಂದ ಆಶ್ಲೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಮಾ.30 ರಂದು ಸರ್ವೆ ರಕ್ತೇಶ್ವರಿ ಕಟ್ಟೆಯಲ್ಲಿ ನಡೆಯುವ 11ನೇ ವರ್ಷದ ಆಶ್ಲೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಜಯಂತ್ ಭಕ್ತಕೋಡಿ, ಕಾರ್ಯದರ್ಶಿ ಲಕ್ಷ್ಮೀಶ್  ರೈ, ಬೆಳಿಯಪ್ಪ ಗೌಡ ಸರ್ವೆ, ಪದ್ಮನಾಭ ಗೌಡ, ಪ್ರವೀಣ್ ನಾಯ್ಕ್ ನೇಕಿತಡ್ಕ, ನವೀನ್ ರೈ, ಯೋಗೀಶ್ ಟಿ., ಗೌತಮ್ ರೈ, ಭರತ್ ಸರ್ವೆ, ಜನಾರ್ಧನ

ಸರ್ವೆ ರಕ್ತೇಶ್ವರಿ ಹಿಂದೂ ಜಾಗರಣ ವೇದಿಕೆಯಿಂದ ಆಶ್ಲೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ವೀಲ್ ಚೆಯರ್ ಹಸ್ತಾಂತರ

ಕೆದಿಲ : ಕೆದಿಲ ಗ್ರಾಮದ ನೇರಳೆಗುರಿ ಲಕ್ಷ್ಮೀರವರು ಅಸೌಖ್ಯದಿಂದಿದ್ದು ಅವರಿಗೆ    ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದ  ಯೋಜನೆಯಡಿ ವೀಲ್ ಚೆಯರ್ ಹಸ್ತಾಂತರಿಸಲಾಯಿತು. ಶೌಚಾಲಯಕ್ಕೆ ತೆರಳುವ ಸಂದರ್ಭ ಅನುಕೂಲಕ್ಕಾಗಿ ವೀಲ್ ಚೆಯರ್ ಅನ್ನು ಪೆರ್ನೆ ವಲಯ ಮೇಲ್ವಿಚಾರಕಿ  ಶಾರದಾ ವಿತರಿಸಿದರು ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ ಜಯಂತಿ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ, ಗಿರೀಶ, ಮತ್ತು ಪ್ರಗತಿ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ವೀಲ್ ಚೆಯರ್ ಹಸ್ತಾಂತರ Read More »

ದರ್ಶನ್ ಗರ್ತಿಕೆರೆ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ಮಾ.23 ಹಾಗೂ 24ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯುವ ದ. ಕ ಜಿಲ್ಲಾ 26ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಶಸ್ತಿಗೆ ಪುತ್ತೂರಿನ ವಿವೇಕಾನಂದ ಐ.ಎ.ಎಸ್ ಅಧ್ಯಯನ ಕೇಂದ್ರದ ತಜ್ಞ ತರಬೇತುದಾರ ದರ್ಶನ್ ಗರ್ತಿಕೆರೆ ಆಯ್ಕೆಗೊಂಡಿದ್ದಾರೆ. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವೇಕಾನಂದ ಐ.ಎ.ಎಸ್ ಅಧ್ಯಯನ ಕೇಂದ್ರ ದ ವತಿಯಿಂದ ನಡೆಸಲಾದ ಕನ್ನಡದಲ್ಲೂ ಐ.ಎ.ಎಸ್ ಪರೀಕ್ಷೆ ಬರೆಯಿರಿ ಅಭಿಯಾನದ ಅಡಿಯಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು 50ಕ್ಕೂ ಅಧಿಕ ಉಚಿತ ಕಾರ್ಯಾಗಾರಗಳನ್ನು

ದರ್ಶನ್ ಗರ್ತಿಕೆರೆ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಶಸ್ತಿಗೆ ಆಯ್ಕೆ Read More »

ಪುತ್ತೂರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ : ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಪುತ್ತೂರಿನ ಶಾಸಕರ 1400 ಕೋಟಿಯ ಅನುದಾನದ ಬಗ್ಗೆ ಮಾಹಿತಿ ಕೇಳಿದ ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರರ ಮನೆಗೆ ನುಗ್ಗಿ ದಾಂದಲೆ ನಡೆಸಿರುವ ಘಟನೆಯನ್ನು ತೀವ್ರವಾಗಿ ಖಂಡನೀಯ ಎಂದು ದ.ಕ.ಜಿಲ್ಲಾ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾನು 1400 ಕೋಟಿಯ ಅನುದಾನ ತಂದಿದ್ದೇನೆ ಎಂದು ಹೇಳುವ ಶಾಸಕರಿಗೆ ಆ ಬಗ್ಗೆ ಮಾಹಿತಿ ನೀಡಲು ಹಿಂಜರಿಕೆ ಏಕೆ.  ಅನುದಾನದ ಬಗ್ಗೆ ಮಾಹಿತಿ ನೀಡಲು ಪುತ್ತೂರು ಶಾಸಕರು ವಿಫಲರಾಗಿದ್ದು, ಹತಾಶರಾಗಿರುವ ಶಾಸಕರು ತನ್ನ

ಪುತ್ತೂರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ : ಕ್ಯಾ.ಬ್ರಿಜೇಶ್ ಚೌಟ Read More »

error: Content is protected !!
Scroll to Top