ಪುತ್ತೂರು

ಮೋರಿ ಸಮಸ್ಯೆ | ಸ್ಪಂದಿಸಿದ ಸಂಸದರು

ಪುತ್ತೂರು: ಸಾರ್ವಜನಿಕರ ಅನುಕೂಲಕ್ಕಾಗಿ ಕೊಡಿಪ್ಪಾಡಿ ಶ್ರೀ ಜನಾರ್ಧನ ದೇವಸ್ಥಾನ ಸಹಿತ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಮೋರಿಯೊಂದನ್ನು ಅಳವಡಿಸಲಾಯಿತು. ಈ ರಸ್ತೆಯಲ್ಲಿ ಮೋರಿ ವ್ಯವಸ್ಥೆ ಇಲ್ಲದೆ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿತ್ತು. ಇದನ್ನು ಮನಗಂಡ ಸ್ಥಳೀಯರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡಿದ್ದರು. ಮನವಿಯಂತೆ ಮೋರಿ ಅಳವಡಿಸಲು ಅನುದಾನ ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯರು ಸಹಕರಿಸಿದರು.

ಮೋರಿ ಸಮಸ್ಯೆ | ಸ್ಪಂದಿಸಿದ ಸಂಸದರು Read More »

ವೈವಾಹಿಕ ಜೀವನಕ್ಕೆ ಕಾಲಿಟ್ಟ ತೃಪ್ತಿ ಜೆ.ಕೆ.-ಲಿಖಿತ್ ಪಿ.ಎನ್.

ಪುತ್ತೂರು: ಕಡಬ ತಾಲೂಕು ಎಣ್ಮೂರು ಗ್ರಾಮದ ಹೇಮಳ ಕೊರಂಬೈಲು ವಿಜಯಲಕ್ಷ್ಮೀ ಹಾಗೂ ಜಯಾನಂದ ಗೌಡರ ಪುತ್ರಿ ತೃಪ್ತಿ ಜೆ.ಕೆ. ಅವರ ವಿವಾಹ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ಪಲ್ಲೋಡಿ ಶೈಲಿಕಾ ಮತ್ತು ನಾರಾಯಣ ಗೌಡರ ಪುತ್ರ ಲಿಖಿತ್ ಪಿ.ಎನ್. ಅವರೊಂದಿಗೆ ಗುರುವಾರ ನಡೆಯಿತು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಬೆಳಿಗ್ಗೆ 8.36 ರ ಶುಭಮುಹೂರ್ತದಲ್ಲಿ ನಡೆಯಿತು. ವಿವಾಹ ಸಮಾರಂಭದಲ್ಲಿ ಹಲವಾರು ಗಣ್ಯರು ಪಾಲ್ಗೊಂಡು ಶುಭ ಹಾರೈಸಿದರು.

ವೈವಾಹಿಕ ಜೀವನಕ್ಕೆ ಕಾಲಿಟ್ಟ ತೃಪ್ತಿ ಜೆ.ಕೆ.-ಲಿಖಿತ್ ಪಿ.ಎನ್. Read More »

ರಾಜ್ಯ ಸರಕಾರ ಹತಾಶೆ ಭಾವದಿಂದ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದೆ | ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣಪ್ರಸನ್ನ

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ನಿರ್ಮಾಣವಾಗಿ, ಶ್ರೀರಾಮನ ಪ್ರತಿಷ್ಠಾಪನೆ ನಡೆಯಲಿರುವ ಸಂದರ್ಭದಲ್ಲಿ ಹಿಂದುಗಳು ಒಗ್ಗಟ್ಟಾಗಿ ಭಕ್ತಿಭಾವದಿಂದ ನಡೆದುಕೊಳ್ಳುವ ಕಾರ್ಯವಾಗುತ್ತಿದೆ. ಇದನ್ನು ನೋಡಿ ಹತಾಶೆಯ ಭಾವನೆಯಿಂದ ರಾಜ್ಯ ಸರ್ಕಾರದ ಪ್ರಮುಖರು ಹಿಂದು ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದು, ಇದನ್ನು ವಿಶ್ವ ಹಿಂದು ಪರಿಷತ್ ಹಾಗೂ ಇತರ ಸಂಘ ಪರಿವಾರದ ಎಲ್ಲಾ ಸಂಘಟನೆಗಳು ಖಂಡಿಸುತ್ತದೆ. ಇಂತಹ ಹುನ್ನಾರವನ್ನು ರಾಜ್ಯ ಸರ್ಕಾರ ಗಮನದಲ್ಲಿಟ್ಟುಕೊಂಡು ತಡೆಯುವ ಕಾರ್ಯ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಹೇಳಿದರು. ಗುರುವಾರ

