ಪುತ್ತೂರು

ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ | ಆತ್ಮೀಯವಾಗಿ ಬರಮಾಡಿಕೊಂಡ ಬಿಜೆಪಿ ಪ್ರಮುಖರು

ಪುತ್ತೂರು: ಬಿಜೆಪಿ ಜತೆ ಪುತ್ತಿಲ ಪರಿವಾರ ವಿಲೀನಗೊಂಡ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಪುತ್ತಿಲರನ್ನು ಸ್ವಾಗತಿಸಿದರು. ಪುತ್ತಿಲರ ಜತೆ ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಇದ್ದರು. ಬಿಜೆಪಿ ಪ್ರಮುಖರಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್, ಜಿಲ್ಲಾ ಬಿಜೆಪಿ ಪ್ರಮುಖರಾದ ಬೂಡಿಯಾರ್ ರಾಧಾಕೃಷ್ಣ […]

ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ | ಆತ್ಮೀಯವಾಗಿ ಬರಮಾಡಿಕೊಂಡ ಬಿಜೆಪಿ ಪ್ರಮುಖರು Read More »

ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರು-ಸದಸ್ಯರ ಅಧಿಕಾರ ಸ್ವೀಕಾರ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಕಚೇರಿಯೊಳಗೆ ಇನ್ನು ಮುಂದೆ ಭ್ರಷ್ಟಾಚಾರ ಸಹಿತ ಮಧ್ಯವರ್ತಿಗಳಿಗೆ  ಬ್ರೋಕರ್‌ಗಳಿಗಅವಕಾಶವಿಲ್ಲ. ಬಡವರ ಕೆಲಸವನ್ನು ದೇವರ ಕೆಲಸವೆಂದು ಭಾವಿಸಿ ಮಾಡಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ, ನ್ಯಾಯವಾದಿ ಭಾಸ್ಕರ ಗೌಡ ಕೋಡಿಂಬಾಳ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಶಾಸಕರು ಮಾತನಾಡಿದರು. ನಾನು ಶಾಸಕನಾದ ಮೇಲೆ ಎಲ್ಲ ಕಚೇರಿಗಳ ಕಾರ್ಯವೈಖರಿಯನ್ನು ಹತ್ತಿರದಿಂದ ಗಮನಿಸಿದ್ದೇನೆ. ಇದುವರೆಗೂ ಒಮ್ಮೆಯೂ ಪ್ರಾಧಿಕಾರದ ಕಚೇರಿಗೆ ಬಂದಿಲ್ಲ. ಇಲ್ಲಿನ ಕೆಲವೊಂದು ಕಾನೂನು,

ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರು-ಸದಸ್ಯರ ಅಧಿಕಾರ ಸ್ವೀಕಾರ Read More »

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಹಕಾರ ಸಂಘದ ಪುತ್ತೂರು ಶಾಖೆ ಶುಭಾರಂಭ

ಪುತ್ತೂರು: ಮುಂದಿನ ಅಧಿವೇಶನದಲ್ಲಿ ನನ್ನ ಮೊದಲ ಪ್ರಶ್ನೆ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಂಭಾವನೆ ಹೆಚ್ಚಳದ ಕುರಿತು. ಹೀಗೆಂದು ಹೇಳಿದರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ. ಅವರು ಶನಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಹಕಾರ ಸಂಘದ ಪುತ್ತೂರು ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಈ ಹಿಂದೆ ಅಧಿವೇಶದನದಲ್ಲಿ ನಿಮ್ಮ ಸಂಭಾವನೆ ಕುರಿತು ಪ್ರಶ್ನಿಸಿದ್ದೆ ಎಂದ ಅವರು, ಇತ್ತೀಚೆಗೆ ನಡೆದ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಹಿಳೆಯರನ್ನು

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಹಕಾರ ಸಂಘದ ಪುತ್ತೂರು ಶಾಖೆ ಶುಭಾರಂಭ Read More »

