ಪುತ್ತೂರು

ನಾಳೆ: ತಾಯಂದಿರ ಸಭೆ, ಸೈಬರ್ ಕ್ರೈಂ, ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ | ಎಸ್‍.ಆರ್.ಕೆ. ಲ್ಯಾಡರ್ಸ್, ಶಿಕ್ಷಣ ಇಲಾಖೆ, ಡಾ.ಶಿವರಾಮ ಕಾರಂತ ಪ್ರೌಢಶಾಲೆ ಸಹಭಾಗಿತ್ವ

ಪುತ್ತೂರು: ಶಿಕ್ಷಣ ಇಲಾಖೆ, ಪುತ್ತೂರು ಸರಕಾರಿ ಪ್ರೌಢಶಾಲೆ ಹಾಗೂ ಎಸ್‍.ಆರ್.ಕೆ. ಲ್ಯಾಡರ್ಸ್ ಸಂಯುಕ್ತ ಆಶ್ರಯದಲ್ಲಿ ಎಸ್‍.ಆರ್.ಕೆ. ಲ್ಯಾಡರ್ಸ್‍ನ ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ ತಾಯಂದಿರ ಸಭೆ, ಸೈಬರ್ ಕ್ರೈಂ ಹಾಗೂ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ ಜ.20 ಶನಿವಾರ ನೆಲ್ಲಿಕಟ್ಟೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 10.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್. ಉದ್ಘಾಟಿಸಲಿದ್ದು, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ದಿನೇಶ್‍ ಕಾಮತ್‍ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯ ಶಿಕ್ಷಕಿ […]

ನಾಳೆ: ತಾಯಂದಿರ ಸಭೆ, ಸೈಬರ್ ಕ್ರೈಂ, ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ | ಎಸ್‍.ಆರ್.ಕೆ. ಲ್ಯಾಡರ್ಸ್, ಶಿಕ್ಷಣ ಇಲಾಖೆ, ಡಾ.ಶಿವರಾಮ ಕಾರಂತ ಪ್ರೌಢಶಾಲೆ ಸಹಭಾಗಿತ್ವ Read More »

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ | ಪುತ್ತೂರಿನಲ್ಲಿ ನಡೆಯಿತು ಶ್ರೀ ರಾಮಶ್ವ ಯಾತ್ರೆಗೆ ಚಾಲನೆ

ಪುತ್ತೂರು: ಜ.22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಶ್ರೀ ರಾಮಶ್ವ ಯಾತ್ರೆಗೆ ಶುಕ್ರವಾರ ದೇವಸ್ಥಾನದ ರಥಬೀದಿಯಲ್ಲಿ ಚಾಲನೆ ನೀಡಲಾಯಿತು. ಪುತ್ತೂರು ಸೀಮೆಗೆ ಸಂಬಂಧಿಸಿ ಮೂರು ದಿನಗಳ ಕಾಲ ಸಂಚರಿಸಲಿರುವ ಈ ಯಾತ್ರೆಯನ್ನು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ ನಾರಾವಿ, ಬಿ.ಐತ್ತಪ್ಪ

ಜ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ | ಪುತ್ತೂರಿನಲ್ಲಿ ನಡೆಯಿತು ಶ್ರೀ ರಾಮಶ್ವ ಯಾತ್ರೆಗೆ ಚಾಲನೆ Read More »

ತರಾತುರಿಯ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿಂದೂ ಸಮಾಜ, ನೈಜ ರಾಮಭಕ್ತರಿಗೆ ಮಾಡುವ  ಅವಮಾನ | ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ

ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಹಾಗೂ ಸಂಘ ಪರಿವಾರದವರು ಅಯೋಧ್ಯೆಯ ಅಪೂರ್ಣ ರಾಮ ಮಂದಿರದಲ್ಲಿ ತರಾತುರಿಯಲ್ಲಿ  ಶ್ರೀರಾಮನ ಪ್ರಾಣ ಪ್ರತಿಷ್ಠೆ ಮಾಡಲು ಹೊರಟಿರುವುದು ಹಿಂದೂ ಸಮಾಜಕ್ಕೆ, ನೈಜ ರಾಮಭಕ್ತರಿಗೆ ಮಾಡುವ ಅವಮಾನ ಎಂದು ಪುತ್ತೂರು ಬ್ಲಾಕ್‍ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಆರೋಪಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಲೇ ಶ್ರೀರಾಮನ ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ದೇಶದಲ್ಲಿ ಕಾಂಗ್ರೆಸ್ ನಾಯಕರು ಗೈರು ಹಾಜರಾಗುವ ಕುರಿತು ಬಹಿರಂಗ ಹೇಳಿಕೆ ಕೊಟ್ಟಿದ್ದು, ಈ ನೆಪವನ್ನಿಟ್ಟುಕೊಂಡು

ತರಾತುರಿಯ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿಂದೂ ಸಮಾಜ, ನೈಜ ರಾಮಭಕ್ತರಿಗೆ ಮಾಡುವ  ಅವಮಾನ | ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ Read More »

