ಪುತ್ತೂರು

ಟಾಟಾ ಸುಮೋ, ಅಂಗಡಿ ಮೇಲೆ ಬಿದ್ದ ಮರ | ಇಬ್ಬರಿಗೆ ಗಾಯ

ಕಡಬ: ಚಲಿಸುತ್ತಿದ್ದ ಟಾಟಾ ಸುಮೋ ಹಾಗೂ ಅಂಗಡಿಯೊಂದರ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್ ನಲ್ಲಿ ಸೋಮವಾರ ನಡೆದಿದೆ. ವಾಹನ ಚಾಲಕ ಬಿಳಿನೆಲೆ ನಿವಾಸಿ ಶೇಖ‌ರ್ ಹಾಗೂ ಮತ್ತೋರ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸುಬ್ರಹ್ಮಣ್ಯದಿಂದ ನೆಟ್ಟಣ ಕಡೆಗೆ ತೆರಳುತ್ತಿದ್ದ ಟಾಟಾ ಸುಮೋ ಹಾಗೂ ಕೈಕಂಬ ಜಂಕ್ಷನ್ ನಲ್ಲಿದ್ದ ಗೂಡಂಗಡಿಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ […]

ಟಾಟಾ ಸುಮೋ, ಅಂಗಡಿ ಮೇಲೆ ಬಿದ್ದ ಮರ | ಇಬ್ಬರಿಗೆ ಗಾಯ Read More »

ಏಳು ಮಕ್ಕಳಿದ್ದೂ ಅನಾಥಾಶ್ರಮ ಸೇರಿದ ವೃದ್ಧೆ ಸಾವು | ಅಂತ್ಯ ಸಂಸ್ಕಾರಕ್ಕೂ ಬಾರದ ಮಕ್ಕಳು!! | ಮಕ್ಕಳ ಸ್ಥಾನದಲ್ಲಿ ನಿಂತು ಆರೋಗ್ಯ ವಿಚಾರಿಸುತ್ತಿದ್ದ ಎಸ್.ಐ. ನಂದಕುಮಾರ್!

ಉಪ್ಪಿನಂಗಡಿ: ವೃದ್ಧಾಪ್ಯದ ಹಿನ್ನಲೆಯಲ್ಲಿ ಮಕ್ಕಳಿಂದ ಅನಾಥಾಶ್ರಮ ಸೇರಿದ ವೃದ್ಧೆಯೊಬ್ಬರು ಹೃದಯಾಘಾತದಿಂದ ಭಾನುವಾರ ನಿಧನರಾದರು. 90ರ ವಯಸ್ಸಿನ ವೃದ್ಧೆ ಲಕ್ಷ್ಮೀ ಹೆಗ್ಡೆ ನಿಧನರಾದವರರು. ದುರಾದೃಷ್ಟ ಎಂದರೆ ಅವರಿಗೆ 7 ಮಕ್ಕಳಿದ್ದರೂ ಯಾರೂ ಪಾರ್ಥಿವ ಶರೀರದ ಅಂತಿಮ ಕಾರ್ಯಕ್ಕೆ ಆಗಮಿಸದ ಕಾರಣ ಅನಾಥಾಶ್ರಮದವರೇ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ ಘಟನೆಯೂ ನಡೆಯಿತು. ಉಪ್ಪಿನಂಗಡಿ ಸಮೀಪದ ಇಳಂತಿಲದಲ್ಲಿ ಲಕ್ಷ್ಮೀ ಹೆಗ್ಡೆ ಸ್ವಂತ ಮನೆಯನ್ನು ಹೊಂದಿದ್ದರು. ವೃದ್ಧಾಪ್ಯದಲ್ಲಿ ಮಕ್ಕಳಿಗೆ ಬೇಡವಾಗಿ ಅಸಹಾಯಕತೆಗೆ ಸಿಲುಕಿದ ಅವರು ನ್ಯಾಯ ಬಯಸಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಮಕ್ಕಳನ್ನು ಕರೆದು

ಏಳು ಮಕ್ಕಳಿದ್ದೂ ಅನಾಥಾಶ್ರಮ ಸೇರಿದ ವೃದ್ಧೆ ಸಾವು | ಅಂತ್ಯ ಸಂಸ್ಕಾರಕ್ಕೂ ಬಾರದ ಮಕ್ಕಳು!! | ಮಕ್ಕಳ ಸ್ಥಾನದಲ್ಲಿ ನಿಂತು ಆರೋಗ್ಯ ವಿಚಾರಿಸುತ್ತಿದ್ದ ಎಸ್.ಐ. ನಂದಕುಮಾರ್! Read More »

