ಪುತ್ತೂರು

ನಾಳೆ ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ಅರ್ಪಿಸುವ ಕುತೂಹಲಭರಿತ ತುಳು ಹಾಸ್ಯಮಮ ಸಾಮಾಜಿಕ ನಾಟಕ ‘ಶಾಂಭವಿ’ ಜ.15 ಸೋಮವಾರ ಸಂಜೆ 7 ಗಂಟೆಯ ಬಳಿಕ ಪ್ರದರ್ಶನಗೊಳ್ಳಲಿದೆ. ಉಡುಪಿ ಅಭಿನಯ ಕಲಾವಿದರು ಅಭಿನಯಿಸುವ ಶಾಂಭವಿ ಸಾಮಾಜಿಕ ನಾಟಕದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅದ್ದೂರಿ ರಂಗ ವಿನ್ಯಾಸದೊಂದಿಗೆ ಬಾಲಕೃಷ್ಣ ಶೆಟ್ಟಿ ನಿಟ್ಟೂರು ಸಾರಥ್ಯದಲ್ಲಿ, ಯತೀಶ್ ಕುಮಾರ್ ಅಲೆವೂರು ಸಲಹೆಯೊಂದಿಗೆ, ಉಮೇಶ್ ಅಲೆವೂರು ಅಧ್ಯಕ್ಷತೆಯಲ್ಲಿ ನಡೆಯಲಿದೆ. ತುಳುನಾಡ ರತ್ನ ದಿನೇಶ್ ಅತ್ತಾವರ ನಿರ್ದೇಶನದ, […]

ನಾಳೆ ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ Read More »

ಮೋದಿ ಹುಟ್ಟುಹಬ್ಬದಂದು ಉಚಿತ ಸೇವೆ ನೀಡುತ್ತಿದ್ದ ಸೆಲೂನ್ ಬಾಲ ನಿಧನ

ಪುತ್ತೂರು: ದೂರದ ತಮಿಳ್ನಾಡಿನಲ್ಲಿ ಜನಿಸಿ ಪುತ್ತೂರಿನ ಸಂಟ್ಯಾರ್ ನಲ್ಲಿ ಸೆಲೂನ್ ಬಾಲ ಅಣ್ಣಾ ಎಂದೇ ಖ್ಯಾತರಾಗಿದ್ದ ಬಾಲ ಅವರು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಎಲ್ಲರಿಗೂ ಚಿರಪರಿಚಿತರಾಗಿ ತನ್ನ ಕಾಯಕವನ್ನು ನಿಷ್ಠೆಯಿಂದ ಪ್ರೀತಿಯಿಂದ ಮಾಡುತ್ತಿರುವ ಬಾಲಾ ಅವರು ಜ. 07ರಂದು ಸ್ವಗೃಹ ದಲ್ಲಿ ಹೃದಯಘಾತದಿಂದ ನಿಧನ ರಾಗಿದ್ದಾರೆ. ಅಪ್ಪಟ ದೇಶಪ್ರೇಮಿಯಾಗಿರುವ ಬಾಲ ಅವರು ನರೇಂದ್ರ ಮೋದಿಯ ಅಪ್ಪಟ ಅಭಿಮಾನಿ. ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಹುಟ್ಟುಹಬ್ಬದಂದು ತನ್ನ ಸೆಲೂನ್ ನಲ್ಲಿ ಎಲ್ಲರಿಗೂ ಉಚಿತವಾಗಿ ಹೇರ್ ಕಟ್ಟಿಂಗ್ ಮಾಡಿಸುತ್ತಿದ್ದರು ಎಂದು ಸ್ಥಳೀಯರು

ಮೋದಿ ಹುಟ್ಟುಹಬ್ಬದಂದು ಉಚಿತ ಸೇವೆ ನೀಡುತ್ತಿದ್ದ ಸೆಲೂನ್ ಬಾಲ ನಿಧನ Read More »