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆಯನ್ನು ದೀಪಾವಳಿ ರೀತಿ ಆಚರಿಸಿ | ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣಪ್ರಸನ್ನ ಕರೆ

ಪುತ್ತೂರು: ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಮಧ್ಯಾಹ್ನ 12.20 ರ ಶುಭ ಮುಹೂರ್ತದಲ್ಲಿ ವಿದ್ಯುಕ್ತವಾಗಿ ನಡೆಯಲಿದ್ದು, ಅಂದು ಪ್ರತೀ ಹಿಂದೂ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ದೀಪಾವಳಿ ಆಚರಣೆ ರೀತಿಯಲ್ಲಿ ಶ್ರೀರಾಮನನ್ನು ಆರಾಧಿಸುವಂತೆ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ವಿನಂತಿ ಮಾಡಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಾಣಪ್ರತಿಷ್ಠೆ ದಿನ ಹಿಂದೂ ಬಾಂಧವರು ಕನಿಷ್ಠ ಐದು ದೀಪಗಳನ್ನು ಉತ್ತರಾಭಿಮುಖವಾಗಿ ಬೆಳಗಿಸಿ, ಆರತಿ ಬೆಳಗಿ ಶ್ರೀರಾಮ಻ನನ್ನು ಆರಾಧಿಸಬೇಕು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆಯನ್ನು ದೀಪಾವಳಿ ರೀತಿ ಆಚರಿಸಿ | ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣಪ್ರಸನ್ನ ಕರೆ Read More »

ಆಕಸ್ಮಿಕ ಕೆರೆಗೆ ಬಿದ್ದು ಕೇಶವ ದೇವಾಡಿಗ ಮೃತ್ಯು !

ವಿಟ್ಲ : ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಕೊಳ್ನಾಡು ಗ್ರಾಮದ ಮಂಕುಡೆ ಗುಳಿಗಳ ಗುರಿ ಎಂಬಲ್ಲಿ ನಡೆದಿದೆ. ಮಂಕುಡೆ ಗುಳಿಗಳ ಗುರಿ ನಿವಾಸಿ ಕೇಶವ ದೇವಾಡಿಗ ಎಂಬವರ ಪುತ್ರ ರವೀಂದ್ರ ದೇವಾಡಿಗ (32) ಮೃತಪಟ್ಟವರು. ವೃತ್ತಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ರವೀಂದ್ರ ದೇವಾಡಿಗರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಪಾಳು ಬಿದ್ದ ಕೆರೆಗೆ ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು

ಆಕಸ್ಮಿಕ ಕೆರೆಗೆ ಬಿದ್ದು ಕೇಶವ ದೇವಾಡಿಗ ಮೃತ್ಯು ! Read More »

ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ ನಿಧನ

ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ (74) ನಿಧನರಾಗಿದ್ದಾರೆ. ಕೊಡುಗೈ ದಾನಿಯಾಗಿದ್ದ ಅವರು, ಸರಳ, ಸಜ್ಜನಿಕೆ ವ್ಯಕ್ತಿಯಾಗಿದ್ದರು. ಸಾಮಾಜಿಕ, ಧಾರ್ಮಿಕ ಮುಖಂಡರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರನ್ನು ಅಗಲಿದ್ದಾರೆ.

ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರ ಸ್ಥಾಪಕಾಧ್ಯಕ್ಷ ಶ್ರೀಪಾಲ್ ಜೈನ್ ನಿಧನ Read More »

ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆ | ಇಂದು ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ

ಪುತ್ತೂರು :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಳದಲ್ಲಿ ನಡೆದ ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ  9 ವಿದ್ಯಾರ್ಥಿಗಳು ತೇರ್ಗಡೆಗೊಂಡು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ಜ.19 ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 5ನೇ ತರಗತಿ ವಿದ್ಯಾರ್ಥಿಗಳಾದ ಅದ್ವೈತ ಶಂಕರ ವೈ, ಆರ್ಯನ್ ಪಿ .ಎಲ್., ಕೃತಿಕ್ ಬಿ.ಆರ್., ಎಂ ಜಶಿತ್ ಆಚಾರ್ಯ, ಪ್ರಣವ್

ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9 ವಿದ್ಯಾರ್ಥಿಗಳು ತೇರ್ಗಡೆ | ಇಂದು ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ Read More »

ಜ.22: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಶ್ರೀ ರಾಮ ಪೂಜಾ ಮಹೋತ್ಸವ | ಕರಸೇವಕರಿಗೆ ಗೌರವಾರ್ಪಣೆ

