ಪುತ್ತೂರು

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ಬಲ್ನಾಡು ಗ್ರಾಮದ ಬುಳೇರಿಕಟ್ಟೆ ಸಾಜ ಬಶೀರ್ತಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಮಂಗಳವಾರ ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬುಳೇರಿಕಟ್ಟೆ ಬಶೀರ್ತಡಿ ನಿವಾಸಿ ಕುಂಞ ನಾಯ್ಕ (70) ಆತ್ಮಹತ್ಯೆ ಮಾಡಿಕೊಂಡವರು. ಮೃತರು ಬಲ್ನಾಡು ಗ್ರಾಪಂ ಉಪಾಧ್ಯಕ್ಷ ರವಿಚಂದ್ರ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ! Read More »

ಬಲ್ನಾಡು ವಲಯ ಒಕ್ಕೂಟ ಪದಾಧಿಕಾರಿಗಳಿಗೆ ತರಬೇತಿ

ಪುತ್ತೂರು: ಬಲ್ನಾಡು ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಶ್ರೀ ಮಂಜುನಾಥ ಸಭಾಭವನ ದಲ್ಲಿ ನಡೆಯಿತು. ವಲಯ ಅಧ್ಯಕ್ಷ ಸತೀಶ್ ಒಳಗುಡ್ಡೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಯೋಜನಾಧಿಕಾರಿ ಶಶಿಧರ್ ಯೋಜನೆಯ ವಿವಿಧ ವಿಭಾಗದ ಅಧಿಕಾರಿಯವರ ಪರಿಚಯ, ಬಡ್ಡಿ ದರಗಳ ಬಗ್ಗೆ ಮಾಸಿಕ ವರದಿ ಮತ್ತು ಮರುಪಾವತಿ ಚೀಟಿಯ ಉಪಯೋಗ ಪಿ.ಆರ್.ಕೆ. ಮತ್ತು ಪಿ.ಆರ್.ಕೆ.. ನಿಭಂದನೆಗಳು, ಪ್ರಿಮಿಯಂ ಮೊತ್ತ ಸಾಲದ ಡಿಪಿ ಮೊತ್ತ, ಮೆಂಬರ್ ಲೀಡ್ ಆಪ್, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಬಲ್ನಾಡು ವಲಯ ಒಕ್ಕೂಟ ಪದಾಧಿಕಾರಿಗಳಿಗೆ ತರಬೇತಿ Read More »

ಪುತ್ತೂರು ಬಿಜೆಪಿಯ ಗೊಂದಲಕ್ಕೆ ತೆರೆ?? | ಅಂತಿಮ ಹಂತದ ಮಾತುಕತೆಯಲ್ಲಿ ಪುತ್ತಿಲ ಪರಿವಾರ!! | ಕುತೂಹಲ ಮೂಡಿಸಿರುವ ಪ್ರಮುಖರ ನಡೆ!!

ಪುತ್ತೂರು: ಬಿಜೆಪಿಯೊಳಗೆ ಎದ್ದಿದ್ದ ದೊಡ್ಡ ಗೊಂದಲಕ್ಕೆ ತೆರೆ ಬೀಳುವ ಲಕ್ಷಣಗಳು ಗೋಚರವಾಗುತ್ತಿವೆ. ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಹಾಗೂ ಬಿಜೆಪಿ ಮುಖಂಡರ ನಡುವೆ ಮಾತುಕತೆಗಳು ನಡೆಯುತ್ತಿವೆ ಎನ್ನುವ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ವಿಧಾನಸಭಾ ಚುನಾವಣೆ ವೇಳೆಗೆ ರಾಜ್ಯದ ಗಮನ ಸೆಳೆದಿದ್ದ ಪುತ್ತಿಲ ಪರಿವಾರ, ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಆಖಾಡಕ್ಕೆ ಧುಮುಕ್ಕಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಎಲ್ಲರೂ ಒಮ್ಮೆ ಹಿಂದಿರುಗಿ ನೋಡುವಂತೆ

ಪುತ್ತೂರು ಬಿಜೆಪಿಯ ಗೊಂದಲಕ್ಕೆ ತೆರೆ?? | ಅಂತಿಮ ಹಂತದ ಮಾತುಕತೆಯಲ್ಲಿ ಪುತ್ತಿಲ ಪರಿವಾರ!! | ಕುತೂಹಲ ಮೂಡಿಸಿರುವ ಪ್ರಮುಖರ ನಡೆ!! Read More »

ಮಂತ್ರಾಕ್ಷತೆ ಹೆಸರಿನಲ್ಲಿ ಪುತ್ತಿಲ ಪರಿವಾರಕ್ಕೆ ಸುಳ್ಳು ಅಪವಾದ ಮಾಡಿರುವುದು ಖಂಡನೀಯ !

