ಪುತ್ತೂರು

ಮುರಳೀಕೃಷ್ಣ ಹಸಂತಡ್ಕರ ಬಂಧನ | ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯ ಮುಖ – ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಭಯೋತ್ಪಾದಕ ಚಟುವಟಿಕೆಯ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಗೆ ಭಾಷಣ ಮಾಡಲೆಂದು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕರನ್ನು ತುಮಕೂರು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ಎಲ್ಲಿಯವರೆಗೆ ತಲುಪಿದೆ ಎಂದರೆ ಭಯೋತ್ಪಾದನೆಯ ವಿರುದ್ಧ ಕೂಡ ಮಾತನಾಡದ ಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಯಾವೂದೇ ಹಿಂದುವಿಗೆ ಅನ್ಯಾಯವಾದರೂ ನಾವು ಅವರ ಜೊತೆಗಿರುತ್ತೇವೆ ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.

ಮುರಳೀಕೃಷ್ಣ ಹಸಂತಡ್ಕರ ಬಂಧನ | ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯ ಮುಖ – ಅರುಣ್ ಕುಮಾರ್ ಪುತ್ತಿಲ Read More »

ಭರದಿಂದ ಸಾಗುತ್ತಿರುವ ಜಟ್ಟಿ ಮನೆತನದ ಶ್ರೀ ದುರ್ಗಾಮಲ್ಲಿಕಾರ್ಜುನ ತರವಾಡು ಮನೆ | ಪ್ರಥಮ ಹಂತದ ನಾಗ ಪ್ರತಿಷ್ಠೆ ವೈದಿಕ ವಿಧಿವಿಧಾನಗಳೊಂದಿಗೆ ಸಂಪನ್ನ

ಪುತ್ತೂರು: ಕೇರಳ ರಾಜ್ಯದ ಕಾಂಞಗಾಡ್ ಚಿತ್ತಾರಿ ಕೊಟ್ಲಂಗಾಡ್ ಜಟ್ಟಿ ಮನೆತನದ ಶ್ರೀ ದುರ್ಗಾಮಲ್ಲಿಕಾರ್ಜುನ ತರವಾಡು ಮನೆಯ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಪ್ರಥಮ ಹಂತದ ಕಾರ್ಯಕ್ರಮವಾಗಿ ನಾಗ ಪ್ರತಿಷ್ಠೆ ಪೂಜಾ ಕಾರ್ಯಕ್ರಮ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕವಲೇದುರ್ಗ ಮಠದ ರಾಜಗುರು ಶ್ರೀ ಮರುಳಸಿದ್ಧ ಶಿವಾಚಾರ್ಯ ಮಹಾಸ್ವಾಮೀಜಿಗಳ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ಪಿ.ಎಸ್‍.ಶಂಕರನಾರಾಯಣನ್ ನಂಬೂರಿ ಅವರ ನೇತೃತ್ವದಲ್ಲಿ ಬೆಳಗ್ಗೆ 12.30 ರ ಶುಭ ಮುಹೂರ್ತದಲ್ಲಿ ನಾಗ ಪ್ರತಿಷ್ಠೆ ನಡೆಯಿತು. ಬಳಿಕ ಮಹಾಪೂಜೆ

ಭರದಿಂದ ಸಾಗುತ್ತಿರುವ ಜಟ್ಟಿ ಮನೆತನದ ಶ್ರೀ ದುರ್ಗಾಮಲ್ಲಿಕಾರ್ಜುನ ತರವಾಡು ಮನೆ | ಪ್ರಥಮ ಹಂತದ ನಾಗ ಪ್ರತಿಷ್ಠೆ ವೈದಿಕ ವಿಧಿವಿಧಾನಗಳೊಂದಿಗೆ ಸಂಪನ್ನ Read More »

ಆಳ್ವಾಸ್ ನ್ಯಾಚುರೋಪತಿ & ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕ

ಪುತ್ತೂರು: ಜಿಲ್ಲೆಯ ಪ್ರತಿಷ್ಟಿತ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕಗೊಂಡಿದ್ದಾರೆ. ಇದೇ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಭಡ್ತಿ ಹೊಂದಿ ಈ ಹುದ್ದೆಗೆ ನೇಮಕಗೊಂಡಿದ್ದಾರೆ. ಇವರು ತಿಂಗಳಾಡಿ ರಾಮಯ್ಯ ರೈ ಹಾಗೂ ಲಕ್ಷ್ಮೀ ದಂಪತಿ ಪುತ್ರಿ , ಮಾಜಿ ಜಿಪಂ ಸದಸ್ಯೆ ಅ‌ನಿತಾ ಹೇಮನಾಥ ಶೆಟ್ಟಿ ಅವರ ಸಹೋದರಿ.

