ಪುತ್ತೂರು

ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಟ್ಟದ ಜ್ಞಾನಶರಧಿ/ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ವಿವಿಧ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ ಲಭಿಸಿದೆ. ಧರ್ಮಸ್ಥಳದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದಲ್ಲಿ ಅನನ್ಯ ಎನ್. ಪ್ರಬಂಧ ದ್ವಿತೀಯ, ಪ್ರೌಢಶಾಲಾ ವಿಭಾಗದಲ್ಲಿ ಅಮೋಘ ಕೃಷ್ಣ ಕೆ. ಶ್ಲೋಕ ಕಂಠಪಾಠ […]

ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ Read More »

ಪುತ್ತೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ | ದಾಖಲೆಗಳ ಹಸ್ತಾಂತರ

ಪುತ್ತೂರು: ಪುತ್ತೂರಿನ ಕಬಕ ಗ್ರಾಮದ ಪೆರಿಯತ್ತೋಡಿ ಎಂಬಲ್ಲಿ ನಿರ್ಮಾಣವಾಗಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನಕ್ಕೆ ಜಾಗದ ದಾಖಲೆಗಳ ಹಸ್ತಾಂತರ ಕಾರ್ಯಕ್ರಮ ಪುತ್ತೂರು ಆಡಳಿತ ಸೌಧದ ಸಹಾಯಕ ಆಯುಕ್ತರ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ದಾಖಲೆಗಳನ್ನು ಕರ್ನಾಟಕ ಕ್ರಿಕೆಟ್ ಅಸೋಶಿಯೇಷನ್ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರ ಮಾಡಿದರು. ಕಬಕ ಗ್ರಾಮದ ಪೆರಿಯತ್ತೋಡಿ ಎಂಬಲ್ಲಿ 23.25 ಎಕರೆ ಪ್ರದೇಶದಲ್ಲಿ ಪುತ್ತೂರು ಉಪವಿಭಾಗದ ಮೊತ್ತಮೊದಲ ಅಂತಾರಾಷ್ಟ್ರೀಯ

ಪುತ್ತೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ | ದಾಖಲೆಗಳ ಹಸ್ತಾಂತರ Read More »

ಗಾಂಧೀಜಿಯವರು ಪ್ರತಿಪಾದಿಸಿದ ತತ್ವಗಳ ಮೂಲಕ ನಮ್ಮ ನಡುವೆ ಇಂದಿಗೂ ಇದ್ದಾರೆ | ಪುತ್ತೂರು ಗಾಂಧಿಕಟ್ಟೆಯಲ್ಲಿ ಹುತಾತ್ಮರ ದಿನಾಚರಣೆಯಲ್ಲಿ ಜುಬಿನ್ ಮಹಾಪಾತ್ರ

ಪುತ್ತೂರು: ಪುತ್ತೂರಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭೇಟಿ ನೀಡಿದ ನಗರದ ಬಸ್ ನಿಲ್ದಾಣದ ಬಳಿ ಇರುವ ಗಾಂಧಿ ಕಟ್ಟೆಯಲ್ಲಿ ಮಂಗಳವಾರ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಗಾಂಧಿ ಪುತ್ತಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಪ್ರಸ್ತುತ ಗಾಂಧೀಜಿಯವರು ಇಲ್ಲದಿದ್ದರೂ ಅವರ ತತ್ವಗಳ ಮೂಲಕ ನಮ್ಮ ನಡುವೆ ಜೀವಂತ ಇದ್ದಾರೆ. ದೇಶದ ಸ್ವಾತಂತ್ರಕ್ಕೆ ಕಾರಣರಾದ ಗಾಂಧೀಜಿಯವರು ದೇಶದ ಆಡಳಿತಕ್ಕೆ ನಿಯಮಗಳನ್ನು ತಂದವರು. ದೇಶದ ಅಭಿವೃದ್ಧಿ, ಜನರ ಅಭಿವೃದ್ಧಿಗಾಗಿ ಪ್ರಜೆಗಳು ಕೆಲಸ ಮಾಡಬೇಕು ಎಂಬ ಸಂದೇಶ

