ಪುತ್ತೂರು

ನಿಯಂತ್ರಣಕ್ಕೆ ಸಿಗದ ಬೈಕ್: ಗುಂಡಿಗೆ ಬಿದ್ದು ಸವಾರ ಸಾವು

ಉಪ್ಪಿನಂಗಡಿ: ಬೈಕ್ ನಿಯಂತ್ರಣಕ್ಕೆ ಸಿಗದ ಪರಿಣಾಮ ಸವಾರನೊಬ್ಬ ಗುಂಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಹಿರೇಬಂಡಾಡಿ ನಿವಾಸಿ ಲಿಖಿತ್ ಎಂಬವರೇ ‌ಮೃತ ದುರ್ದೈವಿ. ಲಿಖಿತ್ ಅವರು ಬೈಕ್‌ನ ನಿಯಂತ್ರಣ ಕಳೆದುಕೊಂಡು ಗುಂಡಿಗೆ ಬಿದ್ದಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿರುವುದಾಗಿದೆ.

ನಿಯಂತ್ರಣಕ್ಕೆ ಸಿಗದ ಬೈಕ್: ಗುಂಡಿಗೆ ಬಿದ್ದು ಸವಾರ ಸಾವು Read More »

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ, 16 ಡಿಸ್ಟಿಂಕ್ಷನ್

ಸವಣೂರು: ವಿದ್ಯಾರಶ್ಮಿ ವಿದ್ಯಾಲಯ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 26 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು: ಅಯಿಷತ್ ಇಹ್‌ಶಾನ-602 (ಕಲಂಬಿ ಪಲ್ಲತ್ತಾರು ಅಬ್ಬಾಸ್ ಮತ್ತು ರೆಹನತ್ ದೇಂಬಲೆ ಇವರ ಮಗಳು), ಶಝ ಫಾತಿಮ ಪಿ – 600 (ಉಮ್ಮರ್ ಶಾಫಿ ಪಿ. ಮತ್ತು ಫಾತಿಮತ್ ಶಹರ್ ಬಾನ್ ಪಿ.

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ, 16 ಡಿಸ್ಟಿಂಕ್ಷನ್ Read More »

ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಜನರಿಂದ ಹಲ್ಲೆ: ದೂರು ದಾಖಲು

ಪುತ್ತೂರು: ಏಳು ಜನರ ಗುಂಪೊಂದು ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ಸರ್ಕಾರಿ ಬಸ್ ನಿಲ್ದಾಣದ ಸಮೀಪ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಬೆಳ್ತಂಗಡಿ ಆದಿಲ್ ಹುಸೈನ್ (21) ಎಂದು ಗುರುತಿಸಲಾಗಿದೆ. ಈ ಹಿಂದೆ ನಡೆದಿದ್ದ ಜಗಳವೊಂದನ್ನು ಬಿಡಿಸಿದ್ದಕ್ಕೆ ‌ಪ್ರತಿಕಾರವಾಗಿ ಈತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ಎ. 22 ರಂದು ತನ್ನ ಗೆಳೆಯರಿಬ್ಬರ ಜೊತೆಗೆ ಪುತ್ತೂರು ಬಸ್‌ಸ್ಟಾಂಡ್‌ನಲ್ಲಿ ‌ಟಿ ಕುಡಿಯುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ.

ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಜನರಿಂದ ಹಲ್ಲೆ: ದೂರು ದಾಖಲು Read More »

ಪ್ರೀತಿಸಿ ಮಗು ಕರುಣಿಸಿದ ಪ್ರಕರಣ : ಮದುವೆಯಾಗುವುದೇ ಉತ್ತಮ ಎಂದ ಹೈಕೋರ್ಟ್‌

ಯುವತಿಗೆ ಮಾಸಿಕ ಹತ್ತು ಸಾವಿರ ರೂ. ಜೀವನಾಂಶ ನೀಡಲು ಸಿದ್ಧರಿದ್ದಿರಾ ಎಂದು ಕೇಳಿದ ಕೋರ್ಟ್‌ ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿಯಿಂದಲೇ ಮಗುವಾಗಿರುವುದರಿಂದ ಮದುವೆಯಾಗುವುದೇ ಉತ್ತಮ ಎಂದು ಅಭಿಪ್ರಾಯಪಟ್ಟಿದೆ. ಯುವತಿ ಹಾಗೂ ಮಗುವನ್ನು ಅನಾಥವನ್ನಾಗಿಸುವುದು ಸರಿಯಲ್ಲ. ತಂದೆಯಾಗಿರುವುದರಿಂದ ಮಗುವಿನ ಆರೈಕೆ ಮಾಡುವುದು ಆರೋಪಿಯ ಕರ್ತವ್ಯ. ಯುವತಿಗೆ ಮಾಸಿಕ

