ಪುತ್ತೂರು

ಫೆ. 4: ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ವಲಯ ಮಟ್ಟದ ಯುವ ಕ್ರೀಡಾ ಸಂಗಮ

ಪುತ್ತೂರು: ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಈಶ್ವರಮಂಗಲ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ, ಒಕ್ಕಲಿಗ ಗೌಡ ಮಹಿಳಾ ಘಟಕದ ಸಹಭಾಗಿತ್ವದಲ್ಲಿ ಮಾಡ್ನೂರು, ಬಡಗನ್ನೂರು, ನೆಟ್ಟಣಿಗೆ ಮುಡ್ನೂರು, ಪಡವನ್ನೂರು, ನಿಡ್ಪಳ್ಳಿ, ನೆಟ್ಟಣಿಗೆ, ಬೆಳ್ಳೂರು ಗ್ರಾಮಗಳನ್ನು ಒಳಗೊಂಡ ವಲಯ ಮಟ್ಟದ ಯುವ ಕ್ರೀಡಾ ಸಂಗಮ ಫೆ. 4ರಂದು ಪಟ್ಟೆ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ನಡೆಯುವ ಕ್ರೀಡಾಕೂಟವನ್ನು ಪಟ್ಟೆ ವಿದ್ಯಾಸಂಸ್ಥೆಗಳ ಸಂಚಾಲಕ ನಾರಾಯಣ ಭಟ್ ಬಿರ್ನೋಡಿ ಉದ್ಘಾಟಿಸಲಿದ್ದು, […]

ಫೆ. 4: ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ವಲಯ ಮಟ್ಟದ ಯುವ ಕ್ರೀಡಾ ಸಂಗಮ Read More »

ಭಾರತದಲ್ಲಿ ಜಾತಿಗಣತಿ ಯಾಕೆ ಅಪಾಯಕಾರಿ ? : ಅಶ್ವಿನ್ ಎಲ್‍. ಶೆಟ್ಟಿ

ಭಾಗ -3 ಈಗ ನಾವು ಕಾಂಗ್ರೆಸ್ ನ ದಾಖಲೆಗಳನ್ನು ಗಮನಿಸೋಣ. ಕಳೆದ 70 ವರ್ಷಗಳಲ್ಲಿ 52% ಒಬಿಸಿ ಜನಸಂಖ್ಯೆಯಲ್ಲಿ ಕೇವಲ ಇಬ್ಬರು ಒಬಿಸಿ ರಾಷ್ಟ್ರಧ್ಯಕ್ಷರನ್ನು ಮಾತ್ರ ಹೊಂದಿದ್ದು ಉಳಿದ ಎಲಾ  ರಾಷ್ಟ್ರಧ್ಯಕ್ಷರು ಮೇಲು ಜಾತಿಯವರಾಗಿದ್ದಾರೆ. ಒಬಿಸಿ ಮುಖ್ಯಮಂತ್ರಿಗಳನ್ನು ನೋಡುವುದಾದರೆ ಕಾಂಗ್ರೆಸ್ ಪಕ್ಷವು ಕೆಳಮಟ್ಟದಿಂದ ಮೊದಲಸ್ಥಾ ನದಲ್ಲಿದೆ. ಇಲ್ಲೂ ಕೂಡಾ ಪ್ರಬಲ ಒಬಿಸಿ ಜಾತಿಗಳಿಗೆ ಹೆಚ್ಚು  ಪ್ರಾತಿನಿಧ್ಯವನ್ನು ನೀಡಿರುವುದನ್ನು ಗಮನಿಸಬಹುದು. ನಾವು ಇಲ್ಲಿ ಇನ್ನೊಂದು ಅಂಶವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಒಬಿಸಿ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಿದ್ದು ಬಿಜೆಪಿಯೇ ಹೊರತು ಕಾಂಗ್ರೆಸ್

ಭಾರತದಲ್ಲಿ ಜಾತಿಗಣತಿ ಯಾಕೆ ಅಪಾಯಕಾರಿ ? : ಅಶ್ವಿನ್ ಎಲ್‍. ಶೆಟ್ಟಿ Read More »

ಫೆ.5 : ಪುತ್ತಿಲ ಪರಿವಾರದಿಂದ ಸಮಾಲೋಚನಾ ಸಮಾವೇಶ

ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಸಮಾಲೋಚನಾ ಸಮಾವೇಶ ಫೆ.5 ಸೋಮವಾರ ಸಾಲ್ಮರ ಕೊಟೇಚಾ ಹಾಲ್‍ ನಲ್ಲಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ವಹಿಸಲಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತರಿರುವರು. ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಸಂಘಟನಾ ಸಂದೇಶ ನೀಡುವರು. ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪುತ್ತಿಲ ಪರಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.5 : ಪುತ್ತಿಲ ಪರಿವಾರದಿಂದ ಸಮಾಲೋಚನಾ ಸಮಾವೇಶ Read More »

ಪಜಿರೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶಾಂತಿಗೋಡು ಗ್ರಾಮದ ಪಜಿರೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಹಾಗೂ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ದೈವಸ್ಥಾನ ವಠಾರದಲ್ಲಿ ಇಂದು ನಡೆಯಿತು. ಶ್ರೀ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ ಆಮಂತ್ರಣ ಮತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ದೈವಸ್ಥಾನದ ಗೌರವಾಧ್ಯಕ್ಷ ಮಾಯಿಲಪ್ಪ ಪಜಿರೋಡಿ, ನೆಮೋತ್ಸವ ಸಮಿತಿ ಅಧ್ಯಕ್ಷ ದೇವಪ್ಪ ಪಜಿರೋಡಿ, ಗೌರವಾಧ್ಯಕ್ಷ ಶ್ಯಾಮ್ ಭಟ್, ಸಮಿತಿ ಸದಸ್ಯರಾದ ಧರ್ಣಪ್ಪ ಬರಿಕೆ, ನಾಗೇಶ್ ಸಾರಕರೆ,

ಪಜಿರೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ!

ಕಡಬ: ರಿಕ್ಷಾವೊಂದು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಸಮೀಪದ ಜೋಕಟ್ಟೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಕುಂತೂರಿನಿಂದ ಆಲಂಕಾರು ಕಡೆಗೆ ಬರುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ! Read More »

ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

ಪುತ್ತೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜನ ಶಿಕ್ಷಣ ಟ್ರಸ್ಟ್ ಸಹಭಾಗಿತ್ವದಲ್ಲಿ ಪುತ್ತೂರು ತಾಲೂಕು ಕೇಂದ್ರದಲ್ಲಿ ನಡೆಯುತ್ತಿರುವ ಸಾಂತ್ವನ ಕೇಂದ್ರದಲ್ಲಿ ತೆರವಾಗಿರುವ ಸಮಾಜ ಕಾರ್ಯಕರ್ತರ ಹುದ್ದೆಗೆ ಸೇವಾಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಾರ್ಯ ಅಥವಾ ಮನಃಶಾಸ್ತ್ರದಲ್ಲಿ ಪದವಿ ವಿದ್ಯಾರ್ಹತೆ ಹೊಂದಿದ್ದು, 22 ರಿಂದ 35 ವರ್ಷದೊಳಗಿನ ಕಂಪ್ಯೂಟರ್ ಜ್ಞಾನ ಹೊಂದಿರುವ, ಗೌರವಧನದ ಆಧಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಸೇವಾಸಕ್ತ ಹಾಗೂ ಕ್ಷೇತ್ರ ಅನುಭವ ಹೊಂದಿರುವ, ಪುತ್ತೂರು ತಾಲೂಕು ವ್ಯಾಪ್ತಿಯೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ? Read More »

ಪುತ್ತೂರಿನ ಅಂತರಾಷ್ಟ್ರೀಯ ಕ್ರಿಕೇಟ್ ಮೈದಾನ ಜಾಗದ ದಾಖಲೆಪತ್ರ ಹಸ್ತಾಂತರ | ಸಾಕಾರಗೊಂಡ ಮಾಜಿ ಶಾಸಕ ಸಂಜೀವ ಮಠಂದೂರು ಅವರ ಕನಸಿನ ಯೋಜನೆ

ಪುತ್ತೂರು: ಪುತ್ತೂರಿನ ಕಬಕ ಗ್ರಾಮದ ಪೆರಿಯತ್ತೋಡಿ ಎಂಬಲ್ಲಿ ನಿರ್ಮಾಣವಾಗಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನಕ್ಕೆ ಜಾಗದ ದಾಖಲೆಗಳ ಹಸ್ತಾಂತರ ಕಾರ್ಯಕ್ರಮ ಪುತ್ತೂರು ಆಡಳಿತ ಸೌಧದ ಸಹಾಯಕ ಆಯುಕ್ತರ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಪುತ್ತೂರಿನ ಹಿಂದಿನ ಶಾಸಕರಾಗಿದ್ದ ಸಂಜೀವ ಮಠಂದೂರು ಅವರ ಪ್ರಯತ್ನದಿಂದ ಮಂಜೂರುಗೊಂಡು ಸರಕಾರದಿಂದ ಅನುಮೋದನೆ ಪಡೆದಿದ್ದ ಯೋಜನೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮಹಾಪಾತ್ರ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ಜಮೀನಿನ ದಾಖಲೆ ಪತ್ರಗಳನ್ನು ಕರ್ನಾಟಕ ಕ್ರಿಕೆಟ್ ಅಸೋಶಿಯೇಷನ್ ಅಧ್ಯಕ್ಷ