ಗಾಂಧೀಜಿಯವರು ಪ್ರತಿಪಾದಿಸಿದ ತತ್ವಗಳ ಮೂಲಕ ನಮ್ಮ ನಡುವೆ ಇಂದಿಗೂ ಇದ್ದಾರೆ | ಪುತ್ತೂರು ಗಾಂಧಿಕಟ್ಟೆಯಲ್ಲಿ ಹುತಾತ್ಮರ ದಿನಾಚರಣೆಯಲ್ಲಿ ಜುಬಿನ್ ಮಹಾಪಾತ್ರ Read More »

ಹವಾಲ್ದಾರ್ ತಿರುಮಲೇಶ್ವರ ಎ.ಎಸ್‍. ನಾಳೆ ಸೇವೆಯಿಂದ ನಿವೃತ್ತಿ

ಕಡಬ: ಭಾರತೀಯ ಸೇನೆಯ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಸೆಂಟರ್ ನಲ್ಲಿ ತರಬೇತಿ ಪಡೆದು 13 ವರ್ಷ ಎಂಜಿನಿಯರ್ ರೆಜಿಮೆಂಟ್ ನಲ್ಲಿ ಸುದೀರ್ಘ 24 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಕಡಬ ಅಮೈ ನಿವಾಸಿ ಹವಾಲ್ದಾರ್ ತಿರುಮಲೇಶ್ವರ ಎ.ಎಸ್. ಅವರು ಜ.31 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ತಿರುಮಲೇಶ್ವರ ಅವರು 2000ನೇ ಇಸವಿಯಲ್ಲಿ ಬೆಂಗಳೂರಿನಲ್ಲಿ ಸೇನೆಗೆ ನೇಮಕಗೊಂಡು ಬಳಿಕ ರಾಜಸ್ಥಾನ, ಗುಜರಾತ್, ಲೇಹ್‍ (ಜಮ್ಮು ಕಾಶ್ಮೀರ), ಅಂಧ್ರಪ್ರದೇಶ, ಅಸ್ಸಾಂ, ಪಶ್ಚಿಮ ಬಂಗಾಲ, ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಸೇವೆ ಸಲ್ಲಿಸಿದ್ದಾರೆ.

ಹವಾಲ್ದಾರ್ ತಿರುಮಲೇಶ್ವರ ಎ.ಎಸ್‍. ನಾಳೆ ಸೇವೆಯಿಂದ ನಿವೃತ್ತಿ Read More »

ನಾಳೆ: ‘ಅನ್ನಪೂರ್ಣೇಶ್ವರಿ ಅನ್ನಛತ್ರ’ ಲೋಕಾರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ‘ಅನ್ನಪೂರ್ಣೇಶ್ವರಿ ಅನ್ನಛತ್ರ’ದ ಲೋಕಾರ್ಪಣೆ ಕಾರ್ಯಕ್ರಮ ಜ.31 ಬುಧವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಲೋಕಾರ್ಪಣೆ ಅಂಗವಾಗಿ ಬುಧವಾರ ಬೆಳಿಗ್ಗೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಅನ್ನಪೂರ್ಣೇಶ್ವರಿ ಯಜ್ಞ, ಮಹಾಗಣಪತಿ ಹೋಮ ನಡೆದು ಬಳಿಕ 9.32 ರ ಮೀನ ಲಗ್ನ ಸುಮುಹೂರ್ತದಲ್ಲಿ ಅನ್ನಛತ್ರ ಲೋಕಾರ್ಪಣೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ

ನಾಳೆ: ‘ಅನ್ನಪೂರ್ಣೇಶ್ವರಿ ಅನ್ನಛತ್ರ’ ಲೋಕಾರ್ಪಣೆ Read More »

ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಚಂದ್ರಾನ್ವೇಷಣೆ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಹವ್ಯಾಸಿ ಖಗೋಳ ವೀಕ್ಷಕರ ಸಂಘ ಹಾಗೂ   ಕೆದಂಬಾಡಿಯ ಗ್ರಾಮ ಪಂಚಾಯಿತಿ ಜಂಟಿ ಆಶ್ರಯದಲ್ಲಿ ‘ಚಂದ್ರಾನ್ವೇಷಣೆ’ ಖಗೋಳ ವೀಕ್ಷಣೆ ಕಾರ್ಯಕ್ರಮ  ತಿಂಗಳಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾಲೇಜಿನ ದತ್ತು ಗ್ರಾಮವಾದ ಕೆದಂಬಾಡಿಯ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಆಸಕ್ತ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೂರ್ಣಚಂದ್ರನ ರೂಪವನ್ನು ಅತ್ಯಾಧುನಿಕ ದೂರದರ್ಶಕದ ಮೂಲಕ ವೀಕ್ಷಿಸಲಾಯಿತು. ಕಾಲೇಜಿನ ವಿಶ್ರಾಂತ ಉಪ-ಪ್ರಾಂಶುಪಾಲ ಡಾ।ಎ. ಪಿ. ರಾಧಾಕೃಷ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಖಗೋಳ ವಿದ್ಯಮಾನಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಸಂತ ಫಿಲೋಮಿನಾ ಕಾಲೇಜಿನ ದತ್ತು ಗ್ರಾಮದಲ್ಲಿ ಚಂದ್ರಾನ್ವೇಷಣೆ ಕಾರ್ಯಕ್ರಮ Read More »

ನವೀನ್ ಕಿಶೋರ್ ಹೃದಯಾಘಾತದಿಂದ ನಿಧನ

ಪುತ್ತೂರು: ಸುದ್ದಿ ಬಿಡುಗಡೆ ಪತ್ರಿಕೆಯ ಸಿಬ್ಬಂದಿ ಕುದ್ದುಪದವು ನಿವಾಸಿ ನವೀನ್ ಕಿಶೋರ್ ಎಂಬವರು ಜ.30 ರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು. ಜ.29ರ ಸಂಜೆ ಮನೆಗೆ ಹೋದವರು ರಾತ್ರಿ ಹೃದಯಾಘಾತಕ್ಕೀಡಾಗಿದ್ದಾರೆ. ತಡ ರಾತ್ರಿ 2 ಗಂಟೆ ಸುಮಾರಿಗೆ ಅವರ ಸಹೋದರ ಎಚ್ಚರಗೊಂಡಾಗ ನವೀನ್ ಕಿಶೋ‌ರ್ ಅವರು  ಕುಸಿದು ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆ ಮಂದಿ ಮತ್ತು ಸ್ಥಳೀಯರು ಸೇರಿ ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ನವೀನ್ ಕಿಶೋ‌ರ್ ಆಗಲೇ ಮೃತಪಟ್ಟಿದ್ದರು.  ಮೃತರು ತಾಯಿ ಪದ್ಮನಿ, ಸಹೋದರ

ನವೀನ್ ಕಿಶೋರ್ ಹೃದಯಾಘಾತದಿಂದ ನಿಧನ Read More »

ಅಂಗನವಾಡಿ ಉಳಿಸುವ ಕೆಲಸ ಮಾಡಬೇಕು | ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅಂಗನವಾಡಿ ಕಟ್ಟಡ ಉದ್ಘಾಟಿಸಿ, ಅಂಗನವಾಡಿಯಲ್ಲಿ ತಾಯಿಯ ಶಿಕ್ಷಣ ಮಕ್ಕಳಿಗೆ ದೊರೆಯುತ್ತಿದೆ. ಪೌಷ್ಠಿಕ ಆಹಾರದ ಜೊತೆಗೆ ಮಕ್ಕಳ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಗಳು ಅಂಗನವಾಡಿಗಳಲ್ಲಿ ಇದ್ದು ಪೋಷಕರು ಮಕ್ಕಳನ್ನು ಅಂಗನವಾಡಿಗೆ ದಾಖಲಿಸುವ ಮೂಲಕ ಕೇಂದ್ರಗಳನ್ನು ಉಳಿಸುವ ಕೆಲಸವನ್ನು ಮಾಡಬೇಕು ಎಂದರು. ಈ ಭಾಗದಲ್ಲಿ ಅಂಗನವಾಡಿ ಕಟ್ಟಡದ ಕೊರತೆ ಇರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಸುಮಾರು 13 ಲಕ್ಷ

