ಪುತ್ತೂರು

ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು ಹೊರೆಕಾಣಿಕೆ ಕಾರ್ಯಾಲಯ

ಪುತ್ತೂರು: ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಫೆ.16ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಡುವ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಪೂರ್ವಭಾವಿಯಾಗಿ ಫೆ.14ರಂದು ದೇವಳದ ವಠಾರದಲ್ಲಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಸಂಸ್ಥಾನಮ್‌ ನಲ್ಲಿಅರ್ಚಕ ವೇ. ಮೂ. ವಿ. ಎಸ್ ಭಟ್ ಅವರು ದೀಪ ಪ್ರಜ್ವಲನೆ ಮಾಡಿದರು. ಈ ಸಂದರ್ಭ […]

ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು ಹೊರೆಕಾಣಿಕೆ ಕಾರ್ಯಾಲಯ Read More »

ಸ್ನಾನಕ್ಕೆ ತೆರಳಿದ ಮಹಿಳೆ ಲಲಿತಾ ಕುಸಿದು ಬಿದ್ದು ಮೃತ್ಯು

ಪುತ್ತೂರು: ಮಹಿಳೆಯೊಬ್ಬರು ಸ್ನಾನದ ಕೊಠಡಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕೆಯ್ಯೂರು ಗ್ರಾಮದ ದೇವಿನಗರ ಜನತಾ ಕಾಲೋನಿಯಲ್ಲಿ ನಡೆದಿದೆ. ಕಾಲೋನಿ ನಿವಾಸಿ ಅಣ್ಣು ಎಂಬವರ ಪತ್ನಿ ಲಲಿತಾ (42) ಮೃತಪಟ್ಟವರು. ಲಲಿತಾ ಅವರು ಸ್ನಾನಕ್ಕೆ ತೆರಳಿದವರು ಹೊರಗೆ ಬಾರದೇ ಇದ್ದಾಗ ಸ್ನಾನದ ಕೊಠಡಿಯಲ್ಲಿ ನೋಡಿದಾಗ ರಕ್ತಸಿಕ್ತವಾಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ನಾನಕ್ಕೆ ತೆರಳಿದ ಮಹಿಳೆ ಲಲಿತಾ ಕುಸಿದು ಬಿದ್ದು ಮೃತ್ಯು Read More »

ನಾಳೆ(ಫೆ.15-17): ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಫೆ.15 ರಿಂದ ಫೆ.17 ರ ತನಕ ವಿವಿಧ ವೈದಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುತ್ತೂರಿನಿಂದ ಸುಮಾರು 13 ಕಿ.ಮೀ. ದೂರದಲ್ಲಿರುವ ವೀರಮಂಗಲ ಕ್ಷೇತ್ರವು ಪ್ರಾಚೀನ ಕಾಲದಲ್ಲಿ ನಿತ್ಯಮಂಗಲ ಎಂಬ ಹೆಸರನ್ನು ಪಡೆದಿತ್ತು. ತದನಂತರ ಬಲ್ಲಾಳ ಮನೆತನದ ವೀರಮ್ಮ ಬಳ್ಳಾಲ್ತಿಯ ಶೌರ್ಯದ ಪ್ರತೀಕವಾಗಿ ವೀರಮಂಗಲವಾಯಿತೆಂಬ ಇತಿಹಾಸವಿದೆ. ಈ ಊರಿನ ಭಕ್ತರ ಭಕ್ತಿಯ ಪ್ರತೀಕವಾಗಿ ಪುಣ್ಯವಾಹಿನಿ ಕುಮಾರಧಾರ ನದಿ ತಟದಲ್ಲಿ ಕಂಗೊಳಿಸುವ ಪವಿತ್ರ

ನಾಳೆ(ಫೆ.15-17): ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ Read More »

ಕೃಷ್ಣನಗರದ ಭರತ್ ನಿಧನ!

ಪುತ್ತೂರು: ಕೆಮ್ಮಾಯಿ ಕೃಷ್ಣನಗರ ಬಡಾವು ನಿವಾಸಿ ಇಲೆಕ್ಟ್ರಿಷಿಯನ್ ಭರತ್ (38) ಹೃದಯಾಘಾತದಿಂದ ನಿಧನರಾದರು. ಪುತ್ತೂರಿನ ಶಾಂತಿನಾಥ ಬಸದಿಯ ಬಳಿ ಇರುವ ಕವಿತಾ ಇಲೆಕ್ಟ್ರಿಕಲ್‌ನ ಮಾಲಕ ರುಕ್ಮಯ್ಯ ಎಂಬವರ ಪುತ್ರರಾಗಿದ್ದು, ಇಲೆಕ್ಟ್ರಿಷಿಯನ್ ವೃತ್ತಿ ನಿರ್ವಹಿಸುತ್ತಿದ್ದರು. ರಾತ್ರಿ ಮನೆಯಲ್ಲಿ ಮಲಗಿದ್ದ ಅವರು, ಆರೋಗ್ಯದಲ್ಲಿ ಏರುಪೇರಾಗಿ ಬೆಳಗ್ಗಿನ ಜಾವ ನಿಧನರಾದರು. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ಕೃಷ್ಣನಗರದ ಭರತ್ ನಿಧನ! Read More »

