ಪುತ್ತೂರು

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು: ವಿಕಸಿತ ಭಾರತದ ಮುನ್ನೋಟಗಳು ಜಗತ್ತಿಗೆ ಕಾಣಲಾರಂಭಿಸಿವೆ. ವಿಜ್ಞಾನ, ಸಂಶೋಧನೆ, ಕ್ರೀಡೆ, ಆರ್ಥಿಕತೆ, ಕೃಷಿ, ವ್ಯವಹಾರ ನಿರ್ವಹಣೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಮರ್ಥವಾಗಿ ಭಾರತವು ವಿಶ್ವಗುರುವಾಗುವುದರತ್ತ ಮುನ್ನಡೆಯುತ್ತಿದೆ ಎಂಬುದು ಹೆಮ್ಮೆಯ ವಿಷಯ. ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ವಿಶೇಷವಾಗಿ ಮುಂಚೂಣಿಯಲ್ಲಿ ನಿಂತು ದುಡಿಯುತ್ತಿದ್ದಾರೆ. ಆದ್ದರಿಂದ ಇದನ್ನು ನಾರೀಶಕ್ತಿ ಯುಗ ಎಂದು ಗದಗ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಷ್ಣುಕಾಂತ್ ಚಟ್ಟಪಲ್ಲಿ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ […]

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಶ್ರೀ ಕ್ಷೇತ್ರ ಮಾಣಿಲದ ಮೋಹನದಾಸ ಸ್ವಾಮೀಜಿ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ದೇವಳದ ಅಭಿವೃದ್ದಿಗೆ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸಂಚಾಲಕ ಹಾಗೂ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಸಮಿತಿಯ ಪ್ರಮುಖರಾದ ವಿಜಯ ಬಿಎಸ್ ಸಂಪ್ಯ, ದೇವಯ್ಯ ಗೌಡ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ Read More »

ಕೆರೆಗೆ ಬಿದ್ದು ಮೃತ್ಯು !

ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ಮಾ.11ರಂದು ಸಂಜೆ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಸಂಜೀವ ರೈ ಎಂ.ರವರ ಪುತ್ರಿ ಮಮತಾರವರನ್ನು ವಿವಾಹವಾಗಿದ್ದು ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಮಾ.11ರಂದು ಸಂಜೆ ತೋಟದ ಕೆರೆಗೆ ನೀರು ತರಲೆಂದು ಹೆಂಡತಿಯೊಂದಿಗೆ ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು ನೀರಲ್ಲಿ ಮುಳುಗಿ

ಕೆರೆಗೆ ಬಿದ್ದು ಮೃತ್ಯು ! Read More »

ಮಾ.14: ನಮೋ ಭಾರತದಿಂದ ಶ್ರೇಷ್ಠ ಭಾರತದ ಕುರಿತು ಕಾರ್ಯಕ್ರಮ

ಪುತ್ತೂರು: ಭಾರತದ ಇತಿಹಾಸದ ಇತ್ತೀಚಿನ 10 ವರ್ಷಗಳಲ್ಲಿ ಶ್ರೇಷ್ಠ ಭಾರತ ಪೂರಕವಾಗಿ ದೇಶಾದ್ಯಂತ ಯುವ ಸಮುದಾಯದಿಂದ ಪಸರಿಸುವ ನಿಟ್ಟಿನಲ್ಲಿ ಪುತ್ತೂರು ನಮೋ ಭಾರತ ವತಿಯಿಂದ ಕಾರ್ಯಕ್ರಮವೊಂದನ್ನು ಮಾ.14 ರಂದು ಸಂಜೆ 5 ಗಂಟೆಗೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಹಿಂದಿನ ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಮೋ ಭಾರತದ ಕಾರ್ಯಕರ್ತ ರಾಜೇಶ್ ಬನ್ನೂರು ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ದೇಶಾದ್ಯಂತ, ರಾಜ್ಯಾದ್ಯಂತ 50 ಕಾರ್ಯಕ್ರಮಗಳನ್ನು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಡೆಸಲಾಗಿದೆ. ಪುತ್ತೂರಿನಲ್ಲಿ

