ಪುತ್ತೂರು

ಧರೆಗಿಳಿದ ರಾಮನ ವೈಭವಕ್ಕೆ ಸಾಕ್ಷಿಯಾಗೋಣ ಬನ್ನಿ…| ಶ್ರೀ ರಾಮನ ಪ್ರಾಣಪ್ರತಿಷ್ಠೆ: ನ್ಯೂಸ್ ಪುತ್ತೂರು ಕಚೇರಿಗೆ ರಜೆ

ಪುತ್ತೂರು: ಅಯೋಧ್ಯೆಯಲ್ಲಿ ನ. 22ರಂದು ನಡೆಯುವ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆ ಅಂಗವಾಗಿ ನ್ಯೂಸ್ ಪುತ್ತೂರು ಕಚೇರಿಗೆ ರಜೆ ಘೋಷಿಸಲಾಗಿದೆ. ಐತಿಹಾಸಿಕ ಕಾರ್ಯಕ್ರಮದ ಅಂಗವಾಗಿ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ವಿವಿಧ ರೀತಿಯ ಆಚರಣೆ ನಡೆಯುತ್ತಿದೆ. ಪ್ರತಿ ಮನೆ, ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಈಗಾಗಲೇ ಕರೆ ನೀಡಲಾಗಿದ್ದು, ಇದಕ್ಕೆ ಪೂರಕವಾಗಿ ನ್ಯೂಸ್ ಪುತ್ತೂರು ಕಚೇರಿಗೆ ರಜೆ ಸಾರಲಾಗಿದೆ.

ಧರೆಗಿಳಿದ ರಾಮನ ವೈಭವಕ್ಕೆ ಸಾಕ್ಷಿಯಾಗೋಣ ಬನ್ನಿ…| ಶ್ರೀ ರಾಮನ ಪ್ರಾಣಪ್ರತಿಷ್ಠೆ: ನ್ಯೂಸ್ ಪುತ್ತೂರು ಕಚೇರಿಗೆ ರಜೆ Read More »

ತ್ರೇತಾಯುಗದ ರಾಮನಿಗೆ ಕಲಿಯುಗದಲ್ಲಿ ಪ್ರಾಣಪ್ರತಿಷ್ಠೆ!! | ಶ್ರೀ ರಾಮನ ಪ್ರಾಣಪ್ರತಿಷ್ಠೆ: ಪ್ರೇರಣಾ ಕಚೇರಿಗೆ ರಜೆ

ಪುತ್ತೂರು: ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಮನೆಮಾಡಿದೆ. ರಾಮನ ಪ್ರಾಣಪ್ರತಿಷ್ಠೆಯ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎನ್ನುವ ಉದ್ದೇಶದಿಂದ ಪ್ರತಿ ಮನೆ, ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಹಾಗೂ ಉದ್ಯೋಗ ರಂಗದಲ್ಲಿ ತೊಡಗಿಸಿಕೊಂಡಿರುವ ಪ್ರೇರಣಾ ಸಂಸ್ಥೆಯ ಕಚೇರಿಗೂ ರಜೆ ಸಾರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತ್ರೇತಾಯುಗದ ರಾಮನಿಗೆ ಕಲಿಯುಗದಲ್ಲಿ ಪ್ರಾಣಪ್ರತಿಷ್ಠೆ!! | ಶ್ರೀ ರಾಮನ ಪ್ರಾಣಪ್ರತಿಷ್ಠೆ: ಪ್ರೇರಣಾ ಕಚೇರಿಗೆ ರಜೆ Read More »

ರಾಮಲಲ್ಲಾನ ಪ್ರತಿಷ್ಠೆಯಿಂದ ದೇಶದ ಇತಿಹಾಸ, ಸಂಸ್ಕೃತಿ ಇಡೀ ಜಗತ್ತಿಗೆ ಪರಿಚಯ | ದೇಶದ ಅಸ್ಮಿತೆಯ ಸಂಕೇತವಾಗಿರುವ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮರೆಯಲು ಮಾಜಿ ಶಾಸಕ ಸಂಜೀವ ಮಠಂದೂರು ಕರೆ

ಪುತ್ತೂರು: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ಕಾಂಗ್ರೆಸ್ ನವರು ರಾವಣನ ಮನಸ್ಥಿತಿಯ ಹೇಳಿಕೆಗಳನ್ನು ನೀಡುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ರಾಮ ಮಂದಿರ ನಿರ್ಮಾಣದ ವಿಚಾರದಲ್ಲಿ ರಾಜಕೀಯ ಪ್ರವೇಶ ಆಗಿದೆ. ಈ ನಿಟ್ಟಿನಲ್ಲಿ ರಾಜಕೀಯ ಮರೆತು ಎಲ್ಲರೂ ದೇಶದ ಇತಿಹಾಸ, ಸಂಸ್ಕೃತಿಯನ್ನು ಇಡೀ ಜಗತ್ತಿಗೆ ಪರಿಚಯಿಸುವ ಕೆಲಸ ಆಗಬೇಕಾಗಿದೆ ಎಂದು ತಿಳಿಸಿದರು. ರಾಮ ಮಂದಿರ ನಿರ್ಮಾಣದ ಪೂರ್ವದಲ್ಲಿ 6.5 ಲಕ್ಷ

