ಪುತ್ತೂರು

ಹಿರೇಬಂಡಾಡಿ ಮಂಜುಶ್ರೀ ಭಜನಾ ಮಂದಿರದಲ್ಲಿ ರಾಮ ತಾರಕ ಮಂತ್ರ ಜಪ, ಭಜನೆ | ಕರಸೇವಕರಿಗೆ ಗೌರವಾರ್ಪಣೆ

ಉಪ್ಪಿನಂಗಡಿ: ಹಿರೇಬಂಡಾಡಿ ಮಂಜುಶ್ರೀ ಭಜನಾ ಮಂದಿರದಲ್ಲಿ ಅಯೋಧ್ಯ ಶ್ರೀ ರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ರಾಮ ತಾರಕ ಮಂತ್ರ ಜಪ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ರಿಂದ ಎಲ್‍.ಇ.ಡಿ. ಪರದೆಯಲ್ಲಿ ಅಯೋಧ್ಯೆ ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ ನಡೆಯಿತು. ಇದೇ ಸಂದರ್ಭ ಕರಸೇವಕರಿಗೆ ಗೌರವಾರ್ಪಣೆ ನಡೆಯಿತು.

ಹಿರೇಬಂಡಾಡಿ ಮಂಜುಶ್ರೀ ಭಜನಾ ಮಂದಿರದಲ್ಲಿ ರಾಮ ತಾರಕ ಮಂತ್ರ ಜಪ, ಭಜನೆ | ಕರಸೇವಕರಿಗೆ ಗೌರವಾರ್ಪಣೆ Read More »

ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ | ರಾಮಕ್ಷತ್ರೀಯ ಸೇವಾ ಸಂಘದಿಂದ ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದಲ್ಲಿ ವಿಶೇಷ ಮಹಾಪೂಜೆ

ಪುತ್ತೂರು: ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕೆಮ್ಮಿಂಜೆ ಶ್ರೀರಾಮ ಭಜನಾ ಮಂಡಳಿ ಹಾಗೂ ರಾಮಕ್ಷತ್ರೀಯ ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದಲ್ಲಿ ವಿಶೇಷ ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ಆಗಮಿಸಿದ ರಾಮಭಕ್ತರು ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನ ಪ್ರಾಣಪ್ರತಿಷ್ಠೆಯನ್ನು ಎಲ್‍.ಇ.ಡಿ. ಪರದೆ ಮೂಲಕ ವೀಕ್ಷಿಸಿದರು. ಕಾರ್ಯಕ್ರಮದ ಅಂಗವಾಗಿ ಶ್ರೀರಾಮ ಮತ್ತು ಆಂಜನೇಯ ವೇಷಧಾರಿಗಳನ್ನು ಬೊಳುವಾರಿನಿಂದ ಮೆರವಣಿಗೆ ಮೂಲಕ ಕರೆ ತರಲಾಯಿತು. ಕರಸೇವಕ ಚಂದ್ರಶೇಖರ ರಾವ್ ಬಪ್ಪಳಿಗೆ

ಅಯೋಧ್ಯೆಯಲ್ಲಿ ಶ್ರೀ ರಾಮ ಪ್ರಾಣಪ್ರತಿಷ್ಠೆ | ರಾಮಕ್ಷತ್ರೀಯ ಸೇವಾ ಸಂಘದಿಂದ ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದಲ್ಲಿ ವಿಶೇಷ ಮಹಾಪೂಜೆ Read More »