ಮಾ.14: ನಮೋ ಭಾರತದಿಂದ ಶ್ರೇಷ್ಠ ಭಾರತದ ಕುರಿತು ಕಾರ್ಯಕ್ರಮ Read More »

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಬೆಂಕಿ ಇಲ್ಲದೆ ಬದುಕಿಲ್ಲ. ಆದರೆ ಬಳಕೆಯಲ್ಲಿ ವ್ಯತ್ಯಯ ಉಂಟಾದರೆ ಅದರಿಂದಾಗುವ ಅನಾಹುತ ಅಪಾರ ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ರುಕ್ಮಯ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಲ್ಲು ಕಟ್ಟಿಗೆಗಳಿಂದ, ಎಣ್ಣೆಯಿಂದ, ಅನಿಲದಿಂದ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ Read More »

ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ ನಿಧನ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್‍ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ (93) ಇಂದು ಬೆಳಿಗ್ಗೆ ವಯೋ ಸಹಜವಾಗಿ ನಿಧನರಾದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಆಗಿದ್ದರು. ವಿಶ್ವ ಹಿಂದೂ ಪರಿಷತ್‍ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಮೃತರು ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ ನಿಧನ Read More »

ವಿಶ್ವ ಮಹಿಳಾ ದಿನಾಚರಣೆ | ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಮಹಿಳಾ ಘಟಕದಿಂದ ವಿಶೇಷವಾಗಿ ಆಚರಣೆ

ಮಂಗಳೂರು: ಮಂಗಳೂರು ಒಕ್ಕಲಿಗರ ಯಾನೆ  ಗೌಡರ ಸೇವಾ ಸಂಘದ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಂಗಳೂರಿನ ಕೊಡಿಯಾಲ್ ಬೈಲ್ ವಾತ್ಸಲ್ಯಧಾಮ ವೃದ್ಧಾಶ್ರಮಕ್ಕೆ ಭೇಟಿ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ವೃದ್ಧಾಶ್ರಮದಲ್ಲಿರುವ ನಿರಾಶ್ರಿತರಿಗೆ ಅಗತ್ಯ ವಸ್ತುಗಳಾದ ಸೋಪು, ಹಣ್ಣು ಹಂಪಲು, ಬಾತ್ ಟವಲ್ ವಿತರಿಸಿ ಆ ದಿನದ ಭೋಜನ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಕೆಎಂ, ಕಾರ್ಯದರ್ಶಿ ಸಾರಿಕಾ ಸುರೇಶ್, ಉಪಾಧ್ಯಕ್ಷೆ ಸುನಂದ ಜಿ.

ವಿಶ್ವ ಮಹಿಳಾ ದಿನಾಚರಣೆ | ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಮಹಿಳಾ ಘಟಕದಿಂದ ವಿಶೇಷವಾಗಿ ಆಚರಣೆ Read More »