ಪ್ರೀತಿಸಿ ಮಗು ಕರುಣಿಸಿದ ಪ್ರಕರಣ : ಮದುವೆಯಾಗುವುದೇ ಉತ್ತಮ ಎಂದ ಹೈಕೋರ್ಟ್‌ Read More »

ಕರಾಯ ಬ್ರಹ್ಮಕಲಶೋತ್ಸವದಲ್ಲಿ ಉಲೂಪಿ ಕಲ್ಯಾಣ ತಾಳಮದ್ದಳೆ

ಪುತ್ತೂರು: ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಮಹೇಶ ಮರ್ದಿನಿ ಯಕ್ಷಕಲಾ ಪ್ರತಿಷ್ಠಾನ (ರಿ )ಚಾರ – ಹೆಬ್ರಿ ಸಂಯೋಜನೆಯಲ್ಲಿ ಚಾರ ಪ್ರದೀಪ ಹೆಬ್ಬಾರ್ ರಚಿತ ಉಲೂಪಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ದೇವಿ ಪ್ರಸಾದ್ ಗುರುವಾಯನಕೆರೆ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥಧಾರಿಗಳಾಗಿ ಶ್ರೀಧರ ಎಸ್. ಪಿ. ಕೃಷ್ಣಾಪುರ (ಅರ್ಜುನ), ದಿವಾಕರ ಆಚಾರ್ಯ ಗೇರುಕಟ್ಟೆ(ಉಲೂಪಿ), ಸಂಜೀವ ಪಾರೆಂಕಿ (ಕೌರವ್ಯ), ಚಾರ ಪ್ರದೀಪ ಹೆಬ್ಬಾರ್( ದೃತರಾಷ್ಟ್ರ) ಭಾಗವಹಿಸಿದ್ದರು. ಬ್ರಹ್ಮಕಲಶೋತ್ಸವ

ಕರಾಯ ಬ್ರಹ್ಮಕಲಶೋತ್ಸವದಲ್ಲಿ ಉಲೂಪಿ ಕಲ್ಯಾಣ ತಾಳಮದ್ದಳೆ Read More »

ಪುತ್ತೂರು ಜಾತ್ರೆಯಲ್ಲಿ ಗಲಾಟೆ ಮಾಡಿದ ಇಬ್ಬರು ಪೊಲೀಸ್‌ ವಶಕ್ಕೆ

ಪುತ್ತೂರು : ಪೇಟೆಯಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪುತ್ತೂರು ನರಿಮೊಗರು ನಿವಾಸಿ ಹರ್ಷ ಗೋಪಾಲ್ ಹಾಗೂ ಕಬಕ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಏಪ್ರಿಲ್ 20ರಂದು ರಾತ್ರಿ ವೇಳೆ ದೇವಸ್ಥಾನದ ಜಾತ್ರಾ ಸ್ಥಳದಲ್ಲಿ ಪುತ್ತೂರು ನಗರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದೇವಸ್ಥಾನದ ಕಚೇರಿಯ ಬಳಿ ಜನರು ಗುಂಪು

ಪುತ್ತೂರು ಜಾತ್ರೆಯಲ್ಲಿ ಗಲಾಟೆ ಮಾಡಿದ ಇಬ್ಬರು ಪೊಲೀಸ್‌ ವಶಕ್ಕೆ Read More »

ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆಯೋಗ ಕೇಂದ್ರದಲ್ಲಿ ಪರಶುರಾಮ ಜಯಂತಿಆಚರಿಸಲಾಯಿತು. ವಿಷ್ಣುವಿನ ದಶಾವತಾರಗಳಲ್ಲಿ 6ನೇ ಅವತಾರದಲ್ಲಿ ಪರಶುರಾಮ ಬ್ರಾಹ್ಮಣ್ಯ ಮತ್ತು ಕ್ಷತ್ರಿಯ ಶಕ್ತಿಯ ಪ್ರತೀಕವಾಗಿ ಕೃತ, ತ್ರೇತಾ ಮತ್ತು ದ್ವಾಪರ ಯುಗಗಳಲ್ಲಿ ಧರ್ಮಸಂಸ್ಥಾಪನೆ ಮಾಡಿರುವ ಬಗ್ಗೆ ದಿವಾಕರ ಆಚಾರ್ಯ ಗೇರುಕಟ್ಟೆ ಬೌದ್ಧಿಕ ನೀಡಿದರು. ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮವಾಗಿ ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯನ್ನು