ಶಾಂತಿಗೋಡು ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆ

ಪುತ್ತೂರು: ಶಾಂತಿಗೋಡು ಒಕ್ಕಲಿಗ ಗೌಡ ಸೇವಾ ಸಂಘದ ಸಭೆ ಶಾಂತಿಗೋಡಿನ ದೇವಪ್ಪ ಗೌಡರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪಧಾಧಿಕಾರಿಗಳ ಆಯ್ಕೆ ನಡೆಯಿತು. ಪುತ್ತೂರು ತಾಲೂಕು ಒಕ್ಕಲಿಗ ಗೌಡ ಮಾತೃ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಪ್ರಧಾನ ಕಾರ್ಯದರ್ಶಿ ದಯಾನಂದ ಕಟ್ಟಪುಣಿ, ಕೋಶಾಧಿಕಾರಿ ಶಿವರಾಮ ಮಾತಾವು, ಮಹಿಳಾ ಘಟಕದ ಅಧ್ಯಕ್ಷೆ ವಾರಿಜ ಬೆಳ್ಳಿಯಪ್ಪ, ಪುತ್ತೂರು ಯುವ ಒಕ್ಕಲಿಗ ಸಂಘದ ಅಧ್ಯಕ್ಷ ಅಮರನಾಥ್  ಬಪ್ಪಳಿಗೆ, ತಾಲೂಕಿನ ಯುವ ಒಕ್ಕಲಿಗ ಗೌಡ ಸಂಘದ ಕೋಶಾಧಿಕಾರಿ ಪ್ರಶಾಂತ್ ಕೆಮ್ಮಾಯಿ, ಊರ ಗೌಡ್ರುಗಳಾದ

ಶಾಂತಿಗೋಡು ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆ Read More »

ಕಾಮಗಾರಿ ಪ್ರಗತಿಯಲ್ಲಿರುವಾಗ ಮತ್ತೊಮ್ಮೆ ಶಿಲಾನ್ಯಾಸ ಅಗತ್ಯವೇ | ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧರ್ ಜೈನ್ ಪ್ರಶ್ನೆ

ಪುತ್ತೂರು: ಅಮೃತ ನಗರೋತ್ಥಾನ 2ನೇ ಹಂತದ 4.67 ಕೋಟಿ ರೂ. ಮತ್ತು ನಗರೋತ್ಥಾನ ಪ್ರೋತ್ಸಾಹ ಧನ 3 ಕೋಟಿ ರೂ. ಅನುದಾನದಡಿ ಕೈಗೊಳ್ಳುವ ಬೆದ್ರಾಳದ ಸೇತುವೆ ಸಹಿತ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಆಗಿನ ಶಾಸಕರು 2023ನೇ ಮಾರ್ಚ್ 8 ರಂದು ನೆರವೇರಿಸಿದ್ದಾರೆ. ಕಾಮಗಾರಿಯೂ ಪ್ರಗತಿಯಲ್ಲಿದೆ. ಆದರೆ ಇದೀಗ ಮತ್ತೊಮ್ಮೆ ಈಗಿನ ಶಾಸಕರು ಬೆದ್ರಾಳದಲ್ಲೇ ಅದೇ ಕಾಮಗಾರಿಗೆ ಶಿಲಾನ್ಯಾಸ ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದು ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧರ್ ಜೈನ್ ತಿಳಿಸಿದ್ದಾರೆ. ನಗರೋತ್ಥಾನದಲ್ಲಿ ಮೊದಲನೆ ಹಂತದಲ್ಲಿ 30  ಕೋಟಿ

ಕಾಮಗಾರಿ ಪ್ರಗತಿಯಲ್ಲಿರುವಾಗ ಮತ್ತೊಮ್ಮೆ ಶಿಲಾನ್ಯಾಸ ಅಗತ್ಯವೇ | ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧರ್ ಜೈನ್ ಪ್ರಶ್ನೆ Read More »