ಬೊಳ್ಳಾಣ ಶ್ರೀ ಆಂಜನೇಯ ಭಜನಾ ಮಂದಿರ ಲೋಕಾರ್ಪಣೆ | ಕರಸೇವಕರಿಗೆ ಸನ್ಮಾನ

ಪುತ್ತೂರು: ಆರ್ಯಾಪು ಗ್ರಾಮದ ಬೊಳ್ಳಾಣ ಶ್ರೀ ಆಂಜನೇಯ ಭಜನಾ ಮಂದಿರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಲೋಕಾರ್ಪಣೆಗೊಂಡಿತು. ಲೋಕಾರ್ಪಣೆ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಯೋಧ್ಯ ಶ್ರೀ ರಾಮನ ಕರಸೇವೆಯಲ್ಲಿ ಭಾಗಿಯಾದ ವಿಶ್ವನಾಥ್ ಕುಲಾಲ್ ಅವರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಭಜನಾ ಮಂದಿರದ ಅಧ್ಯಕ್ಷ ಕಿಶೋರ್ ಪೂಜಾರಿ, ನಗರಸಭೆ ಸದಸ್ಯೆ ದೀಕ್ಷಾ ಪೈ, ಮತ್ತಿತರರು ಉಪಸ್ಥಿತರಿದ್ದರು.

ಬೊಳ್ಳಾಣ ಶ್ರೀ ಆಂಜನೇಯ ಭಜನಾ ಮಂದಿರ ಲೋಕಾರ್ಪಣೆ | ಕರಸೇವಕರಿಗೆ ಸನ್ಮಾನ Read More »

ಕಾವುನಲ್ಲಿ ಪುತ್ತಿಲ ಪರಿವಾರದಿಂದ ಶ್ರೀ ರಾಮನಿಗೆ ಹಣತೆ ದೀಪ

ಪುತ್ತೂರು: ಕಾವು ಪುತ್ತಿಲ ಪರಿವಾರ ಘಟಕದ ವತಿಯಿಂದ ಅಯೋಧ್ಯೆಯಲ್ಲಿ ನೆಲೆನಿಂತ ಶ್ರೀ ರಾಮನ ಸಂಭ್ರಮವನ್ನು ಕಾವು ಪಂಚವಟಿ ನಗರದ ಶ್ರೀ ಪಂಚಲಿಂಗೇಶ್ವರ ದೇವರ ಕಟ್ಟೆಯಲ್ಲಿ ಸಂಜೆ ಹಣತೆ ದೀಪಗಳನ್ನು ಹಚ್ಚುವ ಮೂಲಕ ಆಚರಿಸಲಾಯಿತು. ಪುತ್ತಿಲ ಪರಿವಾರದ ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರೂ ಸೇರಿದಂತೆ ಅನೇಕ ಹಿರಿಯ ರಾಮಭಕ್ತರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಂಭ್ರಮಾಚರಣೆಯ ಅಂಗವಾಗಿ ಕಾವು ಮೂರೂ ಪೇಟೆಯಲ್ಲಿ ಪಾಯಸ ಮತ್ತು ಲಾಡು ವಿತರಿಸಲಾಯಿತು.

ಕಾವುನಲ್ಲಿ ಪುತ್ತಿಲ ಪರಿವಾರದಿಂದ ಶ್ರೀ ರಾಮನಿಗೆ ಹಣತೆ ದೀಪ Read More »

ನಿಮ್ಮ ಮಕ್ಕಳು ಕೋರ್ಟು ಕೇಸಿಗೆ ಅಲೆದಾಡದಂತೆ ನೋಡಿಕೊಳ್ಳಿ | ಬೊಳ್ಳಾಣ ಶ್ರೀ ಆಂಜನೇಯ ಭಜನಾ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅಶೋಕ್ ರೈ

