ಪುತ್ತೂರು

ನಾಳೆ : ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಕೃಷ್ಣನಗರದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಸಮಾರಂಭ ‘ಎವಿಜಿ ಚಿಣ್ಣರೋತ್ಸವ’ ಜ.26 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಎಲ್.ಗ್ರೂಫ್ ಆಫ್ ಕಂಪೆನಿಯ ಬಲರಾಮ ಆಚಾರ್ಯ, ಬನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ನಗರಸಭೆ ಸದಸ್ಯೆ ಗೌರಿ ಬನ್ನೂರು ಪಾಲ್ಗೊಳ್ಳಲಿದ್ದಾರೆ. ಶಾಲಾ ಸಂಚಾಲಕ ಎ.ವಿ.ನಾರಾಯಣ […]

ನಾಳೆ : ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’ Read More »

ಪುಣಚಾ ಗ್ರಾಮದಲ್ಲಿ 75 ಲಕ್ಷ ರೂ. ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

ಪುತ್ತೂರು:ಪುಣಚಾ ಗ್ರಾಮದಲ್ಲಿನ ಒಳ ರಸ್ತೆಗಳಲ್ಲಿ ಕಾಂಕ್ರೀಟ್ ಕಾಮಗಾರಿ ನಡೆದಿಲ್ಲ. ಕೆಲವೊಂದು ರಸ್ತೆಗಳಿಗೆ ಇದುವರೆಗೂ ಯಾವುದೇ ಅನುದಾನ ನೀಡಿಲ್ಲ. ಗ್ರಾಮದ ಅಭಿವೃದ್ದಿಗೆ ಜನಪ್ರತಿನಿಧಿಗಳ ಅನುದಾನ ಶೂನ್ಯವೆಂದೇ ಹೇಳಿದರೂ ತಪ್ಪಾಗಲಾರದು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪುಣಚಾ ಗ್ರಾಮದ ವಿವಿಧ ರಸ್ತೆಗಳಿಗೆ ಒಟ್ಟು 75 ಲಕ್ಷ ಅನುದಾನವನ್ನು ಬಿಡುಗಡೆಮಾಡಿದ್ದು, ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಜನರ ಬೇಡಿಕೆ ಹಿನ್ನಲೆಯಲ್ಲಿ ಅನುದಾನವನ್ನು ನೀಡುವ ಕೆಲಸವನ್ನು ಮಾಡಿದ್ದೇನೆ. ಜನಪ್ರತಿನಿಧಿಗಳು ಪುಣಚಾ ಗ್ರಾಮವನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಹೇಳಿದರು. ಕೆಪಿಸಿಸಿ

ಪುಣಚಾ ಗ್ರಾಮದಲ್ಲಿ 75 ಲಕ್ಷ ರೂ. ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ Read More »

ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ವಾರ್ಷಿಕ ನೇಮೋತ್ಸವದ ಅಂಗವಾಗಿ ವಿವಿಧ ವೈದಿಕ ಕಾರ್ಯಕ್ರಮ ಬುಧವಾರ ನಡೆಯಿತು. ನೇಮೋತ್ಸವದ ಅಂಗವಾಗಿ ಬೆಳಿಗ್ಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ ನಡೆಯಿತು. ಬಳಿಕ ಮಧ್ಯಾಹ್ನ ಸುಮಾರು 10 ಸಾವಿರ ಮಂದಿಗೆ ಅನ್ನಸಂತರ್ಪಣೆ ಜರಗಿತು. ರಾತ್ರಿ 7 ಗಂಟೆಗೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರು ಬಂದು, 9 ಗಂಟೆಗೆ ಗೊಂದಳ ಪೂಜೆ, ರಾತ್ರಿ 12 ಕ್ಕೆ

ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ | ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ Read More »