ಕ್ರಿಶ್ಚಿಯನ್ ಧರ್ಮದ ಕುರಿತು ಅವಹೇಳನಕಾರಿ ಪೋಸ್ಟ್ | ಪ್ರಕರಣ ದಾಖಲು

ನೆಲ್ಯಾಡಿ: ಕಡಬ ತಾಲೂಕಿನ ಇಚ್ಚಂಪಾಡಿ ಗ್ರಾಮದ ಬರುಮಾರು ಎಂಬಲ್ಲಿ ಕ್ರಿಶ್ಚಿಯನ್ ಧರ್ಮದ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈಪನಡ್ಕಯ ಕೆ.ಪಿ ಜಾರ್ಜ್ ಎಂಬವರು ಈ ಪೋಸ್ಟ್ ಹಾಕಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆ.ಪಿ ಚಾರ್ಜ್ ಎಂಬವರು ಮೊಬೈಲ್‌ ನೋಡುತ್ತಿರುವ ಸಂದರ್ಭ ಕ್ರಿಶ್ಚಿಯನ್ ಬ್ರದರ್ಸ್ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಸುನೀಶ್ ಟಿ.ಪಿ. ಎಂಬವರು ಹಾಕಿದ ಸ್ಕ್ರೀನ್ ಶಾಟ್ ನ್ನು ನೋಡಲಾಗಿ ಇಚ್ಲಂಪಾಡಿ ಗ್ರಾಮದ ಗ್ರಾಮದ ಒಡತಡ್ಕ ಮನೆ

ಕ್ರಿಶ್ಚಿಯನ್ ಧರ್ಮದ ಕುರಿತು ಅವಹೇಳನಕಾರಿ ಪೋಸ್ಟ್ | ಪ್ರಕರಣ ದಾಖಲು Read More »

ಆರ್ಲಪದವು ಪೂಮಾಣಿ- ಕಿನ್ನಿಮಾಣಿ-ಪಿಲಿಭೂತ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ

ಪುತ್ತೂರು: ಪಾಣಾಜೆ ಆರ್ಲಪದವು ಪೂಮಾಣಿ- ಕಿನ್ನಿಮಾಣಿ-  ಪಿಲಿಭೂತ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ ಪಾಣಾಜೆ ಶ್ರೀ ರಣಮಂಗಳ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ಶಾಸಕ ಅಶೋಕ್ ರೈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಭಕ್ತಾದಿಗಳ ಸಹಕಾರದಿಂದ ಜೀರ್ಣೋದ್ದಾರ ಕಾರ್ಯ ನಡೆಯಲಿದೆ. ಪಾಣಾಜೆ, ಬೆಟ್ಟಂಪಾಡಿ ಮತ್ತು ನಿಡ್ಪಳ್ಳಿ ಗ್ರಾಮಗಳು ನನ್ನ ಗ್ರಾಮಗಳು. ಶಾಸಕನಾಗುವ ಮೊದಲೇ ನಾನು ಈ ಮೂರುಗ್ರಾಮಗಳ ಗ್ರಾಮಸ್ಥರ ಜೊತೆ ಅತಿ ಹತ್ತಿರದ ಸಂಪರ್ಕ ಹೊಂದಿದ್ದೇನೆ. ಯಾವುದೇ ಲೋಪದೋಷಗಳಿಲ್ಲದೆ ಜೀರ್ಣೋದ್ದಾರ

ಆರ್ಲಪದವು ಪೂಮಾಣಿ- ಕಿನ್ನಿಮಾಣಿ-ಪಿಲಿಭೂತ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಸಭೆ Read More »