ರಾಜ್ಯ ಸರಕಾರ ಹತಾಶೆ ಭಾವದಿಂದ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದೆ | ಪತ್ರಿಕಾಗೋಷ್ಠಿಯಲ್ಲಿ ಡಾ.ಕೃಷ್ಣಪ್ರಸನ್ನ Read More »

 ಜ.7: 2ನೇ ವರ್ಷದ ‘ಜಲಾಲಿಯ್ಯಾ ರಾತೀಬ್ ಮಸ್ಲಿಸ್’

ಪುತ್ತೂರು: ಕೆಮ್ಮಾಯಿ ಬಸ್ತಾನುಲ್ ಬಾದುಷ ಮಸ್ಲಿಸ್ ಮತ್ತು ಜಲಾಲಿಯ್ಯಾ ರಾತೀಬ್ ಸಮಿತಿ ಜಂಟಿ ಆಶ್ರಯದಲ್ಲಿ 2ನೇ ವರ್ಷದ ‘ಜಲಾಲಿಯ್ಯಾ ರಾತೀಬ್ ಮಸ್ಲಿಸ್’ ಜ.7ರಂದು ಕೆಮ್ಮಾಯಿಯ ತಂಙಳ್ ನಿವಾಸದಲ್ಲಿ ನಡೆಯಲಿದೆ ಎಂದು ಜಲಾಲಿಯ್ಯಾ ರಾತೀಬ್ ಸಮಿತಿ ಸಂಚಾಲಕ ಇಸಾಕ್ ಸಾಲ್ಮರ ತಿಳಿಸಿದ್ದಾರೆ. ಗುರುವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಕೆಮ್ಮಾಯಿ ಮದ್ರಸಾದ ಮಹಮ್ಮದ್ ಇರ್ಶಾದ್ ಸಖಾಫಿ ಉದ್ಘಾಟಿಸಲಿದ್ದಾರೆ.  ಹಾಜಿ ಸಯ್ಯದ್ ಅಬೂಬಕ್ಕರ್ ಅಧ್ಯಕ್ಷತೆ ವಹಿಸುವರು. ಬಿ.ಕೆ.ಅಬ್ದುಲ್ ಮಜೀದ್ ಸ್ವಾಗತಿಸಲಿದ್ದಾರೆ. ಸಾಲ್ಮರದ ಅಲ್ ಹಾಜಿ ಅಸ್ಸಯಿದ್ ಮಹಮ್ಮದ್, ಅಸ್ಸಯಿದ್ ಹಾಮಿದ್

 ಜ.7: 2ನೇ ವರ್ಷದ ‘ಜಲಾಲಿಯ್ಯಾ ರಾತೀಬ್ ಮಸ್ಲಿಸ್’ Read More »

ಜ.6: ಜಿಲ್ಲಾ ವಾಲಿಬಾಲ್ ಪಂದ್ಯಾಟ | ಜಿಲ್ಲಾ ಚಾಂಪಿಯನ್ ಶಿಪ್-2023

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಸಂಸ್ಥೆ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಸಂಸ್ಥೆ ಮತ್ತು ಸುದಾನ ವಸತಿಯುತ ವಿದ್ಯಾಸಂಸ್ಥೆಯ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ‘ಜಿಲ್ಲಾ ಚಾಂಪಿಯಶಿಪ್-2023’ ಜ.6 ಶನಿವಾರ ಸುದಾನ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ದ.ಕ.ಜಿಲ್ಲಾ ವಾಲಿಬಾಲ್ ಸಂಸ್ಥೆಯ ಬಿ.ಎಸ್.ಸತೀಶ್ ಕುಮಾರ್ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದ.ಕ. ಜಿಲ್ಲೆಯ ವಾಲಿಬಾಲ್‍ಆಟಗಾರರು ರಾಜ್ಯದಲ್ಲಿ ಮುಂದಿದ್ದು, ರಾಷ್ಟ್ರಮಟ್ದದಲ್ಲೂ ಮುಂಚೂಣಿಯಲ್ಲಿದ್ದಾರೆ, ಈಗಾಗಲೇ ಜಿಲ್ಲೆ 24ತಂಡಗಳು ನೋಂದಾಯಿಸಿಕೊಂಡಿದ್ದು, ಇನ್ನೂ ನೊಂದಾವಣೆಗೆ ಅವಕಾಶವಿದೆ.