ಭಾರತದಲ್ಲಿ ಜಾತಿಗಣತಿ ಯಾಕೆ ಅಪಾಯಕಾರಿ ? : ಅಶ್ವಿನ್ ಎಲ್‍. ಶೆಟ್ಟಿ

ಭಾಗ -2 2019 ರ  ಲೋಕಸಭೆ  ಚುನಾವಣೆಯಲ್ಲಿ ಬಿಜೆಪಿಯ 113 ಮಂದಿ ಓಬಿಸಿ ಸಂಸದರು, 43 ಮಂದಿ ಪರಿಶಿಷ್ಟ ಪಂಗಡದ ಸಂಸದರು, 53 ಮಂದಿ ಪರಿಶಿಷ್ಟ ಜಾತಿಯ ಸಂಸದರು ಅಯ್ಕೆಯಾದರು. ಅಂದರೆ ಬಿಜೆಪಿಯ  ಚುನಾಯಿತ ಸಂಸದರಲ್ಲಿ 37% ಓಬಿಸಿ, 14%  ಪರಿಶಿಷ್ಟ ಪಂಗಡ ಮತ್ತು 17% ಪರಿಶಿಷ್ಟ ಜಾತಿ ಅಂದರೆ 303 ಲೋಕಸಭಾ ಸಂಸದರ ಪೈಕಿ69% ರಷ್ಟು ಮಂದಿ ಮೇಲ್ಜಾತಿ ಅಲ್ಲದವರಾಗಿರುವುದು ಕಂಡು ಬರುತ್ತದೆ.  ನಳಿನ್  ಮೆಹ್ತಾರವರ ಪ್ರಕಾರ, ಬಿಜೆಪಿಯು ಅತೀಹೆಚ್ಚು ಜಾತಿ ವರ್ಗವನ್ನು ಪ್ರತೀ ಸಂಘಟನಾ

ಭಾರತದಲ್ಲಿ ಜಾತಿಗಣತಿ ಯಾಕೆ ಅಪಾಯಕಾರಿ ? : ಅಶ್ವಿನ್ ಎಲ್‍. ಶೆಟ್ಟಿ Read More »

ನಿವೃತ್ತ ಪ್ರಾಂಶುಪಾಲ ವಿಶ್ವನಾಥ ಶೆಟ್ಟಿ ನಿಧನ

ಪುತ್ತೂರು: ನಿವೃತ್ತ ಪ್ರಾಂಶುಪಾಲ ಕಲ್ಲಾರೆ ನಿವಾಸಿ ವಿಶ್ವನಾಥ ಶೆಟ್ಟಿ (78) ಇಂದು ನಿಧನರಾದರು. ವಿಶ್ವನಾಥ ಶೆಟ್ಟಿಯವರು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಉಪನ್ಯಾಸಕರಾಗಿ ಬಳಿಕ ಬಂಟ್ವಾಳ ತಾಲೂಕಿನ ವಾಮದಪದವು ಜೂನಿಯ‌ರ್ ಕಾಲೇಜ್‌ನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವಿಶ್ವನಾಥ ಶೆಟ್ಟಿಯವರ ಪುತ್ರ ಕಳೆದ ಒಂದು ವರ್ಷಗಳ ಹಿಂದೆ ಹೃದಯಾಘಾತದಿಂದ  ನಿಧನರಾಗಿದ್ದರು.

ನಿವೃತ್ತ ಪ್ರಾಂಶುಪಾಲ ವಿಶ್ವನಾಥ ಶೆಟ್ಟಿ ನಿಧನ Read More »

ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ | ಹಿಂಪಡೆಯಬೇಕೆಂದು ಸಾಜ ರಾಧಾಕೃಷ್ಣ ಆಳ್ವ ಆಗ್ರಹ

