ಬಿಜೆಪಿ ಸೇರ್ಪಡೆ ಕುರಿತು ಷರತ್ತುಗಳಿಗೆ ಒಪ್ಪಿಕೊಳ್ಳುವ ಮತ್ತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ | ಮುಂದಿನ ಮೂರು ದಿನಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು | ರಾಷ್ಟ್ರೀಯ ಪಕ್ಷ ಬಿಜೆಪಿಗೆ ಸವಾಲೆಸೆದ ಶ್ರೀಕೃಷ್ಣ ಉಪಾಧ್ಯಾಯ
ಪುತ್ತೂರು: ಮುಂದಿನ ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಬೇಕು. ಆದರೆ ಬಿಜೆಪಿ ಸೇರ್ಪಡೆ ಕುರಿತು ಯಾವುದೇ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಹೀಗೆಂದು ಹೇಳಿದ್ದಾರೆ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ. ಪುತ್ತಿಲ ಪರಿವಾರ ವತಿಯಿಂದ ನಡೆದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಅವರು ರಾಷ್ಟ್ರೀಯ ಪಕ್ಷವಾದ ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ಹಿಂದೂಗಳ ನೋವಿಗೆ ರಾತ್ರಿ ಹಗಲೆನ್ನದೆ ಸ್ಪಂದಿಸುತ್ತಿರುವ ಅರುಣ್ ಕುಮಾರ್ ಪುತ್ತಿಲರ ನಾಯಕತ್ವವಿಲ್ಲದೆ ಪುತ್ತೂರಿನಲ್ಲಿ ಯಾರಿಗೂ ತಾಕತ್ತಿಲ್ಲ. ಪ್ರಸ್ತುತ ಬಿಜೆಪಿಗೆ ಪುತ್ತಿಲ ಪರಿವಾರವನ್ನು ಒಳಗೆ […]