ರಾಮಲಲ್ಲಾನ ಪ್ರತಿಷ್ಠೆಯಿಂದ ದೇಶದ ಇತಿಹಾಸ, ಸಂಸ್ಕೃತಿ ಇಡೀ ಜಗತ್ತಿಗೆ ಪರಿಚಯ | ದೇಶದ ಅಸ್ಮಿತೆಯ ಸಂಕೇತವಾಗಿರುವ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮರೆಯಲು ಮಾಜಿ ಶಾಸಕ ಸಂಜೀವ ಮಠಂದೂರು ಕರೆ Read More »

ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: ನಗರದ ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ 8ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಚಂಡಿಕಾಯಾಗ ಜ.24 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಷ್ಟಮಂಗಲ ಪ್ರಶ್ನೆಯಂತೆ 2016 ರಲ್ಲಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆದು ಸ್ಥಳೀಯರು ಸಹಿತ ಊರ, ಪರವೂರ ಭಕ್ತಾದಿಗಳ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಪೂಜಾಧಿ ಕಾರ್ಯಕ್ರಮಗಳು ನಡೆಯುತ್ತಾ ಬಂದಿದೆ. ವಿಶೇಷವೆಂದರೆ ಶ್ರೀ ದುರ್ಗಾ ಉಳ್ಳಾಳ್ತಿ ಯಕ್ಷಕಲಾ ಸಂಘದ

ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಜ.26: ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’

ಪುತ್ತೂರು: ಕೃಷ್ಣನಗರದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಸಮಾರಂಭ ‘ಎವಿಜಿ ಚಿಣ್ಣರೋತ್ಸವ’ ಜ.26 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಎಲ್.ಗ್ರೂಫ್ ಆಫ್ ಕಂಪೆನಿಯ ಬಲರಾಮ ಆಚಾರ್ಯ, ಬನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ನಗರಸಭೆ ಸದಸ್ಯೆ ಗೌರಿ ಬನ್ನೂರು ಪಾಲ್ಗೊಳ್ಳಲಿದ್ದಾರೆ. ಶಾಲಾ ಸಂಚಾಲಕ ಎ.ವಿ.ನಾರಾಯಣ

ಜ.26: ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’ Read More »

ಗ್ಯಾರೇಜ್‍ ಬೀಗ ಒಡೆದು ಕಳ್ಳತನ !

ಪುತ್ತೂರು: ಗ್ಯಾರೇಜ್ ಒಂದರ ಬೀಗ ಒಡೆದು ಒಳಗೆ ನುಗ್ಗಿದ ಕಳ್ಳರು ಸಾವಿರಾರು ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಘಟನೆ ಬೆಟ್ಟಂಪಾಡಿ ಗ್ರಾಮದ ಇರ್ದೆಯಲ್ಲಿ ನಡೆದಿದೆ. ಪ್ರಸಾದ್ ಎಂಬವರ ಮಾಲಕತ್ವದ ಗ್ಯಾರೇಜ್ ಗೆ ರಾತ್ರಿ ಬೀಗ ಹಾಕಿ ಹೋಗಿದ್ದಾರೆ. ತಡರಾತ್ರಿ ಗ್ಯಾರೇಜ್‍ ನ ಬಾಗಿಲು ತೆರೆದಿರುವ ಕುರಿತು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅವರು ಬಂದು ನೋಡಿದಾಗ ಗ್ಯಾರೇಜ್‍ನ ಬೀಗ ಮುರಿದು ಅಲ್ಲಿದ್ದ ಸುಮಾರು 69,800 ರೂ. ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತು

ಗ್ಯಾರೇಜ್‍ ಬೀಗ ಒಡೆದು ಕಳ್ಳತನ ! Read More »

ಜ.22:  ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯಿಂದ 108 ರಾಮ ಮಂತ್ರ ಜಪಿಸಿ ಭಜನೆ

ಪುತ್ತೂರು: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ ನಡೆಯುವ ದಿನದಂದು ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ 108 ರಾಮ ಮಂತ್ರ ಜಪಿಸಿ ಭಜನಾ ಕಾರ್ಯಕ್ರಮ ನಡೆಯಲಿದೆ. ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ವತಿಯಿಂದ ಬೆಳಿಗ್ಗೆ 10.30 ರಿಂದ 11.30 ರ ತನಕ ಭಜನಾ ಕಾರ್ಯಕ್ರಮ ನಡೆಯಲಿದೆ. ರಾಮಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಜ.22:  ಶಾಂತಿಮೊಗೆರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯಿಂದ 108 ರಾಮ ಮಂತ್ರ ಜಪಿಸಿ ಭಜನೆ Read More »