ಪುತ್ತೂರು: ಹಿಂದೂ ಸಂಘಟನೆಯ ಅಮಾಯಕ ಕಾರ್ಯಕರ್ತರಿಗೆ ಉಪವಿಭಾಗೀಯ ದಂಢಾಧಿಕಾರಿಗಳು ಗಡಿಪಾರಿಗೆ ನೋಟಿಸ್ ನೀಡಿರುವುದನ್ನು ಪುನರ್ ಪರಿಶೀಲಿಸಿ ಹಿಂಪಡೆಯ ಬೇಕೆಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಅಗ್ರಹಿಸಿದ್ದಾರೆ… ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಹ ಸಯೋoಜಕ ದಿನೇಶ್ ಪಂಜಿಗ ಹಾಗೂ ಹಿಂಜಾವೇ ಮುಖಂಡ ಅವಿನಾಶ್ ರವರ ಮೇಲೆ ವಿನಾಕಾರಣ ಯಾವುದೇ ಗಂಭೀರವಾದ ಅಪರಾಧ ಇಲ್ಲದಿದ್ದರೂ ಸರಕಾರ ಹಿಂದೂ ಕಾರ್ಯಕರ್ತನನ್ನು ಧಮನಿಸುವ ಷಡ್ಯಂತ್ರಕ್ಕೆ ಕೈ ಹಾಕಿರುವುದು ಹಿಂದೂ ವಿರೋಧಿ ನೀತಿಯಾಗಿದೆ ಎಂದು ಹೇಳಿದರು. ಈ

ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ | ಹಿಂಪಡೆಯಬೇಕೆಂದು ಸಾಜ ರಾಧಾಕೃಷ್ಣ ಆಳ್ವ ಆಗ್ರಹ Read More »

ಪ್ರತಿಷ್ಠಿತ ಸವಣೂರು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ತಾರನಾಥ ಕಾಯರ್ಗ, ಉಪಾಧ್ಯಕ್ಷರಾಗಿ ಚೇತನ್ ಕುಮಾರ್ ಕೋಡಿಬೈಲ್

ಪುತ್ತೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಾರನಾಥ ಕಾಯರ್ಗ, ಉಪಾಧ್ಯಕ್ಷರಾಗಿ ಚೇತನ್ ಕುಮಾರ್ ಕೋಡಿಬೈಲ್ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಚುನಾವಣೆ ಜ.13 ರಂದು ನಡೆದಿದ್ದು, ಎಲ್ಲಾ ಸ್ಥಾನ ಸಹಕಾರಿ ಭಾರತಿ ಪಾಲಾಗಿತ್ತು. ಒಟ್ಟು 12 ಸ್ಥಾನಗಳಿಗೆ 23 ಸ್ಪರ್ಧಿಗಳು ಕಣದಲ್ಲಿದ್ದರು. ಈ ಪೈಕಿ ಒಂದು ಸ್ಥಾನಕ್ಕೆ ಸಾಲಗಾರರ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ  ಪ್ರಕಾಶ್ ರೈ ಸಾರಕರೆ ಅವಿರೋಧ ಆಯ್ಕೆಯಾಗಿದ್ದರು. ಉಳಿದಂತೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಸಾಮಾನ್ಯ ಕ್ಷೇತ್ರದಿಂದ

ಪ್ರತಿಷ್ಠಿತ ಸವಣೂರು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ತಾರನಾಥ ಕಾಯರ್ಗ, ಉಪಾಧ್ಯಕ್ಷರಾಗಿ ಚೇತನ್ ಕುಮಾರ್ ಕೋಡಿಬೈಲ್ Read More »

ಅನಾರೋಗ್ಯದಿಂದಿದ್ದ ಯುವತಿ ಐಶ್ವರ್ಯ ನಿಧನ

ಪುತ್ತೂರು: ಕಲ್ಲೇಗ ರಕ್ತೇಶ್ವರಿ ವಠಾರ ನಿವಾಸಿ ಐಶ್ವರ್ಯ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇಂಜಿನಿಯರಿಂಗ್‍ ಪದವೀಧರೆಯಾಗಿರುವ ಐಶ್ವರ್ಯ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯತ್ತಿದ್ದರು ಎನ್ನಲಾಗಿದೆ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಮನೆಯವರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಅನಾರೋಗ್ಯದಿಂದಿದ್ದ ಯುವತಿ ಐಶ್ವರ್ಯ ನಿಧನ Read More »

ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಶಾಲಾ ಬಸ್ !!