ಪುತ್ತೂರು: ರಾಜಕೀಯದವರು ತಮ್ಮ ಲಾಭಕ್ಕೋಸ್ಕರ ಯಾರದ್ದೋ ಮಕ್ಕಳನ್ನು ಬಲಿಪಶು ಮಾಡುವ ಚಾಲ್ತಿ ಇದ್ದು ಕೆಟ್ಟ ಚಟುವಟಿಕೆಯಲ್ಲಿ ನಿಮ್ಮ ಮಕ್ಕಳು ಭಾಗಿಗಳಾಗಿ ಅವರು ಜೀವನ ಪೂರ್ತಿ ಕೋರ್ಟು, ಕೇಸು ಅಲೆದಾಡದಂತೆ ನೋಡಿಕೊಳ್ಳಿ ಎಂದು ಪುತ್ತೂರು ಶಸಕರಾದ ಅಶೋಕ್ ರೈ ಹೇಳಿದರು. ಅವರು ಬೊಳ್ಳಾಣ ಆಂಜನೇಯ ಭಜನಾಮಂದಿರದ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜಕೀಯದವರು ತಮ್ಮ ಲಾಭಕ್ಕೆ ಏನು ಬೇಕಾದರೂ ಭಾಷಣ ಮಾಡಬಹುದು. ಅವರ ಭಾಷಣ ಕೇಳಿ ಯುವ ಸಮೂಹ ಹಾಳಾಗದಂತೆ ಎಚ್ಚರವಹಿಸಬೇಕು. ನೀವು ಒಂದು ಬಾರಿ ಕೇಸು ಮೈಮೇಲೆ ಹಾಕಿಕೊಂಡರೆ

ನಿಮ್ಮ ಮಕ್ಕಳು ಕೋರ್ಟು ಕೇಸಿಗೆ ಅಲೆದಾಡದಂತೆ ನೋಡಿಕೊಳ್ಳಿ | ಬೊಳ್ಳಾಣ ಶ್ರೀ ಆಂಜನೇಯ ಭಜನಾ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅಶೋಕ್ ರೈ Read More »

ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ | ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ

ವಿಟ್ಲ: ಬುಡೋಕನ್ ಕರಾಟೆ ಮತ್ತು ಸ್ಪೋರ್ಟ್ಸ್ ಅಸೋಸಿಯನ್ ಕರ್ನಾಟಕದ ನೇತೃತ್ವದಲ್ಲಿ ಕೊಪ್ಪದ ದಿವ್ಯ ಕ್ಷೇತ್ರ ಹರಿಹರಪುರದಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಓಪನ್ ಪಂದ್ಯಾವಳಿ ‘ಕೊಪ್ಪ ಟ್ರೋಫಿ’ ಯಲ್ಲಿ ಕರಾಟೆ ಶಿಕ್ಷಕ ಸೆನ್ಸಾಯಿ ಮಾಧವ ವಿಟ್ಲ ಹಲವು ಪ್ರಶಸ್ತಿಗಳನ್ನು  ಪಡೆದುಕೊಂಡಿದೆ. ಕುಮಿಟೆ ವಿಭಾಗದಲ್ಲಿ ಓಜಾಲು ಸರಕಾರಿ ಶಾಲೆಯ ಹಂಸಿಕ ಪಿ – ಪ್ರಥಮ, ವಿಠಲ ಪದವಿ ಪೂರ್ವ ಕಾಲೇಜಿನ ಭವಿಶ್ – ಪ್ರಥಮ, ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ರಿಯೋನ್ ಲಸ್ರಾದೊ – ದ್ವಿತೀಯ, ವಿಟ್ಲ

ರಾಷ್ಟ್ರ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ | ವಿಟ್ಲ ಸೆನ್ಸಾಯಿ ಮಾಧವ ಅಳಿಕೆ ತಂಡಕ್ಕೆ ಪ್ರಶಸ್ತಿ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ | ಎಲ್‍ ಇಡಿ ಸ್ಕ್ರೀನ್ ಮೂಲಕ ಶ್ರೀರಾಮ ಪ್ರಾಣಪ್ರತಿಷ್ಠೆ ವೀಕ್ಷಿಸಿದ ಭಕ್ತಾದಿಗಳು