ಪುತ್ತೂರಿನ ಅಂತರಾಷ್ಟ್ರೀಯ ಕ್ರಿಕೇಟ್ ಮೈದಾನ ಜಾಗದ ದಾಖಲೆಪತ್ರ ಹಸ್ತಾಂತರ | ಸಾಕಾರಗೊಂಡ ಮಾಜಿ ಶಾಸಕ ಸಂಜೀವ ಮಠಂದೂರು ಅವರ ಕನಸಿನ ಯೋಜನೆ Read More »

ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಮಹಾಸಭೆ

ಪುತ್ತೂರು: ಮುಂಡೂರು ಮಹಾಲಿಂಗೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಮುಂಡೂರು ಸಮುದಾಯ ಭವನದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಭಾರತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ, ಉಪಾಧ್ಯಕ್ಷೆ ಯಶೋಧ , ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್, ಕಾರ್ಯದರ್ಶಿ ಸೂರಪ್ಪ ಪಾಲ್ಗೊಂಡಿದ್ದರು. ವಲಯ ಮೇಲ್ವಿಚಾರಕಿ ನಮಿತಾ ವಾರ್ಡ್ ಒಕ್ಕೂಟ ಮತ್ತು ಗ್ರಾಮ ಪಂಚಾಯಿತಿ ಒಕ್ಕೂಟದ ಕಾರ್ಯವೈಖರಿ, ಸಿಬ್ಬಂದಿಗಳ ಕುರಿತು ಮಾಹಿತಿ ನೀಡಿದರು. ಕಾರ್ಯದರ್ಶಿ ಮಮತಾ

ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಮಹಾಸಭೆ Read More »

‘ಅನ್ನಪೂರ್ಣೇಶ್ವರಿ ಅನ್ನಛತ್ರ’ ಲೋಕಾರ್ಪಣೆ ಮುಂದೂಡಲಾಗಿದೆ | ಜ.31 ರ ಬದಲು ಫೆ.3 ರಂದು ಲೋಕಾರ್ಪಣೆ

ಪುತ್ತೂರು: ಇಂದು ನಡೆಯಬೇಕಾಗಿದ್ದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ‘ಅನ್ನಪೂರ್ಣೇಶ್ವರಿ ಅನ್ನಛತ್ರ’ದ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಲಾಗಿದೆ. ಜ.31 ರಂದು ಕಾರ್ಯಕ್ರಮ ನಿಗದಿಯಾಗಿತ್ತು. ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದು, ಫೆ.3 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಲೋಕಾರ್ಪಣೆ ಅಂಗವಾಗಿ ಬೆಳಿಗ್ಗೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಅನ್ನಪೂರ್ಣೇಶ್ವರಿ ಯಜ್ಞ, ಮಹಾಗಣಪತಿ ಹೋಮ ನಡೆದು ಬಳಿಕ ಅನ್ನಛತ್ರ ಲೋಕಾರ್ಪಣೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಬೇಕೆಂದು

‘ಅನ್ನಪೂರ್ಣೇಶ್ವರಿ ಅನ್ನಛತ್ರ’ ಲೋಕಾರ್ಪಣೆ ಮುಂದೂಡಲಾಗಿದೆ | ಜ.31 ರ ಬದಲು ಫೆ.3 ರಂದು ಲೋಕಾರ್ಪಣೆ Read More »

ವಿವಿಧ ಶಾಲೆಗಳಿಗೆ ಪದವೀಧರ ಶಿಕ್ಷಕರ ನೇಮಕಾತಿ | ಶಶಿರೇಖಾ ಪಿ.ಕೆ. ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಗೆ ನೇಮಕ

ಕಾಣಿಯೂರು: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022-23ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ(6ರಿಂದ 8ನೇ ತರಗತಿ)ನ್ನು ವಿವಿಧ ಶಾಲೆಗಳಿಗೆ ನೇಮಕಾತಿ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಶಶಿರೇಖಾ ಪಿ ಕೆ ಅವರು ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಆಯ್ಕೆಯಾಗಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಪುಣ್ಚತ್ತಾರು ನಿವಾಸಿ ಪುಟ್ಟು ಪಿ ಅವರ ಪುತ್ರಿಯಾಗಿರುವ ಶಶಿರೇಖಾ ಪಿ. ಕೆ. ಅವರು ಕಾಣಿಯೂರು

ವಿವಿಧ ಶಾಲೆಗಳಿಗೆ ಪದವೀಧರ ಶಿಕ್ಷಕರ ನೇಮಕಾತಿ | ಶಶಿರೇಖಾ ಪಿ.ಕೆ. ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಗೆ ನೇಮಕ Read More »

error: Content is protected !!
Scroll to Top