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸು ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ರಾಮನಗರದಲ್ಲಿ ಇಂದು ನಡೆದಿದೆ. ಉಪ್ಪಿನಂಗಡಿ ಹಳೆಗೇಟು ಸಮೀಪದ ಅರಫಾ ಶಾಲಾ ಬಸ್ ಹಿರೇಬಂಡಾಡಿ ಕಡೆಯಿಂದ ಮಕ್ಕಳನ್ನು ಕರೆದುಕೊಂಡು ಬರುವ ಸಂದರ್ಭ ಈ ಘಟನೆ ನಡೆದಿದೆ. ಮಕ್ಕಳು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಶಾಲಾ ಬಸ್ !! Read More »

ಬನ್ನೂರು ಹಿ.ಪ್ರಾ. ಶಾಲೆಯಲ್ಲಿ ಎಸ್.ಆರ್.ಕೆ. ಲ್ಯಾಡರ್ಸಿನ ಬೆಳ್ಳಿಹಬ್ಬದ ಸಂಭ್ರಮ | ಶತಮಾನದಂಚಿನ ಶಾಲೆಯಲ್ಲಿ ಶ್ರಮದಾನ ನಡೆಸಿ, ಕೊಡುಗೆ ನೀಡಿದ ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಸಂಸ್ಥೆ

ಪುತ್ತೂರು: ಇಲ್ಲಿನ ಎಸ್.ಆರ್.ಕೆ. ಲ್ಯಾಡರ್ಸಿನ ಬೆಳ್ಳಿಹಬ್ಬ ಸಂಭ್ರಮದ ಅಂಗವಾಗಿ ಸರಣಿಯ 5ನೇ ಕಾರ್ಯಕ್ರಮವಾಗಿ ಬನ್ನೂರು ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ ಹಾಗೂ ಶಾಲಾ ಕೊಠಡಿ, ದಾಸ್ತಾನು ಕೊಠಡಿಗಳ ನಿರ್ವಹಣೆ ಮಾಡಲಾಯಿತು. ಶಾಲಾ ಮೈದಾನದಲ್ಲಿ ಬೆಳೆದಿದ್ದ ಹುಲ್ಲು, ಗಿಡ – ಗಂಟಿಗಳನ್ನು ತೆರವುಗೊಳಿಸಲಾಯಿತು. ಬಳಿಕ ಶಾಲಾ ತರಗತಿ ಕೊಠಡಿ, ದಾಸ್ತಾನು ಕೊಠಡಿಗಳನ್ನು ಬಳಕೆಗೆ ಯೋಗ್ಯವಾದ ರೀತಿಯಲ್ಲಿ ಸಿದ್ಧಪಡಿಸಿ, ಶುಚಿಗೊಳಿಸಿ ನೀಡಲಾಯಿತು. ದಾರಂದಗಳನ್ನು ಜೋಡಿಸಿ, ಬಾಗಿಲುಗಳನ್ನು ಅಳವಡಿಸಿ, ಗೋಡೆಗಳಿಗೆ ಪೈಂಟಿಂಗ್ ಮಾಡಿಸಲಾಯಿತು. ಸರಣಿ ಕಾರ್ಯಕ್ರಮದ ಅಂಗವಾಗಿ ಇಡೀ ದಿನ ಶಾಲಾ ವಠಾರದಲ್ಲಿ

ಬನ್ನೂರು ಹಿ.ಪ್ರಾ. ಶಾಲೆಯಲ್ಲಿ ಎಸ್.ಆರ್.ಕೆ. ಲ್ಯಾಡರ್ಸಿನ ಬೆಳ್ಳಿಹಬ್ಬದ ಸಂಭ್ರಮ | ಶತಮಾನದಂಚಿನ ಶಾಲೆಯಲ್ಲಿ ಶ್ರಮದಾನ ನಡೆಸಿ, ಕೊಡುಗೆ ನೀಡಿದ ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಸಂಸ್ಥೆ Read More »

error: Content is protected !!
Scroll to Top