ಪುತ್ತೂರು: ಅಯೋಧ್ಯೆ ಶ್ರೀ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮ ಸೋಮವಾರ ನಡೆಯಿತು. ಬೆಳಿಗ್ಗೆಯಿಂದ ಎಲ್‍ ಇಡಿ ಸ್ಕ್ರೀನ್ ಮೂಲಕ ರಾಮಭಕ್ತರಿಗೆ ಶ್ರೀ ರಾಮನ ಪ್ರಾಣಪ್ರತಿಷ್ಠೆ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ನೂರಾರು ಭಕ್ತಾದಿಗಳು ಶ್ರೀ ರಾಮ ಪ್ರಾಣ ಪ್ರತಿಷ್ಠೆಯನ್ನು ವೀಕ್ಷಿಸುವ ಮೂಲಕ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಪೂಜೆಯ ಬಳಿಕ ಅನ್ನಸಂತರ್ಪನೆ ಜರಗಿತು.

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ | ಎಲ್‍ ಇಡಿ ಸ್ಕ್ರೀನ್ ಮೂಲಕ ಶ್ರೀರಾಮ ಪ್ರಾಣಪ್ರತಿಷ್ಠೆ ವೀಕ್ಷಿಸಿದ ಭಕ್ತಾದಿಗಳು Read More »

ಉಪ್ಪಿನಂಗಡಿ ದೇವಳಗಳಲ್ಲಿ ಭಜನೆ, ವಿಶೇಷ ಪೂಜಾ ಸೇವೆ

ಪುತ್ತೂರು: ಅಯೋಧ್ಯಾ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ, ಲಕ್ಷ್ಮಿ ವೆಂಕಟರಮಣ ದೇವಾಲಯ ಸೇರಿದಂತೆ ಪರಿಸರದ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಭಜನಾ ಸೇವೆ ಮತ್ತು ವಿಶೇಷ ಪೂಜಾ ಸೇವೆಗಳು ನಡೆದವು. ಉಪ್ಪಿನಂಗಡಿ ಸಹಸ್ರಲಿಂಗೇಶ್ಚರ ದೇವಾಲಯದಲ್ಲಿ ಸ್ಥಳೀಯ ಸಹಸ್ರಲಿಂಗೇಶ್ವರ ಹಾಗೂ ಶಾರದಾ ವನಿತಾ ಭಜನಾ ಮಂಡಳಿಯ ನೇತೃತ್ವದಲ್ಲಿ ವಿವಿಧ ಭಜನಾ ತಂಡಗಳಿಂದ ದಿನವಿಡೀ ಭಜನಾ ಸೇವೆ ನಡೆಯಿತು. ಮುದ್ಯ ಪಂಚಲಿಂಗೇಶ್ವರ ದೇವಾಲಯ, ಪದಾಳ ಸುಬ್ರಹ್ಮಣ್ಯ ದೇವಾಲಯ, ಪೆರಿಯಡ್ಕ ದುರ್ಗಾಪರಮೆಶ್ವರಿ ಭಜನಾ ಮಂದಿರ, ನೆಕ್ಕಿಲಾಡಿಯ ರಾಮ ಭಜನಾ ಮಂದಿರ

ಉಪ್ಪಿನಂಗಡಿ ದೇವಳಗಳಲ್ಲಿ ಭಜನೆ, ವಿಶೇಷ ಪೂಜಾ ಸೇವೆ Read More »

ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆ ವಿಶ್ವಕ್ಕೆ ಶಾಂತಿ ನೆಮ್ಮದಿ ಕರುಣಿಸಲಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವರಿಗೆ ಪುಷ್ಪ ಸಮರ್ಪಿಸಿ ಶಾಸಕ ಅಶೋಕ್ ರೈ

