ಪುತ್ತೂರು

ಕೊಡಿಪ್ಪಾಡಿಯಲ್ಲಿ ಟೈಲರಿಂಗ್ ತರಬೇತಿ ಉದ್ಘಾಟನೆ

ಪುತ್ತೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಟೈಲರಿಂಗ್ ತರಬೇತಿ ಕಾರ್ಯಕ್ರಮ ಕೊಡಿಪ್ಪಾಡಿಯಲ್ಲಿ ನಡೆಯಿತು. ಕೊಡಿಪ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಪ್ಪ ಪೂಜಾರಿ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಆರ್ಮಿ ಆಫೀಸರ್ ಜಯರಾಮ್ ಗೌಡ, ಕೊಡಿಪ್ಪಾಡಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧೀರಜ್ ಗೌಡ, ಕಾರ್ಯದರ್ಶಿ ಮನೋಹರ್ ಕೊಳಕಿಮಾರ್, ಜನಜಾಗ್ರತಿ ಗ್ರಾಮ ಸಮಿತಿ ಅಧ್ಯಕ್ಷ ಹರಿಕೃಷ್ಣ ಗೌಡ ಗುತ್ತು, ಬಲ್ನಾಡ್ ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಒಕ್ಕೂಟದ ಅಧ್ಯಕ್ಷ ದಿನೇಶ್ ಗೌಡ ಗೋಮುಖ, ಉಪಾಧ್ಯಕ್ಷ ಎನ್. […]

ಕೊಡಿಪ್ಪಾಡಿಯಲ್ಲಿ ಟೈಲರಿಂಗ್ ತರಬೇತಿ ಉದ್ಘಾಟನೆ Read More »

ವಾತ್ಸಲ್ಯ ಕಾರ್ಯಕ್ರಮದಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಪುತ್ತೂರು: ಆರ್ಯಾಪು ಗ್ರಾಮದ ಕುಂಜೂರು ಪಂಜ, ಪಿಲಿಗುಂಡದ ಯಮುನಾ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿ ನಿರ್ಮಿಸಿ ಕೊಡುವ ಹೊಸ ಮನೆಗೆ ಗುದ್ದಲಿ ಪೂಜೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಯೋಜನಾಧಿಕಾರಿ  ಶಶಿಧರ್, ಜ್ಞಾನವಿಕಾಸ ಕಾರ್ಯಕ್ರಮದಡಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿದ್ದು, ನಿರ್ಗತಿಕರಿಗೆ ವಾತ್ಸಲ್ಯ ಮನೆ ರಚನೆ ಮಾಡಿಕೊಡುವುದು ಮಾತೃಶ್ರೀ ಅಮ್ಮನವರ ಒಂದು ಉತ್ತಮವಾದ ಯೋಜನೆ. ಇದೀಗ ಈ ಮನೆ ಆದಷ್ಟು ಬೇಗ ಪೂರ್ಣಗೊಂಡು ಮನೆಯವರು ಹೊಸ ಮನೆಯಲ್ಲಿ ನೆಮ್ಮದಿಯ ಜೀವನ

ವಾತ್ಸಲ್ಯ ಕಾರ್ಯಕ್ರಮದಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ Read More »

ಜ. 25: ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ | ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ

ಪುತ್ತೂರು:: ಶಾಂತಿಗೋಡು ಗ್ರಾಮದ ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಜ. 25ರಂದು ನಡೆಯಲಿರುವ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ದೈವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ನೇಮೋತ್ಸವವನ್ನು ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಕೂಸಪ್ಪ ಗೌಡ ಕಲ್ಕಾರು, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಭಟ್ ತೊಳ್ಪಾಡಿ, ಶ್ಯಾಮ್ ಭಟ್ ಕೈಂದಾಡಿ, ಮೋಹನ್ ಗೌಡ ಪಾದೆ, ದೇವಪ್ಪ ಓಲಾಡಿ, ಸೀತಾರಾಮ ಓಲಾಡಿ, ಹೋನಪ್ಪ ಗೌಡ ಕೈಂದಾಡಿ,

ಜ. 25: ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವ | ಯಶಸ್ಸಿಗಾಗಿ ನಡೆಯಿತು ಪೂರ್ವಭಾವಿ ಸಭೆ Read More »

ಗಾಂಧಿನಗರ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯ

ಕೆದಿಲ: ವಿಟ್ಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವತಿಯಿಂದ ಕೆದಿಲ ಗ್ರಾಮದ ಗಾಂಧಿನಗರ ಹಿಂದೂ ರುದ್ರಭೂಮಿ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಯಿತು. ರುದ್ರಭೂಮಿ ಸುತ್ತ ಬೆಳೆದ ಹುಲ್ಲು, ಬಲ್ಲೆ, ಪೊದೆ ಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು. ಸ್ವಚ್ಛತಾ ಕಾರ್ಯದಲ್ಲಿ ಕೆದಿಲ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ, ಗಿರೀಶ, ವೆಂಕಪ್ಪ, ಪುರಂದರ ಕೆದಿಲ ಸೇವಾಪ್ರತಿನಿಧಿಗಳಾದ ಶಾರದ, ಜಯಂತಿ ಭಾಗವಹಿಸಿದ್ದರು.

