ಪುತ್ತೂರು

ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪುತ್ತೂರಿಗೆ ಭೇಟಿ | ಅಮರ ಜವಾನ್ ಸ್ಮಾರಕಕ್ಕೆ ಸೆಲ್ಯೂಟ್

ಪುತ್ತೂರು: ಲೋಕಸಭೆ ದಕ್ಷಿಣ ಕನ್ನಡ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಗುರುವಾರ ಸಂಜೆ ಪುತ್ತೂರಿಗೆ ಭೇಟಿ ನೀಡಿದರು. ಮೊದಲಿಗೆ ಪುತ್ತೂರಿನ ಆಡಳಿತ ಸೌಧದ ಬಳಿ ಇರುವ ಅಮರ ಜವಾನ್ ಸ್ಮಾರಕದ ಬಳಿ ತೆರಳಿ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಸೆಲ್ಯೂಟ್ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರು, ಮಾಜಿ ಸೈನಿಕರು ಉಪಸ್ಥಿತರಿದ್ದರು.

ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪುತ್ತೂರಿಗೆ ಭೇಟಿ | ಅಮರ ಜವಾನ್ ಸ್ಮಾರಕಕ್ಕೆ ಸೆಲ್ಯೂಟ್ Read More »

ಎರಡು ಕಾರುಗಳ ನಡುವೆ ಡಿಕ್ಕಿ | ಹಲವರಿಗೆ ಗಾಯ

ಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರಿನಲ್ಲಿ ಇಂದು ನಡೆದಿದೆ. ಪೋರ್ಡ್‍ ಹಾಗೂ ಇನ್ನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇನ್ನೋವಾ ಕಾರು ಚಾಲಕ ಸಹಿತ ಹಲವರಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಪರಿಣಾಮ ಟ್ರಾಫಿಕ್‍ ಜ್ಯಾಮ್‍ ನಿಂದಾಗಿ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.

ಎರಡು ಕಾರುಗಳ ನಡುವೆ ಡಿಕ್ಕಿ | ಹಲವರಿಗೆ ಗಾಯ Read More »

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ

ಪುತ್ತೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿನ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ‘ ಇನ್‌ಸ್ಪೈರ್‌ ಅವಾರ್ಡ್’ ಕಾರ್ಯಕ್ರಮದಡಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ 7 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ‘ಹೈ ವೋಲ್ಟೇಜ್ ಡಿಟೆಕ್ಟರ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಭಾರವಿ ಕೆ. ಭಟ್ ಹಾಗೂ ‘ನೂಡಲ್ಸ್ ಮೇಕಿಂಗ್ ಮಷೀನ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಗಗನ್ ಇನ್‌ಸ್ಪೈರ್‌ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ Read More »

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ

ಪುತ್ತೂರು: ಪುತ್ತೂರು ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಗುರುವಾರ ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು. ಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೀನ ಸಂಕ್ರಮಣದ ದಿನ ಗರ್ಭಗುಡಿಯಲ್ಲಿರುವ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು. ಪ್ರಾತಃಕಾಲ ಶ್ರೀಚಾಮುಂಡೇಶ್ವರಿ ಭಜನಾ ಮಂಡಳಿಯವರಿಂದ ಭಜನೆ, ಶ್ರೀಕೃಷ್ಣ ಉಪಾಧ್ಯಾಯರವರಿಂದ ವೇದ ಮಂತ್ರ ಘೋಷ ನೆರವೇರಿತು. ಬೆಳಿಗ್ಗೆ 7.30ರ ಸಮಯದಲ್ಲಿ ಕ್ಷೇತ್ರದ

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ Read More »

ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರ ಅಸಾಂವಿಧಾನಿಕ ಸಿಎಎ ಜಾರಿ ಮಾಡಿರುವುದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಅಂಗವಾಗಿ ಪುತ್ತೂರು ಎಸ್‌ಡಿಪಿಐ ವತಿಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ  ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ರವರ ನೇತೃತ್ವದಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ, ಸಿಎಎ ಕಾಯ್ದೆಯು ಈ ದೇಶದ ಜಾತ್ಯಾತೀತ ಪರಂಪರೆಗೆ ಮಾರಕ

ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ Read More »

