ಗ್ರಾಮ ಸಾಹಿತ್ಯ ಸಂಭ್ರಮ ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಕಡೆಗೆ ಒಲವು ಮೂಡಿಸುವ ಸ್ತುತ್ಯಾರ್ಹ ಕಾರ್ಯಕ್ರಮ : ಬಿ. ವೆಂಕಟರಮಣ ಬೋರ್ಕರ್ | ಸಾಹಿತ್ಯ ನಡಿಗೆ ಗ್ರಾಮದ ಕಡೆಗೆ ಸರಣಿ ಕಾರ್ಯಕ್ರಮ
ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ನೇತೃತ್ವದಲ್ಲಿ, ಶಿಕ್ಷಣಾಧಿಕಾರಿಗಳ ಕಛೇರಿ, ನಿಡ್ಪಳ್ಳಿ ಗ್ರಾಮ ಪಂಚಾಯಿತಿ ಸಹಕಾರದಲ್ಲಿ, ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ 13, ನಿಡ್ಪಳ್ಳಿ ಸಮುದಾಯ ಭವನದಲ್ಲಿ ನಡೆಯಿತು. ನಿಡ್ಪಳ್ಳಿ ಗ್ರಾಪಂ ಅಧ್ಯಕ್ಷ ಬಿ.ವೆಂಕಟರಮಣ ಬೋರ್ಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಒಲವು ಹೆಚ್ಚಾಗಲು ಗ್ರಾಮ ಸಾಹಿತ್ಯ […]