ಧ್ವಜಾರೋಹಣದ ಮೂಲಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಧ್ವಜಾರೋಹಣದ ಮೂಲಕ ಭಾನುವಾರ ಚಾಲನೆ ನೀಡಲಾಯಿತು. ಜ.21 ರ ತನಕ ನಡೆಯುವ ಜಾತ್ರೋತ್ಸವದ ಅಂಗವಾಗಿ ಜ.14 ರಂದು ಬೆಳಿಗ್ಗೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ಇಂದು ರಾತ್ರಿ 8.30 ಕ್ಕೆ ಶ್ರೀ ದೇವರಿಗೆ ಲಕ್ಷದೀಪೋತ್ಸವ, ಉತ್ಸವ ಬಲಿ, ಕಟ್ಟೆಪೂಜೆ ಜರಗಲಿದೆ. ಸಂಜೆ 6 ಕ್ಕೆ ಅರಸು ಮುಂಡಲತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಆಗಮನವಾಗಲಿದೆ. 6.30 ರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30 ರಿಂದ ಚಾ ಪರ್ಕ

ಧ್ವಜಾರೋಹಣದ ಮೂಲಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ Read More »

ಪುಣಚ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ | ಎಲ್ಲಾ 13 ಸ್ಥಾನಗಳು ಸಹಕಾರ ಭಾರತಿ ತೆಕ್ಕೆಗೆ

ಪುಣಚ: ಪುಣಚ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ಎಲ್ಲಾ 13 ಸ್ಥಾನಗಳಲ್ಲೂ ಸಹಕಾರ ಭಾರತಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. 1998 ರ ಬಳಿಕ ಮೊದಲು ಚುನಾವಣೆ ನಡೆದಿದ್ದು, ಸಹಕಾರ ಭಾರತಿ, ಬಿಜೆಪಿ ಬಂಡಾಯ, ಸ್ವತಂತ್ರ ಅಭ್ಯರ್ಥಿಗಳ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಸಾಮಾನ್ಯ 7, ಎಸ್‍ಸಿ, ಎಸ್‍ಟಿ, ಹಿಂದುಳಿದ ವರ್ಗ ಎ, ಬಿ.ಯಿಂದ ತಲಾ ಒಂದು ಸ್ಥಾನ, ಮಹಿಳೆ

ಪುಣಚ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ | ಎಲ್ಲಾ 13 ಸ್ಥಾನಗಳು ಸಹಕಾರ ಭಾರತಿ ತೆಕ್ಕೆಗೆ Read More »

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಭಾವಚಿತ್ರದ ಬ್ಯಾನರ್ ಗೆ ಶ್ರದ್ಧಾಂಜಲಿ, ಚಪ್ಪಲಿ ಹಾರ ಪ್ರಕರಣ | ಪೊಲೀಸ್ ದೌರ್ಜನ್ಯ ಆರೋಪಕ್ಕೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪಶ್ಚಿಮ ವಲಯ ಐಜಿಪಿಗೆ ಸೂಚನೆ

ಪುತ್ತೂರು: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾ‌ರ್ ಕಟೀಲ್‌ ಅವರ ಭಾವಚಿತ್ರವಿದ್ದ ಬ್ಯಾನರ್‌ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪದ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮಕೈಗೊಂಡು ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಪಶ್ಚಿಮ ವಲಯ ಐಜಿಪಿಯವರಿಗೆ ಸೂಚನೆ ನೀಡಿದೆ. ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕದ ದಿನದಲ್ಲಿ ಬಿಜೆಪಿ ನಾಯಕರಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಭಾವಚಿತ್ರದ ಬ್ಯಾನರ್ ಗೆ ಶ್ರದ್ಧಾಂಜಲಿ, ಚಪ್ಪಲಿ ಹಾರ ಪ್ರಕರಣ | ಪೊಲೀಸ್ ದೌರ್ಜನ್ಯ ಆರೋಪಕ್ಕೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪಶ್ಚಿಮ ವಲಯ ಐಜಿಪಿಗೆ ಸೂಚನೆ Read More »

ಮನುಷ್ಯನನ್ನು ದೇವರಾಗಿಸುವ ನೀತಿಯೇ ರಾಮನೀತಿ: ರಾಧಾಕೃಷ್ಣ ಕಲ್ಚಾರ್ | ಶ್ರೀರಾಮೋತ್ಸವ – ಶ್ರೀರಾಮ ಭಾವ ಪೂಜೆಯ ಉದ್ಘಾಟನಾ ಸಮಾರಂಭ