ವೀರಕಂಭ: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಶ್ರೀರಾಮ ಪೂಜಾ ಮಹೋತ್ಸವ ಜ.22 ರಂದು ಕೆಲಿಂಜ ಶ್ರೀನಿಕೇತನ ಮಂದಿರದಲ್ಲಿ ನಡೆಯಲಿದೆ. ಅಯೋಧ್ಯ ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ನಡೆಯುವ ಪೂಜಾ ಕಾರ್ಯಕ್ರಮವನ್ನು ಪುರೋಹಿತ ಉದಯ ಭಟ್ ನಂದಾವರ ನಡೆಸಿಕೊಡಲಿದ್ದಾರೆ. ಬೆಳಿಗ್ಗೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಸತ್ಯಸುಂದರ ಭಟ್ ಕಲ್ಮಲೆ ದೀಪ ಬೆಳಗಿಸುವರು. ಕೆಲಿಂಜ ಶ್ರೀ ಕೆಲಿಂಜೇಶ್ವರಿ ಭಜನಾ ಮಂಡಳಿ, ವೀರಕಂಭ ಶ್ರೀ ಶಾರದಾ ಭಜನಾ ಮಂಡಳಿ, ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯವರಿಂದ

ಜ.22: ಕೆಲಿಂಜ ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಶ್ರೀ ರಾಮ ಪೂಜಾ ಮಹೋತ್ಸವ | ಕರಸೇವಕರಿಗೆ ಗೌರವಾರ್ಪಣೆ Read More »

ವಿದ್ಯುತ್ ಗುತ್ತಿಗೆದಾರರ ಸಂಘದ ಪುತ್ತೂರು ಉಪಸಮಿತಿ ವಾರ್ಷಿಕ ಸಭೆ | ಲೋಕೇಂದ್ರ ಸಿಂಗ್‍ ಗೆ ಸನ್ಮಾನ

ಪುತ್ತೂರು: ಇಲ್ಲಿಯ ಮನಿಷಾ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪುತ್ತೂರು ಉಪಸಮಿತಿಯ 2022-23ನೇ ಸಾಲಿನ ಸರ್ವಸದಸ್ಯರ ವಾರ್ಷಿಕ  ಸಭೆಯಲ್ಲಿ ಭಗವತಿ ಇಲೆಕ್ಟ್ರಿಕಲ್ಸ್ ನ ಮಾಲಕ ಲೋಕೇಂದ್ರ ಸಿಂಗ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪುತ್ತೂರು ಉಪಸಮಿತಿ ಅಧ್ಯಕ್ಷ ಸೂರ್ಯನಾಥ ಆಳ್ವ, ಜಿಲ್ಲಾ ಸಮಿತಿ ಅಧ್ಯಕ್ಷ ಕುಶಲ ಪೂಜಾರಿ, ರಾಜ್ಯ ಸಮಿತಿ ಉಪಾಧ್ಯಕ್ಷ ಉರ್ಬನ್ ಪಿಂಟೋ, ದ.ಕ.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸುಬ್ರಾಯ

ವಿದ್ಯುತ್ ಗುತ್ತಿಗೆದಾರರ ಸಂಘದ ಪುತ್ತೂರು ಉಪಸಮಿತಿ ವಾರ್ಷಿಕ ಸಭೆ | ಲೋಕೇಂದ್ರ ಸಿಂಗ್‍ ಗೆ ಸನ್ಮಾನ Read More »

ಪಾರ್ಕ್ ಮಾಡಲಾದ ವಾಹನಗಳಿಂದ ಪೆಟ್ರೋಲ್ ಕಳ್ಳತನ | ರೆಡ್ ಹ್ಯಾಂಡ್ ಆಗಿ ಸಾರ್ಜನಿಕರಿಗೆ ಸಿಕ್ಕಿಬಿದ್ದ ಕಳ್ಳ

ಪುತ್ತೂರು: ಪಾರ್ಕ್ ಮಾಡಲಾದ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದ ಘಟನೆ ಗುರುವಾರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪೆಟ್ರೋಲ್ ಕದಿಯುತ್ತಿದ್ದವನನ್ನು ಸವಣೂರು ನಿವಾಸಿ ಶಮೀರ್‍  ಎಂದು ಗುರುತಿಸಲಾಗಿದೆ. ರೈಲ್ವೇ ನಿಲ್ದಾಣಕ್ಕೆ ಬೈಕ್‍ ನಲ್ಲಿ ಬಂದ ಯುವಕ ಅಲ್ಲಿ ಪಾರ್ಕ್‍ ಮಾಡಲಾದ ಬೈಕ್‍ ಇನ್ನಿತರ ವಾಹನಗಳಿಂದ ಪೆಟ್ರೋಲ್ ಕದಿಯುತ್ತಿದ್ದಾಗ ರೆಡ್‍ ಹ್ಯಾಂಡ್‍ ಆಗಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದು, ರೈಲ್ವೇ ಪೊಲೀಸರಿಗೆ ಒಪ್ಪಿಸಲಾಗಿದೆ. ಬಳಿಕ ರೈಲ್ವೇ ಪೊಲೀಸರು ಪುತ್ತೂರು ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಪಾರ್ಕ್ ಮಾಡಲಾದ ವಾಹನಗಳಿಂದ ಪೆಟ್ರೋಲ್ ಕಳ್ಳತನ | ರೆಡ್ ಹ್ಯಾಂಡ್ ಆಗಿ ಸಾರ್ಜನಿಕರಿಗೆ ಸಿಕ್ಕಿಬಿದ್ದ ಕಳ್ಳ Read More »

error: Content is protected !!
Scroll to Top