ಪುತ್ತೂರು

ಫೆ.15: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಯವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದ ಕುರಿತು ಸಮಾಲೋಚನಾ ಸಭೆ

ಪುತ್ತೂರು: ಹಿರಿಯ ವಿದ್ವಾಂಸರು, ವಿಮರ್ಶಕರೂ ಆಗಿರುವ ಲಕ್ಷ್ಮೀಶ ತೋಳ್ಪಾಡಿ  ಅವರ ‘ಮಹಾಭಾರತ ಅನುಸಂಧಾನ ಭಾರತ ಯಾತ್ರೆ’ ಕೃತಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ಫೆ.15 ಗುರುವಾರ 4 ಗಂಟೆಗೆ ಅನುರಾಗ ವಠಾರದಲ್ಲಿ ನಡೆಯಲಿದೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ, ಹಿರಿಯ ಸಾಹಿತಿ ಪುರಂದರ ಭಟ್ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಲಿದೆ. ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಲಭಿಸಿದ ಪ್ರಶಸ್ತಿ ಕೇವಲ […]

ಫೆ.15: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಯವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದ ಕುರಿತು ಸಮಾಲೋಚನಾ ಸಭೆ Read More »

ಯುವ ಒಕ್ಕಲಿಗ ಗೌಡ ಸಂಘದ ‘ಯುವ ಕ್ರೀಡಾ ಸಂಭ್ರಮ-2024’ | ಕ್ರೀಡಾಜ್ಯೋತಿ  ವಾಹನ ಜಾಥಾಕ್ಕೆ ಚಾಲನೆ

ಪುತ್ತೂರು: ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘ಯುವ ಕ್ರೀಡಾ ಸಂಭ್ರಮ-2024’ದ ಕ್ರೀಡಾಜ್ಯೋತಿ ವಾಹನ ಜಾಥಾಕ್ಕೆ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು. ಪ್ರಗತಿಪರ ಕೃಷಿಕೆ ಯಶೋಧ ಮೋನಪ್ಪ ಗೌಡ ತೆಂಗಿನಕಾಯಿ ಒಡೆಯುವ ಮೂಲಕ ಕ್ರೀಡಾಜ್ಯೋತಿ  ವಾಹನ ಜಾಥಾಕ್ಕೆ ಚಾಲನೆ ನೀಡಿದರು. ಚಾಲನೆ ನೀಡಿದರು. ಬಳಿಕ ಕ್ರೀಡಾಜ್ಯೋತಿಯನ್ನು ಕ್ರೀಡಾ ಸಂಭ್ರಮ ನಡೆಯುವ ತೆಂಕಿಲ ವಿವೇಕಾನಂದ

ಯುವ ಒಕ್ಕಲಿಗ ಗೌಡ ಸಂಘದ ‘ಯುವ ಕ್ರೀಡಾ ಸಂಭ್ರಮ-2024’ | ಕ್ರೀಡಾಜ್ಯೋತಿ  ವಾಹನ ಜಾಥಾಕ್ಕೆ ಚಾಲನೆ Read More »

ಹೆಸರಿಗಾಗಿ ಮಾತ್ರ ಕೆಡ್ಡಸ ಆಚರಣೆ ಆಗಬಾರದು | ಒಕ್ಕಲಿಗ ಗೌಡ ಸಂಘದ ಮಹಿಳಾ ಘಟಕದಿಂದ ನಡೆದ ಕೆಡ್ಡಸ ಆಚರಣೆ ಮಾಹಿತಿ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಉಷಾ

ಪುತ್ತೂರು: ಕೆಡ್ಡಸವನ್ನು ಕೇವಲ ಹೆಸರಿಗಾಗಿ ಮಾತ್ರ ಆಚರಣೆ ಮಾಡಬಾರದು. ಬದಲಾಗಿ ಕಾಯಾ-ವಾಚಾ-ಮನಸಾ ಆಚರಣೆಯಲ್ಲಿ ಒಳಗೊಂಡಿರಬೇಕು. ಆಗ ಪ್ರತೀ ಮನೆಯಲ್ಲಿ ಕೆಡ್ಡಸ ಆಚರಣೆ ಮಹತ್ವ ಪಡೆಯಲು ಸಾಧ್ಯ ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಧ್ಯಾಪಕಿ ಉಷಾ ಅಭಿಪ್ರಾಯಪಟ್ಟರು. ಅವರು ಶನಿವಾರ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ಒಕ್ಕಲಿಗ ಗೌಡ ಸೇವಾ ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಕೆಡ್ಡಸ ಆಚರಣೆ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದಲ್ಲಿ ಹೆಣ್ಣಿಗೆ ಹೇಗೆ ವಿಶೇಷ ಗೌರವ ನೀಡುತ್ತಾರೋ ಹಾಗೇ

