ಸಾಹಿತ್ಯ ಎನ್ನುವುದು ನಮ್ಮನ್ನು ಬೆಸೆಯುವಂತದ್ದು | ಬಾಳಿಗೆ ಬೆಳಕು ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಸ್ಕರ್ ಕೋಡಿಂಬಾಳ
ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ರೋಟರಿ ಕ್ಲಬ್ ಪುತ್ತೂರು ಸ್ವರ್ಣ, ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಸಂಯುಕ್ತ ಆಶ್ರಯದಲ್ಲಿ ಯುವ ಕವಯತ್ರಿ ಪ್ರಿಯಾ ಸುಳ್ಯರವರ ಬಾಳಿಗೆ ಬೆಳಕು ಕೃತಿ ಬಿಡುಗಡೆ ಸಮಾರಂಭ ಮನಿಷಾ ಸಭಾಂಗಣದಲ್ಲಿ ನಡೆಯಿತು. ದೀಪ ಪ್ರಜ್ವಲಿಸಿ ಮಾತನಾಡಿದ ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಮಾತನಾಡಿ, ಸಾಹಿತ್ಯ ಎನ್ನುವುದು ನಮ್ಮನ್ನ ಬೆಸೆಯುವಂತದ್ದು. ಸಾಹಿತಿಗಳು ಬರೆದಂತೆ ನಡೆಯುವ ಗುಣ ಹೊಂದಿರುವವರಾಗಿದ್ದಲ್ಲಿ ಸ್ವಚ್ಛ ಸಮಾಜದ ನಿರ್ಮಾಣ ಸಾಧ್ಯ ಎಂದು ಕೃತಿಕಾರರಿಗೆ ಅಭಿನಂದಿಸಿದರು. ದೆಹಲಿ ಕರ್ನಾಟಕ ಸಂಘದ […]