ಪುತ್ತೂರು: ನೈತಿಕತೆ ಬೇರೆ ಅಲ್ಲ, ಶ್ರೀರಾಮ ಬೇರೆ ಅಲ್ಲ. ರಾಮನ ವ್ಯಕ್ತಿತ್ವ ಎಲ್ಲರಿಗಿಂತ ವ್ಯತ್ಯಸ್ತವಾಗಿ, ಜನರಿಗೆ ಆದರ್ಶವಾಗಿ ಕಾಣಿಸಿಕೊಳ್ಳುತ್ತದೆ ಎಂದು ಯಕ್ಷಗಾನ ಅರ್ಥಧಾರಿ, ಪ್ರಾಧ್ಯಾಪಕ ರಾಧಾಕೃಷ್ಣ ಕಲ್ಚಾರ್ ಹೇಳಿದರು. ಅವರು ಶನಿವಾರ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ ಶ್ರೀರಾಮೋತ್ಸವ – ಶ್ರೀರಾಮಭಾವ ಪೂಜೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ವೈಚಾರಿಕತೆ ಎಂದರೆ ಸರಿಯಾಗಿ ಅಧ್ಯಯನ ಮಾಡಿ,

ಮನುಷ್ಯನನ್ನು ದೇವರಾಗಿಸುವ ನೀತಿಯೇ ರಾಮನೀತಿ: ರಾಧಾಕೃಷ್ಣ ಕಲ್ಚಾರ್ | ಶ್ರೀರಾಮೋತ್ಸವ – ಶ್ರೀರಾಮ ಭಾವ ಪೂಜೆಯ ಉದ್ಘಾಟನಾ ಸಮಾರಂಭ Read More »

ಎಡಕ್ಕಾನ ಗಣಪತಿ ಭಟ್ ನಿಧನ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ ಸುಳ್ಯ ತಾಲೂಕಿನ ಕಲ್ಮಡ್ಕ ನಿವಾಸಿ ಎಡಕ್ಕಾನ ಗಣಪತಿ  ಭಟ್ (79) ಶನಿವಾರ ನಿಧನರಾದರು. ಕಲ್ಮಡ್ಕದ ಎಡಕ್ಕಾನ ನಿವಾಸಿಯಾಗಿರುವ ಮೃತರು ಹಲವು ವರ್ಷಗಳ ಕಾಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅಸೌಖ್ಯದಿಂದ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯನ್ನು ಅಗಲಿದ್ದಾರೆ.

ಎಡಕ್ಕಾನ ಗಣಪತಿ ಭಟ್ ನಿಧನ Read More »

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣಾ ಫಲಿತಾಂಶ ಪ್ರಕಟ | 12 ರಲ್ಲಿ 12 ಸ್ಥಾನ ಗೆದ್ದೂ ಬೀಗಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ

ಸವಣೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ಪಾಲಾಗಿದೆ. ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕಾರ ಭಾರತಿ ಬಹುಮತದಿಂದ ಆಯ್ಕೆಯಾಗಿದೆ.  ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು. ಒಟ್ಟು 12 ಸ್ಥಾನಗಳ ಪೈಕಿ ಈಗಾಗಲೇ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಪ್ರಕಾಶ್ ರೈ ಸಾರಕರೆ ಓರ್ವರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಉಳಿದ 11 ಸ್ಥಾನಗಳಿಗೆ ಚುನಾವಣೆ ನಡೆದು

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣಾ ಫಲಿತಾಂಶ ಪ್ರಕಟ | 12 ರಲ್ಲಿ 12 ಸ್ಥಾನ ಗೆದ್ದೂ ಬೀಗಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ Read More »

error: Content is protected !!
Scroll to Top