ಹೆಸರಿಗಾಗಿ ಮಾತ್ರ ಕೆಡ್ಡಸ ಆಚರಣೆ ಆಗಬಾರದು | ಒಕ್ಕಲಿಗ ಗೌಡ ಸಂಘದ ಮಹಿಳಾ ಘಟಕದಿಂದ ನಡೆದ ಕೆಡ್ಡಸ ಆಚರಣೆ ಮಾಹಿತಿ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕಿ ಉಷಾ Read More »

ಫೆ.20-21 ಬ್ರಹ್ಮರಕೋಡಿ ಕುಟುಂಬ ತರವಾಡು ಮನೆಯ ಧರ್ಮದೈವ, ಪರಿವಾರ ದೈವಗಳ ಪುನಃ ಪ್ರತಿಷ್ಠೆ | ಫೆ.27-28 : ನೇಮೋತ್ಸವ

ಪುತ್ತೂರು: ಬ್ರಹ್ಮರಕೋಡಿ ಕುಟುಂಬದ ತರವಾಡು ಮನೆಯ ಧರ್ಮದೈವ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠೆ ಫೆ.20 ಹಾಗೂ 21 ರಂದು ಮತ್ತು ನೇಮೋತ್ಸವ ಫೆ.27 ಹಾಗೂ 28 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಹಾಗೂ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.20 ರಂದು ಸಂಜೆ 4 ಕ್ಕೆ ತಂತ್ರಿಗಳ ಆಗಮನ, ಸಂಜೆ 6 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಪುಣ್ಯಹಾಂತ ನಡೆಯಲಿದೆ. ಫೆ.21

ಫೆ.20-21 ಬ್ರಹ್ಮರಕೋಡಿ ಕುಟುಂಬ ತರವಾಡು ಮನೆಯ ಧರ್ಮದೈವ, ಪರಿವಾರ ದೈವಗಳ ಪುನಃ ಪ್ರತಿಷ್ಠೆ | ಫೆ.27-28 : ನೇಮೋತ್ಸವ Read More »

ಸವಣೂರು ವಿದ್ಯಾರಶ್ಮಿಯಲ್ಲಿ ಯು.ಕೆ.ಜಿ. ಯ ಘಟಿಕೋತ್ಸವ

ಸವಣೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2023-24ನೇ ಸಾಲಿನ ಯು.ಕೆ.ಜಿ. ತರಗತಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ದಿನವನ್ನು ಏರ್ಪಡಿಸಲಾಯಿತು. ಸಮಾರಂಭವನ್ನು ಕಸ್ತೂರಿಕಲಾ ಎಸ್. ರೈ ಉದ್ಘಾಟಿಸಿ ಶುಭ ಹಾರೈಸಿದರು. ಅತಿಥಿಯಾಗಿ ಆರೆಲ್ತಡಿ ಅಂಗನವಾಡಿ ಶಿಕ್ಷಕಿ ಮಮತಾ ಸಿ. ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಮಾತನಾಡಿ, ಮಕ್ಕಳನ್ನು ರೂಪಿಸುವ ಕೆಲಸ ಕೇವಲ ಶಾಲೆಯದ್ದು ಮಾತ್ರವಲ್ಲ. ಬದಲಿಗೆ ಅದು ಶಿಕ್ಷಕರು ಮತ್ತು ಪೋಷಕರು ಇಬ್ಬರಿಗೂ ಸೇರಿದ್ದು. ಎರಡೂ ಕೈ ಸೇರಿದಾಗ ಚಪ್ಪಾಳೆ ಆಗುವಂತೆ ಶಾಲೆ

ಸವಣೂರು ವಿದ್ಯಾರಶ್ಮಿಯಲ್ಲಿ ಯು.ಕೆ.ಜಿ. ಯ ಘಟಿಕೋತ್ಸವ Read More »

ಹಿಂಜಾವೇ ಮುಖಂಡರ ಗಡಿಪಾರು | ಉಪವಿಭಾಗೀಯ ದಂಡಾಧಿಕಾರಿಯವರ ನೋಟೀಸ್ ಗೆ ನ್ಯಾಯಾಲಯದಿಂದ ತಡೆ

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮುಖಂಡರ ಗಡಿಪಾರಿಗೆ ಸಂಬಂಧಿಸಿದಂತೆ ಉಪವಿಭಾಗೀಯ ದಂಡಾಧಿಕಾರಿಯವರ ನೋಟೀಸ್ ಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಡೆ ನೀಡಿದೆ. ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ದಿನೇಶ್ ಪಂಜಿಗ ಮತ್ತು ಬೆಳ್ತಂಗಡಿಯ ಯಶೋಧರ ಅವರಿಗೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55 ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳಿ ಉಪವಿಭಾಗೀಯ ದಂಡಾಧಿಕಾರಿ ನೋಟೀಸ್ ಜಾರಿ ಮಾಡಿದ್ದರು. ನೀವು

ಹಿಂಜಾವೇ ಮುಖಂಡರ ಗಡಿಪಾರು | ಉಪವಿಭಾಗೀಯ ದಂಡಾಧಿಕಾರಿಯವರ ನೋಟೀಸ್ ಗೆ ನ್ಯಾಯಾಲಯದಿಂದ ತಡೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಭೇಟಿ

ಪುತ್ತೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಮೊದಲಿಗೆ ಶ್ರೀ ದೇವರ ದರ್ಶನ ಪಡೆದ ಅವರು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಬೂಡಿಯಾರ್ ರಾಧಾಕೃಷ್ಣ ಕಾಮಗಾರಿ ಕುರಿತು ವಿವರಿಸಿದರು. ಸಮಿತಿಯ ಜಯಂತ ಶೆಟ್ಟಿ ಕಂಬಳದಡ್ಡ, ವಿಜಯ ಬಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಭೇಟಿ Read More »

ಫೆ.18: ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ, ಸಾಹಿತ್ಯ ಸಂಜೆ, ಗೀತ ಗುಂಜನ

ಪುತ್ತೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ಸಾಹಿತ್ಯ ಸಂಜೆ ಫೆ.18 ಭಾನುವಾರ ಉಪ್ಪಿನಂಗಡಿ ಪಂಜಳ ಸುಧಾಮ ಮನೆಯಂಗಳದ ಮಣಿಮಂಟಪ ಸಭಾಂಗಣದಲ್ಲಿ ನಡೆಯಲಿದೆ. 18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ನೆನಪಿನ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮವಾಗಿದ್ದು, ಉಪ್ಪಿನಂಗಡಿ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ನಡೆಯಲಿದೆ. ಸ್ವಾತಿ ಎನ್.ಎಸ್. ಅವರಿಂದ ಗೀತ ಗುಂಜನ, ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಅವರಿಂದ ಮಹಾಭಾರತ ಅನುಸಂಧಾನ ಪ್ರಸ್ತುತಗೊಳ್ಳಲಿದೆ. ಹಿರಿಯ ವಿದ್ವಾಂಸ ಡಾ.ತಾಳ್ತಜೆ

ಫೆ.18: ಕನ್ನಡ ಸಾಹಿತ್ಯ ಪರಿಷತ್ ಉಪ್ಪಿನಂಗಡಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ, ಸಾಹಿತ್ಯ ಸಂಜೆ, ಗೀತ ಗುಂಜನ Read More »

ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್. ಚತುರ್ಥ ಸ್ಥಾನ | ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಹಾಗೂ ನ್ಯೂಸ್ ಪುತ್ತೂರಿನಿಂದ ಸನ್ಮಾನ, ಅಭಿನಂದನೆ

ಪುತ್ತೂರು: ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಚತುರ್ಥ ಸ್ಥಾನ ಪಡೆದ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಅವರಿಗೆ ಪ್ರತಿಷ್ಠಿತ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಹಾಗೂ ನ್ಯೂಸ್ ಪುತ್ತೂರು ವತಿಯಿಂದ ಸನ್ಮಾನ ಕಾರ್ಯಕ್ರಮ ಶುಕ್ರವಾರ ಸಂಜೆ ನ್ಯೂಸ್ ಪುತ್ತೂರು ಕಚೇರಿಯಲ್ಲಿ ನಡೆಯಿತು. ಶ್ರೀಮಾ ಕೆ.ಎಚ್‍. ಅವರನ್ನು ಶಾಲು ಹೊದಿಸಿ, ಪೇಟ ತೊಡಿಸಿ, ಹಾರ ಹಾಕಿ, ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕರಾದ ವಸಂತ ವೀರಮಂಗಲ ಶ್ರೀಮಾ ಸಾಧನೆಯ ಕುರಿತು

ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್. ಚತುರ್ಥ ಸ್ಥಾನ | ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಹಾಗೂ ನ್ಯೂಸ್ ಪುತ್ತೂರಿನಿಂದ ಸನ್ಮಾನ, ಅಭಿನಂದನೆ Read More »

ಉದ್ಯೋಗ ನೀಡುವುದಾಗಿ ವಂಚನೆ | ಮೂವರು ಆರೋಪಿಗಳ ಬಂಧನ

ಪುತ್ತೂರು: ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರಬಾಯಿ ಸಿ.ಆರ್. (23), ರಾಹುಲ್ ಕುಮಾರ್ ನಾಯ್ಕ (19) ಹಾಗೂ ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್. (21) ಬಂಧಿತ ಆರೋಪಿಗಳು. ಇದೀಗ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಾಧ್ಯಮದಲ್ಲಿ ದ.ಕ., ಉಡುಪಿ ಜಿಲ್ಲೆಗಳಲ್ಲಿ ಕಚೇರಿ ಕೆಲಸ ಖಾಲಿ ಇದೆ ಎಂದು ಜಾಹೀರಾತು ನೋಡಿ, ಜಾಹೀರಾತಿನಲ್ಲಿ ನಮೂದಿಸಿದ ಮೊಬೈಲ್ ನಂಬರ್‍

ಉದ್ಯೋಗ ನೀಡುವುದಾಗಿ ವಂಚನೆ | ಮೂವರು ಆರೋಪಿಗಳ ಬಂಧನ Read More »

error: Content is protected !!
Scroll to Top