ಗಾಂಧಿನಗರ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯ Read More »

ಕೋಡಿಂಬಾಡಿ ಕುಶಾಲಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ ಶಂಕೆ : ಕೇಸು ದಾಖಲು !

ಪುತ್ತೂರು: ಕೋಡಿಂಬಾಡಿ ಗ್ರಾಮದ ಶಾಂತಿನಗರ ನಿವಾಸಿ ಕುಶಾಲಪ್ಪ ಪೂಜಾರಿ (61) ಮಂಗಳವಾರ ರಾತ್ರಿ ನಿಧನರಾಗಿದ್ದು, ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ. ಕೋಡಿಂಬಾಡಿಯ ದಿ.ಮಾಂಕು ಪೂಜಾರಿಯವರ ಪುತ್ರರಾಗಿರುವ ಕುಶಾಲಪ್ಪ ಪೂಜಾರಿ ಮಂಗಳವಾರ ರಾತ್ತಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಮನೆಯವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ವೇಳೆಗಾಗಲೇ ಕುಶಾಲಪ್ಪ ಪೂಜಾರಿಯವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಬಳಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಬಳಿಕ ಮನೆಯಲ್ಲಿ ವಿಷ ಇದ್ದ

ಕೋಡಿಂಬಾಡಿ ಕುಶಾಲಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ ಶಂಕೆ : ಕೇಸು ದಾಖಲು ! Read More »

ಸಂತ ಫಿಲೋಮಿನಾ ಕಾಲೇಜಿಗೆ ಇಬ್ಬರು ಉಪಪ್ರಾಂಶುಪಾಲರ ನೇಮಕ

ಪುತ್ತೂರು: ಸಂತ ಫಿಲೋನಾ ಕಾಲೇಜಿನ ಉಪಪ್ರಾಂಶುಪಾಲರಾಗಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪಿ ಎಸ್‌. ಕೃಷ್ಣ ಕುಮಾರ್‌ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ.ವಿಜಯಕುಮಾರ್‌ ಎಂ. ನೇಮಕಗೊಂಡಿದ್ದಾರೆ. ಡಾ.ಪಿ.ಎಸ್‌.ಕೃಷ್ಣ ಕುಮಾರ್‌ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ರಸಾಯನ ಶಾಸ್ತ್ರದಲ್ಲಿ  37 ವರ್ಷಗಳ ಬೋಧನಾನುಭವ ಹೊಂದಿರುತ್ತಾರೆ. ಕೆಮಿಕಲ್‌ ಕೈನೆಟಿಕ್ಸ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್‌ ಪದವಿಯನ್ನು ಪಡೆದಿರುತ್ತಾರೆ. ಡಾ.ವಿಜಯಕುಮಾರ್‌ ಎಂ. ಸಂತ ಫಿಲೋಮಿನಾ ಕಾಲೇಜಿನಲ್ಲಿ ತಮ್ಮ ಪದವಿ ಶಿಕ್ಷಣವನ್ನು ಪೂರೈಸಿ ಚೆನೈನ ಮದರಾಸು ವಿಶ್ವವಿದ್ಯಾನಿಲಯದಿಂದ ಎಂ.ಎ., ಎಂ.ಫಿಲ್‌. ಪದವಿಗಳನ್ನು ಪಡೆದಿದ್ದಾರೆ. 30

ಸಂತ ಫಿಲೋಮಿನಾ ಕಾಲೇಜಿಗೆ ಇಬ್ಬರು ಉಪಪ್ರಾಂಶುಪಾಲರ ನೇಮಕ Read More »

ನೀರಿನ ತೊಟ್ಟಿಗೆ ಬಿದ್ದು ಮಹಿಳೆ ಮೃತ್ಯು !

ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಅವರ ಪತ್ನಿ ಶುಭಲಕ್ಷ್ಮೀ ಮನೆ ಸಮೀಪದ ಕೃತಕ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮನೆ ಸಮೀಪದ ಗುಡ್ಡದ ಮೇಲಿರುವ ಟಾರ್ಪಾಲು ನಿರ್ಮಿತ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಕಾಲು ಜಾರಿ ಬಿದ್ದಿರುವುದೋ ಅಥವಾ ಆತ್ಮಹತ್ಯೆಯೇ ಎಂಬ ಶಂಕೆ ಮೂಡಿದ್ದು, ಸರಿಯಾದ ಮಾಹಿತಿ ತಿಳಿದು ಬಂದಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ

ನೀರಿನ ತೊಟ್ಟಿಗೆ ಬಿದ್ದು ಮಹಿಳೆ ಮೃತ್ಯು ! Read More »