ಪತಂಜಲಿ ಯೋಗ ಕೇಂದ್ರದ ವತಿಯಿಂದ ಪರಶುರಾಮ ಜಯಂತಿ, ಮಹಾಭಾರತ ರಸಪ್ರಶ್ನೆ Read More »

ವಿದ್ಯಾರ್ಥಿ ಜೀವನದಲ್ಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ಎ. ಬಾಬು ನಾಯ್ಕ

ಪುತ್ತೂರು: ಅಜ್ಜಿನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ ತಾಲೂಕು ಇವುಗಳ ಸಹಯೋಗದಲ್ಲಿ ಎರಡು ದಿನಗಳ ಕಾಲ ನಡೆದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ -2 ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ಧಾರ್ಮಿಕ ಉಪನ್ಯಾಸ ನೀಡಿದರು. ಜೀವನದಲ್ಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ತಿಳಿಸಿದರು.

ವಿದ್ಯಾರ್ಥಿ ಜೀವನದಲ್ಲೇ ಆದರ್ಶಗಳನ್ನು ಮೈಗೂಡಿಸಿಕೊಂಡರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ಎ. ಬಾಬು ನಾಯ್ಕ Read More »

ಬೆಂಗಳೂರಿನಲ್ಲಿ ಕುಮಾರ್ ಪೆರ್ನಾಜೆ – ಸೌಮ್ಯ ದಂಪತಿಗೆ ಜನತಾ ಅವಾರ್ಡ್ 2026 ಪ್ರಶಸ್ತಿ

ಸಾಧನೆಗಳ ಸರದಾರನಿಗೆ ಜನತಾ ಕೃಷಿ ರತ್ನ ಪ್ರಶಸ್ತಿ ಪ್ರಧಾನ ಪುತ್ತೂರು: ಜನತಾ ನ್ಯೂಸ್ ಕನ್ನಡ ವತಿಯಿಂದ ಬೆಂಗಳೂರಿನ ನಾಗರಬಾವಿ ಕೆಎಲ್ಇ ಕಾನೂನು ಕಾಲೇಜ್ ಹತ್ತಿರ ಅರಮನೆ ವೆನ್ಯುನಲ್ಲಿ ಮನರಂಜನೆ ಫ್ಯಾಶನ್ ಶೋ ಮ್ಯೂಸಿಕಲ್ ನೈಟ್ ನೃತ್ಯ ಸಂಜೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜೇನು ಕೃಷಿ ಕ್ಷೇತ್ರದಲ್ಲಿನ ಸಾಧನೆಗಳ ಸರದಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕುಮಾರ ಪೆರ್ನಾಜೆ ಅವರ ಗಣನೀಯ ಸೇವೆ ಸಾಧನೆ ಮತ್ತು ಪ್ರತಿಭೆಯನ್ನು ಪರಿಗಣಿಸಿ ಜನತಾ ಕೃಷಿ ರತ್ನವನ್ನು ಜನತಾ ನ್ಯೂಸ್ ಮ್ಯಾನೇಜಿಂಗ್

ಬೆಂಗಳೂರಿನಲ್ಲಿ ಕುಮಾರ್ ಪೆರ್ನಾಜೆ – ಸೌಮ್ಯ ದಂಪತಿಗೆ ಜನತಾ ಅವಾರ್ಡ್ 2026 ಪ್ರಶಸ್ತಿ Read More »

ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ: ಗ್ರಾಹಕರಿಂದ ಉತ್ತಮ ಸ್ಪಂದನೆ

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈ ಆಫರ್ ಸಂಸ್ಥೆಯ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/-ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000/- ರವರೆಗೆ

ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ: ಗ್ರಾಹಕರಿಂದ ಉತ್ತಮ ಸ್ಪಂದನೆ Read More »

error: Content is protected !!
Scroll to Top