ಮಾ.30 : ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ

ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಿಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಿಗ್ಗೆ 8.30ಕ್ಕೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಿಂದ ಹೊರಡುವ ಮೆರವಣಿಗೆಗೆ ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಚಾಲನೆ ನೀಡಲಿರುವರು.6ರಿಂದ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ಸಭಾಪತಿ ಯು. ಟಿ. ಖಾದರ್,

ಮಾ.30 : ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ Read More »

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನ ವೈಭವದ ಜಾತ್ರೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ

ಪುತ್ತೂರು : ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ ಜರಗಿತು. 9 ಕ್ಕೆ  ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯಂ.ಲೋಕಪ್ಪ ಗೌಡ ಕರೆಮನೆ, ಸದಸ್ಯರಾದ ರಮೇಶ

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನ ವೈಭವದ ಜಾತ್ರೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಮಹಾನ್ ಭಾರತದ ಕನಸಿನ ಸಾಕಾರಮೂರ್ತಿ ನರೇಂದ್ರ ಮೋದಿಯವರನ್ನು  ಪ್ರಧಾನಿಯಾಗಿಸಲು ಪ್ರತೀ ಮನಸ್ಸುಗಳು ಒಂದಾಗಬೇಕು :ಚಕ್ರವರ್ತಿ ಸೂಲಿಬೆಲೆ

ಪುತ್ತೂರು: ಮಹಾನ್ ಭಾರತದ ಕನಸಿನ ಸಾಕಾರಮೂರ್ತಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸುವಲ್ಲಿ ಪ್ರತಿ ಮನಸ್ಸುಗಳು ಒಂದಾಗಬೇಕು ಎಂದು ಯುವ ಬ್ರಿಗೇಡ್ ಸಂಸ್ಥಾಪಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಪುತ್ತೂರು ನಮೋ ಭಾರತ್ ವತಿಯಿಂದ ಗುರುವಾರ ಸಂಜೆ ನಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಹಿಂದಿನ ಗದ್ದೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ರಾಷ್ಟ್ರದ ಅಭಿವೃದ್ಧಿಗಾಗಿ 10 ವರ್ಷಗಳಲ್ಲಿ ಒಂದು ದಿನವೂ ರಜೆಯನ್ನು ಮಾಡದೆ ಶ್ರಮಿಸುವ ಪ್ರಧಾನಿ ನರೇಂದ್ರ ಮೋದಿಯವರು, ಸೈನಿಕರ ಜತೆ

ಮಹಾನ್ ಭಾರತದ ಕನಸಿನ ಸಾಕಾರಮೂರ್ತಿ ನರೇಂದ್ರ ಮೋದಿಯವರನ್ನು  ಪ್ರಧಾನಿಯಾಗಿಸಲು ಪ್ರತೀ ಮನಸ್ಸುಗಳು ಒಂದಾಗಬೇಕು :ಚಕ್ರವರ್ತಿ ಸೂಲಿಬೆಲೆ Read More »

ಸವಿತಾ ಕೋಡಂದೂರ್-ಸಿಂಚನಾಲಕ್ಷ್ಮೀ ಅಮ್ಮ-ಮಗಳ ದ್ವಂದ್ವ ಗಾಯನ

ಪುತ್ತೂರ: ಪುತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಮಹಾಶಿವರಾತ್ರಿ ದಿನದಂದು ಸ್ವರ ಸಿಂಚನ ಕಲಾತಂಡದ ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ಸಿಂಚನ ಲಕ್ಷ್ಮಿ ಕೋಡಂದೂರ್ ಅಮ್ಮ ಮಗಳ ದ್ವಂದ್ವ ಗಾಯನ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಭಕ್ತರ ಮನಸೆಳೆಯಿತು ಮಹಾ ಮಹಿಮನ ಆರಾಧನೆಯಲ್ಲಿ ಮಗ್ನರಾದ ಶಿವಭಕ್ತ ವೃಂದಕ್ಕೆ ಸಂಗೀತ ಕಲಾ ಸೇವೆಯನ್ನು ನೀಡಿ ಮನಸೆಳೆದರು ಜನಪ್ರಿಯ ಶಿವ ಗೀತೆಗಳು ಸುಮಧುರ ಗೀತೆಗಳನ್ನು ಹಾಡಿ ತನ್ನ ಹೆಜ್ಜೆ ಗುರುತಿನಿಂದ ಎಲ್ಲರ ಮೆಚ್ಚುಗೆ ಗಳಿಸಿದರು. ಶಿವನೆಂದರೆ ದೈವಗಳಿಗೆ ಮಹಾದೇವ ಸತ್ಯ