ಜ.6: ಜಿಲ್ಲಾ ವಾಲಿಬಾಲ್ ಪಂದ್ಯಾಟ | ಜಿಲ್ಲಾ ಚಾಂಪಿಯನ್ ಶಿಪ್-2023 Read More »

ಬ್ಯಾನರ್ ಅಳವಡಿಸುವ ಮೂಲಕ ಜನರ ದಾರಿ ತಪ್ಪಿಸುತ್ತಿರುವ ಹಾಲಿ ಶಾಸಕರು | ಪತ್ರಿಕಾಗೋಷ್ಠಿಯಲ್ಲಿ ಮುಕುಂದ ಬಜತ್ತೂರು ಆರೋಪ

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ರಸ್ತೆ ಹಿಂದೊಮ್ಮೆ ಮಾಜಿ ಶಾಸಕರಿಂದ ಗುದ್ದಲಿ ಪೂಜೆ ನಡೆದು ಕಾಮಗಾರಿ ಆರಂಭಗೊಂಡಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಹಾಲಿ ಶಾಸಕರು ಬೇರಿಕೆ-34ನೇ ನೆಕ್ಕಿಲಾಡಿ 10 ಕೋಟಿ ಬಿಡುಗಡೆ ಮಾಡಿದ್ದೇನೆ ಎಂದು ಬ್ಯಾನರ್ ಅಳವಡಿಸುವುದರೊಂದಿಗೆ ಮತ್ತೊಮ್ಮೆ ಗುದ್ದಲಿ ಪೂಜೆ ನಡೆಸುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪ್ಪಿನಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮುಕುಂದ ಬಜತ್ತೂರು ಆರೋಪಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರು-ಉಪ್ಪಿನಂಗಡಿ-ಗುರುವಾಯನಕೆರೆ ಚತುಷ್ಪಥ ರಸ್ತೆಗೆ 2022 ರಲ್ಲಿ

ಬ್ಯಾನರ್ ಅಳವಡಿಸುವ ಮೂಲಕ ಜನರ ದಾರಿ ತಪ್ಪಿಸುತ್ತಿರುವ ಹಾಲಿ ಶಾಸಕರು | ಪತ್ರಿಕಾಗೋಷ್ಠಿಯಲ್ಲಿ ಮುಕುಂದ ಬಜತ್ತೂರು ಆರೋಪ Read More »

ಮರುಜೀವ ಪಡೆದುಕೊಂಡ ಕಲ್ಲಡ್ಕ ಪ್ರಭಾಕರ ಭಟ್ ಕೇಸ್

ಮಂಗಳೂರು:  ಶ್ರೀರಂಗಪಟ್ಟಣದಲ್ಲಿ ಮಹಿಳಾ ವಿರೋಧಿ ದ್ವೇಷ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣ ಇದೀಗ ಮರುಜೀವ ಪಡೆದುಕೊಂಡಿದೆ. ಜ.3ರಂದು ಹಿರಿಯ ವಕೀಲ ಎಸ್ ಬಾಲನ್ ಐಪಿಸಿ ಸೆಕ್ಷನ್ 1860 (U/s 354, 294, 509, 506, 153A, 295, 295A, 298) ಅಡಿಯಲ್ಲಿ ಸುಪ್ರಿಂ ಕೋರ್ಟ್ ನ ಹಲವು ತೀರ್ಪುಗಳನ್ನು ಉಲ್ಲೇಖಿಸಿ ಶ್ರೀರಂಗಪಟ್ಟಣ ನ್ಯಾಯಾಲಯದಲ್ಲಿ ದೂರುದಾರರ ಪರವಾಗಿ ವಕಾಲತ್ತು ಹಾಕಿದ್ದಾರೆ. “ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು” ಎಂದು ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಮುಂದುವರೆದು

ಮರುಜೀವ ಪಡೆದುಕೊಂಡ ಕಲ್ಲಡ್ಕ ಪ್ರಭಾಕರ ಭಟ್ ಕೇಸ್ Read More »

‘ಕ್ರಿಟಿಕಲ್ ಇನ್ ಲೆಸ್ ಫಂಡ್’ ನ ಧನಸಹಾಯ ವಿತರಣೆ

ಪುತ್ತೂರು: ಕೆದಿಲ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ಪ್ರಗತಿ ಸ್ವಸಹಾಯ ಸಂಘದ ವತಿಯಿಂದ ಒಕ್ಕೂಟದ ಸದಸ್ಯೆ ಮೀನಾಕ್ಷಿ ಇವರಿಗೆ ಕ್ಷೇತ್ರದ ‘ಕ್ರಿಟಿಕಲ್ ಇನ್ ಲೆಸ್ ಫಂಡ್’ 25,000 ಧನಸಹಾಯ ವಿತರಿಸಲಾಯಿತು. ಅವರು ದೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಈ ಸಂದರ್ಭದಲ್ಲಿ ಪರ್ನೆ ವಲಯ ಮೇಲ್ವಿಚಾರಕಿ ಶಾರದ, ಸೇವಾಪ್ರತಿನಿಧಿ ಜಯಂತಿ, ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ ಉಪಸ್ಥಿತರಿದ್ದರು.

‘ಕ್ರಿಟಿಕಲ್ ಇನ್ ಲೆಸ್ ಫಂಡ್’ ನ ಧನಸಹಾಯ ವಿತರಣೆ Read More »

ದಿಗ್ಭಂಧನದಲ್ಲಿದ್ದ ಮಹಿಳೆಯ ರಕ್ಷಣೆ | ಆಸ್ಪತ್ರೆಗೆ ದಾಖಲಿಸಿದ ಅಧಿಕಾರಿಗಳು

ಪುತ್ತೂರು: ದಿಗ್ಭಂಧನದಲ್ಲಿದ್ದ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯವರು ಪೊಲೀಸರ ಸಹಕಾರದೊಂದಿಗೆ ರಕ್ಷಿಸಿ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವ ಕುರಿತು ವರದಿಯಾಗಿದೆ. ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು,  ಶ್ರೀಪತಿ ಹೆಬ್ಬಾರ್ ಎಂಬವರ ಪತ್ನಿ ಆಶಾ ಎಂಬವರನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕು ಇಲ್ಲದ ಒಂದೇ ಬಾಗಿಲಿನ ಕೋಣೆಯಲ್ಲಿ ದಿಗ್ಭಂಧನದಲ್ಲಿರಿಸಲಾಗಿತ್ತು. ಅನಾಮಧೇಯ ಕರೆಯ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಮಹಿಳೆಯನ್ನು

ದಿಗ್ಭಂಧನದಲ್ಲಿದ್ದ ಮಹಿಳೆಯ ರಕ್ಷಣೆ | ಆಸ್ಪತ್ರೆಗೆ ದಾಖಲಿಸಿದ ಅಧಿಕಾರಿಗಳು Read More »

ರಾಜಕೀಯ ಪ್ರವೇಶ ಮಾಡಲಿದ್ದಾರೆ ಅಶ್ವಿನ್ ಎಲ್. ಶೆಟ್ಟಿ | ನಾಳೆ ಮಂಗಳೂರಿನಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

ಪುತ್ತೂರು: ಉದ್ಯಮಿ, ಸಹಕಾರಿ ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್‍. ಶೆಟ್ಟಿ ಜ.4 ರಂದು ಮಂಗಳೂರಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ರಾಜಕೀಯ ಪ್ರವೇಶ ಮಾಡಲಿದ್ದಾರೆ. ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಸಂಸದ ನಳಿನ್ ಕುಮಾರ್ ಕಟೀಲ್‍ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಅಶ್ವಿನ್ ಎಲ್‍. ಶೆಟ್ಟಿಯವರು ಜ.13 ರಂದು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಯಾಗಿ

ರಾಜಕೀಯ ಪ್ರವೇಶ ಮಾಡಲಿದ್ದಾರೆ ಅಶ್ವಿನ್ ಎಲ್. ಶೆಟ್ಟಿ | ನಾಳೆ ಮಂಗಳೂರಿನಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ Read More »

error: Content is protected !!
Scroll to Top