ಜ.20-21: ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ‘‘ಸಿಝ್ಲರ್ ಟ್ರೋಫಿ-2024’

ಪುತ್ತೂರು: ಸಾಮೆತ್ತಡ್ಕ ಯುವಕ ಮಂಡಲ ಹಾಗೂ ಸಾಮೆತ್ತಡ್ಕ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಜಂಟಿ ಆಶ್ರಯದಲ್ಲಿ ದಿ.ಶ್ರೀನಾಥ ಆಚಾರ್ಯ ಸ್ಮರಣಾರ್ಥ ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್‍ಕ್ರಿಕೆಟ್ ಪಂದ್ಯಾಟ ‘ಸಿಝ್ಲರ್ ಟ್ರೋಪಿ-2024’ ಜ.20 ಹಾಗೂ 21 ರಂದು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಾಮೆತ್ತಡ್ಕ ಯುವಕ ಮಂಡಲದ ಅಧ್ಯಕ್ಷ ರೋಶನ್ ರೆಬೆಲ್ಲೋ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿ, ಪಂದ್ಯಾಟದಲ್ಲಿ ಒಟ್ಟು ಎಂಟು ತಂಡಗಳು ಪಾಲ್ಗೊಳ್ಳಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ನಂ.1

ಜ.20-21: ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ‘‘ಸಿಝ್ಲರ್ ಟ್ರೋಫಿ-2024’ Read More »

ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ | ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ

ಪುತ್ತೂರು: ಜಾಗದ ವಿವಾದ ಸಹಿತ ಅಯೋಧ್ಯೆಯ ಮಂತ್ರಾಕ್ಷತೆ ವಿತರಣಾ ಜವಾಬ್ದಾರಿ ನಮಗೆ ನೀಡಲಿಲ್ಲ ಎಂಬ ಕಾರಣಕ್ಕೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರಿಂದ ನಮಗೆ ಹಲ್ಲೆ ನಡೆದಿದೆ ಎಂದು ಸೋಮವಾರ ರಾತ್ರಿ ಹಲ್ಲೆಗೊಳಗಾದ ಮುಂಡೂರು ನಿವಾಸಿ ಸಂತೋಷ್ ಬಿ.ಕೆ. ಆರೋಪಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಂಡೂರು ಪರಿಸರದಲ್ಲಿ ಅಕ್ಷತೆ ವಿತರಣೆ ಜವಾಬ್ದಾರಿಯನ್ನು ನನಗೆ ನೀಡಲಾಗಿದ್ದು, ಶುಕ್ರವಾರ ಮಂತ್ರಾಕ್ಷತೆ ವಿತರಿಸಿ ಉಳಿದ ಮಂತ್ರಾಕ್ಷತೆಯನ್ನು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಇಟ್ಟಿದ್ದೇವು. ಅದೇ ರಾತ್ರಿ ಪುತ್ತಿಲ ಪರಿವಾರದವರು ನಮ್ಮಲ್ಲಿ ಕೇಳದೆ ಮಂತ್ರಾಕ್ಷತೆಯನ್ನು

ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ | ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ Read More »

ಕಿಡಿಗೇಡಿಗಳಿಂದ ರಸ್ತೆ ಬದಿ ತ್ಯಾಜ್ಯ ಎಸೆತ | ಸ್ಥಳೀಯರಿಂದ ಆಕ್ರೋಶ

ಪುತ್ತೂರು: ಶಾಂತಿಗೋಡು ಗ್ರಾಮದ ಕೋಡಿ ಎಂಬಲ್ಲಿ ಮಂಗಳವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ತ್ಯಾಜ್ಯಗಳನ್ನು ತಂದು ಸುರಿದ ಪರಿಣಾಮ ಸ್ಥಳೀಯರು ಆಕ್ರೋಶಗೊಂಡಿದ್ದಾರೆ. ಪಾರ್ಟಿ ನಡೆಸಿ ಬಳಿಕ ತಡರಾತ್ರಿ ತ್ಯಾಜ್ಯವನ್ನು ರಸ್ತೆ ಬದಿ ತಂದು ಸುರಿದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ತ್ಯಾಜ್ಯ ಬಹುತೇಕ ಪ್ಲಾಸ್ಟಿಕ್ ಬಾಟಲಿಗಳಿಂದ ಕೂಡಿದ್ದು, ಪೇಪರ್ ಪ್ಲೇಟ್, ಪ್ಲಾಸ್ಟಿಕ್ ಗ್ಲಾಸ್ ಇನ್ನಿತರ ಪದಾರ್ಥಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತಂದು ಸುರಿದಿದ್ದಾರೆ. ಗ್ರಾಪಂ ಕಾರ್ಯದರ್ಶಿ, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಿಡಿಗೇಡಿಗಳಿಂದ ರಸ್ತೆ ಬದಿ ತ್ಯಾಜ್ಯ ಎಸೆತ | ಸ್ಥಳೀಯರಿಂದ ಆಕ್ರೋಶ Read More »

error: Content is protected !!
Scroll to Top