ಬಿಜೆಪಿ ದ.ಕ.ಜಿಲ್ಲಾ ಪ್ರಕೋಷ್ಟಗಳ ಸಹಸಂಚಾಲಕರಾಗಿ ಪ್ರಸನ್ನ ದರ್ಬೆ ನಿಯುಕ್ತಿ

ಪುತ್ತೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಟಗಳ ಸಹ ಸಂಚಾಲಕರಾಗಿ ಪ್ರಸನ್ನ ದರ್ಬೆ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಈ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆ ನೀಡಿದ್ದು, ಲೋಕೋಪಯೋಗಿ ಇಲಾಖೆ ಕೇಂದ್ರ ವಲಯ ವ್ಯಾಪ್ತಿಯ ಶಿವಮೊಗ್ಗ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ದಾವಣಗೆರೆ ವ್ಯಾಪ್ತಿಯಲ್ಲಿ ಬರುವ ಕಟ್ಟಡ, ಸೇತುವೆ ಮತ್ತು ರಸ್ತೆ ಇತ್ಯಾದಿ ಕಾಮಗಾರಿಗಳ ಸ್ಟ್ರಕ್ಚರಲ್ ವಿನ್ಯಾಸ ಇಂಜಿನಿಯರ್ ಆಗಿ ಆಯ್ಕೆಯಾಗಿರುವ ಪ್ರಸನ್ನ ದರ್ಬೆ ಅವರು, ಸರಕಾರಿ ಹುದ್ದೆಯನ್ನು ತೊರೆದು ದಕ್ಷಿಣ

ಬಿಜೆಪಿ ದ.ಕ.ಜಿಲ್ಲಾ ಪ್ರಕೋಷ್ಟಗಳ ಸಹಸಂಚಾಲಕರಾಗಿ ಪ್ರಸನ್ನ ದರ್ಬೆ ನಿಯುಕ್ತಿ Read More »

ದಕ್ಷಿಣ ಭಾರತ ಹಿರಿಯರ ಕ್ರೀಡಾಕೂಟದಲ್ಲಿ ವೆಂಕಟೇಶ್ ಪ್ರಸಾದ್ ರಿಗೆ ಪ್ರಶಸ್ತಿ

ಪುತ್ತೂರು: ಉಡುಪಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಸ್ಟೇಡಿಯಂನಲ್ಲಿ ಎರಡು ದಿನಗಳ ಕಾಲ ನಡೆದ 2ನೇ ದಕ್ಷಿಣ ಭಾರತ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನದ 110 ಮೀ ಹರ್ಡಲ್ಸ್ ನಲ್ಲಿ ಪ್ರಥಮ , ಹೈಜಂಪ್  ಹಾಗೂ 4×100 ಮೀ ರಿಲೇಗಳಲ್ಲಿ ಚತುರ್ಥ ಸ್ಥಾನ ಗಳಿಸಿದ್ದಾರೆ. ದರ್ಬೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆ, ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು ಹಾಗೂ

ದಕ್ಷಿಣ ಭಾರತ ಹಿರಿಯರ ಕ್ರೀಡಾಕೂಟದಲ್ಲಿ ವೆಂಕಟೇಶ್ ಪ್ರಸಾದ್ ರಿಗೆ ಪ್ರಶಸ್ತಿ Read More »

ಮಾ.13 : ಪುತ್ತೂರಿನಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ

ಪುತ್ತೂರು: ಕರ್ನಾಟಕ ಲೋಕಾಯುಕ್ತ ಮಂಗಳೂರು ಘಟಕದ ವತಿಯಿಂದ ಲೋಕಾಯುಕ್ತ ಜನ ಸಂಪರ್ಕ ಸಭೆ ಮಾ.13 ಬುಧವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಡಳಿತದಲ್ಲಿನ ದುರಾಡಳಿತವನ್ನು ಸರಿಪಡಿಸಿ ಪಾರದರ್ಶಕ ಆಡಳಿತ ಒದಗಿಸುವ ನಿಟ್ಟಿನಲ್ಲಿ ಲೋಕಾಯುಕ್ತರು, ಪೊಲೀಸ್ ಮಹಾನಿರ್ದಶಕರು ಹಾಗೂ ನಿಬಂಧಕರು ಈಗಾಗಲೇ ಹೊರಡಿಸಿರುವ ಆದೇಶದಂತೆ ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ, ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ನಿಗದಿತ ಪತ್ರದಲ್ಲಿ ದೂರು ಅರ್ಜಿಗಳನ್ನು ನೀಡಬಹುದು. ಬೆಳಿಗ್ಗೆ 11 ಗಂಟೆಗೆ ಸಭೆ ನಿಗದಿಪಡಿಸಲಾಗಿದ್ದು,

ಮಾ.13 : ಪುತ್ತೂರಿನಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ Read More »

error: Content is protected !!
Scroll to Top