ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ | ನಿರ್ಮಾಣವಾಗಲಿದೆ 1.28 ಕೋಟಿ ರೂ. ವೆಚ್ಚದ ನೂತನ ಕಟ್ಟಡ
ಪುತ್ತೂರು: ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ ಗುರುವಾರ ನಡೆಯಿತು. ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆಯಲ್ಲಿ ಸುಮಾರು 1.28 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಂಘದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ರವಿಚಂದ್ರ ನೆಲ್ಲಿತ್ತಾಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಗೌಡ ಶಿಲಾನ್ಯಾಸ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಸೀತಾರಾಮ, ಉಪಾಧ್ಯಕ್ಷ ಅಬ್ದುಲ್ ಹಕೀಂ, ನಿರ್ದೇಶಕರಾದ ಕೆ.ಚಂದಪ್ಪ ಪೂಜಾರಿ, ಎ.ಯಂ.ಪ್ರಕಾಶ್ಚಂದ್ರ ಆಳ್ವ, ಎ.ಎಂ.ಪ್ರವೀಣ್ ಚಂದ್ರ ಆಳ್ವ, ಅಂಬ್ರೋಸ್ ಡಿ’ಸೋಜಾ, ನವೀನ […]