ಭಾರೀ ಮಳೆಗೆ ಒಡೆದ ಕಿಂಡಿ ಅಣೆಕಟ್ಟು | ಕೃಷಿ ಭೂಮಿ ನಾಶ

ಚೆನ್ನಾವರ : ಶನಿವಾರ ರಾತ್ರಿ ಸುರಿದ ಧಾರಕಾರ ಮಳೆಗೆ ಚೆನ್ನಾವರ ಬಳಿಯ ಗೌರಿ ಹೊಳೆಯ ಕಿಂಡಿ ಅಣೆಕಟ್ಟಿನ ಒಂದು ಪಾರ್ಶ್ವ ಒಡೆದು ಅಪಾರ ಪ್ರಮಾಣದ ಕೃಷಿ ಭೂಮಿ‌ ನಷ್ಟವಾಗಿದೆ. ತೋಟಕ್ಕೆ ನೀರು ಹರಿದು ಮಣ್ಣು ಕುಸಿದಿದ್ದು, ಅಡಕೆ ಮರಗಳು ಧರೆಗುರುಳಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದ್ದು, ಅಧಿಕಾರಿಗಳಿಗೆ ಪರಿಹಾರ ನೀಡಬೇಕೆಂದು ಸೂಚಿಸಿದರು.

ಭಾರೀ ಮಳೆಗೆ ಒಡೆದ ಕಿಂಡಿ ಅಣೆಕಟ್ಟು | ಕೃಷಿ ಭೂಮಿ ನಾಶ Read More »

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತ್ಯು !

ಪುತ್ತೂರು: ಹೋಂಡಾ ಆಕ್ಟೀವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟೀವಾ ಸಹಸವಾರ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಇರ್ದೆ ಗ್ರಾಮದ ಉಪ್ಪಳಿಗೆ ನಾರಾಯಣ ನಾಯ್ಕ ಹಾಗೂ ಕಲ್ಯಾಣ ದಂಪತಿ ಪುತ್ರ ಪ್ರವೀಣ (18) ಮೃತ ಯುವಕ. ಡಿ.31 ರಂದು ಪ್ರವೀಣ್ ಪುತ್ತೂರಿನಿಂದ ಮನೆಯತ್ತ ಹಿಂದಿರುಗುತ್ತಿದ್ದಾಗ ಮುಕ್ರಂಪಾಡಿ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ರಸ್ತೆಗೆಸೆಯಲ್ಪಟ್ಟ ಸಹಸವಾರ ಪ್ರವೀಣ್ ತೀವ್ರ ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಹೆಚ್ಚಿನ

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತ್ಯು ! Read More »

ಸ್ಕೂಟಿಗೆ ಲಾರಿ ಡಿಕ್ಕಿ : ಗಂಭೀರ ಗಾಯ!

ಪುತ್ತೂರು: ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರೆ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿ ತೆಂಕಿಲ ಬಳಿ ನಡೆದಿದೆ. ಸುಳ್ಯ ಕಡೆಗೆ ಮೀನು ಮಾರಾಟ ಮಾಡುತ್ತಿದ್ದ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಮುಂದುಗಡೆಯಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಚಾಲಕನ ಅಜಾಗರೂಕತೆ ಚಾಲನೆ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಕೂಟಿಗೆ ಲಾರಿ ಡಿಕ್ಕಿ : ಗಂಭೀರ ಗಾಯ! Read More »

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ !

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವಿನ ಕನ್ನಡ್ಕದಲ್ಲಿ ಭಾನುವಾರ ನಡೆದಿದೆ. ಕನ್ನಡ್ಕ ನಿವಾಸಿ ಕಾಲೇಜೊಂದರ ವಿದ್ಯಾರ್ಥಿನಿ ದೀಕ್ಷಾ (16) ಮೃತಪಟ್ಟ ಯುವತಿ ದೀಕ್ಷಾ ಮನೆಯ ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈಶ್ವಮಂಗಲ ಹೊರಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ! Read More »

ಜೀವನ ಕೌಶಲ್ಯವನ್ನು ಕಲಿಸುವ ಪ್ರತಿಭಾ ಪುರಸ್ಕಾರ ಮೈಲುಗಲ್ಲಾಗಿ ನಿಲ್ಲಲಿ | ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ‘ಪ್ರತಿಭಾ ಸರಸ್ವತೀ’ ಕಾರ್ಯಕ್ರಮದಲ್ಲಿ ಮಾಲತಿ ಡಿ.