ಸವಿತಾ ಕೋಡಂದೂರ್-ಸಿಂಚನಾಲಕ್ಷ್ಮೀ ಅಮ್ಮ-ಮಗಳ ದ್ವಂದ್ವ ಗಾಯನ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಾಗಿಲು ಹಾಕಿ ಪ್ರಮುಖರ ಸಭೆ | ಮಾಧ್ಯಮ ಸಹಿತ ಇತರರಿಗೆ ಪ್ರವೇಶ ನಿರಾಕರಣೆ

ಪುತ್ತೂರು: ಪುತ್ತೂರು ಬಿಜೆಪಿ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಇಂದು ಸಂಜೆ ಭೇಟಿ ನೀಡಿದ್ದು, ಪ್ರಮುಖರ ಆಂತರಿಕ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಚೇರಿಯ ಬಾಗಿಲು ಹಾಕಿ ಸಭೆ ನಡೆಸಲಾಗುತ್ತಿದೆ. ಮಾಧ್ಯಮ ಸಹಿತ ಇತರರಿಗೆ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಾಗಿಲು ಹಾಕಿ ಪ್ರಮುಖರ ಸಭೆ | ಮಾಧ್ಯಮ ಸಹಿತ ಇತರರಿಗೆ ಪ್ರವೇಶ ನಿರಾಕರಣೆ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ  ಅಧ್ಯಕ್ಷ, ಸದಸ್ಯರ ನೇಮಕ | ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರ್

ಕಾಣಿಯೂರು: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಡಾ.ದೇವಿ ಪ್ರಸಾದ್ ಕಾನತ್ತೂರ್ ಅವರನ್ನು ಆಯ್ಕೆ ಮಾಡಲಾಗಿದೆ. ದೇವಸ್ಥಾನದ ಆಡಳಿತ ಅಧಿಕಾರಿ, ಸುಳ್ಯ ತಹಶೀಲ್ದಾರ್ ಮಂಜುನಾಥ ಅವರಿಂದ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಹಾಗೂ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಿದೆ. ಸಮಿತಿ ಸದಸ್ಯರಾಗಿ ಸತ್ಯನಾರಾಯಣ ಭಟ್‍ ಕಾಯಂಬಾಡಿ, ರಾಮಚಂದ್ರ ಭಟ್ (ಅರ್ಚಕರು), ಸಂತೋಷ್ ಕುಮಾರ್ ರೈ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ  ಅಧ್ಯಕ್ಷ, ಸದಸ್ಯರ ನೇಮಕ | ಅಧ್ಯಕ್ಷರಾಗಿ ಡಾ.ದೇವಿಪ್ರಸಾದ್ ಕಾನತ್ತೂರ್ Read More »

ಬೆಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಂ ಗೆ ಭೇಟಿ | ಆಶೀರ್ವದಿಸಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಪುತ್ತೂರು: ಬೆಂಗಳೂರು ಉತ್ತರ ಕ್ಷೇತ್ರ ಲೋಕಸಭಾ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಂಗೆ ಶುಕ್ರವಾರ ಭೇಟಿ ನೀಡಿದರು. ಮಹಾಸಂಸ್ಥಾನದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಶೋಭಾ ಕರಂದ್ಲಾಜೆಯವರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಲೋಕಸಭೆ ಚುನಾವಣೆ ಕುರಿತು ಶ್ರೀ ಸ್ವಾಮೀಜಿವರಿಂದ ಮಾರ್ಗದರ್ಶನ ಪಡೆದರು.

ಬೆಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಂ ಗೆ ಭೇಟಿ | ಆಶೀರ್ವದಿಸಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »

error: Content is protected !!
Scroll to Top