ಪುತ್ತೂರು: 500 ವರ್ಷಗಳಿಂದ ಹಿಂದೂ ಸಮಾಜ ಕಾತರದಿಂದ ಕಾಯುತ್ತಿರುವ ಅಮೋಘ ಕ್ಷಣ ಜ.22ರ ಅಯೋಧ್ಯೆಯ ಶ್ರೀ ರಾಮಮಂದಿರ ಪ್ರತಿಷ್ಠಾಪನೆ. ಈ ಸಂದರ್ಭದಲ್ಲಿ ಮುಂಡೂರು ಗ್ರಾಮದಲ್ಲಿ ನಡೆದ ಜಾಗದ ತಕರಾರಿಗೆ ಪುತ್ತಿಲ ಪರಿವಾರವನ್ನು ಅದರಲ್ಲೂ ಹಿಂದೂಗಳ ಪರಮಶ್ರೇಷ್ಠ ರಾಮಮಂದಿರದ ಮಂತ್ರಾಕ್ಷತೆಯನ್ನು ಬಳಸಿಕೊಂಡು ಸುಳ್ಳು ಅಪವಾದ ಮಾಡಿರುವುದು ತೀರ  ನೀಚ ಕೆಲಸ. ಇದನ್ನು ನಾವು ಖಂಡಿಸುತ್ತೇವೆ ಎಂದು ಪುತ್ತಿಲ ಪರಿವಾರ ಹೇಳಿದೆ. ಮಂತ್ರಾಕ್ಷತೆ ವಿತರಿಸುವುದು ಸಹಿತ ರಾಮಮಂದಿರಕ್ಕೆ ಶುಭಕೋರಿ ಪುತ್ತೂರಿನಲ್ಲಿ ಪ್ರಪ್ರಥಮ 3ಡಿ ಬ್ಯಾನರ್ ಅಳವಡಿಸಿ ರಾಷ್ಟ್ರೀಯ ಹಬ್ಬದಂತೆ ಮನೆ

ಮಂತ್ರಾಕ್ಷತೆ ಹೆಸರಿನಲ್ಲಿ ಪುತ್ತಿಲ ಪರಿವಾರಕ್ಕೆ ಸುಳ್ಳು ಅಪವಾದ ಮಾಡಿರುವುದು ಖಂಡನೀಯ ! Read More »

ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ ಬಂಡಿ ಸಮರ್ಪಣೆ

ಪುತ್ತೂರು: ಚಾರ್ವಾಕ ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ 125 ವರ್ಷದ ನಂತರ ಬಂಡಿ ಸಮರ್ಪಣೆಯಾಗಿದೆ. ಮಂಗಳವಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಪ್ರಾರ್ಥನೆ ನೆರವೇರಿಸಿ ಬಂಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತಿತರರು ಉಪಸ್ಥಿತರಿದ್ದರು.

ಅಮರ ಕಾಸ್ಪಾಡಿ ಶ್ರೀ ಇರ್ವೆರ್ ಉಳ್ಳಾಕುಲು ದೈವಗಳಿಗೆ ಬಂಡಿ ಸಮರ್ಪಣೆ Read More »

ದಾರಿ ವಿವಾದಕ್ಕೆ ಹಲ್ಲೆ ನಡೆದಿದೆಯೇ ಹೊರತು ಅಕ್ಷತೆ ವಿಚಾರಕ್ಕೆ ಅಲ್ಲ | ದ.ಕ. ಜಿಲ್ಲಾ ಎಸ್ಪಿ ಸ್ಪಷ್ಟನೆ

ಪುತ್ತೂರು: ಪುತ್ತೂರಿನ ಹೊರವಲಯದ ಮುಂಡೂರು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣ ಘಟನೆ ದಾರಿ ವಿವಾದಕ್ಕೆಯೇ ಹೊರತು ಅಕ್ಷತೆ ವಿಚಾರಕ್ಕೆ ಅಲ್ಲ ಎಂದು ದ.ಕ. ಜಿಲ್ಲಾ ಎಸ್ಪಿ ಸಿ.ಬಿ. ರಿಷ್ಯಂತ್ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಹಲ್ಲೆಗೂ ರಾಮ ಅಕ್ಷತೆ ವಿತರಣೆಗೂ ಯಾವುದೇ ಸಂಬಂಧವಿಲ್ಲ. ಮುಂಡೂರಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಅಕ್ಷತೆ ಹಂಚುವ ವಿಚಾರಕ್ಕೆ ನಡೆದ ಹಲ್ಲೆ ಅಲ್ಲ. ಅದು ಜಾಗದ ವಿಚಾರಕ್ಕೆ ನಡೆದ ಗಲಾಟೆ ಆಗಿದೆ. ಹಲ್ಲೆ ನಡೆಸಿದವರಿಗೂ,

ದಾರಿ ವಿವಾದಕ್ಕೆ ಹಲ್ಲೆ ನಡೆದಿದೆಯೇ ಹೊರತು ಅಕ್ಷತೆ ವಿಚಾರಕ್ಕೆ ಅಲ್ಲ | ದ.ಕ. ಜಿಲ್ಲಾ ಎಸ್ಪಿ ಸ್ಪಷ್ಟನೆ Read More »

