ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾದ ಸಂವಿಧಾನವಾಗಿದೆ | ತಾಲೂಕು ಗಣರಾಜ್ಯೋತ್ಸವದಲ್ಲಿ ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ
ಪುತ್ತೂರು; ಗಣರಾಜ್ಯೋತ್ಸವವು ಭಾರತದ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡ ಐತಿಹಾಸಿಕ ದಿನವಾಗಿದ್ದು, ನಮ್ಮ ಸಂವಿಧಾನವೂ ವಿಶ್ವದ ಅತೀ ಶ್ರೇಷ್ಠ ಸಂವಿಧಾನ ಎಂದೆಣಿಸಿಕೊಂಡಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅಭಿಪ್ರಾಯಪಟ್ಟರು. ಅವರು ಕೊಂಬೆಟ್ಟು ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ೭೫ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ನಾಡಿಗೆ ಸಂದೇಶ ನೀಡಿದರು. ನಮ್ಮ ಸಂವಿಧಾನದಲ್ಲಿ ಎಲ್ಲಾ ಜನರ ಆಶೋತ್ತರಗಳ ಅಂಶಗಳ ಜತೆಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳಿವೆ. ಸರ್ಕಾರಕ್ಕೆ ನೀತಿ ನಿರ್ದೇಶನವಿದೆ. ಸಂವಿಧಾನದ […]