ಆಳ್ವಾಸ್ ನ್ಯಾಚುರೋಪತಿ & ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕ Read More »

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ.

ಪುತ್ತೂರು: ಪ್ರಸಿದ್ಧ ಚಿನ್ನಾಭರಣ ಮಳಿಗೆಗಳಲ್ಲೊಂದಾದ  ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ನವರು ಬೇರೆ ಬೇರೆ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ವರ್ಷ ಮಹಿಳಾ ದಿನಾಚರಣೆ ಪ್ರಯುಕ್ತ  ತಾಲೂಕಿನ ಸಾಧಕ ಮಹಿಳೆಯರನ್ನು  ಗುರುತಿಸಿ  “ಜಿ ಎಲ್ ವುಮನ್ ಆಫ್ ಗೋಲ್ಡ್” ಎಂದು ತಮ್ಮೆಲ್ಲಾ ಶಾಖೆಗಳಿಂದ ಈರ್ವರನ್ನು ಆಯ್ಕೆ ಮಾಡಿದ್ದು ಸುಳ್ಯ ಶಾಖೆಯಿಂದ ಸುಳ್ಯದ ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿ ಹಾಗೂ ಸಂಪಾಜೆಯ ಗೃಹಿಣಿ, ಸಾಹಿತಿ ಸಹನಾ ಕಾಂತಬೈಲು 2024 ರ ಮಹಿಳಾ ದಿನಾಚರಣೆಯ  “ಜಿ

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ. Read More »

ಮುರಳೀಕೃಷ್ಣ ಹಸಂತಡ್ಕ ಬಂಧನ : ಬಜರಂಗದಳ ಖಂಡನೆ

ಪುತ್ತೂರು: ಭಯೋತ್ಪಾದನೆ ವಿರುದ್ಧ ಭಾಷಣ ಮಾಡಲು ತುಮಕೂರಿಗೆ ತೆರಳಿದ ಬಜರಂಗಳದ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕರನ್ನು ತುಮಕೂರು ಪೊಲೀಸರು ಬಂಧಿಸಿರುವ ಘಟನೆಯನ್ನು ಬಜರಂಗದಳ ಖಂಡಿಸಿದೆ. ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ನಡೆಯಬೇಕಾಗಿರುವ ಸಭೆಗೆ ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹ ಸಂಯೋಜಕರಾದ ಮುರಳಿ ಕೃಷ್ಣ ಹಸಂತಡ್ಕ ಇವರನ್ನು ಬಂಧಿಸಿರುವುದು ಖಂಡನೀಯ ಸರಕಾರದ ಈ ಹೇಯ ಕೃತ್ಯವನ್ನು ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲೆ ಉಗ್ರವಾಗಿ ಖಂಡಿಸುತ್ತದೆ. ಭಯೋತ್ಪಾದನೆಯ ವಿರುದ್ಧ ನಡೆಯುತ್ತಾ ಇದ್ದಂತಹ ಈ ಸಭೆಯನ್ನ ಹತ್ತಿಕ್ಕಲು ನೋಡುತ್ತಿರುವಂತಹ ಈ ಸರಕಾರ

ಮುರಳೀಕೃಷ್ಣ ಹಸಂತಡ್ಕ ಬಂಧನ : ಬಜರಂಗದಳ ಖಂಡನೆ Read More »

ಮುರಳೀಕೃಷ್ಣ ಹಸಂತಡ್ಕ ತುಮಕೂರಿನಲ್ಲಿ ಪೊಲೀಸ್ ವಶ !

ಪುತ್ತೂರು: ತುಮಕೂರಿನಲ್ಲಿ ಭಾಷಣ ಮಾಡಲು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಅವರನ್ನು ತುಮಕೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಯೋತ್ಪಾದಕ ಚಟುವಟಿಕೆ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟಣೆಗೆ ಮುರಳೀಕೃಷ್ಣ ಹಸಂತಡ್ಕ ತೆರಳುತ್ತಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.      