ಅಂಗನವಾಡಿ ಉಳಿಸುವ ಕೆಲಸ ಮಾಡಬೇಕು | ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ಪುತ್ತೂರಿನ ಹೆಸರು ಭುವನೇಶ್ವರದಲ್ಲಿ ಕೇಳುವಾಗ ಆದ ಖುಷಿಯೇ ಅವಿಸ್ಮರಣೀಯ | ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ನ್ಯೂಸ್ ಪುತ್ತೂರು ಇದರ ಸನ್ಮಾನ ಸ್ವೀಕರಿಸಿ ಡಾ. ಸುರೇಶ್ ಪುತ್ತೂರಾಯ

ಪುತ್ತೂರು: ಮಧುಮೇಹ ಜಾಗೃತಿ ಉಪಕ್ರಮ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿರುವ ಪುತ್ತೂರಿನ ಹೆಸರಾಂತ ವೈದ್ಯ ಡಾ. ಸುರೇಶ್ ಪುತ್ತೂರಾಯ ಅವರಿಗೆ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಹಾಗೂ ನ್ಯೂಸ್ ಪುತ್ತೂರು ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್ ಪುತ್ತೂರಾಯ, ಸಾಮೂಹಿಕ ಪ್ರಯತ್ನಕ್ಕೆ Diabetes Awareness Initiative Award-2024 ಒಲಿದು ಬಂದಿದೆ. ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಹಲವು ಸ್ವಯಂ ಸೇವಕರ ಶ್ರಮದಿಂದಾಗಿ ಈ ಶಿಬಿರ ಯಶಸ್ಸು ಕಂಡಿದೆ. ಪುತ್ತೂರಿನ ವೈದ್ಯರ ಜೊತೆಗೆ ಸುತ್ತಲಿನ ತಾಲೂಕುಗಳ ವೈದ್ಯರು

ಪುತ್ತೂರಿನ ಹೆಸರು ಭುವನೇಶ್ವರದಲ್ಲಿ ಕೇಳುವಾಗ ಆದ ಖುಷಿಯೇ ಅವಿಸ್ಮರಣೀಯ | ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ನ್ಯೂಸ್ ಪುತ್ತೂರು ಇದರ ಸನ್ಮಾನ ಸ್ವೀಕರಿಸಿ ಡಾ. ಸುರೇಶ್ ಪುತ್ತೂರಾಯ Read More »

94ಸಿ ಗೆ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ: ತಹಶಿಲ್ದಾರ್ ಗೆ ಶಾಸಕರ ಸೂಚನೆ

ಪುತ್ತೂರು; ಗ್ರಾಮೀಣ ಭಾಗದ ಬಡ‌ವರು ಸರಕಾರಿ ಜಾಗದಲ್ಲಿ‌ಮನೆ ಕಟ್ಟಿಕೊಂಡಿದ್ದರೆ ಅವರಿಗೆ ಹಕ್ಕು ಪತ್ರ ಕೊಡಬೇಕು. 94 ಸಿ ಅರ್ಜಿ ಜೊತೆಗೆ ಗ್ರಾಮದ ಪಿಡಿಒಗಳಿಂದ ದೃಢೀಕರಣ ಪತ್ರ ಬೇಕು ಎಂದು ತಹಶಿಲ್ದಾರ್ ಹೇಳುತ್ತಿದ್ದು ಯಾವುದೇ ಕಾರಣಕ್ಕೂ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ‌ ಎಂದು‌ ಶಾಸಕ ಅಶೋಕ್ ರೈ ತಹಶಿಲ್ದಾರ್ ಗೆ ಸೂಚನೆ ನೀಡಿದರು. ತಾಪಂ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ‌ಮಾತನಾಡಿದ ಶಾಸಕರು ಈ ಸೂಚನೆಯನ್ನು ನೀಡಿದ್ದಾರೆ.‌ ಹಲವಾರು 94 ಸಿ ಅರ್ಜಿಗಳು ಪಿಡಿಒ ದೃಢೀಕರಣ ಪತ್ರವಿಲ್ಲದ ಕಾರಣಕ್ಕೆ ವಿಲೇವಾರಿಯಾಗಿಲ್ಲ

94ಸಿ ಗೆ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ: ತಹಶಿಲ್ದಾರ್ ಗೆ ಶಾಸಕರ ಸೂಚನೆ Read More »

error: Content is protected !!
Scroll to Top