ನಾಳೆ ಸವಣೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಯುವಜನ ಮೇಳ, ರಾಜ್ಯ ಯುವ ಪ್ರಶಸ್ತಿ ಪ್ರದಾನ

ಪುತ್ತೂರು: ದ.ಕ. ಜಿಲ್ಲಾ ಮಟ್ಟದ ಯುವಜನ ಮೇಳ 2023-24 ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಸಮಾರಂಭ ಜ. 20 ಹಾಗೂ 21ರಂದು ಸವಣೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಜ. 20ರಂದು ಬೆಳಿಗ್ಗೆ 10ರಿಂದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆ ಸಮಾರಂಭ ನಡೆಯಲಿದೆ. ಸಂಸದರು, ಶಾಸಕರು, ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಸದ್ಯರು, ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ. ಸುರೇಶ್ ರೈ ಸೂಡಿಮುಳ್ಳು ಅವರ ನೇತೃತ್ವ ವಹಿಸಿದ್ದು,

ನಾಳೆ ಸವಣೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಯುವಜನ ಮೇಳ, ರಾಜ್ಯ ಯುವ ಪ್ರಶಸ್ತಿ ಪ್ರದಾನ Read More »

ಶಾಂತಿಗೋಡು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ

ಪುತ್ತೂರು: ಶಾಂತಿಗೋಡು ಗ್ರಾಮ ವಿಕಾಸ ಸಮಿತಿ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್‍.ಎಸ್‍.ಎಸ್‍. ವಿದ್ಯಾರ್ಥಿಗಳಿಂದ ಶಾಂತಿಗೋಡು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ಶುಕ್ರವಾರ ಹಮ್ಮಿಕೊಳ್ಳಲಾಯಿತು. ಕೈಂದಾಡಿ, ಶಿರಾಡಿ ದೈವಸ್ಥಾನದ ವಠಾರದಿಂದ ಆರಂಭಿಸಿ ಶಾಂತಿಗೋಡು ರಸ್ತೆಯಲ್ಲಿದ್ದ ಪ್ಲಾಸ್ಟಿಕ್  ಇನ್ನಿತರ ತ್ಯಾಜ್ಯಗಳನ್ನು ಸಂಗ್ರಹಣೆ ಮಾಡಿ ಗ್ರಾಮ ಪಂಚಾಯಿತಿಗೆ ನೀಡಲಾಯಿತು. ವಿವೇಕಾನಂದ ಕಾನೂನು ವಿದ್ಯಾಲಯದ ಸುಮಾರು 50 ವಿದ್ಯಾರ್ಥಿಗಳು ಸಹಿತ ಶಾಂತಿಗೋಡು ಗ್ರಾಮ ವಿಕಾಸ ಸಮಿಯವರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕೂಸಪ್ಪ ಗೌಡ ಕಲ್ಕಾರು

ಶಾಂತಿಗೋಡು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ Read More »

ಚಾರ್ವಾಕದ ಆತಾಜೆ ಮೇದಪ್ಪ ಗೌಡ ಆತ್ಮಹತ್ಯೆ !

ಕಾಣಿಯೂರು: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಆತಾಜೆ ಮೇದಪ್ಪ ಗೌಡ (48) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇದಪ್ಪ ಗೌಡರವರು ತನ್ನ ಅಣ್ಣನ ಪತ್ನಿ ಯಶೋಧ ಮತ್ತು ಮಗಳು ರಾಶಿಯವರೊಂದಿಗೆ ವಾಸವಾಗಿದ್ದು, ಬೆಳಗ್ಗೆ ಮೇದಪ್ಪ ಗೌಡರ ಅಣ್ಣನ ಪತ್ನಿ ಯಶೋಧ ಹೂ ತರಲು ಹೋಗಿದ್ದು, ವಾಪಾಸು ಮನೆಗೆ ಬಂದಾಗ ಮನೆಯಲ್ಲಿ ಮೇದಪ್ಪ ಗೌಡರು ಇಲ್ಲದೇ ಇರುವುದನ್ನು ಕಂಡು ಅವರ ಮೊಬೈಲ್‍ ಫೋನಾಯಿಸಿದಾಗ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಮನೆಯ ಸುತ್ತಮುತ್ತ ಹುಡುಕಾಡಿದಾಗ ಮೇದಪ್ಪ ಗೌಡರು ಮನೆಯ ಹತ್ತಿರ ಸುಮಾರು

ಚಾರ್ವಾಕದ ಆತಾಜೆ ಮೇದಪ್ಪ ಗೌಡ ಆತ್ಮಹತ್ಯೆ ! Read More »

error: Content is protected !!
Scroll to Top