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಠಂತಬೆಟ್ಟು‌ಶ್ರೀ ಮಹಿಷ‌ಮರ್ಧಿನಿ ದೇವಿಗೆ ಪುಷ್ಪ ಸಮರ್ಪಿಸಿದರು. ಬಳಿಕ ಮಾತನಾಡಿದ ಶಾಸಕರು, ದೇಶದಲ್ಲಿ ಎಲ್ಲಾ ಧರ್ಮಿಯರು ಪರಸ್ಪರ ಸಹೋದರತೆಯಿಂದ ಬಾಳ್ವೆ ನಡೆಸುವ ಮೂಲಕ ದೇಶ ,ಜಗತ್ತಿನಲ್ಲಿ‌ ಶಾಂತಿ ನೆಲಸುವಂತಾಗಲಿ ಎಂದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿರಂಜನ್ ರೈ ರೈ ಮಠಂತಬೆಟ್ಡು, ಮುರಳೀಧರ್ ರೈ ಮಠಂತಬೆಟ್ಟು, ಯೋಗೀಶ್

ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆ ವಿಶ್ವಕ್ಕೆ ಶಾಂತಿ ನೆಮ್ಮದಿ ಕರುಣಿಸಲಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವರಿಗೆ ಪುಷ್ಪ ಸಮರ್ಪಿಸಿ ಶಾಸಕ ಅಶೋಕ್ ರೈ Read More »

ಶ್ರೀ ರಾಮನ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಂಡಿರುವುದು ನಮ್ಮ ಬಾಳಿನ ಸೌಭಾಗ್ಯ | ಕೆಲಿಂಜ ಶ್ರೀನಿಕೇತನದಲ್ಲಿ ನಡೆದ ಶ್ರೀರಾಮ ಪೂಜಾ ಮಹೋತ್ಸವದಲ್ಲಿ ಜಯಶ್ಯಾಮ್ ನೀರ್ಕಜೆ

ಕೆಲಿಂಜ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ನಡೆದ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ ಅಂಗವಾಗಿ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ವತಿಯಿಂದ ಶ್ರೀರಾಮ ಪೂಜಾ ಮಹೋತ್ಸವ ಸೋಮವಾರ ಕೆಲಿಂಜ ಶ್ರೀನಿಕೇತನದಲ್ಲಿ ನಡೆಯಿತು. ಆರ್‍.ಎಸ್‍.ಎಸ್‍.ನ ಹಿರಿಯರಾದ, ಸಾಮಾಜಿಕ ಕಾರ್ಯಕರ್ತ ಜಯಶ್ಯಾಮ್ ನೀರ್ಕಜೆ ಧಾರ್ಮಿಕ ಉಪನ್ಯಾಸ ನೀಡಿ, ಬಾಲರಾಮನ ಪ್ರತಿಷ್ಠೆ ಆಗಿದೆ. ಈ ಸಂದರ್ಭದಲ್ಲಿ ಜೀವಂತ ಇದ್ದು ರಾಮಪ್ರತಿಷ್ಠೆಯನ್ನು ಕಣ್ತುಂಬಿಕೊಂಡಿರುವುದು ನಮ್ಮ ಬಾಳಿನ ಸೌಭಾಗ್ಯ. 1992 ರಲ್ಲಿ ನಡೆದ ಬೃಹತ್ ಜನಾಂದೋಲನದಿಂದ ಬಾಬರಿ ಮಸೀದಿ ತೆಗೆದು ಸುಂದರ ಭವ್ಯ ರಾಮ ಮಂದಿರ ನಿರ್ಮಾಣಗೊಂಡಿದೆ.

ಶ್ರೀ ರಾಮನ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಂಡಿರುವುದು ನಮ್ಮ ಬಾಳಿನ ಸೌಭಾಗ್ಯ | ಕೆಲಿಂಜ ಶ್ರೀನಿಕೇತನದಲ್ಲಿ ನಡೆದ ಶ್ರೀರಾಮ ಪೂಜಾ ಮಹೋತ್ಸವದಲ್ಲಿ ಜಯಶ್ಯಾಮ್ ನೀರ್ಕಜೆ Read More »

error: Content is protected !!
Scroll to Top