ಡಾ.ವಿದುಷಿ ಪವಿತ್ರ ರೂಪೇಶ್ ರಿಗೆ ನ್ಯಾಷನಲ್ ಅಚೀವ್ ಮೆಂಟ್ ಅವಾರ್ಡ್

ಪುತ್ತೂರು: ಡಾ.ವಿದುಷಿ ಪವಿತ್ರಾ ರೂಪೇಶ್ ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ನೀಡಲಾಗುವ ನ್ಯಾಷನಲ್ ಅಚೀವ್ ಮೆಂಟ್  ಅವಾರ್ಡ್ ಗೆ ಪುತ್ತೂರಿನ ವಿದುಷಿ ಪವಿತ್ರ ರೂಪೇಶ್ ಬಾಜನರಾಗಿದ್ದಾರೆ. ರಾಯಚೂರಿನಲ್ಲಿ ನಡೆದ ಕಾರ್ಯಕ್ರಮ ಇವರಿಗೆ ನ್ಯಾಷನಲ್ ಅಚೀವ್ ಮೆಂಟ್ ಅವಾರ್ಡ್ ನೀಡಲಾಗಿದೆ. ಹಲವು ವರ್ಷಗಳ ಬೋಧನಾ ಅನುಭವ ಹೊಂದಿರುವ ನಿಪುಣ ಗುರು. ಸಂಗೀತ ಪರಿಷತ್ತು, ಮಾರ್ನಿಂಗ್ ರಾಗ, ಕರಾವಳಿ ಉತ್ಸವ, ಕನ್ನಡ ಸಾಂಸ್ಕೃತಿಕ ಸಭಾ, ಮಣಿಪಾಲ ವಿಶ್ವವಿದ್ಯಾಲಯ ಮತ್ತು ರಾಜ್ಯಾದ್ಯಂತ ವಿವಿಧ ದೇವಾಲಯಗಳಲ್ಲಿ ಅವರ ಸಂಗೀತ ಕಚೇರಿಗಳು

ಡಾ.ವಿದುಷಿ ಪವಿತ್ರ ರೂಪೇಶ್ ರಿಗೆ ನ್ಯಾಷನಲ್ ಅಚೀವ್ ಮೆಂಟ್ ಅವಾರ್ಡ್ Read More »

ಕಟ್ಟಡ ಕಾರ್ಮಿಕರಿಗೆ ಕಾರ್ಪೆಂಟರ್ ಕಿಟ್ ವಿತರಣೆ

ಪುತ್ತೂರು: ಸರಕಾರ ಪ್ರತೀ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ್ದರೂ ಕಾರ್ಮಿಕ ವರ್ಗಕ್ಕೆ ನೀಡುವ ಸೌಲಭ್ಯವನ್ನು ಕಡಿತ ಮಾಡಿಲ್ಲ. ಕಾರ್ಮಿಕರಿಗೆ ವಿವಿಧ ಸೌಲಭ್ಯವನ್ನು ನೀಡುವ ಮೂಲಕ ಕಾರ್ಮಿಕ ಕುಟುಂಬಕ್ಕೆ ದಾರಿ ದೀಪವಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ‌ಶಾಸಕರ ಕಚೇರಿಯಲ್ಲಿ ಕಾರ್ಪೆಂಟರ್ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಿಸಿ ಮಾತನಾಡಿದರು. ಕಾರ್ಮಿಕ ವರ್ಗವನ್ನು ಸರಕಾರ ಎಂದೂ ಕಡೆಗಣಿಸುವುದಿಲ್ಲ, ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮಗಳ ಮದುವೆಗೆ ಸಹಾಯಧನ, ಆರೋಗ್ಯ ಸೇವೆ ಸೇರಿದಂತೆ ಎಲ್ಲಾ ವಿಧ ಸೌಲಭ್ಯಗಳು

ಕಟ್ಟಡ ಕಾರ್ಮಿಕರಿಗೆ ಕಾರ್ಪೆಂಟರ್ ಕಿಟ್ ವಿತರಣೆ Read More »

ನಾಳೆ ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ | ಇಲ್ಲಿದೆ ಡಿಟೈಲ್ಸ್

ಪುತ್ತೂರು: ಉಪ್ಪಿನಂಗಡಿ-ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ಹಿನ್ನಲೆಯಲ್ಲಿ ಮಾ.14 ಗುರುವಾರ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್ ಪ್ರೆಸ್, ಕಾಂಚನ, ವಾಟರ್ ಸಪ್ಲೈ ಫೀಡರ್ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‍ ನಲ್ಲಿ ಮಾ.14 ಬೆಳಿಗ್ಗೆ 10 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು

ನಾಳೆ ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ | ಇಲ್ಲಿದೆ ಡಿಟೈಲ್ಸ್ Read More »

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆ ಪೌರಾಯುಕ್ತ ಮಧು ಎಸ್‍. ಮನೋಹರ್ ಅವರಿಗೆ ಮನವಿ ನೀಡಲಾಯಿತು. ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಇಲ್ಲದೆ ಆಗುತ್ತಿರುವ ಸಮಸ್ಯೆ ಹಾಗೂ ರಸ್ತೆಯಲ್ಲಿ ಝೀಬ್ರಾ ಪಟ್ಟಿ ಹಾಕುವಂತೆ, ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವ ಬಗ್ಗೆ ಪುತ್ತೂರು ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ Read More »

ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ (60) ಬುಧವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಈ ಸಂದರ್ಭದಲ್ಲಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವೇ ಕ್ಷಣಗಳಲ್ಲಿ ಅವರು ನಿಧನರಾದರು. ಹೃದಯಾಘಾತದಿಂದ ನಿಧನರಾಗಿರಬೇಕೆಂದು ಶಂಕಿಸಲಾಗಿದೆ. 1987 ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾಗಿ ಗೋಪಿನಾಥ ಶೆಟ್ಟಿ ನೇಮಕಗೊಂಡಿದ್ದು, ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಪಾಲಿಟೆಕ್ನಿಕ್ ನ್ನು ಉತ್ತಮ ಶಿಕ್ಷಣ ಸಂಸ್ಥೆಯಾಗಿ

ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ Read More »

error: Content is protected !!
Scroll to Top