‘ಕ್ಯಾಂಪ್ಕೋ ಚಿತ್ತ ಸದಸ್ಯರ ಆರೋಗ್ಯದತ್ತ’ ಯೋಜನೆಯ ಸಹಾಯಧನ ಹಸ್ತಾಂತರ

ಪುತ್ತೂರು: ‘ಕ್ಯಾಂಪ್ಕೋ ಚಿತ್ತ ಸದಸ್ಯರ ಆರೋಗ್ಯದತ್ತ’ ಯೋಜನೆಯಡಿ ಸಂಸ್ಥೆಯ ಸಕ್ರಿಯ ಸದಸ್ಯ ಗಿರೀಶ್.ಪಿ. ಅವರ ತಾಯಿಯವರ ಆ್ಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ ಹಸ್ತಾಂತರಿಸಲಾಯಿತು. ಸಹಾಯಧನ 50 ಸಾವಿರ ರೂಪಾಯಿಯ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಗಿರೀಶ್ ಅವರಿಗೆ ಪುತ್ತೂರು ಶಾಖೆಯಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾವು-ಪುತ್ತೂರು ಪ್ರಾಂತೀಯ ವ್ಯವಸ್ಥಾಪಕ ಜಯರಾಮ ಶೆಟ್ಟಿ.ಎ., ಶಾಖಾ ಪ್ರಬಂಧಕ ಅಮರೇಶ್ ಪಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

‘ಕ್ಯಾಂಪ್ಕೋ ಚಿತ್ತ ಸದಸ್ಯರ ಆರೋಗ್ಯದತ್ತ’ ಯೋಜನೆಯ ಸಹಾಯಧನ ಹಸ್ತಾಂತರ Read More »

ಭಾರತದಲ್ಲಿ ಜಾತಿ ಗಣತಿ ಯಾಕೆ ಅಪಾಯಕಾರಿ? : ಅಶ್ವಿನ್ ಎಲ್. ಶೆಟ್ಟಿ

ಭಾಗ-4 ಇದೇ ಸೂತ್ರಕ್ಕೆ ಅನುಗುಣವಾಗಿ ಬೇರೆ ಉದಾಹರಣೆಯನ್ನು ಗಮನಿಸೋಣ. ಪಶ್ಚಿಮ ಬಂಗಾಳದ ಬಗ್ಗೆ ಹೇಳುವುದಾದರೆ ಅಲ್ಲಿ ಬ್ರಾಹ್ಮಣರ ಜನಸಂಖ್ಯೆ ತುಂಬಾ ಕಡಿಮೆ. ಅಂದರೆ ಬ್ರಾಹ್ಮಣ ಜಾತಿಯಿಂದ ಬಂದಿರುವ ಮಮತ ಬಂಡೋಪಧ್ಯಾಯ, ಮಮತ ಬ್ಯಾನರ್ಜಿ ಕೂಡಾ ರಾಜೀನಾಮೆ ನೀಡಬೇಕಾಗುತ್ತದೆ ಮತ್ತು ಮುಸ್ಲಿಮರ ಜನಸಂಖ್ಯೆ ಯಾವಾಗಲೂ 27% ಇರುವಂತೆ ನೋಡಿಕೊಳ್ಳಬೇಕು. ಎ.ಐ.ಎಂ.ಐ.ಎಂ. ಪಕ್ಷದ ನಾಯಕ ಓಲೈಸಿ ಸಾಹೇಬ್ ಕೂಡಾ ತಮ್ಮ ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಹಾಗೆಯೇ ಎಲ್ಲಾ ಪ್ರಮುಖ ಸ್ಥಾನಗಳನ್ನು ಮುಸ್ಲಿಮರಿಗೆ ನೀಡಬೇಕು ಏಕೆಂದರೆ ಅವರ ಜನಸಂಖ್ಯೆಯೂ 85%

ಭಾರತದಲ್ಲಿ ಜಾತಿ ಗಣತಿ ಯಾಕೆ ಅಪಾಯಕಾರಿ? : ಅಶ್ವಿನ್ ಎಲ್. ಶೆಟ್ಟಿ Read More »

ನಾಳೆ: ಪ್ರಬಂಧ-ಚಿತ್ರಕಲೆ-ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ, ಕ.ಸಾ.ಪ. ಪುತ್ತೂರು ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣ

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಹಾಗೂ ಬಾಲವನ ಅಭಿವೃದ್ಧಿ ಸಮಿತಿ ಪುತ್ತೂರು ಸಹಯೋಗದಲ್ಲಿ 75 ನೇ ಗಣರಾಜ್ಯೋತ್ಸವದ ಕುರಿತ ಪ್ರಬಂಧ-ಚಿತ್ರಕಲೆ-ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಕ.ಸಾ.ಪ. ಪುತ್ತೂರು ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣ ಫೆ.14 ಬುಧವಾರ ಪರ್ಲಡ್ಕ ಬಾಲವನದಲ್ಲಿ ನಡೆಯಲಿದೆ. ಬೆಳಗ್ಗೆ 9 ರಿಂದ ನಡೆಯುವ ಕಾರ್ಯಕ್ರಮವನ್ನು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.

ನಾಳೆ: ಪ್ರಬಂಧ-ಚಿತ್ರಕಲೆ-ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ, ಕ.ಸಾ.ಪ. ಪುತ್ತೂರು ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣ Read More »

ಮಾ.9: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ಸಮಿತಿ ಗೌರವಾಧ್ಯಕ್ಷರಾಗಿ ರವಿ ಶೆಟ್ಟಿ ನೇಸರಕಂಪ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ

ಪುತ್ತೂರು: ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮಾ.9 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೂಡಂಬೈಲು ರವಿ ಶೆಟ್ಟಿ ನೇಸರ ಕಂಪ, ಅಧ್ಯಕ್ಷರಾಗಿ ಅರುಣ್ ಕುಮಾ‌ರ್ ಪುತ್ತಿಲ ಹಾಗೂ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ ಆಯ್ಕೆಯಾಗಿದ್ದಾರೆ. ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಜಯಪ್ರಸಾದ ಅಂಬಟ, ಉಮೇಶ್ ಗೌಡ ಗುತ್ತಿನಪಾಲು, ಶೇಷಪ್ಪ ಶೆಟ್ಟಿ ಪೊನೋಣಿ, ಗಣೇಶ್ ಗೌಡ ಪಜಿಮಣ್ಣು, ಉಮೇಶ್ ಅಂಬಟ, ಧನಂಜಯ ಕುಲಾಲ್

ಮಾ.9: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ಸಮಿತಿ ಗೌರವಾಧ್ಯಕ್ಷರಾಗಿ ರವಿ ಶೆಟ್ಟಿ ನೇಸರಕಂಪ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ Read More »

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷರ ಕುರಿತು ಹೀನಾಯ ಶಬ್ಧಗಳಿಂದ ಮಾತನಾಡಿರುವುದು ಖಂಡನೀಯ | ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಚಂದ್ರಶೇಖರ ಆರೋಪ

ಪುತ್ತೂರು: ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಹಾಗೂ ನೆಲ್ಯಾಡಿ ಮೊರಂಕಲ ಅಣ್ಣು ನಾಯ್ಕರ ಕುರಿತು ದಲಿತ ಸಂಘರ್ಷ ಸಮಿತಿ ಭೀಮವಾದ ಉಡುಪಿ ಜಿಲ್ಲೆಯ ವಿಶ್ವನಾಥ ಬೆಳ್ಳಂಪಳ್ಳಿ ಅವರು ಸ್ವಯಂ ಘೋಷಿತ ಮುಖಂಡ, ವಸೂಲುಗಾರನೆಂದು ಹೀನಾಯ ಶಬ್ದಗಳಿಂದ ಮಾತನಾಡಿದ್ದು, ಯಾವುದೇ ವ್ಯಕ್ತಿಯ ಪೂರ್ವಾಪರ ತಿಳಿಯದೇ ಹೀಗೆ ಮಾತನಾಡುವುದು ಖಂಡನೀಯ ಎಂದು ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ತಿಳಿಸಿದ್ದಾರೆ. ಮಂಗಳವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಶಬ್ಧಗಳಿಂದ ಮಾತನಾಡಿರುವುದು

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷರ ಕುರಿತು ಹೀನಾಯ ಶಬ್ಧಗಳಿಂದ ಮಾತನಾಡಿರುವುದು ಖಂಡನೀಯ | ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಚಂದ್ರಶೇಖರ ಆರೋಪ Read More »

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಪುತ್ತೂರು: ಮತದಾನ ಮಾಡುವುದು ಎಲ್ಲರ ಕರ್ತವ್ಯ. ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಸ್ವ ಇಚ್ಛೆಯಿಂದ ಮತದಾನ ಮಾಡುವುದು ಮುಖ್ಯ. ವಿದ್ಯಾರ್ಥಿಗಳಾದವರು ಸಂವಿಧಾನದ ಮೌಲ್ಯವನ್ನು ಅರಿತುಕೊಂಡು ಮುಂದೆ ಸಾಗಬೇಕು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ. ಸಿ

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ Read More »

error: Content is protected !!
Scroll to Top