ಪುತ್ತೂರು

ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ,  ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ  ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಾ, 25 ರಂದು  ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮವನ್ನು ಕೆ.ಎಸ್.ಎಸ್ ಕಾಲೇಜಿನ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್ ಉದ್ಘಾಟಿಸಿದರು.  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ […]

ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ Read More »

SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ

ಪುತ್ತೂರು : ತಾಲೂಕು ಬೆಳಿಯೂರು ಕಟ್ಟೆಯಲ್ಲಿ ಶ್ರೀರಾಮ ಸಮುದಾಯ ಶಾಖೆಯ ಮಾತೃ ಪೂಜನ, ಮಾತೃ ವಂದನ,ಮಾತೃ ಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮ  ಮಾ.23 ಭಾನುವಾರದಂದು ನಡೆಯಿತು. ಪ್ರಾಂತ ಪ್ರಶಿಕ್ಷಣ ಪ್ರಮುಖರು ಲಕ್ಷ್ಮೀ ನಾರಾಯಣ, ಇವರು ತಾಯಿ ಹೃದಯದ ಅಂತಕರಣದ ವಿವಿಧ ಸ್ತರಗಳನ್ನು ಭಾವುಕರಾಗಿ ತಿಳಿಸಿದ ರೀತಿ  ಜನ್ಮ ಜನ್ಮಾoತರದ ನೆನಪು ಇರುವಂತೆ  ಮೂಡಿಸಿರುತ್ತಾರೆ. ಮಾತ್ರವಲ್ಲ ಮಾತೃ ಧ್ಯಾನದ ಮೂಲಕ ತಾಯಿ ಮತ್ತು ನಮ್ಮ ರಕ್ತ ಸಂಬಂಧವನ್ನು ಮತ್ತೆ ಹಸಿರಾಗಿಸಿ ನಮ್ಮ ಉಸಿರಿನಲ್ಲಿ  ಬೆರೆತಿರುವುದನ್ನು  ಅರಿವಿಗೆ ತಂದರು.

SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ Read More »

ಒಲಿಂಪಿಯಾಡ್ ಪರೀಕ್ಷೆ : ಅಂಬಿಕಾ ಸಿಬಿಎಸ್‍ ಇ ಸಂಸ್ಥೆಯಿಂದ ಎರಡನೆಯ ಹಂತಕ್ಕೆ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

ಪುತ್ತೂರು: ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಕಳೆದ ಡಿಸೆಂಬರ್ ತಿಂಗಳಿನಲ್ಲಿ ನವದೆಹಲಿಯ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆ ಬರೆದಿದ್ದು, ಪರೀಕ್ಷೆ ಬರೆದಿದ್ದ ಒಟ್ಟು 512 ವಿದ್ಯಾರ್ಥಿಗಳಲ್ಲಿ ಸಂಸ್ಥೆಯ ಒಟ್ಟು ನಾಲ್ಕು ಮಂದಿ ವಿದ್ಯಾರ್ಥಿಗಳು ಎರಡನೆಯ ಹಂತಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ 90 ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನೂ, 54 ವಿದ್ಯಾರ್ಥಿಗಳು ಬೆಳ್ಳಿಯ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನೂ, 27 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನೂ, ಉಳಿದಂತೆ

ಒಲಿಂಪಿಯಾಡ್ ಪರೀಕ್ಷೆ : ಅಂಬಿಕಾ ಸಿಬಿಎಸ್‍ ಇ ಸಂಸ್ಥೆಯಿಂದ ಎರಡನೆಯ ಹಂತಕ್ಕೆ ನಾಲ್ವರು ವಿದ್ಯಾರ್ಥಿಗಳು ಆಯ್ಕೆ Read More »

ದ.ಕ. ಜಿಲ್ಲಾ ಬಿಜೆಪಿಯಿಂದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ

ಪುತ್ತೂರು : ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸರಕಾರದ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಯಿತು. ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದ ಬಳಿ ಇರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಬಿಜೆಪಿಯಿಂದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ Read More »

ಭರ್ಜರಿ ಪ್ರದರ್ಶನಗೊಳ್ಳುತ್ತಿರುವ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಿಗ್ಗೆ 10.45 ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.26 ಬುಧವಾರದಂದು ಬೆಳಿಗ್ಗೆ 10.45ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಭರ್ಜರಿ ಪ್ರದರ್ಶನಗೊಳ್ಳುತ್ತಿರುವ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಿಗ್ಗೆ 10.45 ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು

ಕಾಣಿಯೂರು : ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯಿತು. ಪೂರ್ವಾಹ್ನ ಗಂಟೆ 11ರಿಂದ 12ರ ವೃಷಭ ಲಗ್ನದಲ್ಲಿ ವಿವಾಹ ಮುಹೂರ್ತ ನೆರವೇರಿತು. 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪುರೋಹಿತ ಮಧುಸೂಧನ ಕಲ್ಲೂರಾಯ ಅವರ ನೇತೃತ್ವದಲ್ಲಿ ಅರ್ಚಕ ವರ್ಗದವರು ಧಾರ್ಮಿಕ ವಿಧಿ

ಕುಕ್ಕೆಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸಾಮೂಹಿಕ ವಿವಾಹ | ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ನವಜೋಡಿಗಳು Read More »

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’

ಪುತ್ತೂರು: ಕೆನರಾ ಬ್ಯಾಂಕ್ ಬಳಿ ಮುಖ್ಯರಸ್ತೆಯಲ್ಲಿರುವ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ಏಪ್ರಿಲ್ 11 ರಿಂದ 15 ರ ತನಕ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಒಕ್ಕಲಿಗ ಸೌಧ ಸಭಾಭವನದಲ್ಲಿ ನಡೆಯಲಿದೆ. ಐದು ದಿನಗಳ ಕಾಲ ನಡೆಯುವ ‘ಪ್ರೇರಣಾ ಸಮ್ಮರ್ ಕ್ಯಾಂಪ್’ ನಲ್ಲಿ ವಿವಿಧ ಚಟುವಟಿಕೆಗಳಾದ ಒರಿಗಾಮಿ, ಸ್ಪೀಚ್ & ಆ್ಯಂಕರಿಂಗ್, ಆರ್ಟಿಸ್ಟಿಕ್ ಆರ್ಟ್, ಕಾಸ್ಟ್ ಆರ್ಟ್, ಫಿಂಗರ್ ಪಪ್ಪೆಟ್, ಫೇಸ್ ಮಾಸ್ಕ್, ಮಾರ್ಬಲ್ ಆರ್ಟ್

ಏಪ್ರಿಲ್ 11 ರಿಂದ 15 : ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಿಂದ ಒಕ್ಕಲಿಗ ಸೌಧ ಸಭಾಭವನದಲ್ಲಿ ‘ಪ್ರೇರಣಾ ಸಮ್ಮರ್ ಕ್ಯಾಂಪ್’ Read More »

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು ಮಾ.25 ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಐದನೇ ವಾರಕ್ಕೆ ಪಾದರ್ಪಣೆ ಮಾಡಿದ “ಭಾವ ತೀರ ಯಾನ’ ಸಿನಿಮಾ | ಇಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ಹೃದಯಾಘಾತದಿಂದ ಯುವಕ ಮೃತ್ಯು

ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪೆರ್ನೆಯಲ್ಲಿ ಇಂದು ಸಂಜೆ ನಡೆದಿದೆ. ಪೆರ್ನೆ ನಿವಾಸಿ ವೃತ್ತಿಯಲ್ಲಿ ವೆಲ್ಡಿಂಗ್‍ ಕೆಲಸ ಮಾಡುತ್ತಿದ್ದ ನವೀನ್ ಕುಮಾರ್ (27) ಮೃತ ಯುವಕ. ಅವರು ಉತ್ತಮ ಕಬಡ್ಡಿ ಆಟಗಾರರೂ ಆಗಿದ್ದರು. ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಹೃದಯಾಘಾತದಿಂದ ಯುವಕ ಮೃತ್ಯು Read More »

ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್‍ ಎಸ್‍.ಡಿ. ಆತ್ಮಹತ್ಯೆ

ಪುತ್ತೂರು: ತಾಲೂಕಿನ ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ, ಸರ್ವೆ ಷಣ್ಮುಖ ಯುವಕ ಮಂಡಲದ ಮಾಜಿ ಅಧ್ಯಕ್ಷ, ರಾಜೇಶ್ ಎಸ್. .ಡಿ (45) ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ರಾಜೇಶ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್‍ ಎಸ್‍.ಡಿ. ಆತ್ಮಹತ್ಯೆ Read More »

error: Content is protected !!
Scroll to Top