ಪುತ್ತೂರು: ನರಿಮೊಗರು ಕೊಡಂಕಿರಿ ಫೌಂಡೇಶನ್ ಪ್ರಾಯೋಜಿತ ಸರಸ್ವತಿ ವಿದ್ಯಾ ಮಂದಿರದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವರ್ಧಂತ್ಯುತ್ಸವ -2024 ‘ಪ್ರತಿಭಾ ಸರಸ್ವತೀ’ ಕಾರ್ಯಕ್ರಮ ಶನಿವಾರ ಸಂಜೆ ನಡೆಯಿತು. ಮುಖ್ಯ ಅತಿಥಿಯಾಗಿ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಸಮಾರಂಭ ಉದ್ಘಾಟಿಸಿ ಮಾತನಾಡಿ, ಯಾವುದೇ ಮಗುವಿನ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರೋತ್ಸಾಹ ನೀಡಬೇಕು. ಮಗುವಿನಲ್ಲಿ ಇಲ್ಲದೆ ಇರುವ ಕಲೆಯ ಬಗ್ಗೆ ಒತ್ತಡ ಹಾಗಬಾರದು. ಈ ನಿಟ್ಟಿನಲ್ಲಿ ಪ್ರತಿಭಾ ವೇದಿಕೆ ಮಕ್ಕಳಲ್ಲಿನ ಪ್ರತಿಭೆಯನ್ನು ತೋರ್ಪಡಿಸಲು ಸಹಕಾರಿಯಾಗಬಲ್ಲದು. ಇಂತಹಾ ವೇದಿಕೆಯಿಂದ ಮಕ್ಕಳು ಇನ್ನೊಬ್ಬರ

ಜೀವನ ಕೌಶಲ್ಯವನ್ನು ಕಲಿಸುವ ಪ್ರತಿಭಾ ಪುರಸ್ಕಾರ ಮೈಲುಗಲ್ಲಾಗಿ ನಿಲ್ಲಲಿ | ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ‘ಪ್ರತಿಭಾ ಸರಸ್ವತೀ’ ಕಾರ್ಯಕ್ರಮದಲ್ಲಿ ಮಾಲತಿ ಡಿ. Read More »

ಧ್ವಜ ಒಗ್ಗಟ್ಟಿನ, ವಿಜೇತದ, ಸ್ಪರ್ಧೆಯ ಸಂಕೇತ | ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಕ್ರೀಡಾ ಸಂಭ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗುಮ್ಮಣ್ಣ ಗೌಡ

ಕಡಬ: ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ‘ಕ್ರೀಡಾ ಸಂಭ್ರಮ-2023-24’ ಆಲಂಕಾರು ಶ್ರೀ ದುರ್ಗಾಂಬಾ ಮೈದಾನದಲ್ಲಿ ಜ.7 ರಂದು ನಡೆಯಿತು. ನಿವೃತ್ತ ಅಧ್ಯಾಪಕ ಗುಮ್ಮಣ್ಣ ಗೌಡ ಧ್ವಜಾರೋಹಣ ನೆರವೇರಿಸಿ, ಮಾತನಾಡಿ, ಬಾವುಟ ಅತ್ಯಂತ ಹೆಮ್ಮೆಯ ವಿಷಯವಾಗಿದ್ದು, ಒಗ್ಗಟ್ಟಿನ, ವಿಜೇತದ, ಸ್ಪರ್ಧೆಯ, ದೇಶದ ಸಂಕೇತವಾಗಿದೆ. ಈ ನಿಟ್ಟಿನಲ್ಲಿ ಒಗ್ಗಟ್ಟಿನಲ್ಲಿ, ಸೌಹಾರ್ದದ ಸ್ಪರ್ಧೆಯಲ್ಲಿ ನಾವೆಲ್ಲರೂ ಸಂಭ್ರಮಿಸೋಣ ಎಂದು ಹೇಳಿದರು. ಶಾಸಕ ಸಂಜೀವ ಮಠಂದೂರು ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ದೈಹಿಕ ಜತೆಗೆ ಮಾನಸಿಕವಾಗಿ ಕ್ರೀಡೆ ಸಹಕಾರಿಯಾಗಿದೆ. ಸೌಹಾರ್ದ ವಾತಾವರಣ ನಿರ್ಮಾಣ

ಧ್ವಜ ಒಗ್ಗಟ್ಟಿನ, ವಿಜೇತದ, ಸ್ಪರ್ಧೆಯ ಸಂಕೇತ | ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಕ್ರೀಡಾ ಸಂಭ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗುಮ್ಮಣ್ಣ ಗೌಡ Read More »

error: Content is protected !!
Scroll to Top