ನಾಳೆ : ಬೆಳಂದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ

ಬೆಳಂದೂರು: ಬೆಳಂದೂರು ಗ್ರಾಮ ಪಂಚಾಯಿತಿ ಹಾಗೂ ಪುತ್ತೂರು ಯೂನಿಯನ್ ಬ್ಯಾಂಕ್‍ ಇಂಡಿಯಾ ವತಿಯಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಜ.17 ಬುಧವಾರ ಮಧ್ಯಾಹ್ನ 2 ಗಂಟೆಗೆ ಬೆಳಂದೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಳಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮರಕ್ಕಡ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷವಾಗಿ ಕೃಷಿಕರಿಗೆ ಆಧುನಿಕ ತಂತ್ರಜ್ಞಾನದ ಬಗ್ಗೆ ವೀಡಿಯೋ ಪ್ರಸಾರಗೊಳ್ಳಲಿದೆ. ಅಲ್ಲದೆ ಕಿಸಾನ್ ಕ್ರೆಡಿಟ್ ಕಾರ್ಡ್‍, ಆಯುಷ್ಮಾನ್ ಕಾರ್ಡ್‍, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ

ನಾಳೆ : ಬೆಳಂದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ Read More »

ಬೇಲಿ ವಿಚಾರದಲ್ಲಿ ಗಲಾಟೆ: ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಪುತ್ತೂರು : ಜಮೀನಿನಲ್ಲಿ ಅಳವಡಿಸಿದ ತಂತಿ ಬೇಲಿ ವಿಷಯದಲ್ಲಿ ಗಲಾಟೆ ನಡೆದು ಅವಾಚ್ಯವಾಗಿ ನಿಂದಿಸಿ, ಹಲ್ಲೆ, ಜೀವ ಬೆದರಿಕೆ ಹಾಕಿರುವ ಕುರಿತು ಇತ್ತಂಡಗಳು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮುಂಡೂರು ನಿವಾಸಿ ಸಂತೋಷ್ ಬಿ.ಕೆ ಎಂಬವರು ನೀಡಿರುವ ದೂರಿನ ಮೇರೆಗೆ ಕೇಶವ, ಧನಂಜಯ, ಜಗದೀಶ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತೋಷ್ ಸೋಮವಾರ ರಾತ್ರಿ ಆಕ್ಟಿವಾ ಸ್ಕೂಟರ್ ನಲ್ಲಿ ತಮ್ಮ ತೋಟದ ಹತ್ತಿರ ಬಂದು ವಾಹನ ನಿಲ್ಲಿಸಿ, ಅಲ್ಲಿಂದ ತಮ್ಮ ತೋಟದಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿರುವಾಗ

ಬೇಲಿ ವಿಚಾರದಲ್ಲಿ ಗಲಾಟೆ: ಇತ್ತಂಡಗಳಿಂದ ದೂರು, ಪ್ರಕರಣ ದಾಖಲು Read More »

ಗಣರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಭಾಷಣ, ಪ್ರಬಂಧ, ಚಿತ್ರಕಲಾ ಸ್ಪರ್ಧೆ

ಪುತ್ತೂರು: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಪುತ್ತೂರು ಸಹಾಯಕರ ಮಾರ್ಗದರ್ಶನದಲ್ಲಿ ಗಣರಾಜ್ಯೋತ್ಸವದ ಮಹತ್ವ ಯುವ ಜನತೆಗೆ ತಿಳಿಯಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನೇತೃತ್ವದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಚಾಲಕತ್ವದಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಪುತ್ತೂರು ತಾಲೂಕಿನ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಮೂರು  ಸ್ಪರ್ಧೆಗಳ ವಿಷಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಅದರ  ಮಹತ್ವ. ಪ್ರಬಂಧ

ಗಣರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಭಾಷಣ, ಪ್ರಬಂಧ, ಚಿತ್ರಕಲಾ ಸ್ಪರ್ಧೆ Read More »

ಜ.21: ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ | ಕಾಂಗ್ರೆಸ್‍ ನಿಂದ ಪೂರ್ವಭಾವಿ ಸಭೆ

ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಗತ ವೈಭವ ಮತ್ತೆ ಮರಳಿ ಪಡೆಯಲಿದ್ದು, ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಮತ್ತೆ ಇದು ಸಾಧ್ಯವಾಗಲಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಜ.21 ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಇದರ ಪೂರ್ವ ಭಾವಿ ಸಭೆಯಲ್ಲಿ ಕಾರ್ಯಕರ್ತರನ್ನುದ್ದೆಶಿಸಿ ಅವರು ಮಾತನಾಡಿದರು. ದೇಶದ ಯಾವ ರಾಜ್ಯದಲ್ಲೂ ಇಲ್ಲದ ಗ್ಯಾರಂಟಿ ಯೋಜನೆಯನ್ನು ನಾವು ಜನತೆಗೆ ನೀಡಿದ್ದೇವೆ, ಇದು ಪ್ರತೀ ಕುಟುಂಬಕ್ಕೂ ತಲುಪಿದೆ.

ಜ.21: ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ | ಕಾಂಗ್ರೆಸ್‍ ನಿಂದ ಪೂರ್ವಭಾವಿ ಸಭೆ Read More »

error: Content is protected !!
Scroll to Top