ಮುರಳೀಕೃಷ್ಣ ಹಸಂತಡ್ಕ ತುಮಕೂರಿನಲ್ಲಿ ಪೊಲೀಸ್ ವಶ ! Read More »

ಇಂದು ಮೊಗಪ್ಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ, ಶ್ರೀ ಕೊರಗಜ್ಜ ದೈವಗಳ ನೇಮೋತ್ಸವ

ಪುತ್ತೂರು: 3ನೇ ವರ್ಷದ ಶ್ರೀ ಕಲ್ಲುರ್ಟಿ ಹಾಗೂ ಶ್ರೀ ಕೊರಗಜ್ಜ ದೈವದ ನೇಮೋತ್ಸವ ಇಂದು ಮೊಗಪ್ಪೆ ಮನೆಯಲ್ಲಿ ನಡೆಯಲಿದೆ. ಸಂಜೆ 6 ಗಂಟೆಗೆ ಭಂಡಾರ ತೆಗೆದು ಬಳಿಕ ವಿಜೃಂಭಣೆಯ ನೇಮೋತ್ಸವ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧಪ್ರಸಾದ ಸ್ವೀಕರಿಸಿ, ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಕುಟುಂಬದ ಮುಖ್ಯಸ್ಥರು ತಿಳಿಸಿದ್ದಾರೆ. ಪ್ರತೀ ಸಂಕ್ರಮಣದಂದು ಅಗೇಲು ಸೇವೆ ಮಾಡಿಸುವವರು ಮೊ: 9740487418 ನಂಬರ್ ಕರೆ ಮಾಡಿ ತಿಳಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇಂದು ಮೊಗಪ್ಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ, ಶ್ರೀ ಕೊರಗಜ್ಜ ದೈವಗಳ ನೇಮೋತ್ಸವ Read More »

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ

ಪುತ್ತೂರು: ಕಾರ್ಪೋರೇಟ್ ಸಂಸ್ಥೆಗಳು ಬಯಸುವ ತಂತ್ರಜ್ಞಾನಗಳು ಪಠ್ಯಕ್ರಮದ ಮೂಲಕ ತಮ್ಮನ್ನು ತಲಪಲು ಒಂದೆರಡು ವರ್ಷಗಳು ಬೇಕಾಗುತ್ತದೆ. ಈ ಅಂತರವನ್ನು ಕಡಿಮೆ ಮಾಡಲು ವಿದ್ಯಾರ್ಥಿಗಳು ಪೂರಕ ವಿಷಯಗಳನ್ನು ಕಲಿಯುವುದು ಅತೀ ಅಗತ್ಯ ಎಂದು ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ತಂತ್ರಜ್ಞಾನ ಮೇಳ ಅಂತರ್ಯ-2024 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ Read More »

ಮಾ.7: ಪುತ್ತೂರಿನಲ್ಲಿ ಗ್ಯಾರಂಟಿ ಸಮಾವೇಶ | ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಶೋಕ್‍ ರೈ

ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ಸಮಾವೇಶದ ಮೂಲಕ ಅವಲೋಕನ ನಡೆಸಲಾಗುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಮಾ. 6 ರಿಂದ 10 ರ ವರೆಗೆ ಆಯಾ ತಾಲೂಕು ವ್ಯಾಪ್ತಿಯಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮಾ. 7 ರಂದು ಗ್ಯಾರಂಟಿ ಸಮಾವೇಶ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಪೂರ್ವಾಹ್ನ 11 ಗಂಟೆಗೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್

ಮಾ.7: ಪುತ್ತೂರಿನಲ್ಲಿ ಗ್ಯಾರಂಟಿ ಸಮಾವೇಶ | ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಶೋಕ್‍ ರೈ Read More »

ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024”

ಪುತ್ತೂರು: ನಿತ್ಯ ದೈನಂದಿನ ಚಟುವಟಿಕೆಗಳ ನಡುವೆಯೂ ನಾವು ಯಾವುದಾದರೊಂದು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಾಗ ಎದುರಾಗುವ ಯಶಸ್ಸು ಹಾಗೂ ಸೋಲನ್ನು ಸಮನಾಗಿ ಸ್ವೀಕರಿಸಿ ಮುಂದಡಿಯಿಟ್ಟಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್ ಹೇಳಿದರು. ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸಂಪ್ಯ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ ,2024″ನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿ, ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಪುತ್ತೂರು ತಾಲೂಕು ನಿವೃತ್ತ ಸಹಾಯಕ

ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024” Read More »

error: Content is protected !!
Scroll to Top